Homeಕರೋನಾ ತಲ್ಲಣಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಶೇಕಡ 15 ರಷ್ಟು ಗ್ರಾಮೀಣ ಕುಟುಂಬಗಳಲ್ಲಿ ಮಾತ್ರ ಇಂಟರ್ನೆಟ್ ವ್ಯವಸ್ಥೆಯಿದೆ. ಆನ್‌ಲೈನ್‌ ಮೂಲಕ ಶಿಕ್ಷಣ ಪಡೆಯಲು ಸಾಧ್ಯವಾಗದೆ ಅನೇಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಅನೇಕ ಪ್ರಕರಣಗಳು ವರದಿಯಾಗಿವೆ.

- Advertisement -
- Advertisement -

ಮಕ್ಕಳ ರಕ್ಷಣೆ ಮತ್ತು ಶಿಕ್ಷಣಕ್ಕಾಗಿ ಡಿಸೆಂಬರ್ 15ರೊಳಗೆ ಕರ್ನಾಟಕದ ಎಲ್ಲಾ ಶಾಲೆಗಳನ್ನು ತೆರೆಯಲೇಬೇಕು ಎಂದು ಆಗ್ರಹಿಸಿ ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿಯು ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ ಬರೆದು ಮನವಿ ಮಾಡಿದೆ.

ರಾಜ್ಯದಲ್ಲಿ ಸೆಪ್ಟೆಂಬರ್ ಬಳಿಕ ಕೊರೊನಾ ಸೋಂಕಿನ ಹರಡುವಿಕೆಯು ಗಣನೀಯವಾಗಿ ಇಳಿದಿದ್ದರೂ, ಮಾರ್ಚ್ ತಿಂಗಳಿನಿಂದಲೇ ಮುಚ್ಚಿದ ಶಾಲೆ-ಕಾಲೇಜುಗಳನ್ನು ಪುನರಾರಂಭಿಸದಿರುವ ರಾಜ್ಯ ಸರ್ಕಾರದ ನಿರ್ಧರವನ್ನು ಖಂಡಿಸಿ ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿ ಶಿಕ್ಷಣ ಸಚಿವರಿಗೆ ಪತ್ರ ಬರೆದಿದೆ.

ಕಳೆದ 3-4 ತಿಂಗಳಲ್ಲಿ ಸಾರ್ವಜನಿಕ ಚಟುವಟಿಕೆಗಳಿಗೆಲ್ಲ ಅನುವು ಮಾಡಲಾಗಿದೆ. ಪ್ರಯಾಣ, ಹೋಟೆಲ್, ಬಾರುಗಳು, ಮಾರುಕಟ್ಟೆಗಳು, ದೊಡ್ಡ ದೊಡ್ಡ ಮಾಲ್‌ಗಳು, ಸಭೆ-ಸಮಾರಂಭಗಳು, ಸಾರ್ವಜನಿಕ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮಗಳು, ಚುನಾವಣಾ ಪ್ರಚಾರ ಮುಂತಾದ ಎಲ್ಲಾ ಚಟುವಟಿಕೆಗಳಿಗೆ ಮುಕ್ತ ಅವಕಾಶವನ್ನು ನೀಡಲಾಗಿದೆ. ಕೊರೋನ ಸೋಂಕು ವ್ಯಾಪಕವಾಗಿಯೂ, ಕ್ಷಿಪ್ರವಾಗಿಯೂ ಹರಡುತ್ತಿದ್ದ ಮೇ-ಜುಲೈ ಅವಧಿಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳನ್ನೂ, ಸಿಇಟಿ, ನೀಟ್ ಇತ್ಯಾದಿ ಪರೀಕ್ಷೆಗಳನ್ನೂ ಯಶಸ್ವಿಯಾಗಿ ನಡೆಸಲಾಗಿದ್ದು, ಅದರಿಂದ ವಿದ್ಯಾರ್ಥಿಗಳಿಗಾಗಲೀ, ಶಿಕ್ಷಕರಿಗಾಗಲೀ ಯಾವುದೇ ಸಮಸ್ಯೆಗಳಾಗಿಲ್ಲ ಎಂದು ಸರ್ಕಾರ ತಿಳಿಸಿದೆ. ಹಾಗಾದರೆ ಶಾಲೆ ಆರಂಭಕ್ಕೆ ಏಕೆ ತಡೆ ಎಂದು ಸಮಿತಿ ಕಿಡಿಕಾರಿದೆ.

ಇದನ್ನೂ ಓದಿ: ‘ಆನ್‌ಲೈನ್ ತರಗತಿ ಮತ್ತು ಆನ್‌ಲೈನ್ ಶಿಕ್ಷಣ ಬೇಡ’ – ಸಾಮಾನ್ಯ ಖಾಸಗಿ ಶಾಲೆಗಳ ಮನವಿ!

ಕೊರೊನಾ ಸಂದರ್ಭದಲ್ಲಿ ಮಕ್ಕಳ ಕಲಿಕೆಯನ್ನು ನಿರಂತರವಾಗಿರಿಸಲು, ತಂತ್ರಜ್ಞಾನದ ಲಭ್ಯತೆಯಿಲ್ಲದ  ಗ್ರಾಮೀಣ ಭಾಗದ ಮಕ್ಕಳಿಗೆ ಸಹಾಯ ಮಾಡುವ ಉದ್ದೇಶದಿಂದ ತಜ್ಞರ ಸಮಿತಿಯ ಶಿಫಾರಸ್ಸನ್ನು ಆಧರಿಸಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗಾಗಿ ವಿದ್ಯಾಗಮ ಆರಂಭಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಕ್ಕಳು, ಪಾಲಕರು, ಶಿಕ್ಷಕರು, ಸಮುದಾಯ ಮತ್ತು ಹಲವು ಸಂಘಟನೆಗಳು ಸಕ್ರಿಯವಾಗಿ ತೊಡಗಿಸಿಕೊಂಡಿದ್ದವು. ಆದರೆ, ಮಾಧ್ಯಮಗಳು, ಅದರಲ್ಲೂ ವಿಶೇಷವಾಗಿ ಎಲೆಕ್ಟ್ರಾನಿಕ್‌ ಮಾಧ್ಯಮಗಳು ಸೃಷ್ಟಿಸಿದ ತಪ್ಪು ತಿಳುವಳಿಕೆ, ಅವೈಜ್ಞಾನಿಕ ವಿಶ್ಲೇಷಣೆ, ಭಾವಾನಾತ್ಮಕ ಗದ್ದಲದ ನಡುವೆ, ಏಕಪಕ್ಷೀಯವಾಗಿ, ಏಕಾಏಕಿಯಾಗಿ ತೀರ್ಮಾನಿಸಿ ಅದನ್ನು ನಿಲ್ಲಿಸಲಾಯಿತು ಎಂದು ಸಚಿವರಿಗೆ ಬರೆದ ಪತ್ರದಲ್ಲಿ ದೂರಲಾಗಿದೆ.

ಕೊರೊನಾ ಸೋಂಕು ಹೆಚ್ಚಾಗಿ ಹರಡಬಲ್ಲ ಎಲ್ಲ ವಹಿವಾಟು-ಕಾರ್ಯಕ್ರಮಗಳಿಗೆ ಅವಕಾಶ ನೀಡಿ, ಕೇವಲ ಶಾಲೆಗಳನ್ನಷ್ಟೇ ಮುಚ್ಚಿ, ಅತ್ಯಂತ ಕೆಳಸ್ತರದ ಅವಕಾಶವಂಚಿತ ಸಮುದಾಯದ ಮಕ್ಕಳಿಗಿದ್ದ  ಕಾರ್ಯಕ್ರಮಗಳನ್ನಷ್ಟೇ ನಿಲ್ಲಿಸಿ, ಸರ್ಕಾರಿ ಶಾಲೆಗಳನ್ನು ಮುಚ್ಚಿ, ಬಹುಸಂಖ್ಯಾತ ಬಡ ಮಕ್ಕಳಿಗೆ ಬಳಸಲಿಕ್ಕಾಗದ, ಆನ್ ಲೈನ್ ಶಿಕ್ಷಣಕ್ಕೆ ಒತ್ತು ನೀಡಿರುವುದು ದೊಡ್ಡ ಹುನ್ನಾರ ಮತ್ತು ಲಾಬಿಯಿದೆಯೆಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಆನ್‌ಲೈನ್
PC: 7News

ಶಾಲೆಗಳನ್ನು ಧೀರ್ಘಕಾಲ ಮುಚ್ಚಿರುವುದರಿಂದ 3 ರಿಂದ 20 ವರ್ಷದ ಎಲ್ಲರ ಮೇಲೂ ಶಾಶ್ವತವಾದ ಹಾನಿಯುಂಟು ಮಾಡಲಿದೆ ಎಂಬುದನ್ನು ವಿಶ್ವದ ಎಲ್ಲಾ ಉನ್ನತ ಸಂಸ್ಥೆಗಳೂ, ಮಾನವ ಹಕ್ಕುಗಳ ಸಂಘಟನೆಗಳೂ, ತಜ್ಞರೂ ಏಕಾಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಶಾಲೆಗಳನ್ನು ಶೀಫ್ರವೇ ಪುನರಾರಂಭಿಸಬೇಕು ಎಂದು ಸಚಿವರಿಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ದೀಪಾವಳಿ ನಂತರ ಶಾಲೆ ಹಾಗೂ ದೇವಾಲಯ ರೀ ಓಪನ್!

ದಿನಕ್ಕೆ 2 ಗಂಟೆಗೂ ಹೆಚ್ಚು ಕಾಲ ಫೋನ್, ಟಿವಿ ಪರದೆ ನೋಡುತ್ತಿದ್ದರೆ 3-5 ವರ್ಷದ ಮಕ್ಕಳ ಭಾಷೆ, ಬರವಣಿಗೆ, ಗ್ರಹಿಕೆಗಳು ಕುಗ್ಗುತ್ತವೆ. 5 ರಿಂದ 7 ಗಂಟೆ ಅವುಗಳನ್ನು ಬಳಸಿದರೆ ಮಿದುಳಿನ ಬೆಳವಣಿಗೆಯೇ ಕುಂಠಿತಗೊಂದು ಮಿದುಳು ತೆಳ್ಳಗಾಗಿ ಶಾಶ್ವತ ಹಾನಿಯಾಗುತ್ತದೆಂದೂ ಅಧ್ಯಯನಗಳು ತೋರಿಸಿವೆ ಎಂಬ ವಿಚಾರವನ್ನು ಬಹಿರಂಗ ಪತ್ರದಲ್ಲಿ ಬರೆಯಲಾಗಿದೆ.

ಕೊರೊನಾ ಸೋಂಕಿನ ಲಸಿಕೆಗಳು ಬರುವವರೆಗೆ ಶಾಲೆಗಳನ್ನು ತೆರೆಯಬಾರದು ಎಂಬ ವಾದವನ್ನು ಮಾಧ್ಯಮಗಳು ಈಗಾಗಲೇ ಹರಡಿವೆ. ಇದು ತೀರಾ ಅಸಂಬದ್ಧವಾಗಿದೆ. ಕೊರೊನಾ ಲಸಿಕೆಗಳು ಬರುವುದಕ್ಕೆ ಇನ್ನೂ ತಿಂಗಳುಗಳು ಬೇಕು. ಬಂದರೂ ದೇಶಗಳಲ್ಲಾಗಲೀ, ವಿದೇಶದಲ್ಲಾಗಲಿ ಮಕ್ಕಳಿಗೆ ಲಸಿಕೆ ನೀಡುವ ಪ್ರಸ್ತಾವವೇ ಇಲ್ಲ. ಮಕ್ಕಳಿಗೆ ಕೊರೊನಾ ಬಾಧಿಸುವುದಿಲ್ಲ ಎಂದ ಮೇಲೆ ಅವರಿಗೆ ಅವುಗಳ ಅಗತ್ಯವೂ ಇಲ್ಲ. ಆದ್ದರಿಂದ ಶಾಲೆಗಳನ್ನು ಆರಂಭಿಸುವುದಕ್ಕೆ ಲಸಿಕೆಗಳನ್ನು ಕಾಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸಮಿತಿ ಹೇಳಿದೆ.

ಕೇವಲ ಶೇಕಡ 15 ರಷ್ಟು ಗ್ರಾಮೀಣ ಕುಟುಂಬಗಳಲ್ಲಿ ಮಾತ್ರ ಇಂಟರ್ನೆಟ್ ವ್ಯವಸ್ಥೆಯಿದೆ. ಆನ್‌ ಲೈನ್‌ ಮೂಲಕ ಶಿಕ್ಷಣ ಪಡೆಯಲು ಸಾಧ್ಯವಾಗದಿರುವುದರಿಂದ ಅನೇಕ ವಿದ್ಯಾರ್ಥಿಗಳು ಅಸಹಾಯಕತೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಅನೇಕ ಪ್ರಕರಣಗಳು ಕೂಡಾ ವರದಿಯಾಗಿವೆ. ಸರ್ಕಾರಿ ಶಾಲೆಯಲ್ಲಿ ಕಲಿಸುತ್ತಿರುವ ಶೇಕಡ 75 ರಷ್ಟು ಪಾಲಕರು ತಮ್ಮ ಮಕ್ಕಳಿಗೆ ತಂತ್ರಜ್ಞಾನದ ಮೂಲಕ ಶಿಕ್ಷಣ ಒದಗಿಸಲು ಸಾಧ್ಯವಾಗದೆ ಪರಿತಪಿಸುತ್ತಿದ್ದಾರೆ ಎಂದು ಪಾಲಕರ ಕಷ್ಟವನ್ನು ಬಹಿರಂಗ ಪತ್ರದಲ್ಲಿ ತಿಳಿಸಲಾಗಿದೆ.

ಅಂಗನವಾಡಿಯಿಂದ 12ನೇ ತರಗತಿಯವರೆಗೆ ಎಲ್ಲಾ ಶಾಲೆಗಳನ್ನು ಡಿಸೆಂಬರ್ 15ರೊಳಗಾಗಿ ಪೂರ್ಣ ಪ್ರಮಾಣದಲ್ಲಿ ಆರಂಭಿಸಬೇಕು. ಡಿಸೆಂಬರ್ 15ಕ್ಕೆ ಆರಂಭಿಸಿದರೆ ಜೂನ್ ಮಧ್ಯದವರೆಗೆ ಈ 2020-2021 ಶೈಕ್ಷಣಿಕ ವರ್ಷವೆಂದು ಶಾಲೆಗಳನ್ನು ನಡೆಸಿ 180 ದಿನಗಳ ಕಾಲಾವಕಾಶದಲ್ಲಿ ಎಲ್ಲಾ ಪಾಠಗಳನ್ನು ಬೋಧಿಸಬೇಕು.  ಶೈಕ್ಷಣಿಕ ವರ್ಷವನ್ನು ಡಿಸೆಂಬರ್ 15, 2020ರಿಂದ ಜೂನ್ 15, 2021 ಎಂದು ಪರಿಗಣಿಸಬೇಕೆಂದೂ, ಆ ಬಳಿಕ ಪರೀಕ್ಷೆಗಳನ್ನು ನಡೆಸಿ, ಜುಲೈ 2021ರಿಂದ ಮುಂದಿನ ಶೈಕ್ಷಣಿಕ ವರ್ಷವನ್ನು ಆರಂಭಿಸಬೇಕೆಂದೂ ಪತ್ರದಲ್ಲಿ ಆಗ್ರಹಿಸಲಾಗಿದೆ.

ಕೊರೊನಾ ಸೋಂಕಿನಿಂದ ತೊಂದರೆಗೀಡಾಗುವ ಅಪಾಯವು ಹೆಚ್ಚಿರುವ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಾದ ಎಲ್ಲಾ ನೆರವನ್ನು ಒದಗಿಸುವುದಕ್ಕೆ ಸರ್ಕಾರವು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ.

ಅಲ್ಲದೇ ನೂರಾರು ವಿದ್ಯಾರ್ಥಿಗಳು ನಮ್ಮ ಶಾಲೆಗಳನ್ನು ಆರಂಭಿಸಿ ಎಂದು ಪ್ಲೆಕಾರ್ಡ್ ಹಿಡಿದು ಆಗ್ರಹಿಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಬೇಗನೇ ಶಾಲೆ ಆರಂಭಿಸಿ ಎಂದು ಮಕ್ಕಳು ಅಭಿಯಾನ ಕೈಗೊಂಡಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು.

ಮೊಹಿದ್ದೀನ್ ಕುಟ್ಟಿ, ವಿ ಎಂ ನಾರಾಯಣ ಸ್ವಾಮಿ, ಜ್ಯೋತಿ ಕೆ, ವಾಸುದೇವ ರೆಡ್ಡಿ ಕೆ, ಸರೋವರ್ ಬೆಂಕೀಕೆರೆ, ಡಾ.ಶ್ರೀನಿವಾಸ್, ತೋಳಿ ಭರಮಣ್ಣ, ತಿಪ್ಪೇಸ್ವಾಮಿ ಕೆಟಿ, ಡಾ. ನಿರಂಜನಾರಾಧ್ಯ ವಿಪಿ, ಡಾ॥ ಶ್ರೀನಿವಾಸ ಕಕ್ಕಿಲ್ಲಾಯ, ಡಾ. ಸಿದ್ದನಗೌಡ ಪಾಟೀಲ, ಡಾ. ವಡ್ಡಗೆರೆ ನಾಗರಾಜಯ್ಯ, ಶ್ರೀಪಾದ ಭಟ್, ಡಾ. ಬಿಆರ್ ಮಂಜುನಾಥ್, ಬಿ.ಆರ್ ಭಾಸ್ಕರ್ ಪ್ರಸಾದ್, ಡಾ.ಕೆಎಸ್ ಜನಾರ್ಧನ, ಡಾ॥ ಹೆಚ್ ಜಿ ಜಯಲಕ್ಷ್ಮಿ, ಡಾ॥ ಪಿವಿ ಭಂಡಾರಿ, ಡಾ॥ ವಾಣಿ ಕೋರಿ, ಡಾ॥ ಬಾಲಸರಸ್ವತಿ, ಡಾ॥ ಭಾನು ಪ್ರಕಾಶ್ ಎಎಸ್, ರಾಜಾರಾಂ ತಲ್ಲೂರು, ಜಿ ರವಿ, ಪಾರ್ಥಸಾರಥಿ ಕೆಎಸ್, ಭಾರತಿ ಪ್ರಶಾಂತ್ ಮುಂತಾದವರು ಬಹಿರಂಗ ಪತ್ರಕ್ಕೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ಡಿಸೆಂಬರ್ ಅಂತ್ಯದವರೆಗೂ ಶಾಲೆಗಳ ಆರಂಭ ಇಲ್ಲ: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...