Homeಮುಖಪುಟಮುಸ್ಲಿಮರನ್ನು ಕೊಳೆತ ಸೇಬುಗಳಿಗೆ ಹೋಲಿಸಿದ ಸ್ಟಾರ್‌ ಆಫ್‌ ಮೈಸೂರ್‌ ಪತ್ರಿಕೆ: ವೀರೋಧದ ನಂತರ ಕ್ಷಮಾಪಣೆ

ಮುಸ್ಲಿಮರನ್ನು ಕೊಳೆತ ಸೇಬುಗಳಿಗೆ ಹೋಲಿಸಿದ ಸ್ಟಾರ್‌ ಆಫ್‌ ಮೈಸೂರ್‌ ಪತ್ರಿಕೆ: ವೀರೋಧದ ನಂತರ ಕ್ಷಮಾಪಣೆ

- Advertisement -
- Advertisement -

ಮೈಸೂರಿನಲ್ಲಿ ಸಂಜೆ ಪ್ರಸಾರವಾಗುವ ಇಂಗ್ಲಿಶ್ ದಿನಪತ್ರಿಕೆ ಸ್ಟಾರ್ ಆಫ್ ಮೈಸೂರು ಎಪ್ರಿಲ್ 6 ರಂದು ಪ್ರಕಟಿಸಿದ್ದ ಸಂಪಾದಕೀಯದ ಬಗ್ಗೆ ಹಲವು ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ದೇಶದಲ್ಲಿ ಒಂದು ಸಮುದಾಯದ ಜನರು ಕೊಳೆತ ಸೇಬಿನಂತೆ ಎಂದು ಬರೆದಿದ್ದಲ್ಲದೆ ಅವುಗಳನ್ನು ಸಿಂಗಾಪುರ್ ದೇಶದ ಹಿಂದಿನ ಮುಖಂಡ ಅಥವಾ ಇಸ್ರೇಲ್‌ನ ಪ್ರಸಕ್ತ ಸರ್ಕಾರಾದ ಮಾದರಿಯಲ್ಲಿ ಹೊರಗೆ ಎಸೆಯಬೇಕು ಎಂದು ಎಂ ಗೋವಿಂದೆ ಗೌಡ ಸಂಪಾದಕರಾಗಿರುವ ಹಾಗು ಕೆ ಬಿ ಗಣಪತಿ ಉಪಸಂಪಾದಕರಾಗಿರುವ ಈ ಪತ್ರಿಕೆಯ ಸಂಪಾದಕೀಯ ಹೇಳಿತ್ತು.

ಅಂದರೆ ಕೊರೊನಾ ಕುರಿತು ಜಾಗೃತಿ ಮೂಡಿಸುವ ನೆಪದಲ್ಲಿ ಮುಸ್ಲಿಂ ಸಮುದಾಯದ ಮೇಲೆ ಕೋಮುದ್ವೇಷ ಮೂಡಿಸುವ ಸಂಪಾದಕೀಯವೊಂದು ಈ ಪತ್ರಿಕೆಯಲ್ಲಿ ಪ್ರಕಟವಾಗಿ ಭಾರೀ ಟೀಕೆಗೆ ಒಳಗಾಗಿದೆ.

ಸಂಪಾದಕೀಯದಲ್ಲಿ ಮುಸ್ಲಿಂ ಸಮುದಾಯದ ಹೆಸರನ್ನು ಎಲ್ಲಿಯೂ ನೇರವಾಗಿ ತೆಗೆದುಕೊಳ್ಳದಿದ್ದರೂ, ದೇಶದ 18% ಜನರನ್ನು ದೂಷಿಸಿದ್ದ ಸಂಪಾದಕೀಯದ ನಿಲುವು ಮುಸ್ಲಿಮರ ವಿರುದ್ಧವಾಗಿದೆ ಎಂದು ಸ್ಪಷ್ಟವಾಗಿದೆ ಎಂದು ಹಲವು ಸಂಘಟನೆಗಳು ಆರೋಪಿಸಿದ್ದವು.

‘ಫೋರಮ್ ಅಗೆನಿಸ್ಟ್ ಫೇಕ್ ನ್ಯೂಸ್’ ಎಂಬ ಮೈಸೂರು ಮೂಲದ ಸಂಘಟನೆ ಈ ಸಂಪಾದಕೀಯ ಮುಸ್ಲಿಮರ ವಿರುದ್ಧ ಇದ್ದು ಇದು ಕೋಮುಗಳ ವಿರುಧ್ದ ದ್ವೇಷಕ್ಕೆ ಪ್ರಚೋದನೆ ನೀಡುತ್ತಿದೆ ಎಂದು ಆರೋಪಿಸಿ ಸಂಪಾದಕರಿಗೆ ಪತ್ರ ಬರೆದಿತ್ತು. ಈ ಸಾಂಕ್ರಾಮಿಕ ಈಗಗಾಲೇ ಜನಕ್ಕೆ ಸಾಕಷ್ಟು ಸಂಕಷ್ಟ ತಂದಿದೆ. ಇದನ್ನು ಜಾತಿ ಧರ್ಮಗಳ ಹೊರತಾಗಿ ಹೋರಾಡಬೇಕು. ಇಂತಹ ಸಮಯದಲ್ಲಿ ಒಂದು ಸಮದಾಯವನ್ನು ಸುಳ್ಳು ಸುಳ್ಳೇ ಆರೋಪಿಸಿ ಅವರಿಗೆ ಒತ್ತಡ ತರುವುದು ತಪ್ಪು ಎಂದು ಹೇಳಿತ್ತು.

ಅಲ್ಲದೆ ವಕೀಲರ ಬಳಗವೊಂದು ಪತ್ರಿಕೋದ್ಯಮದ ನಿಯಮಗಳನ್ನು ಉಲ್ಲೇಖಿಸಿ ಈ ಸಂಪಾದಕೀಯ ಪ್ರಚೋದಿಸಿರುವ ಕೋಮು ದ್ವೇಷವನ್ನು ಖಂಡಿಸಿತ್ತು. ಪತ್ರಿಕೆಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಹಲವು ನಾಗರಿಕರು ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸರಿಗೆ ಮನವಿ ಮಾಡಿದ್ದರು.

ಈ ಹಿನ್ನಲೆಯಲ್ಲಿ ಈಗ ಸ್ಟಾರ್ ಆಫ್ ಮೈಸೂರು ಪತ್ರಿಕೆ ಕ್ಷಮಾಪಣೆಯನ್ನು ಪ್ರಕಟಿಸಿದೆ. ಕೋವಿಡ್-19 ಹೋರಾಟಕ್ಕೆ ಸಂಬಂಧಿಸಿದಂತೆ ಬರೆದ ಈ ಲೇಖನ ಯಾವುದಾದರೂ ಸಮುದಾಯಕ್ಕೆ ನೋವುಂಟು ಮಾಡಿದ್ದರೆ ಕ್ಷಮಿಸುವುಂತೆ ಕೇಳಿಕೊಂಡಿದ್ದು ಸಂಪಾದಕ ಮಂಡಳಿಯಿಂದ ತಪ್ಪಾಗಿರುವುದನ್ನು ಒಪ್ಪಿಕೊಂಡಿದೆ.

 

ಈ ಹಿಂದೆ ಮಾರ್ಚ್ 2019 ರಲ್ಲಿ ರಿಪಬ್ಲಿಕ್‌ ಟಿವಿಯಲ್ಲಿ ಜಮಾತ್-ಇ-ಇಸ್ಲಾಮಿ ಭಾರತದ ಮುಖ್ಯಸ್ಥ ಮೌಲಾನಾ ಜಲಾಲುದ್ದೀನ್ ಉಮ್ರಿ ಭಯೋತ್ಪಾದಕ ಎಂದು ಸುಳ್ಳು ಆರೋಪ ಮಾಡಿ ಸುದ್ದಿ ಪ್ರಸಾರ ಮಾಡಲಾಗಿತ್ತು. ಇದರ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಮಂಡಳಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪತ್ರ ಬರೆದ ನಂತರ ರಿಪಬ್ಲಿಕ್ ಟಿವಿ ಕ್ಷಮೆಯಾಚಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಮಾರ್ಚ್ ಕೊನೆಯ ವಾರದಲ್ಲಿ ದೆಹಲಿಯಲ್ಲಿ ನಡೆದ ತಬ್ಲೀಗ್ ಜಮಾತ್ ಸಮಾವೇಶದಿಂದಲೇ ಭಾರತದಲ್ಲಿ ಕೊರೊನ ಹರಡಿತು ಎಂಬ ಸುಳ್ಳು ಸುದ್ದಿಯನ್ನು ಹರಡಿ, ಒಂದು ಸಮುದಾಯದ ವಿರುದ್ಧ ಆರೋಪವನ್ನು ಹೊರಿಸುವುದನ್ನು ಕೆಲವು ಮಾಧ್ಯಮಗಳು ನಿರಂತರವಾಗಿ ಮಾಡುತ್ತಿವೆ. ಟಿವಿ ವಾಹಿನಿಗಳಿಗೆ ನೀಡಿದ್ದ ಸಂದರ್ಶನದಲ್ಲಿ ಇಂತಹ ಸಂಗತಿಗಳ ವಿರುದ್ಧ ಎಚ್ಚರಿಕೆ ವಹಿಸುವಂತೆ ಕರ್ನಾಟಕ ಮುಖ್ಯಮಂತ್ರಿ ಮಾಧ್ಯಮಗಳಿಗೆ ಮತ್ತು ನಾಗರಿಕರಿಗೆ ಎಚ್ಚರಿಸಿದ್ದರು. ಮಹಾರಾಷ್ಟ್ರ ಸರ್ಕಾರ ಕೂಡ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಇಂತಹ ಧಾರ್ಮಿಕ ದ್ವೇಷಕ್ಕೆ ಕಾರಣವಾಗುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿತ್ತು.

400 ಪದದ ಸಂಪಾದಕೀಯ ಬರೆದು ಕೇವಲ 50 ಪದದ ಕ್ಷಮಾಪಣೆಯನ್ನು ಈ ಪತ್ರಿಕೆ ಪ್ರಕಟಿಸಿದೆ. ಇದರಿಂದ ಉಳಿದ ಮಾಧ್ಯಮಗಳು ಪಾಠ ಕಲಿಯುವಂತಾಗಲಿ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...