Homeಮುಖಪುಟಮುಸ್ಲಿಮರನ್ನು ಕೊಳೆತ ಸೇಬುಗಳಿಗೆ ಹೋಲಿಸಿದ ಸ್ಟಾರ್‌ ಆಫ್‌ ಮೈಸೂರ್‌ ಪತ್ರಿಕೆ: ವೀರೋಧದ ನಂತರ ಕ್ಷಮಾಪಣೆ

ಮುಸ್ಲಿಮರನ್ನು ಕೊಳೆತ ಸೇಬುಗಳಿಗೆ ಹೋಲಿಸಿದ ಸ್ಟಾರ್‌ ಆಫ್‌ ಮೈಸೂರ್‌ ಪತ್ರಿಕೆ: ವೀರೋಧದ ನಂತರ ಕ್ಷಮಾಪಣೆ

- Advertisement -
- Advertisement -

ಮೈಸೂರಿನಲ್ಲಿ ಸಂಜೆ ಪ್ರಸಾರವಾಗುವ ಇಂಗ್ಲಿಶ್ ದಿನಪತ್ರಿಕೆ ಸ್ಟಾರ್ ಆಫ್ ಮೈಸೂರು ಎಪ್ರಿಲ್ 6 ರಂದು ಪ್ರಕಟಿಸಿದ್ದ ಸಂಪಾದಕೀಯದ ಬಗ್ಗೆ ಹಲವು ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ದೇಶದಲ್ಲಿ ಒಂದು ಸಮುದಾಯದ ಜನರು ಕೊಳೆತ ಸೇಬಿನಂತೆ ಎಂದು ಬರೆದಿದ್ದಲ್ಲದೆ ಅವುಗಳನ್ನು ಸಿಂಗಾಪುರ್ ದೇಶದ ಹಿಂದಿನ ಮುಖಂಡ ಅಥವಾ ಇಸ್ರೇಲ್‌ನ ಪ್ರಸಕ್ತ ಸರ್ಕಾರಾದ ಮಾದರಿಯಲ್ಲಿ ಹೊರಗೆ ಎಸೆಯಬೇಕು ಎಂದು ಎಂ ಗೋವಿಂದೆ ಗೌಡ ಸಂಪಾದಕರಾಗಿರುವ ಹಾಗು ಕೆ ಬಿ ಗಣಪತಿ ಉಪಸಂಪಾದಕರಾಗಿರುವ ಈ ಪತ್ರಿಕೆಯ ಸಂಪಾದಕೀಯ ಹೇಳಿತ್ತು.

ಅಂದರೆ ಕೊರೊನಾ ಕುರಿತು ಜಾಗೃತಿ ಮೂಡಿಸುವ ನೆಪದಲ್ಲಿ ಮುಸ್ಲಿಂ ಸಮುದಾಯದ ಮೇಲೆ ಕೋಮುದ್ವೇಷ ಮೂಡಿಸುವ ಸಂಪಾದಕೀಯವೊಂದು ಈ ಪತ್ರಿಕೆಯಲ್ಲಿ ಪ್ರಕಟವಾಗಿ ಭಾರೀ ಟೀಕೆಗೆ ಒಳಗಾಗಿದೆ.

ಸಂಪಾದಕೀಯದಲ್ಲಿ ಮುಸ್ಲಿಂ ಸಮುದಾಯದ ಹೆಸರನ್ನು ಎಲ್ಲಿಯೂ ನೇರವಾಗಿ ತೆಗೆದುಕೊಳ್ಳದಿದ್ದರೂ, ದೇಶದ 18% ಜನರನ್ನು ದೂಷಿಸಿದ್ದ ಸಂಪಾದಕೀಯದ ನಿಲುವು ಮುಸ್ಲಿಮರ ವಿರುದ್ಧವಾಗಿದೆ ಎಂದು ಸ್ಪಷ್ಟವಾಗಿದೆ ಎಂದು ಹಲವು ಸಂಘಟನೆಗಳು ಆರೋಪಿಸಿದ್ದವು.

‘ಫೋರಮ್ ಅಗೆನಿಸ್ಟ್ ಫೇಕ್ ನ್ಯೂಸ್’ ಎಂಬ ಮೈಸೂರು ಮೂಲದ ಸಂಘಟನೆ ಈ ಸಂಪಾದಕೀಯ ಮುಸ್ಲಿಮರ ವಿರುದ್ಧ ಇದ್ದು ಇದು ಕೋಮುಗಳ ವಿರುಧ್ದ ದ್ವೇಷಕ್ಕೆ ಪ್ರಚೋದನೆ ನೀಡುತ್ತಿದೆ ಎಂದು ಆರೋಪಿಸಿ ಸಂಪಾದಕರಿಗೆ ಪತ್ರ ಬರೆದಿತ್ತು. ಈ ಸಾಂಕ್ರಾಮಿಕ ಈಗಗಾಲೇ ಜನಕ್ಕೆ ಸಾಕಷ್ಟು ಸಂಕಷ್ಟ ತಂದಿದೆ. ಇದನ್ನು ಜಾತಿ ಧರ್ಮಗಳ ಹೊರತಾಗಿ ಹೋರಾಡಬೇಕು. ಇಂತಹ ಸಮಯದಲ್ಲಿ ಒಂದು ಸಮದಾಯವನ್ನು ಸುಳ್ಳು ಸುಳ್ಳೇ ಆರೋಪಿಸಿ ಅವರಿಗೆ ಒತ್ತಡ ತರುವುದು ತಪ್ಪು ಎಂದು ಹೇಳಿತ್ತು.

ಅಲ್ಲದೆ ವಕೀಲರ ಬಳಗವೊಂದು ಪತ್ರಿಕೋದ್ಯಮದ ನಿಯಮಗಳನ್ನು ಉಲ್ಲೇಖಿಸಿ ಈ ಸಂಪಾದಕೀಯ ಪ್ರಚೋದಿಸಿರುವ ಕೋಮು ದ್ವೇಷವನ್ನು ಖಂಡಿಸಿತ್ತು. ಪತ್ರಿಕೆಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಹಲವು ನಾಗರಿಕರು ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸರಿಗೆ ಮನವಿ ಮಾಡಿದ್ದರು.

ಈ ಹಿನ್ನಲೆಯಲ್ಲಿ ಈಗ ಸ್ಟಾರ್ ಆಫ್ ಮೈಸೂರು ಪತ್ರಿಕೆ ಕ್ಷಮಾಪಣೆಯನ್ನು ಪ್ರಕಟಿಸಿದೆ. ಕೋವಿಡ್-19 ಹೋರಾಟಕ್ಕೆ ಸಂಬಂಧಿಸಿದಂತೆ ಬರೆದ ಈ ಲೇಖನ ಯಾವುದಾದರೂ ಸಮುದಾಯಕ್ಕೆ ನೋವುಂಟು ಮಾಡಿದ್ದರೆ ಕ್ಷಮಿಸುವುಂತೆ ಕೇಳಿಕೊಂಡಿದ್ದು ಸಂಪಾದಕ ಮಂಡಳಿಯಿಂದ ತಪ್ಪಾಗಿರುವುದನ್ನು ಒಪ್ಪಿಕೊಂಡಿದೆ.

 

ಈ ಹಿಂದೆ ಮಾರ್ಚ್ 2019 ರಲ್ಲಿ ರಿಪಬ್ಲಿಕ್‌ ಟಿವಿಯಲ್ಲಿ ಜಮಾತ್-ಇ-ಇಸ್ಲಾಮಿ ಭಾರತದ ಮುಖ್ಯಸ್ಥ ಮೌಲಾನಾ ಜಲಾಲುದ್ದೀನ್ ಉಮ್ರಿ ಭಯೋತ್ಪಾದಕ ಎಂದು ಸುಳ್ಳು ಆರೋಪ ಮಾಡಿ ಸುದ್ದಿ ಪ್ರಸಾರ ಮಾಡಲಾಗಿತ್ತು. ಇದರ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಮಂಡಳಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪತ್ರ ಬರೆದ ನಂತರ ರಿಪಬ್ಲಿಕ್ ಟಿವಿ ಕ್ಷಮೆಯಾಚಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಮಾರ್ಚ್ ಕೊನೆಯ ವಾರದಲ್ಲಿ ದೆಹಲಿಯಲ್ಲಿ ನಡೆದ ತಬ್ಲೀಗ್ ಜಮಾತ್ ಸಮಾವೇಶದಿಂದಲೇ ಭಾರತದಲ್ಲಿ ಕೊರೊನ ಹರಡಿತು ಎಂಬ ಸುಳ್ಳು ಸುದ್ದಿಯನ್ನು ಹರಡಿ, ಒಂದು ಸಮುದಾಯದ ವಿರುದ್ಧ ಆರೋಪವನ್ನು ಹೊರಿಸುವುದನ್ನು ಕೆಲವು ಮಾಧ್ಯಮಗಳು ನಿರಂತರವಾಗಿ ಮಾಡುತ್ತಿವೆ. ಟಿವಿ ವಾಹಿನಿಗಳಿಗೆ ನೀಡಿದ್ದ ಸಂದರ್ಶನದಲ್ಲಿ ಇಂತಹ ಸಂಗತಿಗಳ ವಿರುದ್ಧ ಎಚ್ಚರಿಕೆ ವಹಿಸುವಂತೆ ಕರ್ನಾಟಕ ಮುಖ್ಯಮಂತ್ರಿ ಮಾಧ್ಯಮಗಳಿಗೆ ಮತ್ತು ನಾಗರಿಕರಿಗೆ ಎಚ್ಚರಿಸಿದ್ದರು. ಮಹಾರಾಷ್ಟ್ರ ಸರ್ಕಾರ ಕೂಡ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಇಂತಹ ಧಾರ್ಮಿಕ ದ್ವೇಷಕ್ಕೆ ಕಾರಣವಾಗುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿತ್ತು.

400 ಪದದ ಸಂಪಾದಕೀಯ ಬರೆದು ಕೇವಲ 50 ಪದದ ಕ್ಷಮಾಪಣೆಯನ್ನು ಈ ಪತ್ರಿಕೆ ಪ್ರಕಟಿಸಿದೆ. ಇದರಿಂದ ಉಳಿದ ಮಾಧ್ಯಮಗಳು ಪಾಠ ಕಲಿಯುವಂತಾಗಲಿ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...