Homeಕರೋನಾ ತಲ್ಲಣಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಶೇಕಡ 15 ರಷ್ಟು ಗ್ರಾಮೀಣ ಕುಟುಂಬಗಳಲ್ಲಿ ಮಾತ್ರ ಇಂಟರ್ನೆಟ್ ವ್ಯವಸ್ಥೆಯಿದೆ. ಆನ್‌ಲೈನ್‌ ಮೂಲಕ ಶಿಕ್ಷಣ ಪಡೆಯಲು ಸಾಧ್ಯವಾಗದೆ ಅನೇಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಅನೇಕ ಪ್ರಕರಣಗಳು ವರದಿಯಾಗಿವೆ.

- Advertisement -
- Advertisement -

ಮಕ್ಕಳ ರಕ್ಷಣೆ ಮತ್ತು ಶಿಕ್ಷಣಕ್ಕಾಗಿ ಡಿಸೆಂಬರ್ 15ರೊಳಗೆ ಕರ್ನಾಟಕದ ಎಲ್ಲಾ ಶಾಲೆಗಳನ್ನು ತೆರೆಯಲೇಬೇಕು ಎಂದು ಆಗ್ರಹಿಸಿ ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿಯು ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ ಬರೆದು ಮನವಿ ಮಾಡಿದೆ.

ರಾಜ್ಯದಲ್ಲಿ ಸೆಪ್ಟೆಂಬರ್ ಬಳಿಕ ಕೊರೊನಾ ಸೋಂಕಿನ ಹರಡುವಿಕೆಯು ಗಣನೀಯವಾಗಿ ಇಳಿದಿದ್ದರೂ, ಮಾರ್ಚ್ ತಿಂಗಳಿನಿಂದಲೇ ಮುಚ್ಚಿದ ಶಾಲೆ-ಕಾಲೇಜುಗಳನ್ನು ಪುನರಾರಂಭಿಸದಿರುವ ರಾಜ್ಯ ಸರ್ಕಾರದ ನಿರ್ಧರವನ್ನು ಖಂಡಿಸಿ ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿ ಶಿಕ್ಷಣ ಸಚಿವರಿಗೆ ಪತ್ರ ಬರೆದಿದೆ.

ಕಳೆದ 3-4 ತಿಂಗಳಲ್ಲಿ ಸಾರ್ವಜನಿಕ ಚಟುವಟಿಕೆಗಳಿಗೆಲ್ಲ ಅನುವು ಮಾಡಲಾಗಿದೆ. ಪ್ರಯಾಣ, ಹೋಟೆಲ್, ಬಾರುಗಳು, ಮಾರುಕಟ್ಟೆಗಳು, ದೊಡ್ಡ ದೊಡ್ಡ ಮಾಲ್‌ಗಳು, ಸಭೆ-ಸಮಾರಂಭಗಳು, ಸಾರ್ವಜನಿಕ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮಗಳು, ಚುನಾವಣಾ ಪ್ರಚಾರ ಮುಂತಾದ ಎಲ್ಲಾ ಚಟುವಟಿಕೆಗಳಿಗೆ ಮುಕ್ತ ಅವಕಾಶವನ್ನು ನೀಡಲಾಗಿದೆ. ಕೊರೋನ ಸೋಂಕು ವ್ಯಾಪಕವಾಗಿಯೂ, ಕ್ಷಿಪ್ರವಾಗಿಯೂ ಹರಡುತ್ತಿದ್ದ ಮೇ-ಜುಲೈ ಅವಧಿಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳನ್ನೂ, ಸಿಇಟಿ, ನೀಟ್ ಇತ್ಯಾದಿ ಪರೀಕ್ಷೆಗಳನ್ನೂ ಯಶಸ್ವಿಯಾಗಿ ನಡೆಸಲಾಗಿದ್ದು, ಅದರಿಂದ ವಿದ್ಯಾರ್ಥಿಗಳಿಗಾಗಲೀ, ಶಿಕ್ಷಕರಿಗಾಗಲೀ ಯಾವುದೇ ಸಮಸ್ಯೆಗಳಾಗಿಲ್ಲ ಎಂದು ಸರ್ಕಾರ ತಿಳಿಸಿದೆ. ಹಾಗಾದರೆ ಶಾಲೆ ಆರಂಭಕ್ಕೆ ಏಕೆ ತಡೆ ಎಂದು ಸಮಿತಿ ಕಿಡಿಕಾರಿದೆ.

ಇದನ್ನೂ ಓದಿ: ‘ಆನ್‌ಲೈನ್ ತರಗತಿ ಮತ್ತು ಆನ್‌ಲೈನ್ ಶಿಕ್ಷಣ ಬೇಡ’ – ಸಾಮಾನ್ಯ ಖಾಸಗಿ ಶಾಲೆಗಳ ಮನವಿ!

ಕೊರೊನಾ ಸಂದರ್ಭದಲ್ಲಿ ಮಕ್ಕಳ ಕಲಿಕೆಯನ್ನು ನಿರಂತರವಾಗಿರಿಸಲು, ತಂತ್ರಜ್ಞಾನದ ಲಭ್ಯತೆಯಿಲ್ಲದ  ಗ್ರಾಮೀಣ ಭಾಗದ ಮಕ್ಕಳಿಗೆ ಸಹಾಯ ಮಾಡುವ ಉದ್ದೇಶದಿಂದ ತಜ್ಞರ ಸಮಿತಿಯ ಶಿಫಾರಸ್ಸನ್ನು ಆಧರಿಸಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗಾಗಿ ವಿದ್ಯಾಗಮ ಆರಂಭಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಕ್ಕಳು, ಪಾಲಕರು, ಶಿಕ್ಷಕರು, ಸಮುದಾಯ ಮತ್ತು ಹಲವು ಸಂಘಟನೆಗಳು ಸಕ್ರಿಯವಾಗಿ ತೊಡಗಿಸಿಕೊಂಡಿದ್ದವು. ಆದರೆ, ಮಾಧ್ಯಮಗಳು, ಅದರಲ್ಲೂ ವಿಶೇಷವಾಗಿ ಎಲೆಕ್ಟ್ರಾನಿಕ್‌ ಮಾಧ್ಯಮಗಳು ಸೃಷ್ಟಿಸಿದ ತಪ್ಪು ತಿಳುವಳಿಕೆ, ಅವೈಜ್ಞಾನಿಕ ವಿಶ್ಲೇಷಣೆ, ಭಾವಾನಾತ್ಮಕ ಗದ್ದಲದ ನಡುವೆ, ಏಕಪಕ್ಷೀಯವಾಗಿ, ಏಕಾಏಕಿಯಾಗಿ ತೀರ್ಮಾನಿಸಿ ಅದನ್ನು ನಿಲ್ಲಿಸಲಾಯಿತು ಎಂದು ಸಚಿವರಿಗೆ ಬರೆದ ಪತ್ರದಲ್ಲಿ ದೂರಲಾಗಿದೆ.

ಕೊರೊನಾ ಸೋಂಕು ಹೆಚ್ಚಾಗಿ ಹರಡಬಲ್ಲ ಎಲ್ಲ ವಹಿವಾಟು-ಕಾರ್ಯಕ್ರಮಗಳಿಗೆ ಅವಕಾಶ ನೀಡಿ, ಕೇವಲ ಶಾಲೆಗಳನ್ನಷ್ಟೇ ಮುಚ್ಚಿ, ಅತ್ಯಂತ ಕೆಳಸ್ತರದ ಅವಕಾಶವಂಚಿತ ಸಮುದಾಯದ ಮಕ್ಕಳಿಗಿದ್ದ  ಕಾರ್ಯಕ್ರಮಗಳನ್ನಷ್ಟೇ ನಿಲ್ಲಿಸಿ, ಸರ್ಕಾರಿ ಶಾಲೆಗಳನ್ನು ಮುಚ್ಚಿ, ಬಹುಸಂಖ್ಯಾತ ಬಡ ಮಕ್ಕಳಿಗೆ ಬಳಸಲಿಕ್ಕಾಗದ, ಆನ್ ಲೈನ್ ಶಿಕ್ಷಣಕ್ಕೆ ಒತ್ತು ನೀಡಿರುವುದು ದೊಡ್ಡ ಹುನ್ನಾರ ಮತ್ತು ಲಾಬಿಯಿದೆಯೆಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಆನ್‌ಲೈನ್
PC: 7News

ಶಾಲೆಗಳನ್ನು ಧೀರ್ಘಕಾಲ ಮುಚ್ಚಿರುವುದರಿಂದ 3 ರಿಂದ 20 ವರ್ಷದ ಎಲ್ಲರ ಮೇಲೂ ಶಾಶ್ವತವಾದ ಹಾನಿಯುಂಟು ಮಾಡಲಿದೆ ಎಂಬುದನ್ನು ವಿಶ್ವದ ಎಲ್ಲಾ ಉನ್ನತ ಸಂಸ್ಥೆಗಳೂ, ಮಾನವ ಹಕ್ಕುಗಳ ಸಂಘಟನೆಗಳೂ, ತಜ್ಞರೂ ಏಕಾಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಶಾಲೆಗಳನ್ನು ಶೀಫ್ರವೇ ಪುನರಾರಂಭಿಸಬೇಕು ಎಂದು ಸಚಿವರಿಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ದೀಪಾವಳಿ ನಂತರ ಶಾಲೆ ಹಾಗೂ ದೇವಾಲಯ ರೀ ಓಪನ್!

ದಿನಕ್ಕೆ 2 ಗಂಟೆಗೂ ಹೆಚ್ಚು ಕಾಲ ಫೋನ್, ಟಿವಿ ಪರದೆ ನೋಡುತ್ತಿದ್ದರೆ 3-5 ವರ್ಷದ ಮಕ್ಕಳ ಭಾಷೆ, ಬರವಣಿಗೆ, ಗ್ರಹಿಕೆಗಳು ಕುಗ್ಗುತ್ತವೆ. 5 ರಿಂದ 7 ಗಂಟೆ ಅವುಗಳನ್ನು ಬಳಸಿದರೆ ಮಿದುಳಿನ ಬೆಳವಣಿಗೆಯೇ ಕುಂಠಿತಗೊಂದು ಮಿದುಳು ತೆಳ್ಳಗಾಗಿ ಶಾಶ್ವತ ಹಾನಿಯಾಗುತ್ತದೆಂದೂ ಅಧ್ಯಯನಗಳು ತೋರಿಸಿವೆ ಎಂಬ ವಿಚಾರವನ್ನು ಬಹಿರಂಗ ಪತ್ರದಲ್ಲಿ ಬರೆಯಲಾಗಿದೆ.

ಕೊರೊನಾ ಸೋಂಕಿನ ಲಸಿಕೆಗಳು ಬರುವವರೆಗೆ ಶಾಲೆಗಳನ್ನು ತೆರೆಯಬಾರದು ಎಂಬ ವಾದವನ್ನು ಮಾಧ್ಯಮಗಳು ಈಗಾಗಲೇ ಹರಡಿವೆ. ಇದು ತೀರಾ ಅಸಂಬದ್ಧವಾಗಿದೆ. ಕೊರೊನಾ ಲಸಿಕೆಗಳು ಬರುವುದಕ್ಕೆ ಇನ್ನೂ ತಿಂಗಳುಗಳು ಬೇಕು. ಬಂದರೂ ದೇಶಗಳಲ್ಲಾಗಲೀ, ವಿದೇಶದಲ್ಲಾಗಲಿ ಮಕ್ಕಳಿಗೆ ಲಸಿಕೆ ನೀಡುವ ಪ್ರಸ್ತಾವವೇ ಇಲ್ಲ. ಮಕ್ಕಳಿಗೆ ಕೊರೊನಾ ಬಾಧಿಸುವುದಿಲ್ಲ ಎಂದ ಮೇಲೆ ಅವರಿಗೆ ಅವುಗಳ ಅಗತ್ಯವೂ ಇಲ್ಲ. ಆದ್ದರಿಂದ ಶಾಲೆಗಳನ್ನು ಆರಂಭಿಸುವುದಕ್ಕೆ ಲಸಿಕೆಗಳನ್ನು ಕಾಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸಮಿತಿ ಹೇಳಿದೆ.

ಕೇವಲ ಶೇಕಡ 15 ರಷ್ಟು ಗ್ರಾಮೀಣ ಕುಟುಂಬಗಳಲ್ಲಿ ಮಾತ್ರ ಇಂಟರ್ನೆಟ್ ವ್ಯವಸ್ಥೆಯಿದೆ. ಆನ್‌ ಲೈನ್‌ ಮೂಲಕ ಶಿಕ್ಷಣ ಪಡೆಯಲು ಸಾಧ್ಯವಾಗದಿರುವುದರಿಂದ ಅನೇಕ ವಿದ್ಯಾರ್ಥಿಗಳು ಅಸಹಾಯಕತೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಅನೇಕ ಪ್ರಕರಣಗಳು ಕೂಡಾ ವರದಿಯಾಗಿವೆ. ಸರ್ಕಾರಿ ಶಾಲೆಯಲ್ಲಿ ಕಲಿಸುತ್ತಿರುವ ಶೇಕಡ 75 ರಷ್ಟು ಪಾಲಕರು ತಮ್ಮ ಮಕ್ಕಳಿಗೆ ತಂತ್ರಜ್ಞಾನದ ಮೂಲಕ ಶಿಕ್ಷಣ ಒದಗಿಸಲು ಸಾಧ್ಯವಾಗದೆ ಪರಿತಪಿಸುತ್ತಿದ್ದಾರೆ ಎಂದು ಪಾಲಕರ ಕಷ್ಟವನ್ನು ಬಹಿರಂಗ ಪತ್ರದಲ್ಲಿ ತಿಳಿಸಲಾಗಿದೆ.

ಅಂಗನವಾಡಿಯಿಂದ 12ನೇ ತರಗತಿಯವರೆಗೆ ಎಲ್ಲಾ ಶಾಲೆಗಳನ್ನು ಡಿಸೆಂಬರ್ 15ರೊಳಗಾಗಿ ಪೂರ್ಣ ಪ್ರಮಾಣದಲ್ಲಿ ಆರಂಭಿಸಬೇಕು. ಡಿಸೆಂಬರ್ 15ಕ್ಕೆ ಆರಂಭಿಸಿದರೆ ಜೂನ್ ಮಧ್ಯದವರೆಗೆ ಈ 2020-2021 ಶೈಕ್ಷಣಿಕ ವರ್ಷವೆಂದು ಶಾಲೆಗಳನ್ನು ನಡೆಸಿ 180 ದಿನಗಳ ಕಾಲಾವಕಾಶದಲ್ಲಿ ಎಲ್ಲಾ ಪಾಠಗಳನ್ನು ಬೋಧಿಸಬೇಕು.  ಶೈಕ್ಷಣಿಕ ವರ್ಷವನ್ನು ಡಿಸೆಂಬರ್ 15, 2020ರಿಂದ ಜೂನ್ 15, 2021 ಎಂದು ಪರಿಗಣಿಸಬೇಕೆಂದೂ, ಆ ಬಳಿಕ ಪರೀಕ್ಷೆಗಳನ್ನು ನಡೆಸಿ, ಜುಲೈ 2021ರಿಂದ ಮುಂದಿನ ಶೈಕ್ಷಣಿಕ ವರ್ಷವನ್ನು ಆರಂಭಿಸಬೇಕೆಂದೂ ಪತ್ರದಲ್ಲಿ ಆಗ್ರಹಿಸಲಾಗಿದೆ.

ಕೊರೊನಾ ಸೋಂಕಿನಿಂದ ತೊಂದರೆಗೀಡಾಗುವ ಅಪಾಯವು ಹೆಚ್ಚಿರುವ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಾದ ಎಲ್ಲಾ ನೆರವನ್ನು ಒದಗಿಸುವುದಕ್ಕೆ ಸರ್ಕಾರವು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ.

ಅಲ್ಲದೇ ನೂರಾರು ವಿದ್ಯಾರ್ಥಿಗಳು ನಮ್ಮ ಶಾಲೆಗಳನ್ನು ಆರಂಭಿಸಿ ಎಂದು ಪ್ಲೆಕಾರ್ಡ್ ಹಿಡಿದು ಆಗ್ರಹಿಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಬೇಗನೇ ಶಾಲೆ ಆರಂಭಿಸಿ ಎಂದು ಮಕ್ಕಳು ಅಭಿಯಾನ ಕೈಗೊಂಡಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು.

ಮೊಹಿದ್ದೀನ್ ಕುಟ್ಟಿ, ವಿ ಎಂ ನಾರಾಯಣ ಸ್ವಾಮಿ, ಜ್ಯೋತಿ ಕೆ, ವಾಸುದೇವ ರೆಡ್ಡಿ ಕೆ, ಸರೋವರ್ ಬೆಂಕೀಕೆರೆ, ಡಾ.ಶ್ರೀನಿವಾಸ್, ತೋಳಿ ಭರಮಣ್ಣ, ತಿಪ್ಪೇಸ್ವಾಮಿ ಕೆಟಿ, ಡಾ. ನಿರಂಜನಾರಾಧ್ಯ ವಿಪಿ, ಡಾ॥ ಶ್ರೀನಿವಾಸ ಕಕ್ಕಿಲ್ಲಾಯ, ಡಾ. ಸಿದ್ದನಗೌಡ ಪಾಟೀಲ, ಡಾ. ವಡ್ಡಗೆರೆ ನಾಗರಾಜಯ್ಯ, ಶ್ರೀಪಾದ ಭಟ್, ಡಾ. ಬಿಆರ್ ಮಂಜುನಾಥ್, ಬಿ.ಆರ್ ಭಾಸ್ಕರ್ ಪ್ರಸಾದ್, ಡಾ.ಕೆಎಸ್ ಜನಾರ್ಧನ, ಡಾ॥ ಹೆಚ್ ಜಿ ಜಯಲಕ್ಷ್ಮಿ, ಡಾ॥ ಪಿವಿ ಭಂಡಾರಿ, ಡಾ॥ ವಾಣಿ ಕೋರಿ, ಡಾ॥ ಬಾಲಸರಸ್ವತಿ, ಡಾ॥ ಭಾನು ಪ್ರಕಾಶ್ ಎಎಸ್, ರಾಜಾರಾಂ ತಲ್ಲೂರು, ಜಿ ರವಿ, ಪಾರ್ಥಸಾರಥಿ ಕೆಎಸ್, ಭಾರತಿ ಪ್ರಶಾಂತ್ ಮುಂತಾದವರು ಬಹಿರಂಗ ಪತ್ರಕ್ಕೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ಡಿಸೆಂಬರ್ ಅಂತ್ಯದವರೆಗೂ ಶಾಲೆಗಳ ಆರಂಭ ಇಲ್ಲ: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...