Homeಚಳವಳಿ‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ - ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ – ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

ಮೋದಿ ಮತ್ತು ಶಾ ಅವರ ಕೈಯಲ್ಲಿ ಫಾದರ್‌ ಸ್ಟಾನ್ ಸ್ವಾಮಿಯ ರಕ್ತವಿದೆ. ದೇಶ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ.

- Advertisement -
- Advertisement -

ಭೀಮಾಕೊರೆಗಾಂವ್‌ ಪ್ರಕರಣದಲ್ಲಿ ಬಂಧಿತರಾಗಿದ್ದ 84 ವರ್ಷದ ಹಿರಿಯ ಸಾಮಾಜಿಕ ಹೋರಾಟಗಾರ ಫಾದರ್‌ ಸ್ಟಾನ್‌ ಸ್ವಾಮಿಯವರು ಮೃಪಟ್ಟಿದ್ದಾರೆ. ಇಂದು ಮಧ್ಯಾಹ್ನ 1:30 ಗಂಟೆಗೆ ಸ್ಟ್ಯಾನ್‌ ಸ್ವಾಮಿ ಅವರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಪರ ವಾದಿಸುತ್ತದ್ದ ನ್ಯಾಯವಾದಿ ಮಿನಿ ದೇಸಾಯಿ ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳೆದ್ದಿದ್ದು, “ಇದು ಒಕ್ಕೂಟ ಸರ್ಕಾರ ಪ್ರಾಯೋಜಿತ ಕೊಲೆ” ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ಯಾಥೋಲಿಕ್ ಪಾದ್ರಿಯಾಗಿರುವ ಸ್ಟ್ಯಾನ್ ಸ್ವಾಮಿ ಕೇರಳ ಮೂಲದವರಾಗಿದ್ದು 50 ವರ್ಷದಿಂದ ಮಾನವ ಹಕ್ಕು ಮತ್ತು ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡುತ್ತಿದ್ದರು. ಅವರು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ NIA ಕಳೆದ ವರ್ಷ ಬಂಧಿಸಿತ್ತು. ಬುಡಕಟ್ಟು ಜನರ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವ ಸ್ಟ್ಯಾನ್ ಸ್ವಾಮಿಯ ಮೇಲೆ ಭಯೋತ್ಪಾದನೆ ತಡೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಕಠಿಣ ವಿಭಾಗಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗಿತ್ತು.

ಇದನ್ನೂ ಓದಿ: ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

ಸ್ಟ್ಯಾನ್ ಸ್ವಾಮಿ ವಿಸ್ತಾಪನ್ ವಿರೋಧಿ ಜನವಿಕಾಸ್ ಆಂದೋಲನ್ (ವಿ.ವಿ.ಜೆ.ಎ) ಸಂಘಟನೆಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದರು. ಅವರು ಜಾರ್ಖಂಡ್‌ನ ಅತ್ಯಂತ ಶ್ರೇಷ್ಠ ಮಾನವ ಹಕ್ಕುಗಳ ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಭೀಮಾ ಕೋರೆಗಾಂವ್ ಪ್ರಕರಣದ ಸಂಬಂಧ ಬಂಧನಕ್ಕೊಳಗಾದ 16 ನೇ ವ್ಯಕ್ತಿಯಾಗಿದ್ದು, ಇದುವರೆಗೂ ಬಂಧಿಸಿದವರಲ್ಲಿ ಹಿರಿಯರಾಗಿದ್ದಾರೆ. ಸ್ಟ್ಯಾನ್ ಸ್ವಾಮಿ ಅವರು ಪಾರ್ಕಿನ್ಸನ್‌ ಸೇರಿದಂತೆ ಹಲವು ರೀತಿಯ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಯಾಗಿದ್ದರು.

ಅವರ ಸಾವಿಗೆ ದೇಶದ ಹಲವಾರು ಚಿಂತಕರು, ಹೋರಾಟಗಾರರು, ಗಣ್ಯವ್ಯಕ್ತಿಗಳು, ಸಾಮಾಜಿಕ ಕಾರ್ಯಕರ್ತರು ಸಂತಾಪ ವ್ಯಕ್ತಪಡಿಸಿದ್ದು, ಒಕ್ಕೂಟ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಶ್ರೀವತ್ಸ ಅವರು, “ಸ್ಟಾನ್ಸ್‌ಸ್ವಾಮಿಯವರ ನಿಧನ ಮೋದಿ ಮತ್ತು ಷಾ ಸರ್ಕಾರದ ಸರ್ಕಾರಿ ಪ್ರಾಯೋಜಿತ ರಾಜಕೀಯ ಕೊಲೆಯಾಗಿದೆ. ಅದನ್ನು ಬೇರೇನೂ ಕರೆಯಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸುಪ್ರೀಂಕೋರ್ಟ್‌ ತುರ್ತು ವಿಚಾರಣೆ ನಡೆಸಿ, ‘ವ್ಯಕ್ತಿ ಸ್ವಾತಂತ್ಯ್ರ’ ಎಂದು ಹೇಳಿ ಅರ್ನಾಬ್ ಗೋಸ್ವಾಮಿಗೆ 7 ದಿನಗಳಲ್ಲಿ ಜಾಮೀನು ನೀಡಿತು. 84 ಸ್ಟಾನ್ ಸ್ವಾಮಿ ಬಂಧನವಾಗಿ 7 ತಿಂಗಳಾದರೂ ಜಾಮೀನು ನಿರಾಕರಿಸಲಾಯಿತು. ಪಾರ್ಕಿನ್ಸನ್ ಕಾಯಿಲೆಯಿಂದ  ಅವರು ಬಳಲುತ್ತಿದ್ದ ಅವರು ವ್ಯಕ್ತಿ ಸ್ವಾತಂತ್ಯ್ರ ಇಲ್ಲದ ರಾಜಕೀಯ ಕೈದಿಯಾಗಿ ಕೊರೊನಾ ಪಡೆದರು! ಒಂದು ರಾಷ್ಟ್ರ, ಒಂದು ಕಾನೂನು ಆದರೆ ನ್ಯಾಯವಿಲ್ಲ” ಎಂದು ಶ್ರೀವತ್ಸ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು, “ಫಾದರ್‌‌ ಸ್ಟಾನ್ ಸ್ವಾಮಿ ಅವರ ನಿಧನದ ಸುದ್ದಿಯನ್ನು ತಿಳಿದು ದುಃಖವಾಯಿತು. ನಮ್ಮ ಸರ್ಕಾರವು ಮಾನವೀಯತೆಯೊಂದಿಗೆ ನಡೆಸಿಕೊಳ್ಳಲು ಸಾಧ್ಯವಾಗದ ಮಾನವೀಯ ಮತ್ತು ದೇವತಾ ಮನುಷ್ಯ” ಎಂದು ಹೇಳಿದ್ದಾರೆ.

ಡಿಎಂಕೆ ನಾಯಕಿ ಕನಿಮೋಳಿ ಅವರು, “ಪಾರ್ಕಿನ್ಸನ್‌ನಿಂದ ಬಳಲುತ್ತಿದ್ದ ಸ್ಟಾನ್ ಸ್ವಾಮಿ (84) ಅವರನ್ನು ಬಿಜೆಪಿ ಸರ್ಕಾರ ದೇಶ ವಿರೋಧಿ ಎಂದು ಬಂಧಿಸಿದೆ. ಅವರ ಆರೋಗ್ಯ ಪರಿಸ್ಥಿತಿಗಳನ್ನು ಎಂದಿಗೂ ಪರಿಗಣಿಸಲಾಗಲಿಲ್ಲ. ಅವರು ಕೋಮಾಕ್ಕೆ ಜಾರಿ ನಿಧನರಾದರು.

ಇದನ್ನೂ ಓದಿ: ಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಹಲವು ತಿಂಗಳು ಕಾಯಬೇಕು!

ರೈತ ಹೋರಾಟಗಾರ ಯೋಗೇಂದ್ರ ಯಾದವ್ ಅವರು, “ಫಾದರ್ ಸ್ಟಾನ್ ಸ್ವಾಮಿಯವರ ಸಾವಿನ ಬಗ್ಗೆ ತಿಳಿದು ತೀವ್ರ ದುಃಖವಾಯಿತು. ಎನ್ಐಎ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಬಿಜೆಪಿ ಮತ್ತು ನ್ಯಾಯಾಂಗದಿಂದ ಆದ ತಣ್ಣನೆಯ ಕ್ರೌರ್ಯ‌ ಇದು. ಈ ದೇಶದ ಅತ್ಯಂತ ತುಳಿತಕ್ಕೊಳಗಾದ ಜನರ ಪರವಾಗಿ ಹೋರಾಡಿದ ಮಾನವೀಯ ವ್ಯಕ್ತಿಯನ್ನು ಈ ರೀತಿ ಹತ್ಯೆ ಮಾಡಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೋರಾಟಗಾರ್ತಿ ಮೀನಾ ಕಂದಸಾಮಿ ಅವರು, “ನ್ಯಾಯಾಂಗದ ಕೈಯಲ್ಲಿ ರಕ್ತ. ಆರ್‌ಎಸ್‌ಎಸ್-ಬಿಜೆಪಿಯ ಕೈಯಲ್ಲಿ ರಕ್ತ. ಎನ್ಐಎ ಕೈಯಲ್ಲಿ ರಕ್ತ. ರಾಜ್ಯದ ಪರವಾಗಿ ಪ್ರೊಪಗಾಂಡ ನಡೆಸಿದ ಮಾಧ್ಯಮಗಳ ಕೈಯಲ್ಲಿ ರಕ್ತ. ಇದರಿಂದ ಪಾರಾಗಲು ಮೋದಿ-ಷಾಗೆ ಅವಕಾಶ ನೀಡುವ ಪ್ರತಿಪಕ್ಷದ ಕೈಯಲ್ಲಿ ರಕ್ತ. ನಮ್ಮೆಲ್ಲರ ಕೈಯಲ್ಲಿ ರಕ್ತ.” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ಗುಜರಾತ್‌ ಶಾಸಕ, ಯುವ ಹೋರಾಟಗಾರ ಜಿಗ್ನೇಶ್ ಮೇವಾನಿ ಅವರು, ‘‘ಫಾದರ್‌ ಸ್ಟಾನ್ ಸ್ವಾಮಿ ಎಂದಿಗೂ ಸಾಯುವುದಿಲ್ಲ. ಅವರು ವೀರರಾಗಿ ನಮ್ಮ ಹೃದಯದಲ್ಲಿ ಜೀವಿಸುವರು. ಫ್ಯಾಸಿಸ್ಟ್ ಮೋದಿ ಸರ್ಕಾರದ ವಿರುದ್ಧ ನಿಂತು ಜೀವನವನ್ನೇ ವ್ಯಯಿಸಿದ ಧೈರ್ಯಶಾಲಿ ಅವರು. ಮೋದಿ ಮತ್ತು ಶಾ ಅವರ ಕೈಯಲ್ಲಿ ಫಾದರ್‌ ಸ್ಟಾನ್ ಸ್ವಾಮಿಯ ರಕ್ತವಿದೆ. ದೇಶ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಜನತಾಕಾ ರಿಪೋರ್ಟ್‌ ಸಂಸ್ಥಾಪಕ ರಿಫಾತ್‌‌ ಜಾವೇದ್, “ಫಾದರ್ ಸ್ಟಾನ್ ಸ್ವಾಮಿಯ ಸಾವಿನ ಬಗ್ಗೆ ಬಾಂಬೆ ಹೈಕೋರ್ಟ್ ‘ನಮಗೆ ವ್ಯಕ್ತಪಡಿಸಲು ಪದಗಳಿಲ್ಲ’ ಎಂದು ಹೇಳಿದೆ. ಭಾರತೀಯ ನ್ಯಾಯಾಂಗದ ಬಗ್ಗೆ ಇತಿಹಾಸದಲ್ಲಿ ಹೇಳಲು ಈ ಮಾತುಗಳು ಸಾಕಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.

ಜೆಎನ್‌ಯು ನಾಯಕಿ ಐಶೆ ಘೋಷ್, “ಇದು ಕಸ್ಟೋಡಿಯಲ್ ಕೊಲೆ. ಪಾದರ್‌ ಸ್ವಾಮಿ ಹಿಂದುಳಿದ ಸಮುದಾಯಗಳಿಗಾಗಿ ಜೀವನದುದ್ದಕ್ಕೂ ಕೆಲಸ ಮಾಡಿದ್ದರು. ಅವರಿಗೆ ಮೂಲಭೂತ ಅವಶ್ಯಕತೆಗಳು ಮತ್ತು ಆರೋಗ್ಯ ರಕ್ಷಣೆ ನಿರಾಕರಿಸಲಾಯಿತು. ಯುಎಪಿಎ ಹಿಂತೆಗೆದುಕೊಳ್ಳಿ, ಎಲ್ಲಾ ರಾಜಕೀಯ ಕೈದಿಗಳನ್ನು ತಕ್ಷಣ ಬಿಡುಗಡೆ ಮಾಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್‌ ಖೈದಿಗಳ ಬಿಡುಗಡೆ ಮಾಡಿ-ಮೋದಿಗೆ ನೊಬೆಲ್ ಪ್ರಶಸ್ತಿ ವಿಜೇತರು ಮತ್ತು ಯುರೋಪಿಯನ್‌ ಸಂಸದರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...