Homeಮುಖಪುಟಹೋರಾಟ ನಿರತ ರೈತರಿಂದ ದೆಹಲಿಯಲ್ಲಿ ‘ಕಿಸಾನ್ ಮೆಟ್ರೋ’ ಆರಂಭ!

ಹೋರಾಟ ನಿರತ ರೈತರಿಂದ ದೆಹಲಿಯಲ್ಲಿ ‘ಕಿಸಾನ್ ಮೆಟ್ರೋ’ ಆರಂಭ!

- Advertisement -
- Advertisement -

ರೈತರ ಹೋರಾಟದ ಅಖಾಡಗಳಾಗಿ ಬದಲಾಗಿರುವ ದೆಹಲಿ ಗಡಿಗಳಲ್ಲಿ ಹೊಸದಾಗಿ ‘ಕಿಸಾನ್ ಮೆಟ್ರೋ’ ಸೇವೆ ಆರಂಭವಾಗಿದೆ. ದೆಹಲಿಯ ಹೊರವಲಯಗಳಲ್ಲಿರುವ ಈ ಪ್ರತಿಭಟನಾ ಸ್ಥಳಗಳಲ್ಲಿ ಮೆಟ್ರೋ ಸೇವೆ ಹೇಗೆ ಸಾಧ್ಯ ಎಂದು ಹುಬ್ಬೇರಿಸಬೇಡಿ!. ಇಲ್ಲಿದೆ ನೋಡಿ ಕಿಸಾ‌ನ್ ಮೆಟ್ರೋ ಬಗೆಗಿನ ಮಾಹಿತಿ.

ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಗಳಲ್ಲಿ ರೈತರು ಪ್ರತಿಭಟನೆ ಶುರುವಿಟ್ಟುಕೊಂಡ ದಿನದಿಂದಲೂ ಹೋರಾಟ ನಿರತರು ಒಂದು ಗಡಿಯಿಂದ ಮತ್ತೊಂದು ಗಡಿಗೆ ಸಂಚರಿಸಲು ಯಾವುದೇ ರೀತಿಯ ಸಾರಿಗೆ ಸೌಲಭ್ಯವಿಲ್ಲ. ಹೀಗಾಗಿ ಪ್ರತಿಭಟನಾ ಸ್ಥಳಗಳ ನಡುವೆ ಸಂಪರ್ಕ ಕಲ್ಪಿಸಲು ರೈತ ನಾಯಕರು ಕಿಸಾನ್ ಮೆಟ್ರೋ ಆರಂಭಿಸಿದ್ದಾರೆ.

ಏನಿದು ಕಿಸಾನ್ ಮೆಟ್ರೋ ?

ಹೊಲದಲ್ಲಿ ಉಳುಮೆ ಮಾಡಲು ಸೀಮಿತವಾಗಿದ್ದ ಟ್ರ್ಯಾಕ್ಟರ್‌ಗಳೇ ಇದೀಗ ಕಿಸಾನ್ ಮೆಟ್ರೋಗಳಾಗಿ ಪರಿವರ್ತನೆಯಾಗಿವೆ. ದೆಹಲಿಯ ವಿವಿಧ ಗಡಿಗಳ ನಡುವೆ ಸಂಪರ್ಕ ಕಲ್ಪಿಸುವ ಸಲುವಾಗಿ ರೈತ ಹೋರಾಟದ ಭಾಗವಾಗಿರುವ ಸ್ವಚ್ಛ ಕಿಸಾನ್ ಮೋರ್ಚಾ ಹಾಗೂ ಲೈಫ್ ಕೇರ್ ಫೌಂಡೇಶನ್, “ಕಿಸಾನ್ ಮೆಟ್ರೋ” ಸೇವೆಯನ್ನು ಆರಂಭಿಸಿವೆ.

ಇದನ್ನೂ ಓದಿ: ಚಿತ್ರರಂಗದ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳುವ ಕೇಂದ್ರದ ಹೊಸ ಕಾನೂನು: ಕಮಲ್ ಹಾಸನ್ ಸೇರಿ ಚಿತ್ರತಾರೆಯರ ವಿರೋಧ

ಸದ್ಯಕ್ಕೆ ಕಿಸಾನ್ ಮೆಟ್ರೊ ಸಂಚಾರ ಸೇವೆ ಸಿಂಘು ಮತ್ತು ಟಿಕ್ರಿ ಗಡಿಗಳ ನಡುವೆ ಲಭ್ಯವಿದೆ. ಮುಂದಿನ ದಿನಗಳಲ್ಲಿ ಈ ಸಂಚಾರ ಸೇವೆಯನ್ನು ಘಾಜಿಪುರ್ ಸೇರಿದಂತೆ ಉಳಿದ ಗಡಿಗಳಿಗೂ ವಿಸ್ತರಿಸಲಾಗುವುದು ಎಂದು ಮೇಕ್ ಶಿಫ್ಟ್ ಆಸ್ಪತ್ರೆಯ ನಿರ್ವಾಹಕ ಅವತಾರ್ ಸಿಂಗ್ ತಿಳಿಸಿದ್ದಾರೆ.

ಕಿಸಾನ್ ಮೆಟ್ರೋ ಸೇವೆ ಆರಂಭಕ್ಕೆ ಕಾರಣ ತಿಳಿಸಿರುವ ಸಿಂಗ್, “ಹೋರಾಟದಲ್ಲಿ ನಿರತರಾಗಿರುವ ಹಲವು ರೈತರು ಒಂದು ಗಡಿಯಿಂದ ಮತ್ತೊಂದು ಗಡಿಗೆ ಸಂಚರಿಸಲು ಇಚ್ಛಿಸುತ್ತಾರೆ. ಆದರೆ, ಸೂಕ್ತ ಸಾರಿಗೆ ಸಂಪರ್ಕವಿಲ್ಲದೆ ಗಡಿಗಳ ಮಧ್ಯ ಸಂಚಾರ ಕಷ್ಟಕರವಾಗಿತ್ತು. ಇದೇ ಕಾರಣಕ್ಕೆ ರೈತ ಹೋರಾಟದ ಪ್ರಮುಖ ಅಸ್ತ್ರ ಎನ್ನಿಸಿಕೊಂಡಿರುವ ಟ್ರ್ಯಾಕ್ಟರ್‌ಗಳನ್ನೇ ಕಿಸಾನ್ ಮೆಟ್ರೋಗಳನ್ನಾಗಿಸಿ ಸಾರಿಗೆ ಸಂಪರ್ಕ ಕಲ್ಪಿಸಿದ್ದೇವೆ ಎಂದರು.

ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ KOCCA ಕಾಯ್ದೆ ಕೈಬಿಡದಂತೆ ಸುಪ್ರೀಂ ತಡೆಯಾಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...