Homeಕರ್ನಾಟಕಸ್ಟಾರ್ ಪ್ರಚಾರಕರು ಘನತೆಯಿಂದ ಮಾತನಾಡಬೇಕು: ಚುನಾವಣಾ ಆಯೋಗದಿಂದ ಪಕ್ಷಗಳಿಗೆ ಖಡಕ್ ಸೂಚನೆ

ಸ್ಟಾರ್ ಪ್ರಚಾರಕರು ಘನತೆಯಿಂದ ಮಾತನಾಡಬೇಕು: ಚುನಾವಣಾ ಆಯೋಗದಿಂದ ಪಕ್ಷಗಳಿಗೆ ಖಡಕ್ ಸೂಚನೆ

- Advertisement -
- Advertisement -

ಚುನಾವಣಾ ಆಯೋಗವು ಮಂಗಳವಾರ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ನಾಯಕರು ಭಾಷೆಯ ಘನತೆಯನ್ನು ಮರೆಯುತ್ತಿರುವುದು ಹಲವು ಬಾರಿ ಕಂಡು ಬಂದಿದೆ. ನಾಯಕರ ಅವಹೇಳನಕಾರಿ ಹೇಳಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಚುನಾವಣಾ ಆಯೋಗ ಇದೀಗ ಸ್ಟಾರ್ ಪ್ರಚಾರಕರು ಮತ್ತು ಪಕ್ಷಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಚುನಾವಣಾ ಸಮಿತಿಯು ಪಕ್ಷಗಳ ಸ್ಟಾರ್ ಪ್ರಚಾರಕರನ್ನು ಸಂಯಮದಿಂದ ಮತ್ತು “ನಿರೀಕ್ಷಿತ ಮಟ್ಟದ ಘನತೆಯನ್ನು” ಕಾಪಾಡಿಕೊಳ್ಳುವಂತೆ ಹೇಳಿದೆ.

ರಾಜಕೀಯ ಪಕ್ಷಗಳು ಮತ್ತು ನಿರ್ದಿಷ್ಟವಾಗಿ ಅವರ ಸ್ಟಾರ್ ಪ್ರಚಾರಕರು ಪ್ರಚಾರದ ಸಂದರ್ಭದಲ್ಲಿ ಅನುಚಿತ ಭಾಷೆ ಬಳಸಿದ ನಿದರ್ಶನಗಳ ಬಗ್ಗೆ ಗಮನಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

”ಇಂತಹ ನಿದರ್ಶನಗಳಿಗೆ ಸಂಬಂಧಿಸಿದಂತೆ ವಿವಿಧ ದೂರುಗಳು, ಪ್ರತಿ ದೂರುಗಳು ಬಂದಿವೆ” ಎಂದು ಹೇಳಿದೆ. ಏಪ್ರಿಲ್ 28 ರಂದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿಯನ್ನು “ವಿಷಪೂರಿತ ಹಾವು” ಗೆ ಹೋಲಿಸಿದ ನಂತರ ಭಾರತೀಯ ಜನತಾ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ತನ್ನನ್ನು ನಿಂದಿಸುತ್ತಿದ್ದಾರೆಂದು ಅಳುವ ಪ್ರಧಾನಿಯನ್ನು ನೋಡುತ್ತಿದ್ದೇವೆ: ಮೋದಿಯನ್ನು ಗೇಲಿ ಮಾಡಿದ ಪ್ರಿಯಾಂಕಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರು ರಾಜ್ಯದಲ್ಲಿ ಕೋಮು ಸೌಹಾರ್ದತೆಯ ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಅವರ ಪ್ರಚಾರವನ್ನು ನಿಷೇಧಿಸುವಂತೆ ಕಾಂಗ್ರೆಸ್ ಸಹ ಕೋರಿತ್ತು.

ಕಳೆದ ವಾರ, ಉತ್ತರ ಕರ್ನಾಟಕದಲ್ಲಿ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿಯವರು ತಮ್ಮ ಭಾಷಣದ ಸಾಕಷ್ಟು ಸಮಯವನ್ನು “ವಿಷಪೂರಿತ ಹಾವು” ವಿಚಾರಕ್ಕೆ ಸಂಬಂಧಿಸಿದಂತೆ ಸಮಯ ಮೀಸಲಿಟ್ಟರು ಮತ್ತು ಕಾಂಗ್ರೆಸ್ ತನ್ನನ್ನು 91 ಬಾರಿ ವಿವಿಧ ರೀತಿಯಲ್ಲಿ ನಿಂದಿಸಿದೆ ಎಂದು ಹೇಳಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ಅವರು ತಮ್ಮ ಬಗ್ಗೆ ಮಾತನಾಡುವುದಕ್ಕಿಂತ ಕರ್ನಾಟಕದ ಭವಿಷ್ಯದ ಬಗ್ಗೆ ಬಿಜೆಪಿಯ ಯೋಜನೆಗಳ ಬಗ್ಗೆ ಮಾತನಾಡಬೇಕೆಂದು ಒತ್ತಾಯಿಸಿದ್ದಾರೆ.

”ಕಳೆದ ಮೂರು ವರ್ಷಗಳಿಂದ ಕರ್ನಾಟಕದಲ್ಲಿ ನೀವು ಏನು ಮಾಡಿದ್ದೀರಿ ಎಂಬುದನ್ನು ನೀವೇ ಹೇಳಬೇಕು. ಮುಂದಿನ ಐದು ವರ್ಷಗಳಲ್ಲಿ ನೀವು ಏನು ಮಾಡುತ್ತೀರಿ, ಯುವಕರು, ಶಿಕ್ಷಣ, ಆರೋಗ್ಯ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡಲು ಏನು ಮಾಡುತ್ತೀರಿ ಎಂಬುದರ ಕುರಿತು ನಿಮ್ಮ ಭಾಷಣಗಳಲ್ಲಿ ನೀವು ಮಾತನಾಡಬೇಕು” ಎಂದು ಅವರು ಹೇಳಿದರು.

ಅವಹೇಳನಕಾರಿ ಹೇಳಿಕೆಗಳು ಹೆಚ್ಚುತ್ತಿರುವ ಕಾರಣ ಈ ಸೂಚನೆ ನೀಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಮಾದರಿ ನೀತಿ ಸಂಹಿತೆ ಮತ್ತು ಇತರ ನಿಬಂಧನೆಗಳನ್ನು ನೆನಪಿಸಿರುವ ಆಯೋಗವು ಎಚ್ಚರಿಕೆ ಮತ್ತು ಸಂಯಮದಿಂದ ವರ್ತಿಸುವಂತೆ ಸಲಹೆ ನೀಡಿದೆ. ಅಲ್ಲದೆ, ಉಲ್ಲಂಘಿಸುವವರ ವಿರುದ್ಧ ನಿಯಮಗಳು ಮತ್ತು ಕಾನೂನು ಚೌಕಟ್ಟಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಆಯೋಗವು ಮುಖ್ಯ ಚುನಾವಣಾಧಿಕಾರಿಗಳಿಗೆ ಸೂಚಿಸಿದೆ.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ಮತದಾನ ನಡೆಯಲಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...