Homeಚಳವಳಿ‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ - ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ – ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

ಮೋದಿ ಮತ್ತು ಶಾ ಅವರ ಕೈಯಲ್ಲಿ ಫಾದರ್‌ ಸ್ಟಾನ್ ಸ್ವಾಮಿಯ ರಕ್ತವಿದೆ. ದೇಶ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ.

- Advertisement -
- Advertisement -

ಭೀಮಾಕೊರೆಗಾಂವ್‌ ಪ್ರಕರಣದಲ್ಲಿ ಬಂಧಿತರಾಗಿದ್ದ 84 ವರ್ಷದ ಹಿರಿಯ ಸಾಮಾಜಿಕ ಹೋರಾಟಗಾರ ಫಾದರ್‌ ಸ್ಟಾನ್‌ ಸ್ವಾಮಿಯವರು ಮೃಪಟ್ಟಿದ್ದಾರೆ. ಇಂದು ಮಧ್ಯಾಹ್ನ 1:30 ಗಂಟೆಗೆ ಸ್ಟ್ಯಾನ್‌ ಸ್ವಾಮಿ ಅವರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಪರ ವಾದಿಸುತ್ತದ್ದ ನ್ಯಾಯವಾದಿ ಮಿನಿ ದೇಸಾಯಿ ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳೆದ್ದಿದ್ದು, “ಇದು ಒಕ್ಕೂಟ ಸರ್ಕಾರ ಪ್ರಾಯೋಜಿತ ಕೊಲೆ” ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ಯಾಥೋಲಿಕ್ ಪಾದ್ರಿಯಾಗಿರುವ ಸ್ಟ್ಯಾನ್ ಸ್ವಾಮಿ ಕೇರಳ ಮೂಲದವರಾಗಿದ್ದು 50 ವರ್ಷದಿಂದ ಮಾನವ ಹಕ್ಕು ಮತ್ತು ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡುತ್ತಿದ್ದರು. ಅವರು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ NIA ಕಳೆದ ವರ್ಷ ಬಂಧಿಸಿತ್ತು. ಬುಡಕಟ್ಟು ಜನರ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವ ಸ್ಟ್ಯಾನ್ ಸ್ವಾಮಿಯ ಮೇಲೆ ಭಯೋತ್ಪಾದನೆ ತಡೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಕಠಿಣ ವಿಭಾಗಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗಿತ್ತು.

ಇದನ್ನೂ ಓದಿ: ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

ಸ್ಟ್ಯಾನ್ ಸ್ವಾಮಿ ವಿಸ್ತಾಪನ್ ವಿರೋಧಿ ಜನವಿಕಾಸ್ ಆಂದೋಲನ್ (ವಿ.ವಿ.ಜೆ.ಎ) ಸಂಘಟನೆಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದರು. ಅವರು ಜಾರ್ಖಂಡ್‌ನ ಅತ್ಯಂತ ಶ್ರೇಷ್ಠ ಮಾನವ ಹಕ್ಕುಗಳ ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಭೀಮಾ ಕೋರೆಗಾಂವ್ ಪ್ರಕರಣದ ಸಂಬಂಧ ಬಂಧನಕ್ಕೊಳಗಾದ 16 ನೇ ವ್ಯಕ್ತಿಯಾಗಿದ್ದು, ಇದುವರೆಗೂ ಬಂಧಿಸಿದವರಲ್ಲಿ ಹಿರಿಯರಾಗಿದ್ದಾರೆ. ಸ್ಟ್ಯಾನ್ ಸ್ವಾಮಿ ಅವರು ಪಾರ್ಕಿನ್ಸನ್‌ ಸೇರಿದಂತೆ ಹಲವು ರೀತಿಯ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಯಾಗಿದ್ದರು.

ಅವರ ಸಾವಿಗೆ ದೇಶದ ಹಲವಾರು ಚಿಂತಕರು, ಹೋರಾಟಗಾರರು, ಗಣ್ಯವ್ಯಕ್ತಿಗಳು, ಸಾಮಾಜಿಕ ಕಾರ್ಯಕರ್ತರು ಸಂತಾಪ ವ್ಯಕ್ತಪಡಿಸಿದ್ದು, ಒಕ್ಕೂಟ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಶ್ರೀವತ್ಸ ಅವರು, “ಸ್ಟಾನ್ಸ್‌ಸ್ವಾಮಿಯವರ ನಿಧನ ಮೋದಿ ಮತ್ತು ಷಾ ಸರ್ಕಾರದ ಸರ್ಕಾರಿ ಪ್ರಾಯೋಜಿತ ರಾಜಕೀಯ ಕೊಲೆಯಾಗಿದೆ. ಅದನ್ನು ಬೇರೇನೂ ಕರೆಯಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸುಪ್ರೀಂಕೋರ್ಟ್‌ ತುರ್ತು ವಿಚಾರಣೆ ನಡೆಸಿ, ‘ವ್ಯಕ್ತಿ ಸ್ವಾತಂತ್ಯ್ರ’ ಎಂದು ಹೇಳಿ ಅರ್ನಾಬ್ ಗೋಸ್ವಾಮಿಗೆ 7 ದಿನಗಳಲ್ಲಿ ಜಾಮೀನು ನೀಡಿತು. 84 ಸ್ಟಾನ್ ಸ್ವಾಮಿ ಬಂಧನವಾಗಿ 7 ತಿಂಗಳಾದರೂ ಜಾಮೀನು ನಿರಾಕರಿಸಲಾಯಿತು. ಪಾರ್ಕಿನ್ಸನ್ ಕಾಯಿಲೆಯಿಂದ  ಅವರು ಬಳಲುತ್ತಿದ್ದ ಅವರು ವ್ಯಕ್ತಿ ಸ್ವಾತಂತ್ಯ್ರ ಇಲ್ಲದ ರಾಜಕೀಯ ಕೈದಿಯಾಗಿ ಕೊರೊನಾ ಪಡೆದರು! ಒಂದು ರಾಷ್ಟ್ರ, ಒಂದು ಕಾನೂನು ಆದರೆ ನ್ಯಾಯವಿಲ್ಲ” ಎಂದು ಶ್ರೀವತ್ಸ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ‘ಸ್ಟಾನ್‌ಸ್ವಾಮಿಯದ್ದು ನಿಧನವಲ್ಲ; ಪ್ರಭುತ್ವ ಮುಂದೆ ನಿಂತು ಮಾಡಿಸಿದ ಕೊಲೆ’

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು, “ಫಾದರ್‌‌ ಸ್ಟಾನ್ ಸ್ವಾಮಿ ಅವರ ನಿಧನದ ಸುದ್ದಿಯನ್ನು ತಿಳಿದು ದುಃಖವಾಯಿತು. ನಮ್ಮ ಸರ್ಕಾರವು ಮಾನವೀಯತೆಯೊಂದಿಗೆ ನಡೆಸಿಕೊಳ್ಳಲು ಸಾಧ್ಯವಾಗದ ಮಾನವೀಯ ಮತ್ತು ದೇವತಾ ಮನುಷ್ಯ” ಎಂದು ಹೇಳಿದ್ದಾರೆ.

ಡಿಎಂಕೆ ನಾಯಕಿ ಕನಿಮೋಳಿ ಅವರು, “ಪಾರ್ಕಿನ್ಸನ್‌ನಿಂದ ಬಳಲುತ್ತಿದ್ದ ಸ್ಟಾನ್ ಸ್ವಾಮಿ (84) ಅವರನ್ನು ಬಿಜೆಪಿ ಸರ್ಕಾರ ದೇಶ ವಿರೋಧಿ ಎಂದು ಬಂಧಿಸಿದೆ. ಅವರ ಆರೋಗ್ಯ ಪರಿಸ್ಥಿತಿಗಳನ್ನು ಎಂದಿಗೂ ಪರಿಗಣಿಸಲಾಗಲಿಲ್ಲ. ಅವರು ಕೋಮಾಕ್ಕೆ ಜಾರಿ ನಿಧನರಾದರು.

ಇದನ್ನೂ ಓದಿ: ಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಹಲವು ತಿಂಗಳು ಕಾಯಬೇಕು!

ರೈತ ಹೋರಾಟಗಾರ ಯೋಗೇಂದ್ರ ಯಾದವ್ ಅವರು, “ಫಾದರ್ ಸ್ಟಾನ್ ಸ್ವಾಮಿಯವರ ಸಾವಿನ ಬಗ್ಗೆ ತಿಳಿದು ತೀವ್ರ ದುಃಖವಾಯಿತು. ಎನ್ಐಎ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಬಿಜೆಪಿ ಮತ್ತು ನ್ಯಾಯಾಂಗದಿಂದ ಆದ ತಣ್ಣನೆಯ ಕ್ರೌರ್ಯ‌ ಇದು. ಈ ದೇಶದ ಅತ್ಯಂತ ತುಳಿತಕ್ಕೊಳಗಾದ ಜನರ ಪರವಾಗಿ ಹೋರಾಡಿದ ಮಾನವೀಯ ವ್ಯಕ್ತಿಯನ್ನು ಈ ರೀತಿ ಹತ್ಯೆ ಮಾಡಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೋರಾಟಗಾರ್ತಿ ಮೀನಾ ಕಂದಸಾಮಿ ಅವರು, “ನ್ಯಾಯಾಂಗದ ಕೈಯಲ್ಲಿ ರಕ್ತ. ಆರ್‌ಎಸ್‌ಎಸ್-ಬಿಜೆಪಿಯ ಕೈಯಲ್ಲಿ ರಕ್ತ. ಎನ್ಐಎ ಕೈಯಲ್ಲಿ ರಕ್ತ. ರಾಜ್ಯದ ಪರವಾಗಿ ಪ್ರೊಪಗಾಂಡ ನಡೆಸಿದ ಮಾಧ್ಯಮಗಳ ಕೈಯಲ್ಲಿ ರಕ್ತ. ಇದರಿಂದ ಪಾರಾಗಲು ಮೋದಿ-ಷಾಗೆ ಅವಕಾಶ ನೀಡುವ ಪ್ರತಿಪಕ್ಷದ ಕೈಯಲ್ಲಿ ರಕ್ತ. ನಮ್ಮೆಲ್ಲರ ಕೈಯಲ್ಲಿ ರಕ್ತ.” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ಗುಜರಾತ್‌ ಶಾಸಕ, ಯುವ ಹೋರಾಟಗಾರ ಜಿಗ್ನೇಶ್ ಮೇವಾನಿ ಅವರು, ‘‘ಫಾದರ್‌ ಸ್ಟಾನ್ ಸ್ವಾಮಿ ಎಂದಿಗೂ ಸಾಯುವುದಿಲ್ಲ. ಅವರು ವೀರರಾಗಿ ನಮ್ಮ ಹೃದಯದಲ್ಲಿ ಜೀವಿಸುವರು. ಫ್ಯಾಸಿಸ್ಟ್ ಮೋದಿ ಸರ್ಕಾರದ ವಿರುದ್ಧ ನಿಂತು ಜೀವನವನ್ನೇ ವ್ಯಯಿಸಿದ ಧೈರ್ಯಶಾಲಿ ಅವರು. ಮೋದಿ ಮತ್ತು ಶಾ ಅವರ ಕೈಯಲ್ಲಿ ಫಾದರ್‌ ಸ್ಟಾನ್ ಸ್ವಾಮಿಯ ರಕ್ತವಿದೆ. ದೇಶ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಜನತಾಕಾ ರಿಪೋರ್ಟ್‌ ಸಂಸ್ಥಾಪಕ ರಿಫಾತ್‌‌ ಜಾವೇದ್, “ಫಾದರ್ ಸ್ಟಾನ್ ಸ್ವಾಮಿಯ ಸಾವಿನ ಬಗ್ಗೆ ಬಾಂಬೆ ಹೈಕೋರ್ಟ್ ‘ನಮಗೆ ವ್ಯಕ್ತಪಡಿಸಲು ಪದಗಳಿಲ್ಲ’ ಎಂದು ಹೇಳಿದೆ. ಭಾರತೀಯ ನ್ಯಾಯಾಂಗದ ಬಗ್ಗೆ ಇತಿಹಾಸದಲ್ಲಿ ಹೇಳಲು ಈ ಮಾತುಗಳು ಸಾಕಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.

ಜೆಎನ್‌ಯು ನಾಯಕಿ ಐಶೆ ಘೋಷ್, “ಇದು ಕಸ್ಟೋಡಿಯಲ್ ಕೊಲೆ. ಪಾದರ್‌ ಸ್ವಾಮಿ ಹಿಂದುಳಿದ ಸಮುದಾಯಗಳಿಗಾಗಿ ಜೀವನದುದ್ದಕ್ಕೂ ಕೆಲಸ ಮಾಡಿದ್ದರು. ಅವರಿಗೆ ಮೂಲಭೂತ ಅವಶ್ಯಕತೆಗಳು ಮತ್ತು ಆರೋಗ್ಯ ರಕ್ಷಣೆ ನಿರಾಕರಿಸಲಾಯಿತು. ಯುಎಪಿಎ ಹಿಂತೆಗೆದುಕೊಳ್ಳಿ, ಎಲ್ಲಾ ರಾಜಕೀಯ ಕೈದಿಗಳನ್ನು ತಕ್ಷಣ ಬಿಡುಗಡೆ ಮಾಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್‌ ಖೈದಿಗಳ ಬಿಡುಗಡೆ ಮಾಡಿ-ಮೋದಿಗೆ ನೊಬೆಲ್ ಪ್ರಶಸ್ತಿ ವಿಜೇತರು ಮತ್ತು ಯುರೋಪಿಯನ್‌ ಸಂಸದರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...