Homeಚಳವಳಿ‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ - ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ – ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

ಮೋದಿ ಮತ್ತು ಶಾ ಅವರ ಕೈಯಲ್ಲಿ ಫಾದರ್‌ ಸ್ಟಾನ್ ಸ್ವಾಮಿಯ ರಕ್ತವಿದೆ. ದೇಶ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ.

- Advertisement -
- Advertisement -

ಭೀಮಾಕೊರೆಗಾಂವ್‌ ಪ್ರಕರಣದಲ್ಲಿ ಬಂಧಿತರಾಗಿದ್ದ 84 ವರ್ಷದ ಹಿರಿಯ ಸಾಮಾಜಿಕ ಹೋರಾಟಗಾರ ಫಾದರ್‌ ಸ್ಟಾನ್‌ ಸ್ವಾಮಿಯವರು ಮೃಪಟ್ಟಿದ್ದಾರೆ. ಇಂದು ಮಧ್ಯಾಹ್ನ 1:30 ಗಂಟೆಗೆ ಸ್ಟ್ಯಾನ್‌ ಸ್ವಾಮಿ ಅವರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಪರ ವಾದಿಸುತ್ತದ್ದ ನ್ಯಾಯವಾದಿ ಮಿನಿ ದೇಸಾಯಿ ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳೆದ್ದಿದ್ದು, “ಇದು ಒಕ್ಕೂಟ ಸರ್ಕಾರ ಪ್ರಾಯೋಜಿತ ಕೊಲೆ” ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ಯಾಥೋಲಿಕ್ ಪಾದ್ರಿಯಾಗಿರುವ ಸ್ಟ್ಯಾನ್ ಸ್ವಾಮಿ ಕೇರಳ ಮೂಲದವರಾಗಿದ್ದು 50 ವರ್ಷದಿಂದ ಮಾನವ ಹಕ್ಕು ಮತ್ತು ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡುತ್ತಿದ್ದರು. ಅವರು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ NIA ಕಳೆದ ವರ್ಷ ಬಂಧಿಸಿತ್ತು. ಬುಡಕಟ್ಟು ಜನರ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವ ಸ್ಟ್ಯಾನ್ ಸ್ವಾಮಿಯ ಮೇಲೆ ಭಯೋತ್ಪಾದನೆ ತಡೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಕಠಿಣ ವಿಭಾಗಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗಿತ್ತು.

ಇದನ್ನೂ ಓದಿ: ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

ಸ್ಟ್ಯಾನ್ ಸ್ವಾಮಿ ವಿಸ್ತಾಪನ್ ವಿರೋಧಿ ಜನವಿಕಾಸ್ ಆಂದೋಲನ್ (ವಿ.ವಿ.ಜೆ.ಎ) ಸಂಘಟನೆಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದರು. ಅವರು ಜಾರ್ಖಂಡ್‌ನ ಅತ್ಯಂತ ಶ್ರೇಷ್ಠ ಮಾನವ ಹಕ್ಕುಗಳ ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಭೀಮಾ ಕೋರೆಗಾಂವ್ ಪ್ರಕರಣದ ಸಂಬಂಧ ಬಂಧನಕ್ಕೊಳಗಾದ 16 ನೇ ವ್ಯಕ್ತಿಯಾಗಿದ್ದು, ಇದುವರೆಗೂ ಬಂಧಿಸಿದವರಲ್ಲಿ ಹಿರಿಯರಾಗಿದ್ದಾರೆ. ಸ್ಟ್ಯಾನ್ ಸ್ವಾಮಿ ಅವರು ಪಾರ್ಕಿನ್ಸನ್‌ ಸೇರಿದಂತೆ ಹಲವು ರೀತಿಯ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಯಾಗಿದ್ದರು.

ಅವರ ಸಾವಿಗೆ ದೇಶದ ಹಲವಾರು ಚಿಂತಕರು, ಹೋರಾಟಗಾರರು, ಗಣ್ಯವ್ಯಕ್ತಿಗಳು, ಸಾಮಾಜಿಕ ಕಾರ್ಯಕರ್ತರು ಸಂತಾಪ ವ್ಯಕ್ತಪಡಿಸಿದ್ದು, ಒಕ್ಕೂಟ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಶ್ರೀವತ್ಸ ಅವರು, “ಸ್ಟಾನ್ಸ್‌ಸ್ವಾಮಿಯವರ ನಿಧನ ಮೋದಿ ಮತ್ತು ಷಾ ಸರ್ಕಾರದ ಸರ್ಕಾರಿ ಪ್ರಾಯೋಜಿತ ರಾಜಕೀಯ ಕೊಲೆಯಾಗಿದೆ. ಅದನ್ನು ಬೇರೇನೂ ಕರೆಯಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸುಪ್ರೀಂಕೋರ್ಟ್‌ ತುರ್ತು ವಿಚಾರಣೆ ನಡೆಸಿ, ‘ವ್ಯಕ್ತಿ ಸ್ವಾತಂತ್ಯ್ರ’ ಎಂದು ಹೇಳಿ ಅರ್ನಾಬ್ ಗೋಸ್ವಾಮಿಗೆ 7 ದಿನಗಳಲ್ಲಿ ಜಾಮೀನು ನೀಡಿತು. 84 ಸ್ಟಾನ್ ಸ್ವಾಮಿ ಬಂಧನವಾಗಿ 7 ತಿಂಗಳಾದರೂ ಜಾಮೀನು ನಿರಾಕರಿಸಲಾಯಿತು. ಪಾರ್ಕಿನ್ಸನ್ ಕಾಯಿಲೆಯಿಂದ  ಅವರು ಬಳಲುತ್ತಿದ್ದ ಅವರು ವ್ಯಕ್ತಿ ಸ್ವಾತಂತ್ಯ್ರ ಇಲ್ಲದ ರಾಜಕೀಯ ಕೈದಿಯಾಗಿ ಕೊರೊನಾ ಪಡೆದರು! ಒಂದು ರಾಷ್ಟ್ರ, ಒಂದು ಕಾನೂನು ಆದರೆ ನ್ಯಾಯವಿಲ್ಲ” ಎಂದು ಶ್ರೀವತ್ಸ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು, “ಫಾದರ್‌‌ ಸ್ಟಾನ್ ಸ್ವಾಮಿ ಅವರ ನಿಧನದ ಸುದ್ದಿಯನ್ನು ತಿಳಿದು ದುಃಖವಾಯಿತು. ನಮ್ಮ ಸರ್ಕಾರವು ಮಾನವೀಯತೆಯೊಂದಿಗೆ ನಡೆಸಿಕೊಳ್ಳಲು ಸಾಧ್ಯವಾಗದ ಮಾನವೀಯ ಮತ್ತು ದೇವತಾ ಮನುಷ್ಯ” ಎಂದು ಹೇಳಿದ್ದಾರೆ.

ಡಿಎಂಕೆ ನಾಯಕಿ ಕನಿಮೋಳಿ ಅವರು, “ಪಾರ್ಕಿನ್ಸನ್‌ನಿಂದ ಬಳಲುತ್ತಿದ್ದ ಸ್ಟಾನ್ ಸ್ವಾಮಿ (84) ಅವರನ್ನು ಬಿಜೆಪಿ ಸರ್ಕಾರ ದೇಶ ವಿರೋಧಿ ಎಂದು ಬಂಧಿಸಿದೆ. ಅವರ ಆರೋಗ್ಯ ಪರಿಸ್ಥಿತಿಗಳನ್ನು ಎಂದಿಗೂ ಪರಿಗಣಿಸಲಾಗಲಿಲ್ಲ. ಅವರು ಕೋಮಾಕ್ಕೆ ಜಾರಿ ನಿಧನರಾದರು.

ಇದನ್ನೂ ಓದಿ: ಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಹಲವು ತಿಂಗಳು ಕಾಯಬೇಕು!

ರೈತ ಹೋರಾಟಗಾರ ಯೋಗೇಂದ್ರ ಯಾದವ್ ಅವರು, “ಫಾದರ್ ಸ್ಟಾನ್ ಸ್ವಾಮಿಯವರ ಸಾವಿನ ಬಗ್ಗೆ ತಿಳಿದು ತೀವ್ರ ದುಃಖವಾಯಿತು. ಎನ್ಐಎ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಬಿಜೆಪಿ ಮತ್ತು ನ್ಯಾಯಾಂಗದಿಂದ ಆದ ತಣ್ಣನೆಯ ಕ್ರೌರ್ಯ‌ ಇದು. ಈ ದೇಶದ ಅತ್ಯಂತ ತುಳಿತಕ್ಕೊಳಗಾದ ಜನರ ಪರವಾಗಿ ಹೋರಾಡಿದ ಮಾನವೀಯ ವ್ಯಕ್ತಿಯನ್ನು ಈ ರೀತಿ ಹತ್ಯೆ ಮಾಡಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೋರಾಟಗಾರ್ತಿ ಮೀನಾ ಕಂದಸಾಮಿ ಅವರು, “ನ್ಯಾಯಾಂಗದ ಕೈಯಲ್ಲಿ ರಕ್ತ. ಆರ್‌ಎಸ್‌ಎಸ್-ಬಿಜೆಪಿಯ ಕೈಯಲ್ಲಿ ರಕ್ತ. ಎನ್ಐಎ ಕೈಯಲ್ಲಿ ರಕ್ತ. ರಾಜ್ಯದ ಪರವಾಗಿ ಪ್ರೊಪಗಾಂಡ ನಡೆಸಿದ ಮಾಧ್ಯಮಗಳ ಕೈಯಲ್ಲಿ ರಕ್ತ. ಇದರಿಂದ ಪಾರಾಗಲು ಮೋದಿ-ಷಾಗೆ ಅವಕಾಶ ನೀಡುವ ಪ್ರತಿಪಕ್ಷದ ಕೈಯಲ್ಲಿ ರಕ್ತ. ನಮ್ಮೆಲ್ಲರ ಕೈಯಲ್ಲಿ ರಕ್ತ.” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ಗುಜರಾತ್‌ ಶಾಸಕ, ಯುವ ಹೋರಾಟಗಾರ ಜಿಗ್ನೇಶ್ ಮೇವಾನಿ ಅವರು, ‘‘ಫಾದರ್‌ ಸ್ಟಾನ್ ಸ್ವಾಮಿ ಎಂದಿಗೂ ಸಾಯುವುದಿಲ್ಲ. ಅವರು ವೀರರಾಗಿ ನಮ್ಮ ಹೃದಯದಲ್ಲಿ ಜೀವಿಸುವರು. ಫ್ಯಾಸಿಸ್ಟ್ ಮೋದಿ ಸರ್ಕಾರದ ವಿರುದ್ಧ ನಿಂತು ಜೀವನವನ್ನೇ ವ್ಯಯಿಸಿದ ಧೈರ್ಯಶಾಲಿ ಅವರು. ಮೋದಿ ಮತ್ತು ಶಾ ಅವರ ಕೈಯಲ್ಲಿ ಫಾದರ್‌ ಸ್ಟಾನ್ ಸ್ವಾಮಿಯ ರಕ್ತವಿದೆ. ದೇಶ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಜನತಾಕಾ ರಿಪೋರ್ಟ್‌ ಸಂಸ್ಥಾಪಕ ರಿಫಾತ್‌‌ ಜಾವೇದ್, “ಫಾದರ್ ಸ್ಟಾನ್ ಸ್ವಾಮಿಯ ಸಾವಿನ ಬಗ್ಗೆ ಬಾಂಬೆ ಹೈಕೋರ್ಟ್ ‘ನಮಗೆ ವ್ಯಕ್ತಪಡಿಸಲು ಪದಗಳಿಲ್ಲ’ ಎಂದು ಹೇಳಿದೆ. ಭಾರತೀಯ ನ್ಯಾಯಾಂಗದ ಬಗ್ಗೆ ಇತಿಹಾಸದಲ್ಲಿ ಹೇಳಲು ಈ ಮಾತುಗಳು ಸಾಕಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.

ಜೆಎನ್‌ಯು ನಾಯಕಿ ಐಶೆ ಘೋಷ್, “ಇದು ಕಸ್ಟೋಡಿಯಲ್ ಕೊಲೆ. ಪಾದರ್‌ ಸ್ವಾಮಿ ಹಿಂದುಳಿದ ಸಮುದಾಯಗಳಿಗಾಗಿ ಜೀವನದುದ್ದಕ್ಕೂ ಕೆಲಸ ಮಾಡಿದ್ದರು. ಅವರಿಗೆ ಮೂಲಭೂತ ಅವಶ್ಯಕತೆಗಳು ಮತ್ತು ಆರೋಗ್ಯ ರಕ್ಷಣೆ ನಿರಾಕರಿಸಲಾಯಿತು. ಯುಎಪಿಎ ಹಿಂತೆಗೆದುಕೊಳ್ಳಿ, ಎಲ್ಲಾ ರಾಜಕೀಯ ಕೈದಿಗಳನ್ನು ತಕ್ಷಣ ಬಿಡುಗಡೆ ಮಾಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್‌ ಖೈದಿಗಳ ಬಿಡುಗಡೆ ಮಾಡಿ-ಮೋದಿಗೆ ನೊಬೆಲ್ ಪ್ರಶಸ್ತಿ ವಿಜೇತರು ಮತ್ತು ಯುರೋಪಿಯನ್‌ ಸಂಸದರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...