Homeಚಳವಳಿ‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

- Advertisement -
- Advertisement -

ಇದು ಪ್ರಕೃತಿದತ್ತ ಸಾವಲ್ಲ, ಬದಲಾಗಿ ಪ್ರಭುತ್ವ ಮುಂದೆ ನಿಂತು ನಡೆಸಿದ ಕೊಲೆ. ಫಾದರ್‌ ಸ್ಟ್ಯಾನ್ ಸ್ವಾಮಿ ಸತ್ತಿಲ್ಲ, ಅವರ ಕೊಲೆಯಾಗಿದೆ. ಆದಿವಾಸಿಗಳ ಹಕ್ಕುಗಳಿಗಾಗಿ ದಶಕಗಳ ಕಾಲ ಹೋರಾಡಿದ, ಪ್ರಭುತ್ವದ ವಿರುದ್ಧ ಸಿಡಿದೆದ್ದ ಸ್ಟ್ಯಾನ್ ಸ್ವಾಮಿ ಕೊನೆಗೂ ಅದೇ ಪ್ರಭುತ್ವದ ಅಹಂಕಾರ, ದರ್ಪಕ್ಕೆ ಬಲಿಯಾದರು.

ಅವರ ಮೇಲೆ ಅತೀ ಕಠಿಣ UAPA ಕಾಯಿದೆಯಡಿ ಕೇಸ್ ಹಾಕಲಾಗಿತ್ತು. ಹೋರಾಟಗಾರರಾದ ಅವರನ್ನು ಭಯೋತ್ಪಾದಕರೆಂದು ಪರಿಗಣಿಸಿ ಜೈಲಿಗಟ್ಟಲಾಯಿತು. ತನ್ನ ನಡುಗುವ ಕೈಗಳಿಂದ ಗ್ಲಾಸ್ ಹಿಡಿದು ನೀರೂ ಕುಡಿಯಲು ಆಗುತ್ತಿಲ್ಲ. ಆದ್ದರಿಂದ ತನಗೊಂದು ಸ್ಟ್ರಾ ಹಾಗೂ ಸಿಪ್ಪರ್ ಕೊಡಿ ಎಂದು ಅವರು ಕೋರ್ಟ್ ಮೊರೆ ಹೋಗಬೇಕಾಯಿತು. ಅದನ್ನು ವಿಚಾರಣೆಗೆತ್ತಿಕೊಳ್ಳಲು ಇಪ್ಪತ್ತು ದಿನ ಬೇಕಾಯಿತು.

ಕೋರ್ಟ್ ಅವರಿಗೆ ಸ್ಟ್ರಾ ಹಾಗೂ ಸಿಪ್ಪರ್ ಕೊಡಿ ಎಂದಾಗ ಎನ್‍ಐಎ ನಮ್ಮ ಬಳಿ ಅವುಗಳಿಲ್ಲ ಎಂದು ಹೇಳಿತು. ಕೊನೆಗೆ ಸೋಷಿಯಲ್ ಮೀಡಿಯಾದಲ್ಲಿ ಜನರು ಸ್ಟ್ರಾ ಹಾಗೂ ಸಿಪ್ಪರ್ ಖರೀದಿಸಿ ಎನ್‍ಐಗೆ ಕಳುಹಿಸಿ ಅವರ ಮಾನವನ್ನು ಕಳೆದಾಗ ಸ್ಟ್ಯಾನ್ ಸ್ವಾಮಿಗೆ, ಬಂಧನವಾಗಿ 50 ದಿನಗಳ ಬಳಿಕ ಸಿಪ್ಪರ್ ಸಿಕ್ಕಿತು.

ಇದನ್ನೂ ಓದಿ: ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

ಕೇವಲ ಪ್ರಭುತ್ವ ಅಲ್ಲ ನಮ್ಮ ನ್ಯಾಯಾಂಗ ವ್ಯವಸ್ಥೆ ಕೂಡಾ ಈ ಕೊಲೆಗೆ ಜವಾಬ್ದಾರಿಯನ್ನು ಹೊರಬೇಕು. ಕಳೆದ ಆರೇಳು ತಿಂಗಳಲ್ಲಿ ಸ್ಟ್ಯಾನ್ ಸ್ವಾಮಿ ಅದೆಷ್ಟು ಬಾರಿ ಕೋರ್ಟ್ ಮೊರೆಹೋಗಿದ್ದಾರೋ? ಆದರೂ ಪ್ರತೀ ಬಾರಿ ‘ತಾರೀಕ್ ಪೆ ತಾರೀಕ್, ತಾರೀಕ್ ಪೆ ತಾರೀಕ್’ ಎಂದರೆ ಹೊರತು ನ್ಯಾಯ ಕೊಡಿಸಲಿಲ್ಲ. ನ್ಯಾಯಾಧೀಶರ ತಾರೀಕು ಬರಲೇ ಇಲ್ಲ ಆದರೆ ಯಮರಾಯನ ತಾರೀಕು ಇವತ್ತು ಬಂದುಬಿಟ್ಟಿತು.

ಸ್ಟ್ಯಾನ್ ಸ್ವಾಮಿಗೆ ಪ್ರಭುತ್ವ, ಅಸಮಾನತೆ, ಅನ್ಯಾಯದ ವಿರುದ್ಧ ಹೋರಾಟ ಹೊಸತಲ್ಲ. ಅವರು ಕೇವಲ ಪ್ರಸಕ್ತ ಸರಕಾರದವಧಿಯಲ್ಲಿ ಮಾತ್ರ ಪ್ರತಿಭಟಿಸಿದ್ದಲ್ಲ, ಹೋರಾಡಿದ್ದಲ್ಲ. ದಶಕಗಳಿಂದ ಹೋರಾಟದ ಹಾದಿಯಲ್ಲಿಯೇ ಇದ್ದರವರು. ಆದಿವಾಸಿಗಳ ಪರ ಸದಾಕಾಲ ದನಿಯೆತ್ತಿದ್ದವರು. ಸಂವಿಧಾನ ಐದನೇ ಪರಿಚ್ಛೇಧವನ್ನು ಅನುಷ್ಟಾನ ಮಾಡದ್ದರ ವಿರುದ್ಧ ಅವರ ಹೋರಾಟ ಇವತ್ತು ನಿನ್ನೆಯದಲ್ಲ.

ಬರೀ ಭಾರತ ಸರ್ಕಾರವೇಕೆ, ತಮ್ಮ ವಿದ್ಯಾರ್ಥಿ ದೆಸೆಯಲ್ಲಿ ಫಿಲಿಪೈನ್ಸ್ ದೇಶದಲ್ಲಿ ತತ್ವಶಾಶ್ತ್ರ ಹಾಗೂ ಸಮಾಜಶಾಸ್ತ್ರವನ್ನು ಅಧ್ಯಯನ ಮಾಡುತ್ತಿದ್ದಾಗ, ಅಲ್ಲಿನ ಸ್ಥಳೀಯ ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಗಳನ್ನು ಹಮ್ಮಿಕೊಂಡು, ಪ್ರಭುತ್ವದ ವಿರುದ್ಧ ದನಿಯೆತ್ತಿದ್ದ ಧೀಮಂತ ವ್ಯಕ್ತಿ ಅವರು. ಇಂಥ ಅಪ್ರತಿಮ ಚೇತನ ಇನ್ನಿಲ್ಲ.

ಇದನ್ನೂ ಓದಿ: ಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಹಲವು ತಿಂಗಳು ಕಾಯಬೇಕು!

ಸ್ಟ್ಯಾನ್ ಸ್ವಾಮಿಯ ಈ ಫೊಟೋ ನೋಡಿ. ಹಿಟ್ಲರನ ಗ್ಯಾಸ್ ಚೇಂಬರ್‌ಗಳ ಕಥನ ಹೇಗೆ ಇವತ್ತಿಗೂ ವಿಶ್ವವನ್ನು ಕಾಡುತ್ತಿದೆಯೋ, ಹಾಗೆಯೇ ಆಸ್ಪತ್ರೆಯ ಹಾಸಿಗೆಯ ಮೇಲಿರುವ ಎಂಬತ್ನಾಲ್ಕರ ಹರೆಯದ ಪಾರ್ಕಿನ್ಸನ್ ಪೀಡಿತ ಈ ಹೋರಾಟಗಾರನ ಕತೆ ಭವಿಷ್ಯದಲ್ಲಿ ನಮ್ಮ ದೇಶದ ಕರಾಳ ಇತಿಹಾಸ ಹಾಗೂ ಪ್ರಭುತ್ವದ ಅಹಂಕಾರವನ್ನು ಬಿಚ್ಚಿಡುವ ಸಾಧನವಾಗಲಿದೆ.

ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬಂಧನದಲ್ಲಿರುವಾಗಲೇ ಕೋವಿಡ್‌ಗೆ ಒಳಗಾದರು. ಆದರೂ 84 ರ ಹರೆಯದ, ಪಾರ್ಕಿನ್ಸನ್ ಹಾಗೂ ಇತರೆ ವಯೋ ಸಹಜ ಆರೋಗ್ಯ ಸಮಸ್ಯೆಗಳಿರುವ ಅವರನ್ನು ಸರ್ಕಾರ ಇನ್ನಿಲ್ಲದಂತೆ ಪೀಡಿಸಿತು.

ಇಂದು ಸ್ಟ್ಯಾನ್ ಸ್ವಾಮಿ ಇರುವ ಜಾಗದಲ್ಲಿ ಮುಂದೆ ನಾವಿರಲಿದ್ದೇವೆ. ಪ್ರಭುತ್ವದ ಕೋವಿಗಳಿಗೆ ಹಾಗೂ ಪ್ರಭುತ್ವದ ಸರಪಣಿಗಳಿಗೆ ವ್ಯಕ್ತಿ ಕಾಣಿಸುವುದಿಲ್ಲ, ಬದಲಾಗಿ ಪ್ರಭುತ್ವದ ವಿರುದ್ಧದ ದನಿ ಮಾತ್ರ ಕೇಳಿಸುತ್ತೆ. ಹಾಗಾಗೀ ಇವತ್ತು ಸ್ಟ್ಯಾನ್ ಸ್ವಾಮಿಯ ಜಾಗದಲ್ಲಿ ನಾಳೆ ನಾವು ಯಾರಾದರೂ ಇರಬಹುದು. ನಾವಾಗಿಯೇ ಇದನ್ನು ಆರಿಸಿರುವುದು, ನಾವೇ ಅದರ ಪರಿಣಾಮಗಳನ್ನು ಉಣಲಿದ್ದೇವೆ.

ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...