Homeಚಳವಳಿ‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

- Advertisement -
- Advertisement -

ಇದು ಪ್ರಕೃತಿದತ್ತ ಸಾವಲ್ಲ, ಬದಲಾಗಿ ಪ್ರಭುತ್ವ ಮುಂದೆ ನಿಂತು ನಡೆಸಿದ ಕೊಲೆ. ಫಾದರ್‌ ಸ್ಟ್ಯಾನ್ ಸ್ವಾಮಿ ಸತ್ತಿಲ್ಲ, ಅವರ ಕೊಲೆಯಾಗಿದೆ. ಆದಿವಾಸಿಗಳ ಹಕ್ಕುಗಳಿಗಾಗಿ ದಶಕಗಳ ಕಾಲ ಹೋರಾಡಿದ, ಪ್ರಭುತ್ವದ ವಿರುದ್ಧ ಸಿಡಿದೆದ್ದ ಸ್ಟ್ಯಾನ್ ಸ್ವಾಮಿ ಕೊನೆಗೂ ಅದೇ ಪ್ರಭುತ್ವದ ಅಹಂಕಾರ, ದರ್ಪಕ್ಕೆ ಬಲಿಯಾದರು.

ಅವರ ಮೇಲೆ ಅತೀ ಕಠಿಣ UAPA ಕಾಯಿದೆಯಡಿ ಕೇಸ್ ಹಾಕಲಾಗಿತ್ತು. ಹೋರಾಟಗಾರರಾದ ಅವರನ್ನು ಭಯೋತ್ಪಾದಕರೆಂದು ಪರಿಗಣಿಸಿ ಜೈಲಿಗಟ್ಟಲಾಯಿತು. ತನ್ನ ನಡುಗುವ ಕೈಗಳಿಂದ ಗ್ಲಾಸ್ ಹಿಡಿದು ನೀರೂ ಕುಡಿಯಲು ಆಗುತ್ತಿಲ್ಲ. ಆದ್ದರಿಂದ ತನಗೊಂದು ಸ್ಟ್ರಾ ಹಾಗೂ ಸಿಪ್ಪರ್ ಕೊಡಿ ಎಂದು ಅವರು ಕೋರ್ಟ್ ಮೊರೆ ಹೋಗಬೇಕಾಯಿತು. ಅದನ್ನು ವಿಚಾರಣೆಗೆತ್ತಿಕೊಳ್ಳಲು ಇಪ್ಪತ್ತು ದಿನ ಬೇಕಾಯಿತು.

ಕೋರ್ಟ್ ಅವರಿಗೆ ಸ್ಟ್ರಾ ಹಾಗೂ ಸಿಪ್ಪರ್ ಕೊಡಿ ಎಂದಾಗ ಎನ್‍ಐಎ ನಮ್ಮ ಬಳಿ ಅವುಗಳಿಲ್ಲ ಎಂದು ಹೇಳಿತು. ಕೊನೆಗೆ ಸೋಷಿಯಲ್ ಮೀಡಿಯಾದಲ್ಲಿ ಜನರು ಸ್ಟ್ರಾ ಹಾಗೂ ಸಿಪ್ಪರ್ ಖರೀದಿಸಿ ಎನ್‍ಐಗೆ ಕಳುಹಿಸಿ ಅವರ ಮಾನವನ್ನು ಕಳೆದಾಗ ಸ್ಟ್ಯಾನ್ ಸ್ವಾಮಿಗೆ, ಬಂಧನವಾಗಿ 50 ದಿನಗಳ ಬಳಿಕ ಸಿಪ್ಪರ್ ಸಿಕ್ಕಿತು.

ಇದನ್ನೂ ಓದಿ: ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

ಕೇವಲ ಪ್ರಭುತ್ವ ಅಲ್ಲ ನಮ್ಮ ನ್ಯಾಯಾಂಗ ವ್ಯವಸ್ಥೆ ಕೂಡಾ ಈ ಕೊಲೆಗೆ ಜವಾಬ್ದಾರಿಯನ್ನು ಹೊರಬೇಕು. ಕಳೆದ ಆರೇಳು ತಿಂಗಳಲ್ಲಿ ಸ್ಟ್ಯಾನ್ ಸ್ವಾಮಿ ಅದೆಷ್ಟು ಬಾರಿ ಕೋರ್ಟ್ ಮೊರೆಹೋಗಿದ್ದಾರೋ? ಆದರೂ ಪ್ರತೀ ಬಾರಿ ‘ತಾರೀಕ್ ಪೆ ತಾರೀಕ್, ತಾರೀಕ್ ಪೆ ತಾರೀಕ್’ ಎಂದರೆ ಹೊರತು ನ್ಯಾಯ ಕೊಡಿಸಲಿಲ್ಲ. ನ್ಯಾಯಾಧೀಶರ ತಾರೀಕು ಬರಲೇ ಇಲ್ಲ ಆದರೆ ಯಮರಾಯನ ತಾರೀಕು ಇವತ್ತು ಬಂದುಬಿಟ್ಟಿತು.

ಸ್ಟ್ಯಾನ್ ಸ್ವಾಮಿಗೆ ಪ್ರಭುತ್ವ, ಅಸಮಾನತೆ, ಅನ್ಯಾಯದ ವಿರುದ್ಧ ಹೋರಾಟ ಹೊಸತಲ್ಲ. ಅವರು ಕೇವಲ ಪ್ರಸಕ್ತ ಸರಕಾರದವಧಿಯಲ್ಲಿ ಮಾತ್ರ ಪ್ರತಿಭಟಿಸಿದ್ದಲ್ಲ, ಹೋರಾಡಿದ್ದಲ್ಲ. ದಶಕಗಳಿಂದ ಹೋರಾಟದ ಹಾದಿಯಲ್ಲಿಯೇ ಇದ್ದರವರು. ಆದಿವಾಸಿಗಳ ಪರ ಸದಾಕಾಲ ದನಿಯೆತ್ತಿದ್ದವರು. ಸಂವಿಧಾನ ಐದನೇ ಪರಿಚ್ಛೇಧವನ್ನು ಅನುಷ್ಟಾನ ಮಾಡದ್ದರ ವಿರುದ್ಧ ಅವರ ಹೋರಾಟ ಇವತ್ತು ನಿನ್ನೆಯದಲ್ಲ.

ಬರೀ ಭಾರತ ಸರ್ಕಾರವೇಕೆ, ತಮ್ಮ ವಿದ್ಯಾರ್ಥಿ ದೆಸೆಯಲ್ಲಿ ಫಿಲಿಪೈನ್ಸ್ ದೇಶದಲ್ಲಿ ತತ್ವಶಾಶ್ತ್ರ ಹಾಗೂ ಸಮಾಜಶಾಸ್ತ್ರವನ್ನು ಅಧ್ಯಯನ ಮಾಡುತ್ತಿದ್ದಾಗ, ಅಲ್ಲಿನ ಸ್ಥಳೀಯ ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಗಳನ್ನು ಹಮ್ಮಿಕೊಂಡು, ಪ್ರಭುತ್ವದ ವಿರುದ್ಧ ದನಿಯೆತ್ತಿದ್ದ ಧೀಮಂತ ವ್ಯಕ್ತಿ ಅವರು. ಇಂಥ ಅಪ್ರತಿಮ ಚೇತನ ಇನ್ನಿಲ್ಲ.

ಇದನ್ನೂ ಓದಿ: ಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಹಲವು ತಿಂಗಳು ಕಾಯಬೇಕು!

ಸ್ಟ್ಯಾನ್ ಸ್ವಾಮಿಯ ಈ ಫೊಟೋ ನೋಡಿ. ಹಿಟ್ಲರನ ಗ್ಯಾಸ್ ಚೇಂಬರ್‌ಗಳ ಕಥನ ಹೇಗೆ ಇವತ್ತಿಗೂ ವಿಶ್ವವನ್ನು ಕಾಡುತ್ತಿದೆಯೋ, ಹಾಗೆಯೇ ಆಸ್ಪತ್ರೆಯ ಹಾಸಿಗೆಯ ಮೇಲಿರುವ ಎಂಬತ್ನಾಲ್ಕರ ಹರೆಯದ ಪಾರ್ಕಿನ್ಸನ್ ಪೀಡಿತ ಈ ಹೋರಾಟಗಾರನ ಕತೆ ಭವಿಷ್ಯದಲ್ಲಿ ನಮ್ಮ ದೇಶದ ಕರಾಳ ಇತಿಹಾಸ ಹಾಗೂ ಪ್ರಭುತ್ವದ ಅಹಂಕಾರವನ್ನು ಬಿಚ್ಚಿಡುವ ಸಾಧನವಾಗಲಿದೆ.

ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬಂಧನದಲ್ಲಿರುವಾಗಲೇ ಕೋವಿಡ್‌ಗೆ ಒಳಗಾದರು. ಆದರೂ 84 ರ ಹರೆಯದ, ಪಾರ್ಕಿನ್ಸನ್ ಹಾಗೂ ಇತರೆ ವಯೋ ಸಹಜ ಆರೋಗ್ಯ ಸಮಸ್ಯೆಗಳಿರುವ ಅವರನ್ನು ಸರ್ಕಾರ ಇನ್ನಿಲ್ಲದಂತೆ ಪೀಡಿಸಿತು.

ಇಂದು ಸ್ಟ್ಯಾನ್ ಸ್ವಾಮಿ ಇರುವ ಜಾಗದಲ್ಲಿ ಮುಂದೆ ನಾವಿರಲಿದ್ದೇವೆ. ಪ್ರಭುತ್ವದ ಕೋವಿಗಳಿಗೆ ಹಾಗೂ ಪ್ರಭುತ್ವದ ಸರಪಣಿಗಳಿಗೆ ವ್ಯಕ್ತಿ ಕಾಣಿಸುವುದಿಲ್ಲ, ಬದಲಾಗಿ ಪ್ರಭುತ್ವದ ವಿರುದ್ಧದ ದನಿ ಮಾತ್ರ ಕೇಳಿಸುತ್ತೆ. ಹಾಗಾಗೀ ಇವತ್ತು ಸ್ಟ್ಯಾನ್ ಸ್ವಾಮಿಯ ಜಾಗದಲ್ಲಿ ನಾಳೆ ನಾವು ಯಾರಾದರೂ ಇರಬಹುದು. ನಾವಾಗಿಯೇ ಇದನ್ನು ಆರಿಸಿರುವುದು, ನಾವೇ ಅದರ ಪರಿಣಾಮಗಳನ್ನು ಉಣಲಿದ್ದೇವೆ.

ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...