Homeಚಳವಳಿ‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

- Advertisement -
- Advertisement -

ಇದು ಪ್ರಕೃತಿದತ್ತ ಸಾವಲ್ಲ, ಬದಲಾಗಿ ಪ್ರಭುತ್ವ ಮುಂದೆ ನಿಂತು ನಡೆಸಿದ ಕೊಲೆ. ಫಾದರ್‌ ಸ್ಟ್ಯಾನ್ ಸ್ವಾಮಿ ಸತ್ತಿಲ್ಲ, ಅವರ ಕೊಲೆಯಾಗಿದೆ. ಆದಿವಾಸಿಗಳ ಹಕ್ಕುಗಳಿಗಾಗಿ ದಶಕಗಳ ಕಾಲ ಹೋರಾಡಿದ, ಪ್ರಭುತ್ವದ ವಿರುದ್ಧ ಸಿಡಿದೆದ್ದ ಸ್ಟ್ಯಾನ್ ಸ್ವಾಮಿ ಕೊನೆಗೂ ಅದೇ ಪ್ರಭುತ್ವದ ಅಹಂಕಾರ, ದರ್ಪಕ್ಕೆ ಬಲಿಯಾದರು.

ಅವರ ಮೇಲೆ ಅತೀ ಕಠಿಣ UAPA ಕಾಯಿದೆಯಡಿ ಕೇಸ್ ಹಾಕಲಾಗಿತ್ತು. ಹೋರಾಟಗಾರರಾದ ಅವರನ್ನು ಭಯೋತ್ಪಾದಕರೆಂದು ಪರಿಗಣಿಸಿ ಜೈಲಿಗಟ್ಟಲಾಯಿತು. ತನ್ನ ನಡುಗುವ ಕೈಗಳಿಂದ ಗ್ಲಾಸ್ ಹಿಡಿದು ನೀರೂ ಕುಡಿಯಲು ಆಗುತ್ತಿಲ್ಲ. ಆದ್ದರಿಂದ ತನಗೊಂದು ಸ್ಟ್ರಾ ಹಾಗೂ ಸಿಪ್ಪರ್ ಕೊಡಿ ಎಂದು ಅವರು ಕೋರ್ಟ್ ಮೊರೆ ಹೋಗಬೇಕಾಯಿತು. ಅದನ್ನು ವಿಚಾರಣೆಗೆತ್ತಿಕೊಳ್ಳಲು ಇಪ್ಪತ್ತು ದಿನ ಬೇಕಾಯಿತು.

ಕೋರ್ಟ್ ಅವರಿಗೆ ಸ್ಟ್ರಾ ಹಾಗೂ ಸಿಪ್ಪರ್ ಕೊಡಿ ಎಂದಾಗ ಎನ್‍ಐಎ ನಮ್ಮ ಬಳಿ ಅವುಗಳಿಲ್ಲ ಎಂದು ಹೇಳಿತು. ಕೊನೆಗೆ ಸೋಷಿಯಲ್ ಮೀಡಿಯಾದಲ್ಲಿ ಜನರು ಸ್ಟ್ರಾ ಹಾಗೂ ಸಿಪ್ಪರ್ ಖರೀದಿಸಿ ಎನ್‍ಐಗೆ ಕಳುಹಿಸಿ ಅವರ ಮಾನವನ್ನು ಕಳೆದಾಗ ಸ್ಟ್ಯಾನ್ ಸ್ವಾಮಿಗೆ, ಬಂಧನವಾಗಿ 50 ದಿನಗಳ ಬಳಿಕ ಸಿಪ್ಪರ್ ಸಿಕ್ಕಿತು.

ಇದನ್ನೂ ಓದಿ: ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

ಕೇವಲ ಪ್ರಭುತ್ವ ಅಲ್ಲ ನಮ್ಮ ನ್ಯಾಯಾಂಗ ವ್ಯವಸ್ಥೆ ಕೂಡಾ ಈ ಕೊಲೆಗೆ ಜವಾಬ್ದಾರಿಯನ್ನು ಹೊರಬೇಕು. ಕಳೆದ ಆರೇಳು ತಿಂಗಳಲ್ಲಿ ಸ್ಟ್ಯಾನ್ ಸ್ವಾಮಿ ಅದೆಷ್ಟು ಬಾರಿ ಕೋರ್ಟ್ ಮೊರೆಹೋಗಿದ್ದಾರೋ? ಆದರೂ ಪ್ರತೀ ಬಾರಿ ‘ತಾರೀಕ್ ಪೆ ತಾರೀಕ್, ತಾರೀಕ್ ಪೆ ತಾರೀಕ್’ ಎಂದರೆ ಹೊರತು ನ್ಯಾಯ ಕೊಡಿಸಲಿಲ್ಲ. ನ್ಯಾಯಾಧೀಶರ ತಾರೀಕು ಬರಲೇ ಇಲ್ಲ ಆದರೆ ಯಮರಾಯನ ತಾರೀಕು ಇವತ್ತು ಬಂದುಬಿಟ್ಟಿತು.

ಸ್ಟ್ಯಾನ್ ಸ್ವಾಮಿಗೆ ಪ್ರಭುತ್ವ, ಅಸಮಾನತೆ, ಅನ್ಯಾಯದ ವಿರುದ್ಧ ಹೋರಾಟ ಹೊಸತಲ್ಲ. ಅವರು ಕೇವಲ ಪ್ರಸಕ್ತ ಸರಕಾರದವಧಿಯಲ್ಲಿ ಮಾತ್ರ ಪ್ರತಿಭಟಿಸಿದ್ದಲ್ಲ, ಹೋರಾಡಿದ್ದಲ್ಲ. ದಶಕಗಳಿಂದ ಹೋರಾಟದ ಹಾದಿಯಲ್ಲಿಯೇ ಇದ್ದರವರು. ಆದಿವಾಸಿಗಳ ಪರ ಸದಾಕಾಲ ದನಿಯೆತ್ತಿದ್ದವರು. ಸಂವಿಧಾನ ಐದನೇ ಪರಿಚ್ಛೇಧವನ್ನು ಅನುಷ್ಟಾನ ಮಾಡದ್ದರ ವಿರುದ್ಧ ಅವರ ಹೋರಾಟ ಇವತ್ತು ನಿನ್ನೆಯದಲ್ಲ.

ಬರೀ ಭಾರತ ಸರ್ಕಾರವೇಕೆ, ತಮ್ಮ ವಿದ್ಯಾರ್ಥಿ ದೆಸೆಯಲ್ಲಿ ಫಿಲಿಪೈನ್ಸ್ ದೇಶದಲ್ಲಿ ತತ್ವಶಾಶ್ತ್ರ ಹಾಗೂ ಸಮಾಜಶಾಸ್ತ್ರವನ್ನು ಅಧ್ಯಯನ ಮಾಡುತ್ತಿದ್ದಾಗ, ಅಲ್ಲಿನ ಸ್ಥಳೀಯ ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಗಳನ್ನು ಹಮ್ಮಿಕೊಂಡು, ಪ್ರಭುತ್ವದ ವಿರುದ್ಧ ದನಿಯೆತ್ತಿದ್ದ ಧೀಮಂತ ವ್ಯಕ್ತಿ ಅವರು. ಇಂಥ ಅಪ್ರತಿಮ ಚೇತನ ಇನ್ನಿಲ್ಲ.

ಇದನ್ನೂ ಓದಿ: ಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಹಲವು ತಿಂಗಳು ಕಾಯಬೇಕು!

ಸ್ಟ್ಯಾನ್ ಸ್ವಾಮಿಯ ಈ ಫೊಟೋ ನೋಡಿ. ಹಿಟ್ಲರನ ಗ್ಯಾಸ್ ಚೇಂಬರ್‌ಗಳ ಕಥನ ಹೇಗೆ ಇವತ್ತಿಗೂ ವಿಶ್ವವನ್ನು ಕಾಡುತ್ತಿದೆಯೋ, ಹಾಗೆಯೇ ಆಸ್ಪತ್ರೆಯ ಹಾಸಿಗೆಯ ಮೇಲಿರುವ ಎಂಬತ್ನಾಲ್ಕರ ಹರೆಯದ ಪಾರ್ಕಿನ್ಸನ್ ಪೀಡಿತ ಈ ಹೋರಾಟಗಾರನ ಕತೆ ಭವಿಷ್ಯದಲ್ಲಿ ನಮ್ಮ ದೇಶದ ಕರಾಳ ಇತಿಹಾಸ ಹಾಗೂ ಪ್ರಭುತ್ವದ ಅಹಂಕಾರವನ್ನು ಬಿಚ್ಚಿಡುವ ಸಾಧನವಾಗಲಿದೆ.

ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬಂಧನದಲ್ಲಿರುವಾಗಲೇ ಕೋವಿಡ್‌ಗೆ ಒಳಗಾದರು. ಆದರೂ 84 ರ ಹರೆಯದ, ಪಾರ್ಕಿನ್ಸನ್ ಹಾಗೂ ಇತರೆ ವಯೋ ಸಹಜ ಆರೋಗ್ಯ ಸಮಸ್ಯೆಗಳಿರುವ ಅವರನ್ನು ಸರ್ಕಾರ ಇನ್ನಿಲ್ಲದಂತೆ ಪೀಡಿಸಿತು.

ಇಂದು ಸ್ಟ್ಯಾನ್ ಸ್ವಾಮಿ ಇರುವ ಜಾಗದಲ್ಲಿ ಮುಂದೆ ನಾವಿರಲಿದ್ದೇವೆ. ಪ್ರಭುತ್ವದ ಕೋವಿಗಳಿಗೆ ಹಾಗೂ ಪ್ರಭುತ್ವದ ಸರಪಣಿಗಳಿಗೆ ವ್ಯಕ್ತಿ ಕಾಣಿಸುವುದಿಲ್ಲ, ಬದಲಾಗಿ ಪ್ರಭುತ್ವದ ವಿರುದ್ಧದ ದನಿ ಮಾತ್ರ ಕೇಳಿಸುತ್ತೆ. ಹಾಗಾಗೀ ಇವತ್ತು ಸ್ಟ್ಯಾನ್ ಸ್ವಾಮಿಯ ಜಾಗದಲ್ಲಿ ನಾಳೆ ನಾವು ಯಾರಾದರೂ ಇರಬಹುದು. ನಾವಾಗಿಯೇ ಇದನ್ನು ಆರಿಸಿರುವುದು, ನಾವೇ ಅದರ ಪರಿಣಾಮಗಳನ್ನು ಉಣಲಿದ್ದೇವೆ.

ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...