Homeಮುಖಪುಟಮುಸ್ಲಿಮರನ್ನು ಕೊಳೆತ ಸೇಬುಗಳಿಗೆ ಹೋಲಿಸಿದ ಸ್ಟಾರ್‌ ಆಫ್‌ ಮೈಸೂರ್‌ ಪತ್ರಿಕೆ: ವೀರೋಧದ ನಂತರ ಕ್ಷಮಾಪಣೆ

ಮುಸ್ಲಿಮರನ್ನು ಕೊಳೆತ ಸೇಬುಗಳಿಗೆ ಹೋಲಿಸಿದ ಸ್ಟಾರ್‌ ಆಫ್‌ ಮೈಸೂರ್‌ ಪತ್ರಿಕೆ: ವೀರೋಧದ ನಂತರ ಕ್ಷಮಾಪಣೆ

- Advertisement -
- Advertisement -

ಮೈಸೂರಿನಲ್ಲಿ ಸಂಜೆ ಪ್ರಸಾರವಾಗುವ ಇಂಗ್ಲಿಶ್ ದಿನಪತ್ರಿಕೆ ಸ್ಟಾರ್ ಆಫ್ ಮೈಸೂರು ಎಪ್ರಿಲ್ 6 ರಂದು ಪ್ರಕಟಿಸಿದ್ದ ಸಂಪಾದಕೀಯದ ಬಗ್ಗೆ ಹಲವು ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ದೇಶದಲ್ಲಿ ಒಂದು ಸಮುದಾಯದ ಜನರು ಕೊಳೆತ ಸೇಬಿನಂತೆ ಎಂದು ಬರೆದಿದ್ದಲ್ಲದೆ ಅವುಗಳನ್ನು ಸಿಂಗಾಪುರ್ ದೇಶದ ಹಿಂದಿನ ಮುಖಂಡ ಅಥವಾ ಇಸ್ರೇಲ್‌ನ ಪ್ರಸಕ್ತ ಸರ್ಕಾರಾದ ಮಾದರಿಯಲ್ಲಿ ಹೊರಗೆ ಎಸೆಯಬೇಕು ಎಂದು ಎಂ ಗೋವಿಂದೆ ಗೌಡ ಸಂಪಾದಕರಾಗಿರುವ ಹಾಗು ಕೆ ಬಿ ಗಣಪತಿ ಉಪಸಂಪಾದಕರಾಗಿರುವ ಈ ಪತ್ರಿಕೆಯ ಸಂಪಾದಕೀಯ ಹೇಳಿತ್ತು.

ಅಂದರೆ ಕೊರೊನಾ ಕುರಿತು ಜಾಗೃತಿ ಮೂಡಿಸುವ ನೆಪದಲ್ಲಿ ಮುಸ್ಲಿಂ ಸಮುದಾಯದ ಮೇಲೆ ಕೋಮುದ್ವೇಷ ಮೂಡಿಸುವ ಸಂಪಾದಕೀಯವೊಂದು ಈ ಪತ್ರಿಕೆಯಲ್ಲಿ ಪ್ರಕಟವಾಗಿ ಭಾರೀ ಟೀಕೆಗೆ ಒಳಗಾಗಿದೆ.

ಸಂಪಾದಕೀಯದಲ್ಲಿ ಮುಸ್ಲಿಂ ಸಮುದಾಯದ ಹೆಸರನ್ನು ಎಲ್ಲಿಯೂ ನೇರವಾಗಿ ತೆಗೆದುಕೊಳ್ಳದಿದ್ದರೂ, ದೇಶದ 18% ಜನರನ್ನು ದೂಷಿಸಿದ್ದ ಸಂಪಾದಕೀಯದ ನಿಲುವು ಮುಸ್ಲಿಮರ ವಿರುದ್ಧವಾಗಿದೆ ಎಂದು ಸ್ಪಷ್ಟವಾಗಿದೆ ಎಂದು ಹಲವು ಸಂಘಟನೆಗಳು ಆರೋಪಿಸಿದ್ದವು.

‘ಫೋರಮ್ ಅಗೆನಿಸ್ಟ್ ಫೇಕ್ ನ್ಯೂಸ್’ ಎಂಬ ಮೈಸೂರು ಮೂಲದ ಸಂಘಟನೆ ಈ ಸಂಪಾದಕೀಯ ಮುಸ್ಲಿಮರ ವಿರುದ್ಧ ಇದ್ದು ಇದು ಕೋಮುಗಳ ವಿರುಧ್ದ ದ್ವೇಷಕ್ಕೆ ಪ್ರಚೋದನೆ ನೀಡುತ್ತಿದೆ ಎಂದು ಆರೋಪಿಸಿ ಸಂಪಾದಕರಿಗೆ ಪತ್ರ ಬರೆದಿತ್ತು. ಈ ಸಾಂಕ್ರಾಮಿಕ ಈಗಗಾಲೇ ಜನಕ್ಕೆ ಸಾಕಷ್ಟು ಸಂಕಷ್ಟ ತಂದಿದೆ. ಇದನ್ನು ಜಾತಿ ಧರ್ಮಗಳ ಹೊರತಾಗಿ ಹೋರಾಡಬೇಕು. ಇಂತಹ ಸಮಯದಲ್ಲಿ ಒಂದು ಸಮದಾಯವನ್ನು ಸುಳ್ಳು ಸುಳ್ಳೇ ಆರೋಪಿಸಿ ಅವರಿಗೆ ಒತ್ತಡ ತರುವುದು ತಪ್ಪು ಎಂದು ಹೇಳಿತ್ತು.

ಅಲ್ಲದೆ ವಕೀಲರ ಬಳಗವೊಂದು ಪತ್ರಿಕೋದ್ಯಮದ ನಿಯಮಗಳನ್ನು ಉಲ್ಲೇಖಿಸಿ ಈ ಸಂಪಾದಕೀಯ ಪ್ರಚೋದಿಸಿರುವ ಕೋಮು ದ್ವೇಷವನ್ನು ಖಂಡಿಸಿತ್ತು. ಪತ್ರಿಕೆಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಹಲವು ನಾಗರಿಕರು ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸರಿಗೆ ಮನವಿ ಮಾಡಿದ್ದರು.

ಈ ಹಿನ್ನಲೆಯಲ್ಲಿ ಈಗ ಸ್ಟಾರ್ ಆಫ್ ಮೈಸೂರು ಪತ್ರಿಕೆ ಕ್ಷಮಾಪಣೆಯನ್ನು ಪ್ರಕಟಿಸಿದೆ. ಕೋವಿಡ್-19 ಹೋರಾಟಕ್ಕೆ ಸಂಬಂಧಿಸಿದಂತೆ ಬರೆದ ಈ ಲೇಖನ ಯಾವುದಾದರೂ ಸಮುದಾಯಕ್ಕೆ ನೋವುಂಟು ಮಾಡಿದ್ದರೆ ಕ್ಷಮಿಸುವುಂತೆ ಕೇಳಿಕೊಂಡಿದ್ದು ಸಂಪಾದಕ ಮಂಡಳಿಯಿಂದ ತಪ್ಪಾಗಿರುವುದನ್ನು ಒಪ್ಪಿಕೊಂಡಿದೆ.

 

ಈ ಹಿಂದೆ ಮಾರ್ಚ್ 2019 ರಲ್ಲಿ ರಿಪಬ್ಲಿಕ್‌ ಟಿವಿಯಲ್ಲಿ ಜಮಾತ್-ಇ-ಇಸ್ಲಾಮಿ ಭಾರತದ ಮುಖ್ಯಸ್ಥ ಮೌಲಾನಾ ಜಲಾಲುದ್ದೀನ್ ಉಮ್ರಿ ಭಯೋತ್ಪಾದಕ ಎಂದು ಸುಳ್ಳು ಆರೋಪ ಮಾಡಿ ಸುದ್ದಿ ಪ್ರಸಾರ ಮಾಡಲಾಗಿತ್ತು. ಇದರ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಮಂಡಳಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪತ್ರ ಬರೆದ ನಂತರ ರಿಪಬ್ಲಿಕ್ ಟಿವಿ ಕ್ಷಮೆಯಾಚಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಮಾರ್ಚ್ ಕೊನೆಯ ವಾರದಲ್ಲಿ ದೆಹಲಿಯಲ್ಲಿ ನಡೆದ ತಬ್ಲೀಗ್ ಜಮಾತ್ ಸಮಾವೇಶದಿಂದಲೇ ಭಾರತದಲ್ಲಿ ಕೊರೊನ ಹರಡಿತು ಎಂಬ ಸುಳ್ಳು ಸುದ್ದಿಯನ್ನು ಹರಡಿ, ಒಂದು ಸಮುದಾಯದ ವಿರುದ್ಧ ಆರೋಪವನ್ನು ಹೊರಿಸುವುದನ್ನು ಕೆಲವು ಮಾಧ್ಯಮಗಳು ನಿರಂತರವಾಗಿ ಮಾಡುತ್ತಿವೆ. ಟಿವಿ ವಾಹಿನಿಗಳಿಗೆ ನೀಡಿದ್ದ ಸಂದರ್ಶನದಲ್ಲಿ ಇಂತಹ ಸಂಗತಿಗಳ ವಿರುದ್ಧ ಎಚ್ಚರಿಕೆ ವಹಿಸುವಂತೆ ಕರ್ನಾಟಕ ಮುಖ್ಯಮಂತ್ರಿ ಮಾಧ್ಯಮಗಳಿಗೆ ಮತ್ತು ನಾಗರಿಕರಿಗೆ ಎಚ್ಚರಿಸಿದ್ದರು. ಮಹಾರಾಷ್ಟ್ರ ಸರ್ಕಾರ ಕೂಡ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಇಂತಹ ಧಾರ್ಮಿಕ ದ್ವೇಷಕ್ಕೆ ಕಾರಣವಾಗುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿತ್ತು.

400 ಪದದ ಸಂಪಾದಕೀಯ ಬರೆದು ಕೇವಲ 50 ಪದದ ಕ್ಷಮಾಪಣೆಯನ್ನು ಈ ಪತ್ರಿಕೆ ಪ್ರಕಟಿಸಿದೆ. ಇದರಿಂದ ಉಳಿದ ಮಾಧ್ಯಮಗಳು ಪಾಠ ಕಲಿಯುವಂತಾಗಲಿ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...