Homeಮುಖಪುಟಮುಸ್ಲಿಮರನ್ನು ಕೊಳೆತ ಸೇಬುಗಳಿಗೆ ಹೋಲಿಸಿದ ಸ್ಟಾರ್‌ ಆಫ್‌ ಮೈಸೂರ್‌ ಪತ್ರಿಕೆ: ವೀರೋಧದ ನಂತರ ಕ್ಷಮಾಪಣೆ

ಮುಸ್ಲಿಮರನ್ನು ಕೊಳೆತ ಸೇಬುಗಳಿಗೆ ಹೋಲಿಸಿದ ಸ್ಟಾರ್‌ ಆಫ್‌ ಮೈಸೂರ್‌ ಪತ್ರಿಕೆ: ವೀರೋಧದ ನಂತರ ಕ್ಷಮಾಪಣೆ

- Advertisement -
- Advertisement -

ಮೈಸೂರಿನಲ್ಲಿ ಸಂಜೆ ಪ್ರಸಾರವಾಗುವ ಇಂಗ್ಲಿಶ್ ದಿನಪತ್ರಿಕೆ ಸ್ಟಾರ್ ಆಫ್ ಮೈಸೂರು ಎಪ್ರಿಲ್ 6 ರಂದು ಪ್ರಕಟಿಸಿದ್ದ ಸಂಪಾದಕೀಯದ ಬಗ್ಗೆ ಹಲವು ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ದೇಶದಲ್ಲಿ ಒಂದು ಸಮುದಾಯದ ಜನರು ಕೊಳೆತ ಸೇಬಿನಂತೆ ಎಂದು ಬರೆದಿದ್ದಲ್ಲದೆ ಅವುಗಳನ್ನು ಸಿಂಗಾಪುರ್ ದೇಶದ ಹಿಂದಿನ ಮುಖಂಡ ಅಥವಾ ಇಸ್ರೇಲ್‌ನ ಪ್ರಸಕ್ತ ಸರ್ಕಾರಾದ ಮಾದರಿಯಲ್ಲಿ ಹೊರಗೆ ಎಸೆಯಬೇಕು ಎಂದು ಎಂ ಗೋವಿಂದೆ ಗೌಡ ಸಂಪಾದಕರಾಗಿರುವ ಹಾಗು ಕೆ ಬಿ ಗಣಪತಿ ಉಪಸಂಪಾದಕರಾಗಿರುವ ಈ ಪತ್ರಿಕೆಯ ಸಂಪಾದಕೀಯ ಹೇಳಿತ್ತು.

ಅಂದರೆ ಕೊರೊನಾ ಕುರಿತು ಜಾಗೃತಿ ಮೂಡಿಸುವ ನೆಪದಲ್ಲಿ ಮುಸ್ಲಿಂ ಸಮುದಾಯದ ಮೇಲೆ ಕೋಮುದ್ವೇಷ ಮೂಡಿಸುವ ಸಂಪಾದಕೀಯವೊಂದು ಈ ಪತ್ರಿಕೆಯಲ್ಲಿ ಪ್ರಕಟವಾಗಿ ಭಾರೀ ಟೀಕೆಗೆ ಒಳಗಾಗಿದೆ.

ಸಂಪಾದಕೀಯದಲ್ಲಿ ಮುಸ್ಲಿಂ ಸಮುದಾಯದ ಹೆಸರನ್ನು ಎಲ್ಲಿಯೂ ನೇರವಾಗಿ ತೆಗೆದುಕೊಳ್ಳದಿದ್ದರೂ, ದೇಶದ 18% ಜನರನ್ನು ದೂಷಿಸಿದ್ದ ಸಂಪಾದಕೀಯದ ನಿಲುವು ಮುಸ್ಲಿಮರ ವಿರುದ್ಧವಾಗಿದೆ ಎಂದು ಸ್ಪಷ್ಟವಾಗಿದೆ ಎಂದು ಹಲವು ಸಂಘಟನೆಗಳು ಆರೋಪಿಸಿದ್ದವು.

‘ಫೋರಮ್ ಅಗೆನಿಸ್ಟ್ ಫೇಕ್ ನ್ಯೂಸ್’ ಎಂಬ ಮೈಸೂರು ಮೂಲದ ಸಂಘಟನೆ ಈ ಸಂಪಾದಕೀಯ ಮುಸ್ಲಿಮರ ವಿರುದ್ಧ ಇದ್ದು ಇದು ಕೋಮುಗಳ ವಿರುಧ್ದ ದ್ವೇಷಕ್ಕೆ ಪ್ರಚೋದನೆ ನೀಡುತ್ತಿದೆ ಎಂದು ಆರೋಪಿಸಿ ಸಂಪಾದಕರಿಗೆ ಪತ್ರ ಬರೆದಿತ್ತು. ಈ ಸಾಂಕ್ರಾಮಿಕ ಈಗಗಾಲೇ ಜನಕ್ಕೆ ಸಾಕಷ್ಟು ಸಂಕಷ್ಟ ತಂದಿದೆ. ಇದನ್ನು ಜಾತಿ ಧರ್ಮಗಳ ಹೊರತಾಗಿ ಹೋರಾಡಬೇಕು. ಇಂತಹ ಸಮಯದಲ್ಲಿ ಒಂದು ಸಮದಾಯವನ್ನು ಸುಳ್ಳು ಸುಳ್ಳೇ ಆರೋಪಿಸಿ ಅವರಿಗೆ ಒತ್ತಡ ತರುವುದು ತಪ್ಪು ಎಂದು ಹೇಳಿತ್ತು.

ಅಲ್ಲದೆ ವಕೀಲರ ಬಳಗವೊಂದು ಪತ್ರಿಕೋದ್ಯಮದ ನಿಯಮಗಳನ್ನು ಉಲ್ಲೇಖಿಸಿ ಈ ಸಂಪಾದಕೀಯ ಪ್ರಚೋದಿಸಿರುವ ಕೋಮು ದ್ವೇಷವನ್ನು ಖಂಡಿಸಿತ್ತು. ಪತ್ರಿಕೆಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಹಲವು ನಾಗರಿಕರು ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸರಿಗೆ ಮನವಿ ಮಾಡಿದ್ದರು.

ಈ ಹಿನ್ನಲೆಯಲ್ಲಿ ಈಗ ಸ್ಟಾರ್ ಆಫ್ ಮೈಸೂರು ಪತ್ರಿಕೆ ಕ್ಷಮಾಪಣೆಯನ್ನು ಪ್ರಕಟಿಸಿದೆ. ಕೋವಿಡ್-19 ಹೋರಾಟಕ್ಕೆ ಸಂಬಂಧಿಸಿದಂತೆ ಬರೆದ ಈ ಲೇಖನ ಯಾವುದಾದರೂ ಸಮುದಾಯಕ್ಕೆ ನೋವುಂಟು ಮಾಡಿದ್ದರೆ ಕ್ಷಮಿಸುವುಂತೆ ಕೇಳಿಕೊಂಡಿದ್ದು ಸಂಪಾದಕ ಮಂಡಳಿಯಿಂದ ತಪ್ಪಾಗಿರುವುದನ್ನು ಒಪ್ಪಿಕೊಂಡಿದೆ.

 

ಈ ಹಿಂದೆ ಮಾರ್ಚ್ 2019 ರಲ್ಲಿ ರಿಪಬ್ಲಿಕ್‌ ಟಿವಿಯಲ್ಲಿ ಜಮಾತ್-ಇ-ಇಸ್ಲಾಮಿ ಭಾರತದ ಮುಖ್ಯಸ್ಥ ಮೌಲಾನಾ ಜಲಾಲುದ್ದೀನ್ ಉಮ್ರಿ ಭಯೋತ್ಪಾದಕ ಎಂದು ಸುಳ್ಳು ಆರೋಪ ಮಾಡಿ ಸುದ್ದಿ ಪ್ರಸಾರ ಮಾಡಲಾಗಿತ್ತು. ಇದರ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಮಂಡಳಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪತ್ರ ಬರೆದ ನಂತರ ರಿಪಬ್ಲಿಕ್ ಟಿವಿ ಕ್ಷಮೆಯಾಚಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಮಾರ್ಚ್ ಕೊನೆಯ ವಾರದಲ್ಲಿ ದೆಹಲಿಯಲ್ಲಿ ನಡೆದ ತಬ್ಲೀಗ್ ಜಮಾತ್ ಸಮಾವೇಶದಿಂದಲೇ ಭಾರತದಲ್ಲಿ ಕೊರೊನ ಹರಡಿತು ಎಂಬ ಸುಳ್ಳು ಸುದ್ದಿಯನ್ನು ಹರಡಿ, ಒಂದು ಸಮುದಾಯದ ವಿರುದ್ಧ ಆರೋಪವನ್ನು ಹೊರಿಸುವುದನ್ನು ಕೆಲವು ಮಾಧ್ಯಮಗಳು ನಿರಂತರವಾಗಿ ಮಾಡುತ್ತಿವೆ. ಟಿವಿ ವಾಹಿನಿಗಳಿಗೆ ನೀಡಿದ್ದ ಸಂದರ್ಶನದಲ್ಲಿ ಇಂತಹ ಸಂಗತಿಗಳ ವಿರುದ್ಧ ಎಚ್ಚರಿಕೆ ವಹಿಸುವಂತೆ ಕರ್ನಾಟಕ ಮುಖ್ಯಮಂತ್ರಿ ಮಾಧ್ಯಮಗಳಿಗೆ ಮತ್ತು ನಾಗರಿಕರಿಗೆ ಎಚ್ಚರಿಸಿದ್ದರು. ಮಹಾರಾಷ್ಟ್ರ ಸರ್ಕಾರ ಕೂಡ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಇಂತಹ ಧಾರ್ಮಿಕ ದ್ವೇಷಕ್ಕೆ ಕಾರಣವಾಗುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿತ್ತು.

400 ಪದದ ಸಂಪಾದಕೀಯ ಬರೆದು ಕೇವಲ 50 ಪದದ ಕ್ಷಮಾಪಣೆಯನ್ನು ಈ ಪತ್ರಿಕೆ ಪ್ರಕಟಿಸಿದೆ. ಇದರಿಂದ ಉಳಿದ ಮಾಧ್ಯಮಗಳು ಪಾಠ ಕಲಿಯುವಂತಾಗಲಿ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...