Homeಚಳವಳಿ‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ - ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ – ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

ಮೋದಿ ಮತ್ತು ಶಾ ಅವರ ಕೈಯಲ್ಲಿ ಫಾದರ್‌ ಸ್ಟಾನ್ ಸ್ವಾಮಿಯ ರಕ್ತವಿದೆ. ದೇಶ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ.

- Advertisement -
- Advertisement -

ಭೀಮಾಕೊರೆಗಾಂವ್‌ ಪ್ರಕರಣದಲ್ಲಿ ಬಂಧಿತರಾಗಿದ್ದ 84 ವರ್ಷದ ಹಿರಿಯ ಸಾಮಾಜಿಕ ಹೋರಾಟಗಾರ ಫಾದರ್‌ ಸ್ಟಾನ್‌ ಸ್ವಾಮಿಯವರು ಮೃಪಟ್ಟಿದ್ದಾರೆ. ಇಂದು ಮಧ್ಯಾಹ್ನ 1:30 ಗಂಟೆಗೆ ಸ್ಟ್ಯಾನ್‌ ಸ್ವಾಮಿ ಅವರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಪರ ವಾದಿಸುತ್ತದ್ದ ನ್ಯಾಯವಾದಿ ಮಿನಿ ದೇಸಾಯಿ ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳೆದ್ದಿದ್ದು, “ಇದು ಒಕ್ಕೂಟ ಸರ್ಕಾರ ಪ್ರಾಯೋಜಿತ ಕೊಲೆ” ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ಯಾಥೋಲಿಕ್ ಪಾದ್ರಿಯಾಗಿರುವ ಸ್ಟ್ಯಾನ್ ಸ್ವಾಮಿ ಕೇರಳ ಮೂಲದವರಾಗಿದ್ದು 50 ವರ್ಷದಿಂದ ಮಾನವ ಹಕ್ಕು ಮತ್ತು ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡುತ್ತಿದ್ದರು. ಅವರು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ NIA ಕಳೆದ ವರ್ಷ ಬಂಧಿಸಿತ್ತು. ಬುಡಕಟ್ಟು ಜನರ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವ ಸ್ಟ್ಯಾನ್ ಸ್ವಾಮಿಯ ಮೇಲೆ ಭಯೋತ್ಪಾದನೆ ತಡೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಕಠಿಣ ವಿಭಾಗಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗಿತ್ತು.

ಇದನ್ನೂ ಓದಿ: ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

ಸ್ಟ್ಯಾನ್ ಸ್ವಾಮಿ ವಿಸ್ತಾಪನ್ ವಿರೋಧಿ ಜನವಿಕಾಸ್ ಆಂದೋಲನ್ (ವಿ.ವಿ.ಜೆ.ಎ) ಸಂಘಟನೆಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದರು. ಅವರು ಜಾರ್ಖಂಡ್‌ನ ಅತ್ಯಂತ ಶ್ರೇಷ್ಠ ಮಾನವ ಹಕ್ಕುಗಳ ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಭೀಮಾ ಕೋರೆಗಾಂವ್ ಪ್ರಕರಣದ ಸಂಬಂಧ ಬಂಧನಕ್ಕೊಳಗಾದ 16 ನೇ ವ್ಯಕ್ತಿಯಾಗಿದ್ದು, ಇದುವರೆಗೂ ಬಂಧಿಸಿದವರಲ್ಲಿ ಹಿರಿಯರಾಗಿದ್ದಾರೆ. ಸ್ಟ್ಯಾನ್ ಸ್ವಾಮಿ ಅವರು ಪಾರ್ಕಿನ್ಸನ್‌ ಸೇರಿದಂತೆ ಹಲವು ರೀತಿಯ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಯಾಗಿದ್ದರು.

ಅವರ ಸಾವಿಗೆ ದೇಶದ ಹಲವಾರು ಚಿಂತಕರು, ಹೋರಾಟಗಾರರು, ಗಣ್ಯವ್ಯಕ್ತಿಗಳು, ಸಾಮಾಜಿಕ ಕಾರ್ಯಕರ್ತರು ಸಂತಾಪ ವ್ಯಕ್ತಪಡಿಸಿದ್ದು, ಒಕ್ಕೂಟ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಶ್ರೀವತ್ಸ ಅವರು, “ಸ್ಟಾನ್ಸ್‌ಸ್ವಾಮಿಯವರ ನಿಧನ ಮೋದಿ ಮತ್ತು ಷಾ ಸರ್ಕಾರದ ಸರ್ಕಾರಿ ಪ್ರಾಯೋಜಿತ ರಾಜಕೀಯ ಕೊಲೆಯಾಗಿದೆ. ಅದನ್ನು ಬೇರೇನೂ ಕರೆಯಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸುಪ್ರೀಂಕೋರ್ಟ್‌ ತುರ್ತು ವಿಚಾರಣೆ ನಡೆಸಿ, ‘ವ್ಯಕ್ತಿ ಸ್ವಾತಂತ್ಯ್ರ’ ಎಂದು ಹೇಳಿ ಅರ್ನಾಬ್ ಗೋಸ್ವಾಮಿಗೆ 7 ದಿನಗಳಲ್ಲಿ ಜಾಮೀನು ನೀಡಿತು. 84 ಸ್ಟಾನ್ ಸ್ವಾಮಿ ಬಂಧನವಾಗಿ 7 ತಿಂಗಳಾದರೂ ಜಾಮೀನು ನಿರಾಕರಿಸಲಾಯಿತು. ಪಾರ್ಕಿನ್ಸನ್ ಕಾಯಿಲೆಯಿಂದ  ಅವರು ಬಳಲುತ್ತಿದ್ದ ಅವರು ವ್ಯಕ್ತಿ ಸ್ವಾತಂತ್ಯ್ರ ಇಲ್ಲದ ರಾಜಕೀಯ ಕೈದಿಯಾಗಿ ಕೊರೊನಾ ಪಡೆದರು! ಒಂದು ರಾಷ್ಟ್ರ, ಒಂದು ಕಾನೂನು ಆದರೆ ನ್ಯಾಯವಿಲ್ಲ” ಎಂದು ಶ್ರೀವತ್ಸ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು, “ಫಾದರ್‌‌ ಸ್ಟಾನ್ ಸ್ವಾಮಿ ಅವರ ನಿಧನದ ಸುದ್ದಿಯನ್ನು ತಿಳಿದು ದುಃಖವಾಯಿತು. ನಮ್ಮ ಸರ್ಕಾರವು ಮಾನವೀಯತೆಯೊಂದಿಗೆ ನಡೆಸಿಕೊಳ್ಳಲು ಸಾಧ್ಯವಾಗದ ಮಾನವೀಯ ಮತ್ತು ದೇವತಾ ಮನುಷ್ಯ” ಎಂದು ಹೇಳಿದ್ದಾರೆ.

ಡಿಎಂಕೆ ನಾಯಕಿ ಕನಿಮೋಳಿ ಅವರು, “ಪಾರ್ಕಿನ್ಸನ್‌ನಿಂದ ಬಳಲುತ್ತಿದ್ದ ಸ್ಟಾನ್ ಸ್ವಾಮಿ (84) ಅವರನ್ನು ಬಿಜೆಪಿ ಸರ್ಕಾರ ದೇಶ ವಿರೋಧಿ ಎಂದು ಬಂಧಿಸಿದೆ. ಅವರ ಆರೋಗ್ಯ ಪರಿಸ್ಥಿತಿಗಳನ್ನು ಎಂದಿಗೂ ಪರಿಗಣಿಸಲಾಗಲಿಲ್ಲ. ಅವರು ಕೋಮಾಕ್ಕೆ ಜಾರಿ ನಿಧನರಾದರು.

ಇದನ್ನೂ ಓದಿ: ಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಹಲವು ತಿಂಗಳು ಕಾಯಬೇಕು!

ರೈತ ಹೋರಾಟಗಾರ ಯೋಗೇಂದ್ರ ಯಾದವ್ ಅವರು, “ಫಾದರ್ ಸ್ಟಾನ್ ಸ್ವಾಮಿಯವರ ಸಾವಿನ ಬಗ್ಗೆ ತಿಳಿದು ತೀವ್ರ ದುಃಖವಾಯಿತು. ಎನ್ಐಎ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಬಿಜೆಪಿ ಮತ್ತು ನ್ಯಾಯಾಂಗದಿಂದ ಆದ ತಣ್ಣನೆಯ ಕ್ರೌರ್ಯ‌ ಇದು. ಈ ದೇಶದ ಅತ್ಯಂತ ತುಳಿತಕ್ಕೊಳಗಾದ ಜನರ ಪರವಾಗಿ ಹೋರಾಡಿದ ಮಾನವೀಯ ವ್ಯಕ್ತಿಯನ್ನು ಈ ರೀತಿ ಹತ್ಯೆ ಮಾಡಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೋರಾಟಗಾರ್ತಿ ಮೀನಾ ಕಂದಸಾಮಿ ಅವರು, “ನ್ಯಾಯಾಂಗದ ಕೈಯಲ್ಲಿ ರಕ್ತ. ಆರ್‌ಎಸ್‌ಎಸ್-ಬಿಜೆಪಿಯ ಕೈಯಲ್ಲಿ ರಕ್ತ. ಎನ್ಐಎ ಕೈಯಲ್ಲಿ ರಕ್ತ. ರಾಜ್ಯದ ಪರವಾಗಿ ಪ್ರೊಪಗಾಂಡ ನಡೆಸಿದ ಮಾಧ್ಯಮಗಳ ಕೈಯಲ್ಲಿ ರಕ್ತ. ಇದರಿಂದ ಪಾರಾಗಲು ಮೋದಿ-ಷಾಗೆ ಅವಕಾಶ ನೀಡುವ ಪ್ರತಿಪಕ್ಷದ ಕೈಯಲ್ಲಿ ರಕ್ತ. ನಮ್ಮೆಲ್ಲರ ಕೈಯಲ್ಲಿ ರಕ್ತ.” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ಗುಜರಾತ್‌ ಶಾಸಕ, ಯುವ ಹೋರಾಟಗಾರ ಜಿಗ್ನೇಶ್ ಮೇವಾನಿ ಅವರು, ‘‘ಫಾದರ್‌ ಸ್ಟಾನ್ ಸ್ವಾಮಿ ಎಂದಿಗೂ ಸಾಯುವುದಿಲ್ಲ. ಅವರು ವೀರರಾಗಿ ನಮ್ಮ ಹೃದಯದಲ್ಲಿ ಜೀವಿಸುವರು. ಫ್ಯಾಸಿಸ್ಟ್ ಮೋದಿ ಸರ್ಕಾರದ ವಿರುದ್ಧ ನಿಂತು ಜೀವನವನ್ನೇ ವ್ಯಯಿಸಿದ ಧೈರ್ಯಶಾಲಿ ಅವರು. ಮೋದಿ ಮತ್ತು ಶಾ ಅವರ ಕೈಯಲ್ಲಿ ಫಾದರ್‌ ಸ್ಟಾನ್ ಸ್ವಾಮಿಯ ರಕ್ತವಿದೆ. ದೇಶ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಜನತಾಕಾ ರಿಪೋರ್ಟ್‌ ಸಂಸ್ಥಾಪಕ ರಿಫಾತ್‌‌ ಜಾವೇದ್, “ಫಾದರ್ ಸ್ಟಾನ್ ಸ್ವಾಮಿಯ ಸಾವಿನ ಬಗ್ಗೆ ಬಾಂಬೆ ಹೈಕೋರ್ಟ್ ‘ನಮಗೆ ವ್ಯಕ್ತಪಡಿಸಲು ಪದಗಳಿಲ್ಲ’ ಎಂದು ಹೇಳಿದೆ. ಭಾರತೀಯ ನ್ಯಾಯಾಂಗದ ಬಗ್ಗೆ ಇತಿಹಾಸದಲ್ಲಿ ಹೇಳಲು ಈ ಮಾತುಗಳು ಸಾಕಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.

ಜೆಎನ್‌ಯು ನಾಯಕಿ ಐಶೆ ಘೋಷ್, “ಇದು ಕಸ್ಟೋಡಿಯಲ್ ಕೊಲೆ. ಪಾದರ್‌ ಸ್ವಾಮಿ ಹಿಂದುಳಿದ ಸಮುದಾಯಗಳಿಗಾಗಿ ಜೀವನದುದ್ದಕ್ಕೂ ಕೆಲಸ ಮಾಡಿದ್ದರು. ಅವರಿಗೆ ಮೂಲಭೂತ ಅವಶ್ಯಕತೆಗಳು ಮತ್ತು ಆರೋಗ್ಯ ರಕ್ಷಣೆ ನಿರಾಕರಿಸಲಾಯಿತು. ಯುಎಪಿಎ ಹಿಂತೆಗೆದುಕೊಳ್ಳಿ, ಎಲ್ಲಾ ರಾಜಕೀಯ ಕೈದಿಗಳನ್ನು ತಕ್ಷಣ ಬಿಡುಗಡೆ ಮಾಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್‌ ಖೈದಿಗಳ ಬಿಡುಗಡೆ ಮಾಡಿ-ಮೋದಿಗೆ ನೊಬೆಲ್ ಪ್ರಶಸ್ತಿ ವಿಜೇತರು ಮತ್ತು ಯುರೋಪಿಯನ್‌ ಸಂಸದರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...