Homeಚಳವಳಿ‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

- Advertisement -
- Advertisement -

ಇದು ಪ್ರಕೃತಿದತ್ತ ಸಾವಲ್ಲ, ಬದಲಾಗಿ ಪ್ರಭುತ್ವ ಮುಂದೆ ನಿಂತು ನಡೆಸಿದ ಕೊಲೆ. ಫಾದರ್‌ ಸ್ಟ್ಯಾನ್ ಸ್ವಾಮಿ ಸತ್ತಿಲ್ಲ, ಅವರ ಕೊಲೆಯಾಗಿದೆ. ಆದಿವಾಸಿಗಳ ಹಕ್ಕುಗಳಿಗಾಗಿ ದಶಕಗಳ ಕಾಲ ಹೋರಾಡಿದ, ಪ್ರಭುತ್ವದ ವಿರುದ್ಧ ಸಿಡಿದೆದ್ದ ಸ್ಟ್ಯಾನ್ ಸ್ವಾಮಿ ಕೊನೆಗೂ ಅದೇ ಪ್ರಭುತ್ವದ ಅಹಂಕಾರ, ದರ್ಪಕ್ಕೆ ಬಲಿಯಾದರು.

ಅವರ ಮೇಲೆ ಅತೀ ಕಠಿಣ UAPA ಕಾಯಿದೆಯಡಿ ಕೇಸ್ ಹಾಕಲಾಗಿತ್ತು. ಹೋರಾಟಗಾರರಾದ ಅವರನ್ನು ಭಯೋತ್ಪಾದಕರೆಂದು ಪರಿಗಣಿಸಿ ಜೈಲಿಗಟ್ಟಲಾಯಿತು. ತನ್ನ ನಡುಗುವ ಕೈಗಳಿಂದ ಗ್ಲಾಸ್ ಹಿಡಿದು ನೀರೂ ಕುಡಿಯಲು ಆಗುತ್ತಿಲ್ಲ. ಆದ್ದರಿಂದ ತನಗೊಂದು ಸ್ಟ್ರಾ ಹಾಗೂ ಸಿಪ್ಪರ್ ಕೊಡಿ ಎಂದು ಅವರು ಕೋರ್ಟ್ ಮೊರೆ ಹೋಗಬೇಕಾಯಿತು. ಅದನ್ನು ವಿಚಾರಣೆಗೆತ್ತಿಕೊಳ್ಳಲು ಇಪ್ಪತ್ತು ದಿನ ಬೇಕಾಯಿತು.

ಕೋರ್ಟ್ ಅವರಿಗೆ ಸ್ಟ್ರಾ ಹಾಗೂ ಸಿಪ್ಪರ್ ಕೊಡಿ ಎಂದಾಗ ಎನ್‍ಐಎ ನಮ್ಮ ಬಳಿ ಅವುಗಳಿಲ್ಲ ಎಂದು ಹೇಳಿತು. ಕೊನೆಗೆ ಸೋಷಿಯಲ್ ಮೀಡಿಯಾದಲ್ಲಿ ಜನರು ಸ್ಟ್ರಾ ಹಾಗೂ ಸಿಪ್ಪರ್ ಖರೀದಿಸಿ ಎನ್‍ಐಗೆ ಕಳುಹಿಸಿ ಅವರ ಮಾನವನ್ನು ಕಳೆದಾಗ ಸ್ಟ್ಯಾನ್ ಸ್ವಾಮಿಗೆ, ಬಂಧನವಾಗಿ 50 ದಿನಗಳ ಬಳಿಕ ಸಿಪ್ಪರ್ ಸಿಕ್ಕಿತು.

ಇದನ್ನೂ ಓದಿ: ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

ಕೇವಲ ಪ್ರಭುತ್ವ ಅಲ್ಲ ನಮ್ಮ ನ್ಯಾಯಾಂಗ ವ್ಯವಸ್ಥೆ ಕೂಡಾ ಈ ಕೊಲೆಗೆ ಜವಾಬ್ದಾರಿಯನ್ನು ಹೊರಬೇಕು. ಕಳೆದ ಆರೇಳು ತಿಂಗಳಲ್ಲಿ ಸ್ಟ್ಯಾನ್ ಸ್ವಾಮಿ ಅದೆಷ್ಟು ಬಾರಿ ಕೋರ್ಟ್ ಮೊರೆಹೋಗಿದ್ದಾರೋ? ಆದರೂ ಪ್ರತೀ ಬಾರಿ ‘ತಾರೀಕ್ ಪೆ ತಾರೀಕ್, ತಾರೀಕ್ ಪೆ ತಾರೀಕ್’ ಎಂದರೆ ಹೊರತು ನ್ಯಾಯ ಕೊಡಿಸಲಿಲ್ಲ. ನ್ಯಾಯಾಧೀಶರ ತಾರೀಕು ಬರಲೇ ಇಲ್ಲ ಆದರೆ ಯಮರಾಯನ ತಾರೀಕು ಇವತ್ತು ಬಂದುಬಿಟ್ಟಿತು.

ಸ್ಟ್ಯಾನ್ ಸ್ವಾಮಿಗೆ ಪ್ರಭುತ್ವ, ಅಸಮಾನತೆ, ಅನ್ಯಾಯದ ವಿರುದ್ಧ ಹೋರಾಟ ಹೊಸತಲ್ಲ. ಅವರು ಕೇವಲ ಪ್ರಸಕ್ತ ಸರಕಾರದವಧಿಯಲ್ಲಿ ಮಾತ್ರ ಪ್ರತಿಭಟಿಸಿದ್ದಲ್ಲ, ಹೋರಾಡಿದ್ದಲ್ಲ. ದಶಕಗಳಿಂದ ಹೋರಾಟದ ಹಾದಿಯಲ್ಲಿಯೇ ಇದ್ದರವರು. ಆದಿವಾಸಿಗಳ ಪರ ಸದಾಕಾಲ ದನಿಯೆತ್ತಿದ್ದವರು. ಸಂವಿಧಾನ ಐದನೇ ಪರಿಚ್ಛೇಧವನ್ನು ಅನುಷ್ಟಾನ ಮಾಡದ್ದರ ವಿರುದ್ಧ ಅವರ ಹೋರಾಟ ಇವತ್ತು ನಿನ್ನೆಯದಲ್ಲ.

ಬರೀ ಭಾರತ ಸರ್ಕಾರವೇಕೆ, ತಮ್ಮ ವಿದ್ಯಾರ್ಥಿ ದೆಸೆಯಲ್ಲಿ ಫಿಲಿಪೈನ್ಸ್ ದೇಶದಲ್ಲಿ ತತ್ವಶಾಶ್ತ್ರ ಹಾಗೂ ಸಮಾಜಶಾಸ್ತ್ರವನ್ನು ಅಧ್ಯಯನ ಮಾಡುತ್ತಿದ್ದಾಗ, ಅಲ್ಲಿನ ಸ್ಥಳೀಯ ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಗಳನ್ನು ಹಮ್ಮಿಕೊಂಡು, ಪ್ರಭುತ್ವದ ವಿರುದ್ಧ ದನಿಯೆತ್ತಿದ್ದ ಧೀಮಂತ ವ್ಯಕ್ತಿ ಅವರು. ಇಂಥ ಅಪ್ರತಿಮ ಚೇತನ ಇನ್ನಿಲ್ಲ.

ಇದನ್ನೂ ಓದಿ: ಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಹಲವು ತಿಂಗಳು ಕಾಯಬೇಕು!

ಸ್ಟ್ಯಾನ್ ಸ್ವಾಮಿಯ ಈ ಫೊಟೋ ನೋಡಿ. ಹಿಟ್ಲರನ ಗ್ಯಾಸ್ ಚೇಂಬರ್‌ಗಳ ಕಥನ ಹೇಗೆ ಇವತ್ತಿಗೂ ವಿಶ್ವವನ್ನು ಕಾಡುತ್ತಿದೆಯೋ, ಹಾಗೆಯೇ ಆಸ್ಪತ್ರೆಯ ಹಾಸಿಗೆಯ ಮೇಲಿರುವ ಎಂಬತ್ನಾಲ್ಕರ ಹರೆಯದ ಪಾರ್ಕಿನ್ಸನ್ ಪೀಡಿತ ಈ ಹೋರಾಟಗಾರನ ಕತೆ ಭವಿಷ್ಯದಲ್ಲಿ ನಮ್ಮ ದೇಶದ ಕರಾಳ ಇತಿಹಾಸ ಹಾಗೂ ಪ್ರಭುತ್ವದ ಅಹಂಕಾರವನ್ನು ಬಿಚ್ಚಿಡುವ ಸಾಧನವಾಗಲಿದೆ.

ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬಂಧನದಲ್ಲಿರುವಾಗಲೇ ಕೋವಿಡ್‌ಗೆ ಒಳಗಾದರು. ಆದರೂ 84 ರ ಹರೆಯದ, ಪಾರ್ಕಿನ್ಸನ್ ಹಾಗೂ ಇತರೆ ವಯೋ ಸಹಜ ಆರೋಗ್ಯ ಸಮಸ್ಯೆಗಳಿರುವ ಅವರನ್ನು ಸರ್ಕಾರ ಇನ್ನಿಲ್ಲದಂತೆ ಪೀಡಿಸಿತು.

ಇಂದು ಸ್ಟ್ಯಾನ್ ಸ್ವಾಮಿ ಇರುವ ಜಾಗದಲ್ಲಿ ಮುಂದೆ ನಾವಿರಲಿದ್ದೇವೆ. ಪ್ರಭುತ್ವದ ಕೋವಿಗಳಿಗೆ ಹಾಗೂ ಪ್ರಭುತ್ವದ ಸರಪಣಿಗಳಿಗೆ ವ್ಯಕ್ತಿ ಕಾಣಿಸುವುದಿಲ್ಲ, ಬದಲಾಗಿ ಪ್ರಭುತ್ವದ ವಿರುದ್ಧದ ದನಿ ಮಾತ್ರ ಕೇಳಿಸುತ್ತೆ. ಹಾಗಾಗೀ ಇವತ್ತು ಸ್ಟ್ಯಾನ್ ಸ್ವಾಮಿಯ ಜಾಗದಲ್ಲಿ ನಾಳೆ ನಾವು ಯಾರಾದರೂ ಇರಬಹುದು. ನಾವಾಗಿಯೇ ಇದನ್ನು ಆರಿಸಿರುವುದು, ನಾವೇ ಅದರ ಪರಿಣಾಮಗಳನ್ನು ಉಣಲಿದ್ದೇವೆ.

ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...