Homeಚಳವಳಿಅಂಗನವಾಡಿಗಳಲ್ಲೇ LKG, UKG ಆರಂಭಿಸಿ: ಸಹಸ್ರಾರು ಮಹಿಳೆಯರ ಪ್ರತಿಭಟನೆಗೆ ಪೊಲೀಸರ ಅಡ್ಡಿ

ಅಂಗನವಾಡಿಗಳಲ್ಲೇ LKG, UKG ಆರಂಭಿಸಿ: ಸಹಸ್ರಾರು ಮಹಿಳೆಯರ ಪ್ರತಿಭಟನೆಗೆ ಪೊಲೀಸರ ಅಡ್ಡಿ

- Advertisement -
- Advertisement -

ಅಂಗನವಾಡಿಗಳಲ್ಲೆ ಎಲ್.ಕೆ.ಜಿ ಮತ್ತು ಯುಕೆಜಿ ಆರಂಭಿಸುವಂತೆ ಒತ್ತಾಯಿಸಿ ತುಮಕೂರಿನಿಂದ ಬೆಂಗಳೂರಿಗೆ ಕೈಗೊಂಡಿದ್ದ ಪಾದಯಾತ್ರೆಗೆ ಪೊಲೀಸರು ಅಡ್ಡಿಪಡಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಮಂದಿ ತುಮಕೂರು ನಗರಕ್ಕೆ ಆಗಮಿಸಿ ಅಲ್ಲಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಲು ಸಿದ್ದತೆ ಮಾಡಿಕೊಂಡಿದ್ದರು. ಆದರೆ ಪೊಲೀಸರು ಪಾದಯಾತ್ರೆಗೆ ಅವಕಾಶ ಮಾಡಿಕೊಡದೇ ಇರುವುದರಿಂದ ತುಮಕೂರಿನ ಗಾಜಿನ ಮನೆಯಲ್ಲಿ ಧರಣಿ ನಡೆಸುತ್ತಿದ್ದಾರೆ.

ಇದಕ್ಕೂ ಮೊದಲು ಪತ್ರಿಕಾಗೋಷ್ಠಿ ನಡೆಸಿದ ಮಹಿಳಾ ಹೋರಾಟಗಾರ್ತಿಯರು ತಮ್ಮ ಹಕ್ಕೊತ್ತಾಯಗಳನ್ನು ಮುಂದಿಟ್ಟಿದ್ದಾರೆ. ತದನಂತರ ಪ್ರಮುಖ ನಾಯಕರನ್ನು ಪೊಲೀಸರು ತಡೆದಿದ್ದಾರೆ. ಲೀಡರ್‌ಗಳ ಮನೆಗೆ ಹೋಗಿ ತಪಾಸಣೆ ನಡೆಸಿದ್ದಾರೆ. ಕೋಲಾರದ ಮಾಲೂರಿನ ಅಂಗನವಾಡಿ ಮುಖಂಡರನ್ನು ರಾತ್ರಿಯೆಲ್ಲ ಮನೆಯಲ್ಲೇ ಗೃಹಬಂಧನದಲ್ಲಿಟ್ಟು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಬಿಡುಗಡೆ ಮಾಡಿದ್ದಾರೆ ಎಂದು ಅಂಗನವಾಡಿ ನೌಕರರ ಸಂಘದ ಮುಖಂಡರು ಹೇಳಿದರು.

ಪತ್ರಿಕಾಗೋಷ್ಟಿ ಮುಕ್ತಾಯವಾಗುತ್ತಿದ್ದಂತೆ ಸ್ಥಳಕ್ಕೆ ಬಂದ ಎಎಸ್‌ಪಿ ಮತ್ತು ತುಮಕೂರು ನಗರ ಡಿವೈಎಸ್‌ಪಿ ಅಂಗನವಾಡಿ ನೌಕರರ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಸಿಂಧೂ, ರಾಜ್ಯಾಧ್ಯಕ್ಷ ಎಸ್.ವರಲಕ್ಷ್ಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಂದ, ಸಿಐಟಿಯು ನಾಯಕರಾದ ಮೀನಾಕ್ಷಿ ಸುಂದರಂ, ಕೆ.ಎನ್. ಉಮೇಶ್, ಕೆ. ಮಹಾಂತೇಸ್, ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಮೊದಲಾದವರೊಂದಿಗೆ ಅರ್ಧ ಗಂಟೆ ಮಾತುಕತೆ ನಡೆಸಿದರು.

ಯಾವುದೇ ಕಾರಣಕ್ಕೂ ಪಾದಯಾತ್ರೆಗೆ ಅವಕಾಶ ಇಲ್ಲವೆಂಬುದನ್ನು ಪೊಲೀಸ್ ಅಧಿಕಾರಿಗಳು ಹೆಳಿದರು. ಇದಕ್ಕೆ ನೀವು ಲಿಖಿತವಾಗಿ ನಮಗೆ ಮಾಹಿತಿ ನೀಡಿದರೆ ನಾವು ಸರ್ಕಾರದೊಂದಿಗೆ ಮಾತುಕತೆಗೆ ಸಿದ್ದ. ಆದರೆ ಸುಮ್ಮನೆ ಮನವಿ ಕೊಟ್ಟು ಬರಲು ಹೋಗುವುದಾದರೆ ಬೇಡ ಎಂದು ಪಟ್ಟು ಹಿಡಿದರು. ಬಳಿಕ ಅಲ್ಲಿಂದ ಗಾಜಿನಮನೆಗೆ ಸಹಸ್ರಾರು ಕಾರ್ಯಕರ್ತೆಯರು ಮೆರವಣಿಗೆ ಬಂದರು. ಅಲ್ಲಿಗೆ ಆಗಮಿಸಿದ ಎಸ್.ಪಿ. ಡಾ. ಕೋನಂ ವಂಶಿಕೃಷ್ಣ ಸಿಐಟಿಯು ಮುಖಂಡರೊಂದಿಗೆ ಮಾತುಕತೆ ನಡೆಸಿದರು. ಪ್ರಧಾನ ಕಾರ್ಯದರ್ಶಿಗಳ ಜೊತೆ ಮಾತನಾಡುತ್ತೇವೆ. ನಿಮಗೆ ಮುಖ್ಯಮಂತ್ರಿ ಜೊತೆ ಮಾತುಕತೆಗೆ ಅವಕಾಶ ಕಲ್ಪಿಸುತ್ತೇವೆ ಎಂದು ಅಲ್ಲಿಂದ ನಿರ್ಗಮಿಸಿದರು.

ಇದೀಗ ಅಂಗನವಾಡಿ ನೌಕರರ ಸಂಘದ ಪ್ರಮುಖರಾದ ಸಿಂಧೂ, ಎಸ್.ವರಲಕ್ಷ್ಮಿ, ಸುನಂದ, ಗುಲ್ಜಾರ್ ಬಾನು, ಶಾಂತ ಘಂಟಿ, ನಾಗರತ್ನ ಅವರನ್ನು ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಮಾತುಕತೆಗೆ ಕರೆದೊಯ್ಯಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರ ವೈಜ್ಞಾನಿಕ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರವನ್ನು ಕಾಂಗ್ರೆಸ್ ಬದಲು ತಾಯಂದಿರೇ ಕಿತ್ತೊಗೆಯಲಿದ್ದಾರೆ ಎಂದು ಗ್ರಾಮ ಸೇವಾ ಸಂಘದ ಅಧ್ಯಕ್ಷ ಹೆಗ್ಗೋಡು ಪ್ರಸನ್ನರವರು ಎಚ್ಚರಿಕೆ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Houdu anganavagi shaleyalli LKG And UKG aarambavagabeku, yakendre:
    6 varsha kinta kadime eru makkalige antene anganavadi shale yannu terayalagide adre aa makkalallli LKG UKG Anta bere school Ali hoguttare adre 6 varsha kinta kadime eru makkaligagi teradiru e anganavadi yalli makkala sankhye kadime agatide anganavadi shale ge koduva facelities West agatide adarinda anganavadi shale alli LKG and UKG prarambhavagabeku.

LEAVE A REPLY

Please enter your comment!
Please enter your name here

- Advertisment -

ಮಹಿಳಾ ಸೇನಾಧಿಕಾರಿಗಳು ಶಾಶ್ವತ ಆಯೋಗಕ್ಕೆ ಅರ್ಹರು: ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಮಂಗಳವಾರ, ಅನಿಯಂತ್ರಿತ ಮೌಲ್ಯಮಾಪನದಿಂದಾಗಿ ಶಾಶ್ವತ ಆಯೋಗವನ್ನು ನಿರಾಕರಿಸಲಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮಹಿಳಾ ಕಿರು ಸೇವಾ ಆಯೋಗ (ಎಸ್‌ಎಸ್‌ಸಿ) ಅಧಿಕಾರಿಗಳು ಪೂರ್ಣ ಪಿಂಚಣಿ ಸೌಲಭ್ಯಗಳಿಗೆ ಅರ್ಹರು...

ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ (ಮಾ.23) ಬಿಜೆಪಿ ರಾಜ್ಯ ಘಟಕದ ಸೀಲ್ ಹೊಂದಿರುವ ಚುನಾವಣಾ ಆಯೋಗದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ....

ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿಯ ನ್ಯಾಯಾಲಯವು, ಅವರ ಮೇಲಿನ ಅಪರಾಧಗಳು ಗಂಭೀರ ಮತ್ತು ಜಾಮೀನು ರಹಿತವಾಗಿವೆ ಎಂದು ಹೇಳಿದೆ....

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ಯೂರ್ಟೊ...

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...