Homeಕರ್ನಾಟಕಚುನಾವಣಾ ಅಖಾಡದಲ್ಲಿ ಸ್ಟಾರ್ ಪ್ರಚಾರಕರ ದಂಡು; ಕೈ-ದಳ-ಕಮಲದ ತಾರಾಗಣ ಪಟ್ಟಿ ಬಿಡುಗಡೆ

ಚುನಾವಣಾ ಅಖಾಡದಲ್ಲಿ ಸ್ಟಾರ್ ಪ್ರಚಾರಕರ ದಂಡು; ಕೈ-ದಳ-ಕಮಲದ ತಾರಾಗಣ ಪಟ್ಟಿ ಬಿಡುಗಡೆ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರದ ಅಖಾಡಕ್ಕೆ ಇಳಿಯಲು ಸ್ಟಾರ್ ಪ್ರಚಾರಕರು ಸಿದ್ಧರಾಗಿದ್ದಾರೆ. ರಾಜ್ಯದ ಪ್ರಮುಖ ಪಕ್ಷಗಳಾದ ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳಗಳ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿವೆ. ಕಾಂಗ್ರೆಸ್‌ ಮತ್ತು ಬಿಜೆಪಿ ತಲಾ 40 ನಾಯಕರನ್ನೊಳಗೊಂಡ ಪಟ್ಟಿ ಬಿಡುಗಡೆ ಮಾಡಿದ್ದರೆ, ಜೆಡಿಎಸ್‌ 27 ನಾಯಕರ ಪಟ್ಟಿ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಸ್ಟಾರ್ ಪ್ರಚಾರಕರಲ್ಲಿ ಸೋನಿಯಾ, ರಾಹುಲ್, ಖರ್ಗೆ, ಶೆಟ್ಟರ್‌, ರಮ್ಯಾ..

ಕರ್ನಾಟಕ ವಿಧಾನಸಭಾ ಚುನಾವಣೆಗೆ 40 ತಾರಾ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್‌ ಬುಧವಾರ ಬಿಡುಗಡೆ ಮಾಡಿದೆ.

ಇತ್ತೀಚೆಗೆ ಬಿಜೆಪಿಯಿಂದ ಹೊರಬಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಹಿರಿಯ ಶಾಸಕ ಜಗದೀಶ ಶೆಟ್ಟರ್ ಅವರಿಗೆ ಸ್ಥಾನ ಸಿಕ್ಕಿದೆ. ಕೆಪಿಸಿಸಿಯ ಐವರು ಕಾರ್ಯಾಧ್ಯಕ್ಷರಲ್ಲಿ ರಾಮಲಿಂಗಾ ರೆಡ್ಡಿ ಹಾಗೂ ಸತೀಶ ಜಾರಕಿಹೊಳಿ ಹೆಸರು ಮಾತ್ರ ಪಟ್ಟಿಯಲ್ಲಿ ಸೇರಿಸಲಾಗಿದೆ.

ಇನ್ನು ತೇರದಾಳ ಕ್ಷೇತ್ರದ ಟಿಕೆಟ್‌ಗಾಗಿ ಪ್ರಯತ್ನ ನಡೆಸಿದ್ದ ಉಮಾಶ್ರೀ ಹಾಗೂ ಮಾಗಡಿ ಅಥವಾ ಹರಿಹರ ಕ್ಷೇತ್ರದ ಟಿಕೆಟ್‌ ನಿರೀಕ್ಷೆಯಲ್ಲಿದ್ದ ಎಚ್‌.ಎಂ. ರೇವಣ್ಣ ಅವರಿಗೆ ತಾರಾ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಿ ಸಮಾಧಾನಪಡಿಸಲಾಗಿದೆ. ನಟಿ ರಮ್ಯಾ ಹಾಗೂ ಹಾಸ್ಯನಟ ಸಾಧುಕೋಕಿಲಾ ಸಹ ಪಕ್ಷದ ತಾರಾ ಪ್ರಚಾರಕರಾಗಿದ್ದಾರೆ. ಕ್ರಿಕೆಟಿಗ ಮೊಹಮ್ಮದ್‌ ಅಜರುದ್ದೀನ್‌, ಮೂವರು ಮುಖ್ಯಮಂತ್ರಿಗಳಾದ ಅಶೋಕ್‌ ಗೆಹಲೋಟ್, ಭೂಪೇಶ್‌ ಬಘೇಲ್‌, ಸುಖ್ವಿಂದರ್‌ ಸಿಂಗ್‌ ಸುಖು ಅವರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ.ವೇಣುಗೋಪಾಲ್‌, ಜೈರಾಮ್‌ ರಮೇಶ್‌, ರಣದೀಪ್‌ ಸಿಂಗ್ ಸುರ್ಜೆವಾಲಾ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಮುಖ ತಾರಾ ಪ್ರಚಾರಕರಾಗಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ; 224 ಕ್ಷೇತ್ರಗಳ ಅಭ್ಯರ್ಥಿಗಳ ಮಾಹಿತಿ ಇಲ್ಲಿದೆ..

ರಾಜ್ಯ ನಾಯಕರಲ್ಲಿ ಬಿ.ಕೆ. ಹರಿಪ್ರಸಾದ್‌, ಜಿ.ಪರಮೇಶ್ವರ, ಕೆ.ಎಚ್‌.ಮುನಿಯಪ್ಪ, ಎಂ.ಬಿ.‍ಪಾಟೀಲ, ಎಂ. ವೀರಪ್ಪ ಮೊಯಿಲಿ, ಶಾಸಕ ಜಮೀರ್ ಅಹ್ಮದ್‌ ಖಾನ್‌, ಸಂಸದರಾದ ಡಿ.ಕೆ. ಸುರೇಶ್‌, ಜಿ.ಸಿ.ಚಂದ್ರಶೇಖರ್‌, ಸಯ್ಯದ್‌ ನಾಸಿರ್‌ ಹುಸೇನ್‌, ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌, ಶಾಸಕಿ ರೂಪಾ ಶಶಿಧರ್‌ ಅವರಿಗೆ ಸ್ಥಾನ ಸಿಕ್ಕಿದೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳಾದ ಪ್ರಥ್ವಿರಾಜ್‌ ಚವಾಣ್‌, ಅಶೋಕ್‌ ಚವಾಣ್ ಹಾಗೂ ತೆಲಂಗಾಣ ಕಾಂಗ್ರೆಸ್‌ ಘಟಕದ ಅಧ್ಯಕ್ಷ ರೇವಂತ್ ರೆಡ್ಡಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ. ಕಾಂಗ್ರೆಸ್ ಹಿರಿಯ ಮುಖಂಡರಾದ ಶಶಿ ತರೂರ್, ಪಿ.ಚಿದಂಬರಂ, ರಮೇಶ್‌ ಚೆನ್ನಿತಾಲ, ರಾಜ್‌ ಬಬ್ಬರ್‌ ಹಾಗೂ ಯುವ ನಾಯಕರಾದ ಕನ್ನಯ್ಯ ಕುಮಾರ್‌, ಇಮ್ರಾನ್‌ ಪ್ರತಾಪ್‌ಗರಿ ಪಕ್ಷದ ತಾರಾ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

20 ದಿನಗಳಲ್ಲಿ 20 ಕಡೆ ರಾಹುಲ್‌ ರ‍್ಯಾಲಿ

ಮುಂದಿನ 20 ದಿನಗಳಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು 20 ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಮುಂದಿನ 3 ವಾರಗಳಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಹಲವು ಪ್ರಚಾರ ಸಭೆ, ರೋಡ್‌ ಶೋಗಳಲ್ಲಿ ಭಾಗಿಯಾಗಲಿದ್ದಾರೆ. ಮೇ ಮೊದಲ ವಾರದಲ್ಲಿ ಸೋನಿಯಾ ಗಾಂಧಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.

ಬಿಜೆಪಿ ಸ್ಟಾರ್ ಪ್ರಚಾರಕರಲ್ಲಿ ಮೋದಿ, ಶಾ, ಯೋಗಿಯದ್ದೇ ಸದ್ದು

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್‌, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೇರಿ ಒಟ್ಟು 40 ಮಂದಿಯ ತಾರಾ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಆದರೆ, ಉಪಚುನಾವಣೆಗಳಲ್ಲಿ ತಾರಾ ಪ್ರಚಾರಕರಾಗಿ ಗಮನಸೆಳೆದಿದ್ದ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹೆಸರನ್ನು ಈ ಬಾರಿ ಕೈಬಿಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್‌, ಪ್ರಲ್ಹಾದ ಜೋಶಿ, ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್, ಮನ್ಸುಖ್ ಮಾಂಡವೀಯಾ, ಶೋಭಾ ಕರಂದ್ಲಾಜೆ, ಎ.ನಾರಾಯಣ ಸ್ವಾಮಿ, ಭಗವಂತ್‌ ಖೂಬಾ ಸ್ಟಾರ್ ಪ್ರಚಾರಕರಾಗಿದ್ದಾರೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚೌಹಾಣ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ,  ಬಿ.ಎಸ್‌. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ನಳಿನ್‌ ಕುಮಾರ್‌ ಕಟೀಲ್, ಡಿ.ವಿ. ಸದಾನಂದಗೌಡ, ಕೆ.ಎಸ್‌. ಈಶ್ವರಪ್ಪ, ಗೋವಿಂದ ಕಾರಜೋಳ, ಆರ್‌. ಅಶೋಕ, ಕೆ. ಅಣ್ಣಾಮಲೈ, ಅರುಣ್ ಸಿಂಗ್‌, ಡಿ.ಕೆ. ಅರುಣಾ, ಸಿ.ಟಿ. ರವಿ, ಅರವಿಂದ ಲಿಂಬಾವಳಿ, ಬಿ. ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಬಸನಗೌಡ ಪಾಟೀಲ ಯತ್ನಾಳ್, ಡಾ. ಉಮೇಶ್‌ ಜಾಧವ್‌, ಛಲವಾದಿ ನಾರಾಯಣಸ್ವಾಮಿ, ಎನ್. ರವಿಕುಮಾರ್‌, ಜಗ್ಗೇಶ್, ಶೃತಿ, ತಾರಾ ಅನೂರಾಧ ತಾರಾ ಪ್ರಚಾರಕರ ಪಟ್ಟಿಯಲ್ಲಿ ಇದ್ದಾರೆ.

ಜೆಡಿಎಸ್ ಸ್ಟಾರ್ ಪ್ರಚಾರಕರಲ್ಲಿ ದೇವೇಗೌಡರ ಕುಟುಂಬದವರೇ ಹೆಚ್ಚು

ಜೆಡಿಎಸ್ ಪಕ್ಷವು ಚುನಾವಣಾ ಆಯೋಗದಿಂದ 27 ಸ್ಟಾರ್ ಪ್ರಚಾರಕರ ಪಟ್ಟಿಗೆ ಅನುಮೋದನೆ ಪಡೆದಿದ್ದು, ಪಕ್ಷದ ವರಿಷ್ಠ ಎಚ್‌.ಡಿ. ದೇವೇಗೌಡ ಸೇರಿದಂತೆ ಅವರ ಕುಟುಂಬದ ಎಂಟು ಜನರ ಹೆಸರು ಅದರಲ್ಲಿದೆ.

ಜೆಡಿಎಸ್ ಸ್ಟಾರ್ ಪ್ರಚಾರಕರು:- ಎಚ್‌.ಡಿ. ಕುಮಾರಸ್ವಾಮಿ, ಅವರ ಪತ್ನಿ ಅನಿತಾ, ಮಗ ನಿಖಿಲ್‌ ಕುಮಾರಸ್ವಾಮಿ, ಶಾಸಕ ಎಚ್‌.ಡಿ. ರೇವಣ್ಣ, ಅವರ ಪತ್ನಿ ಭವಾನಿ, ಮಗ ಹಾಗೂ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ, ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ತಾರಾ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ಇನ್ನು ಕುಟುಂಬ ಹೊತುಪಡಿಸಿ ಯಾರೆಲ್ಲಾ ಸ್ಟಾರ್ ಪ್ರಚಾರಕರು?

ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ, ರಾಜ್ಯಸಭೆ ಮಾಜಿ ಸದಸ್ಯ ಡಿ. ಕುಪೇಂದ್ರ ರೆಡ್ಡಿ, ವಿಧಾನ ಪರಿಷತ್‌ ಸದಸ್ಯರಾದ ಟಿ.ಎ. ಶರವಣ, ಕೆ.ಎ. ತಿಪ್ಪೇಸ್ವಾಮಿ, ಎಸ್‌.ಎಲ್‌. ಭೋಜೇಗೌಡ, ಬಿ.ಎಂ. ಫಾರೂಕ್‌, ಪಕ್ಷದ ಮಹಿಳಾ ಘಟಕದ ಕಾರ್ಯಾ ಧ್ಯಕ್ಷೆ ನಜ್ಮಾ ನಝೀರ್‌ ಚಿಕ್ಕನೇರಳೆ ಪಟ್ಟಿಯಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...