Homeಚಳವಳಿ‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

- Advertisement -
- Advertisement -

ಇದು ಪ್ರಕೃತಿದತ್ತ ಸಾವಲ್ಲ, ಬದಲಾಗಿ ಪ್ರಭುತ್ವ ಮುಂದೆ ನಿಂತು ನಡೆಸಿದ ಕೊಲೆ. ಫಾದರ್‌ ಸ್ಟ್ಯಾನ್ ಸ್ವಾಮಿ ಸತ್ತಿಲ್ಲ, ಅವರ ಕೊಲೆಯಾಗಿದೆ. ಆದಿವಾಸಿಗಳ ಹಕ್ಕುಗಳಿಗಾಗಿ ದಶಕಗಳ ಕಾಲ ಹೋರಾಡಿದ, ಪ್ರಭುತ್ವದ ವಿರುದ್ಧ ಸಿಡಿದೆದ್ದ ಸ್ಟ್ಯಾನ್ ಸ್ವಾಮಿ ಕೊನೆಗೂ ಅದೇ ಪ್ರಭುತ್ವದ ಅಹಂಕಾರ, ದರ್ಪಕ್ಕೆ ಬಲಿಯಾದರು.

ಅವರ ಮೇಲೆ ಅತೀ ಕಠಿಣ UAPA ಕಾಯಿದೆಯಡಿ ಕೇಸ್ ಹಾಕಲಾಗಿತ್ತು. ಹೋರಾಟಗಾರರಾದ ಅವರನ್ನು ಭಯೋತ್ಪಾದಕರೆಂದು ಪರಿಗಣಿಸಿ ಜೈಲಿಗಟ್ಟಲಾಯಿತು. ತನ್ನ ನಡುಗುವ ಕೈಗಳಿಂದ ಗ್ಲಾಸ್ ಹಿಡಿದು ನೀರೂ ಕುಡಿಯಲು ಆಗುತ್ತಿಲ್ಲ. ಆದ್ದರಿಂದ ತನಗೊಂದು ಸ್ಟ್ರಾ ಹಾಗೂ ಸಿಪ್ಪರ್ ಕೊಡಿ ಎಂದು ಅವರು ಕೋರ್ಟ್ ಮೊರೆ ಹೋಗಬೇಕಾಯಿತು. ಅದನ್ನು ವಿಚಾರಣೆಗೆತ್ತಿಕೊಳ್ಳಲು ಇಪ್ಪತ್ತು ದಿನ ಬೇಕಾಯಿತು.

ಕೋರ್ಟ್ ಅವರಿಗೆ ಸ್ಟ್ರಾ ಹಾಗೂ ಸಿಪ್ಪರ್ ಕೊಡಿ ಎಂದಾಗ ಎನ್‍ಐಎ ನಮ್ಮ ಬಳಿ ಅವುಗಳಿಲ್ಲ ಎಂದು ಹೇಳಿತು. ಕೊನೆಗೆ ಸೋಷಿಯಲ್ ಮೀಡಿಯಾದಲ್ಲಿ ಜನರು ಸ್ಟ್ರಾ ಹಾಗೂ ಸಿಪ್ಪರ್ ಖರೀದಿಸಿ ಎನ್‍ಐಗೆ ಕಳುಹಿಸಿ ಅವರ ಮಾನವನ್ನು ಕಳೆದಾಗ ಸ್ಟ್ಯಾನ್ ಸ್ವಾಮಿಗೆ, ಬಂಧನವಾಗಿ 50 ದಿನಗಳ ಬಳಿಕ ಸಿಪ್ಪರ್ ಸಿಕ್ಕಿತು.

ಇದನ್ನೂ ಓದಿ: ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

ಕೇವಲ ಪ್ರಭುತ್ವ ಅಲ್ಲ ನಮ್ಮ ನ್ಯಾಯಾಂಗ ವ್ಯವಸ್ಥೆ ಕೂಡಾ ಈ ಕೊಲೆಗೆ ಜವಾಬ್ದಾರಿಯನ್ನು ಹೊರಬೇಕು. ಕಳೆದ ಆರೇಳು ತಿಂಗಳಲ್ಲಿ ಸ್ಟ್ಯಾನ್ ಸ್ವಾಮಿ ಅದೆಷ್ಟು ಬಾರಿ ಕೋರ್ಟ್ ಮೊರೆಹೋಗಿದ್ದಾರೋ? ಆದರೂ ಪ್ರತೀ ಬಾರಿ ‘ತಾರೀಕ್ ಪೆ ತಾರೀಕ್, ತಾರೀಕ್ ಪೆ ತಾರೀಕ್’ ಎಂದರೆ ಹೊರತು ನ್ಯಾಯ ಕೊಡಿಸಲಿಲ್ಲ. ನ್ಯಾಯಾಧೀಶರ ತಾರೀಕು ಬರಲೇ ಇಲ್ಲ ಆದರೆ ಯಮರಾಯನ ತಾರೀಕು ಇವತ್ತು ಬಂದುಬಿಟ್ಟಿತು.

ಸ್ಟ್ಯಾನ್ ಸ್ವಾಮಿಗೆ ಪ್ರಭುತ್ವ, ಅಸಮಾನತೆ, ಅನ್ಯಾಯದ ವಿರುದ್ಧ ಹೋರಾಟ ಹೊಸತಲ್ಲ. ಅವರು ಕೇವಲ ಪ್ರಸಕ್ತ ಸರಕಾರದವಧಿಯಲ್ಲಿ ಮಾತ್ರ ಪ್ರತಿಭಟಿಸಿದ್ದಲ್ಲ, ಹೋರಾಡಿದ್ದಲ್ಲ. ದಶಕಗಳಿಂದ ಹೋರಾಟದ ಹಾದಿಯಲ್ಲಿಯೇ ಇದ್ದರವರು. ಆದಿವಾಸಿಗಳ ಪರ ಸದಾಕಾಲ ದನಿಯೆತ್ತಿದ್ದವರು. ಸಂವಿಧಾನ ಐದನೇ ಪರಿಚ್ಛೇಧವನ್ನು ಅನುಷ್ಟಾನ ಮಾಡದ್ದರ ವಿರುದ್ಧ ಅವರ ಹೋರಾಟ ಇವತ್ತು ನಿನ್ನೆಯದಲ್ಲ.

ಬರೀ ಭಾರತ ಸರ್ಕಾರವೇಕೆ, ತಮ್ಮ ವಿದ್ಯಾರ್ಥಿ ದೆಸೆಯಲ್ಲಿ ಫಿಲಿಪೈನ್ಸ್ ದೇಶದಲ್ಲಿ ತತ್ವಶಾಶ್ತ್ರ ಹಾಗೂ ಸಮಾಜಶಾಸ್ತ್ರವನ್ನು ಅಧ್ಯಯನ ಮಾಡುತ್ತಿದ್ದಾಗ, ಅಲ್ಲಿನ ಸ್ಥಳೀಯ ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಗಳನ್ನು ಹಮ್ಮಿಕೊಂಡು, ಪ್ರಭುತ್ವದ ವಿರುದ್ಧ ದನಿಯೆತ್ತಿದ್ದ ಧೀಮಂತ ವ್ಯಕ್ತಿ ಅವರು. ಇಂಥ ಅಪ್ರತಿಮ ಚೇತನ ಇನ್ನಿಲ್ಲ.

ಇದನ್ನೂ ಓದಿ: ಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಹಲವು ತಿಂಗಳು ಕಾಯಬೇಕು!

ಸ್ಟ್ಯಾನ್ ಸ್ವಾಮಿಯ ಈ ಫೊಟೋ ನೋಡಿ. ಹಿಟ್ಲರನ ಗ್ಯಾಸ್ ಚೇಂಬರ್‌ಗಳ ಕಥನ ಹೇಗೆ ಇವತ್ತಿಗೂ ವಿಶ್ವವನ್ನು ಕಾಡುತ್ತಿದೆಯೋ, ಹಾಗೆಯೇ ಆಸ್ಪತ್ರೆಯ ಹಾಸಿಗೆಯ ಮೇಲಿರುವ ಎಂಬತ್ನಾಲ್ಕರ ಹರೆಯದ ಪಾರ್ಕಿನ್ಸನ್ ಪೀಡಿತ ಈ ಹೋರಾಟಗಾರನ ಕತೆ ಭವಿಷ್ಯದಲ್ಲಿ ನಮ್ಮ ದೇಶದ ಕರಾಳ ಇತಿಹಾಸ ಹಾಗೂ ಪ್ರಭುತ್ವದ ಅಹಂಕಾರವನ್ನು ಬಿಚ್ಚಿಡುವ ಸಾಧನವಾಗಲಿದೆ.

ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬಂಧನದಲ್ಲಿರುವಾಗಲೇ ಕೋವಿಡ್‌ಗೆ ಒಳಗಾದರು. ಆದರೂ 84 ರ ಹರೆಯದ, ಪಾರ್ಕಿನ್ಸನ್ ಹಾಗೂ ಇತರೆ ವಯೋ ಸಹಜ ಆರೋಗ್ಯ ಸಮಸ್ಯೆಗಳಿರುವ ಅವರನ್ನು ಸರ್ಕಾರ ಇನ್ನಿಲ್ಲದಂತೆ ಪೀಡಿಸಿತು.

ಇಂದು ಸ್ಟ್ಯಾನ್ ಸ್ವಾಮಿ ಇರುವ ಜಾಗದಲ್ಲಿ ಮುಂದೆ ನಾವಿರಲಿದ್ದೇವೆ. ಪ್ರಭುತ್ವದ ಕೋವಿಗಳಿಗೆ ಹಾಗೂ ಪ್ರಭುತ್ವದ ಸರಪಣಿಗಳಿಗೆ ವ್ಯಕ್ತಿ ಕಾಣಿಸುವುದಿಲ್ಲ, ಬದಲಾಗಿ ಪ್ರಭುತ್ವದ ವಿರುದ್ಧದ ದನಿ ಮಾತ್ರ ಕೇಳಿಸುತ್ತೆ. ಹಾಗಾಗೀ ಇವತ್ತು ಸ್ಟ್ಯಾನ್ ಸ್ವಾಮಿಯ ಜಾಗದಲ್ಲಿ ನಾಳೆ ನಾವು ಯಾರಾದರೂ ಇರಬಹುದು. ನಾವಾಗಿಯೇ ಇದನ್ನು ಆರಿಸಿರುವುದು, ನಾವೇ ಅದರ ಪರಿಣಾಮಗಳನ್ನು ಉಣಲಿದ್ದೇವೆ.

ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...