Homeಚಳವಳಿ‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

- Advertisement -
- Advertisement -

ಇದು ಪ್ರಕೃತಿದತ್ತ ಸಾವಲ್ಲ, ಬದಲಾಗಿ ಪ್ರಭುತ್ವ ಮುಂದೆ ನಿಂತು ನಡೆಸಿದ ಕೊಲೆ. ಫಾದರ್‌ ಸ್ಟ್ಯಾನ್ ಸ್ವಾಮಿ ಸತ್ತಿಲ್ಲ, ಅವರ ಕೊಲೆಯಾಗಿದೆ. ಆದಿವಾಸಿಗಳ ಹಕ್ಕುಗಳಿಗಾಗಿ ದಶಕಗಳ ಕಾಲ ಹೋರಾಡಿದ, ಪ್ರಭುತ್ವದ ವಿರುದ್ಧ ಸಿಡಿದೆದ್ದ ಸ್ಟ್ಯಾನ್ ಸ್ವಾಮಿ ಕೊನೆಗೂ ಅದೇ ಪ್ರಭುತ್ವದ ಅಹಂಕಾರ, ದರ್ಪಕ್ಕೆ ಬಲಿಯಾದರು.

ಅವರ ಮೇಲೆ ಅತೀ ಕಠಿಣ UAPA ಕಾಯಿದೆಯಡಿ ಕೇಸ್ ಹಾಕಲಾಗಿತ್ತು. ಹೋರಾಟಗಾರರಾದ ಅವರನ್ನು ಭಯೋತ್ಪಾದಕರೆಂದು ಪರಿಗಣಿಸಿ ಜೈಲಿಗಟ್ಟಲಾಯಿತು. ತನ್ನ ನಡುಗುವ ಕೈಗಳಿಂದ ಗ್ಲಾಸ್ ಹಿಡಿದು ನೀರೂ ಕುಡಿಯಲು ಆಗುತ್ತಿಲ್ಲ. ಆದ್ದರಿಂದ ತನಗೊಂದು ಸ್ಟ್ರಾ ಹಾಗೂ ಸಿಪ್ಪರ್ ಕೊಡಿ ಎಂದು ಅವರು ಕೋರ್ಟ್ ಮೊರೆ ಹೋಗಬೇಕಾಯಿತು. ಅದನ್ನು ವಿಚಾರಣೆಗೆತ್ತಿಕೊಳ್ಳಲು ಇಪ್ಪತ್ತು ದಿನ ಬೇಕಾಯಿತು.

ಕೋರ್ಟ್ ಅವರಿಗೆ ಸ್ಟ್ರಾ ಹಾಗೂ ಸಿಪ್ಪರ್ ಕೊಡಿ ಎಂದಾಗ ಎನ್‍ಐಎ ನಮ್ಮ ಬಳಿ ಅವುಗಳಿಲ್ಲ ಎಂದು ಹೇಳಿತು. ಕೊನೆಗೆ ಸೋಷಿಯಲ್ ಮೀಡಿಯಾದಲ್ಲಿ ಜನರು ಸ್ಟ್ರಾ ಹಾಗೂ ಸಿಪ್ಪರ್ ಖರೀದಿಸಿ ಎನ್‍ಐಗೆ ಕಳುಹಿಸಿ ಅವರ ಮಾನವನ್ನು ಕಳೆದಾಗ ಸ್ಟ್ಯಾನ್ ಸ್ವಾಮಿಗೆ, ಬಂಧನವಾಗಿ 50 ದಿನಗಳ ಬಳಿಕ ಸಿಪ್ಪರ್ ಸಿಕ್ಕಿತು.

ಇದನ್ನೂ ಓದಿ: ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

ಕೇವಲ ಪ್ರಭುತ್ವ ಅಲ್ಲ ನಮ್ಮ ನ್ಯಾಯಾಂಗ ವ್ಯವಸ್ಥೆ ಕೂಡಾ ಈ ಕೊಲೆಗೆ ಜವಾಬ್ದಾರಿಯನ್ನು ಹೊರಬೇಕು. ಕಳೆದ ಆರೇಳು ತಿಂಗಳಲ್ಲಿ ಸ್ಟ್ಯಾನ್ ಸ್ವಾಮಿ ಅದೆಷ್ಟು ಬಾರಿ ಕೋರ್ಟ್ ಮೊರೆಹೋಗಿದ್ದಾರೋ? ಆದರೂ ಪ್ರತೀ ಬಾರಿ ‘ತಾರೀಕ್ ಪೆ ತಾರೀಕ್, ತಾರೀಕ್ ಪೆ ತಾರೀಕ್’ ಎಂದರೆ ಹೊರತು ನ್ಯಾಯ ಕೊಡಿಸಲಿಲ್ಲ. ನ್ಯಾಯಾಧೀಶರ ತಾರೀಕು ಬರಲೇ ಇಲ್ಲ ಆದರೆ ಯಮರಾಯನ ತಾರೀಕು ಇವತ್ತು ಬಂದುಬಿಟ್ಟಿತು.

ಸ್ಟ್ಯಾನ್ ಸ್ವಾಮಿಗೆ ಪ್ರಭುತ್ವ, ಅಸಮಾನತೆ, ಅನ್ಯಾಯದ ವಿರುದ್ಧ ಹೋರಾಟ ಹೊಸತಲ್ಲ. ಅವರು ಕೇವಲ ಪ್ರಸಕ್ತ ಸರಕಾರದವಧಿಯಲ್ಲಿ ಮಾತ್ರ ಪ್ರತಿಭಟಿಸಿದ್ದಲ್ಲ, ಹೋರಾಡಿದ್ದಲ್ಲ. ದಶಕಗಳಿಂದ ಹೋರಾಟದ ಹಾದಿಯಲ್ಲಿಯೇ ಇದ್ದರವರು. ಆದಿವಾಸಿಗಳ ಪರ ಸದಾಕಾಲ ದನಿಯೆತ್ತಿದ್ದವರು. ಸಂವಿಧಾನ ಐದನೇ ಪರಿಚ್ಛೇಧವನ್ನು ಅನುಷ್ಟಾನ ಮಾಡದ್ದರ ವಿರುದ್ಧ ಅವರ ಹೋರಾಟ ಇವತ್ತು ನಿನ್ನೆಯದಲ್ಲ.

ಬರೀ ಭಾರತ ಸರ್ಕಾರವೇಕೆ, ತಮ್ಮ ವಿದ್ಯಾರ್ಥಿ ದೆಸೆಯಲ್ಲಿ ಫಿಲಿಪೈನ್ಸ್ ದೇಶದಲ್ಲಿ ತತ್ವಶಾಶ್ತ್ರ ಹಾಗೂ ಸಮಾಜಶಾಸ್ತ್ರವನ್ನು ಅಧ್ಯಯನ ಮಾಡುತ್ತಿದ್ದಾಗ, ಅಲ್ಲಿನ ಸ್ಥಳೀಯ ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಗಳನ್ನು ಹಮ್ಮಿಕೊಂಡು, ಪ್ರಭುತ್ವದ ವಿರುದ್ಧ ದನಿಯೆತ್ತಿದ್ದ ಧೀಮಂತ ವ್ಯಕ್ತಿ ಅವರು. ಇಂಥ ಅಪ್ರತಿಮ ಚೇತನ ಇನ್ನಿಲ್ಲ.

ಇದನ್ನೂ ಓದಿ: ಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಹಲವು ತಿಂಗಳು ಕಾಯಬೇಕು!

ಸ್ಟ್ಯಾನ್ ಸ್ವಾಮಿಯ ಈ ಫೊಟೋ ನೋಡಿ. ಹಿಟ್ಲರನ ಗ್ಯಾಸ್ ಚೇಂಬರ್‌ಗಳ ಕಥನ ಹೇಗೆ ಇವತ್ತಿಗೂ ವಿಶ್ವವನ್ನು ಕಾಡುತ್ತಿದೆಯೋ, ಹಾಗೆಯೇ ಆಸ್ಪತ್ರೆಯ ಹಾಸಿಗೆಯ ಮೇಲಿರುವ ಎಂಬತ್ನಾಲ್ಕರ ಹರೆಯದ ಪಾರ್ಕಿನ್ಸನ್ ಪೀಡಿತ ಈ ಹೋರಾಟಗಾರನ ಕತೆ ಭವಿಷ್ಯದಲ್ಲಿ ನಮ್ಮ ದೇಶದ ಕರಾಳ ಇತಿಹಾಸ ಹಾಗೂ ಪ್ರಭುತ್ವದ ಅಹಂಕಾರವನ್ನು ಬಿಚ್ಚಿಡುವ ಸಾಧನವಾಗಲಿದೆ.

ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬಂಧನದಲ್ಲಿರುವಾಗಲೇ ಕೋವಿಡ್‌ಗೆ ಒಳಗಾದರು. ಆದರೂ 84 ರ ಹರೆಯದ, ಪಾರ್ಕಿನ್ಸನ್ ಹಾಗೂ ಇತರೆ ವಯೋ ಸಹಜ ಆರೋಗ್ಯ ಸಮಸ್ಯೆಗಳಿರುವ ಅವರನ್ನು ಸರ್ಕಾರ ಇನ್ನಿಲ್ಲದಂತೆ ಪೀಡಿಸಿತು.

ಇಂದು ಸ್ಟ್ಯಾನ್ ಸ್ವಾಮಿ ಇರುವ ಜಾಗದಲ್ಲಿ ಮುಂದೆ ನಾವಿರಲಿದ್ದೇವೆ. ಪ್ರಭುತ್ವದ ಕೋವಿಗಳಿಗೆ ಹಾಗೂ ಪ್ರಭುತ್ವದ ಸರಪಣಿಗಳಿಗೆ ವ್ಯಕ್ತಿ ಕಾಣಿಸುವುದಿಲ್ಲ, ಬದಲಾಗಿ ಪ್ರಭುತ್ವದ ವಿರುದ್ಧದ ದನಿ ಮಾತ್ರ ಕೇಳಿಸುತ್ತೆ. ಹಾಗಾಗೀ ಇವತ್ತು ಸ್ಟ್ಯಾನ್ ಸ್ವಾಮಿಯ ಜಾಗದಲ್ಲಿ ನಾಳೆ ನಾವು ಯಾರಾದರೂ ಇರಬಹುದು. ನಾವಾಗಿಯೇ ಇದನ್ನು ಆರಿಸಿರುವುದು, ನಾವೇ ಅದರ ಪರಿಣಾಮಗಳನ್ನು ಉಣಲಿದ್ದೇವೆ.

ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....