Homeಚಳವಳಿಅಂಗನವಾಡಿಗಳಲ್ಲೇ LKG, UKG ಆರಂಭಿಸಿ: ಸಹಸ್ರಾರು ಮಹಿಳೆಯರ ಪ್ರತಿಭಟನೆಗೆ ಪೊಲೀಸರ ಅಡ್ಡಿ

ಅಂಗನವಾಡಿಗಳಲ್ಲೇ LKG, UKG ಆರಂಭಿಸಿ: ಸಹಸ್ರಾರು ಮಹಿಳೆಯರ ಪ್ರತಿಭಟನೆಗೆ ಪೊಲೀಸರ ಅಡ್ಡಿ

- Advertisement -
- Advertisement -

ಅಂಗನವಾಡಿಗಳಲ್ಲೆ ಎಲ್.ಕೆ.ಜಿ ಮತ್ತು ಯುಕೆಜಿ ಆರಂಭಿಸುವಂತೆ ಒತ್ತಾಯಿಸಿ ತುಮಕೂರಿನಿಂದ ಬೆಂಗಳೂರಿಗೆ ಕೈಗೊಂಡಿದ್ದ ಪಾದಯಾತ್ರೆಗೆ ಪೊಲೀಸರು ಅಡ್ಡಿಪಡಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಮಂದಿ ತುಮಕೂರು ನಗರಕ್ಕೆ ಆಗಮಿಸಿ ಅಲ್ಲಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಲು ಸಿದ್ದತೆ ಮಾಡಿಕೊಂಡಿದ್ದರು. ಆದರೆ ಪೊಲೀಸರು ಪಾದಯಾತ್ರೆಗೆ ಅವಕಾಶ ಮಾಡಿಕೊಡದೇ ಇರುವುದರಿಂದ ತುಮಕೂರಿನ ಗಾಜಿನ ಮನೆಯಲ್ಲಿ ಧರಣಿ ನಡೆಸುತ್ತಿದ್ದಾರೆ.

ಇದಕ್ಕೂ ಮೊದಲು ಪತ್ರಿಕಾಗೋಷ್ಠಿ ನಡೆಸಿದ ಮಹಿಳಾ ಹೋರಾಟಗಾರ್ತಿಯರು ತಮ್ಮ ಹಕ್ಕೊತ್ತಾಯಗಳನ್ನು ಮುಂದಿಟ್ಟಿದ್ದಾರೆ. ತದನಂತರ ಪ್ರಮುಖ ನಾಯಕರನ್ನು ಪೊಲೀಸರು ತಡೆದಿದ್ದಾರೆ. ಲೀಡರ್‌ಗಳ ಮನೆಗೆ ಹೋಗಿ ತಪಾಸಣೆ ನಡೆಸಿದ್ದಾರೆ. ಕೋಲಾರದ ಮಾಲೂರಿನ ಅಂಗನವಾಡಿ ಮುಖಂಡರನ್ನು ರಾತ್ರಿಯೆಲ್ಲ ಮನೆಯಲ್ಲೇ ಗೃಹಬಂಧನದಲ್ಲಿಟ್ಟು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಬಿಡುಗಡೆ ಮಾಡಿದ್ದಾರೆ ಎಂದು ಅಂಗನವಾಡಿ ನೌಕರರ ಸಂಘದ ಮುಖಂಡರು ಹೇಳಿದರು.

ಪತ್ರಿಕಾಗೋಷ್ಟಿ ಮುಕ್ತಾಯವಾಗುತ್ತಿದ್ದಂತೆ ಸ್ಥಳಕ್ಕೆ ಬಂದ ಎಎಸ್‌ಪಿ ಮತ್ತು ತುಮಕೂರು ನಗರ ಡಿವೈಎಸ್‌ಪಿ ಅಂಗನವಾಡಿ ನೌಕರರ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಸಿಂಧೂ, ರಾಜ್ಯಾಧ್ಯಕ್ಷ ಎಸ್.ವರಲಕ್ಷ್ಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಂದ, ಸಿಐಟಿಯು ನಾಯಕರಾದ ಮೀನಾಕ್ಷಿ ಸುಂದರಂ, ಕೆ.ಎನ್. ಉಮೇಶ್, ಕೆ. ಮಹಾಂತೇಸ್, ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಮೊದಲಾದವರೊಂದಿಗೆ ಅರ್ಧ ಗಂಟೆ ಮಾತುಕತೆ ನಡೆಸಿದರು.

ಯಾವುದೇ ಕಾರಣಕ್ಕೂ ಪಾದಯಾತ್ರೆಗೆ ಅವಕಾಶ ಇಲ್ಲವೆಂಬುದನ್ನು ಪೊಲೀಸ್ ಅಧಿಕಾರಿಗಳು ಹೆಳಿದರು. ಇದಕ್ಕೆ ನೀವು ಲಿಖಿತವಾಗಿ ನಮಗೆ ಮಾಹಿತಿ ನೀಡಿದರೆ ನಾವು ಸರ್ಕಾರದೊಂದಿಗೆ ಮಾತುಕತೆಗೆ ಸಿದ್ದ. ಆದರೆ ಸುಮ್ಮನೆ ಮನವಿ ಕೊಟ್ಟು ಬರಲು ಹೋಗುವುದಾದರೆ ಬೇಡ ಎಂದು ಪಟ್ಟು ಹಿಡಿದರು. ಬಳಿಕ ಅಲ್ಲಿಂದ ಗಾಜಿನಮನೆಗೆ ಸಹಸ್ರಾರು ಕಾರ್ಯಕರ್ತೆಯರು ಮೆರವಣಿಗೆ ಬಂದರು. ಅಲ್ಲಿಗೆ ಆಗಮಿಸಿದ ಎಸ್.ಪಿ. ಡಾ. ಕೋನಂ ವಂಶಿಕೃಷ್ಣ ಸಿಐಟಿಯು ಮುಖಂಡರೊಂದಿಗೆ ಮಾತುಕತೆ ನಡೆಸಿದರು. ಪ್ರಧಾನ ಕಾರ್ಯದರ್ಶಿಗಳ ಜೊತೆ ಮಾತನಾಡುತ್ತೇವೆ. ನಿಮಗೆ ಮುಖ್ಯಮಂತ್ರಿ ಜೊತೆ ಮಾತುಕತೆಗೆ ಅವಕಾಶ ಕಲ್ಪಿಸುತ್ತೇವೆ ಎಂದು ಅಲ್ಲಿಂದ ನಿರ್ಗಮಿಸಿದರು.

ಇದೀಗ ಅಂಗನವಾಡಿ ನೌಕರರ ಸಂಘದ ಪ್ರಮುಖರಾದ ಸಿಂಧೂ, ಎಸ್.ವರಲಕ್ಷ್ಮಿ, ಸುನಂದ, ಗುಲ್ಜಾರ್ ಬಾನು, ಶಾಂತ ಘಂಟಿ, ನಾಗರತ್ನ ಅವರನ್ನು ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಮಾತುಕತೆಗೆ ಕರೆದೊಯ್ಯಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರ ವೈಜ್ಞಾನಿಕ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರವನ್ನು ಕಾಂಗ್ರೆಸ್ ಬದಲು ತಾಯಂದಿರೇ ಕಿತ್ತೊಗೆಯಲಿದ್ದಾರೆ ಎಂದು ಗ್ರಾಮ ಸೇವಾ ಸಂಘದ ಅಧ್ಯಕ್ಷ ಹೆಗ್ಗೋಡು ಪ್ರಸನ್ನರವರು ಎಚ್ಚರಿಕೆ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Houdu anganavagi shaleyalli LKG And UKG aarambavagabeku, yakendre:
    6 varsha kinta kadime eru makkalige antene anganavadi shale yannu terayalagide adre aa makkalallli LKG UKG Anta bere school Ali hoguttare adre 6 varsha kinta kadime eru makkaligagi teradiru e anganavadi yalli makkala sankhye kadime agatide anganavadi shale ge koduva facelities West agatide adarinda anganavadi shale alli LKG and UKG prarambhavagabeku.

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...