Homeಕರೋನಾ ತಲ್ಲಣಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಶೇಕಡ 15 ರಷ್ಟು ಗ್ರಾಮೀಣ ಕುಟುಂಬಗಳಲ್ಲಿ ಮಾತ್ರ ಇಂಟರ್ನೆಟ್ ವ್ಯವಸ್ಥೆಯಿದೆ. ಆನ್‌ಲೈನ್‌ ಮೂಲಕ ಶಿಕ್ಷಣ ಪಡೆಯಲು ಸಾಧ್ಯವಾಗದೆ ಅನೇಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಅನೇಕ ಪ್ರಕರಣಗಳು ವರದಿಯಾಗಿವೆ.

- Advertisement -
- Advertisement -

ಮಕ್ಕಳ ರಕ್ಷಣೆ ಮತ್ತು ಶಿಕ್ಷಣಕ್ಕಾಗಿ ಡಿಸೆಂಬರ್ 15ರೊಳಗೆ ಕರ್ನಾಟಕದ ಎಲ್ಲಾ ಶಾಲೆಗಳನ್ನು ತೆರೆಯಲೇಬೇಕು ಎಂದು ಆಗ್ರಹಿಸಿ ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿಯು ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ ಬರೆದು ಮನವಿ ಮಾಡಿದೆ.

ರಾಜ್ಯದಲ್ಲಿ ಸೆಪ್ಟೆಂಬರ್ ಬಳಿಕ ಕೊರೊನಾ ಸೋಂಕಿನ ಹರಡುವಿಕೆಯು ಗಣನೀಯವಾಗಿ ಇಳಿದಿದ್ದರೂ, ಮಾರ್ಚ್ ತಿಂಗಳಿನಿಂದಲೇ ಮುಚ್ಚಿದ ಶಾಲೆ-ಕಾಲೇಜುಗಳನ್ನು ಪುನರಾರಂಭಿಸದಿರುವ ರಾಜ್ಯ ಸರ್ಕಾರದ ನಿರ್ಧರವನ್ನು ಖಂಡಿಸಿ ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿ ಶಿಕ್ಷಣ ಸಚಿವರಿಗೆ ಪತ್ರ ಬರೆದಿದೆ.

ಕಳೆದ 3-4 ತಿಂಗಳಲ್ಲಿ ಸಾರ್ವಜನಿಕ ಚಟುವಟಿಕೆಗಳಿಗೆಲ್ಲ ಅನುವು ಮಾಡಲಾಗಿದೆ. ಪ್ರಯಾಣ, ಹೋಟೆಲ್, ಬಾರುಗಳು, ಮಾರುಕಟ್ಟೆಗಳು, ದೊಡ್ಡ ದೊಡ್ಡ ಮಾಲ್‌ಗಳು, ಸಭೆ-ಸಮಾರಂಭಗಳು, ಸಾರ್ವಜನಿಕ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮಗಳು, ಚುನಾವಣಾ ಪ್ರಚಾರ ಮುಂತಾದ ಎಲ್ಲಾ ಚಟುವಟಿಕೆಗಳಿಗೆ ಮುಕ್ತ ಅವಕಾಶವನ್ನು ನೀಡಲಾಗಿದೆ. ಕೊರೋನ ಸೋಂಕು ವ್ಯಾಪಕವಾಗಿಯೂ, ಕ್ಷಿಪ್ರವಾಗಿಯೂ ಹರಡುತ್ತಿದ್ದ ಮೇ-ಜುಲೈ ಅವಧಿಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳನ್ನೂ, ಸಿಇಟಿ, ನೀಟ್ ಇತ್ಯಾದಿ ಪರೀಕ್ಷೆಗಳನ್ನೂ ಯಶಸ್ವಿಯಾಗಿ ನಡೆಸಲಾಗಿದ್ದು, ಅದರಿಂದ ವಿದ್ಯಾರ್ಥಿಗಳಿಗಾಗಲೀ, ಶಿಕ್ಷಕರಿಗಾಗಲೀ ಯಾವುದೇ ಸಮಸ್ಯೆಗಳಾಗಿಲ್ಲ ಎಂದು ಸರ್ಕಾರ ತಿಳಿಸಿದೆ. ಹಾಗಾದರೆ ಶಾಲೆ ಆರಂಭಕ್ಕೆ ಏಕೆ ತಡೆ ಎಂದು ಸಮಿತಿ ಕಿಡಿಕಾರಿದೆ.

ಇದನ್ನೂ ಓದಿ: ‘ಆನ್‌ಲೈನ್ ತರಗತಿ ಮತ್ತು ಆನ್‌ಲೈನ್ ಶಿಕ್ಷಣ ಬೇಡ’ – ಸಾಮಾನ್ಯ ಖಾಸಗಿ ಶಾಲೆಗಳ ಮನವಿ!

ಕೊರೊನಾ ಸಂದರ್ಭದಲ್ಲಿ ಮಕ್ಕಳ ಕಲಿಕೆಯನ್ನು ನಿರಂತರವಾಗಿರಿಸಲು, ತಂತ್ರಜ್ಞಾನದ ಲಭ್ಯತೆಯಿಲ್ಲದ  ಗ್ರಾಮೀಣ ಭಾಗದ ಮಕ್ಕಳಿಗೆ ಸಹಾಯ ಮಾಡುವ ಉದ್ದೇಶದಿಂದ ತಜ್ಞರ ಸಮಿತಿಯ ಶಿಫಾರಸ್ಸನ್ನು ಆಧರಿಸಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗಾಗಿ ವಿದ್ಯಾಗಮ ಆರಂಭಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಕ್ಕಳು, ಪಾಲಕರು, ಶಿಕ್ಷಕರು, ಸಮುದಾಯ ಮತ್ತು ಹಲವು ಸಂಘಟನೆಗಳು ಸಕ್ರಿಯವಾಗಿ ತೊಡಗಿಸಿಕೊಂಡಿದ್ದವು. ಆದರೆ, ಮಾಧ್ಯಮಗಳು, ಅದರಲ್ಲೂ ವಿಶೇಷವಾಗಿ ಎಲೆಕ್ಟ್ರಾನಿಕ್‌ ಮಾಧ್ಯಮಗಳು ಸೃಷ್ಟಿಸಿದ ತಪ್ಪು ತಿಳುವಳಿಕೆ, ಅವೈಜ್ಞಾನಿಕ ವಿಶ್ಲೇಷಣೆ, ಭಾವಾನಾತ್ಮಕ ಗದ್ದಲದ ನಡುವೆ, ಏಕಪಕ್ಷೀಯವಾಗಿ, ಏಕಾಏಕಿಯಾಗಿ ತೀರ್ಮಾನಿಸಿ ಅದನ್ನು ನಿಲ್ಲಿಸಲಾಯಿತು ಎಂದು ಸಚಿವರಿಗೆ ಬರೆದ ಪತ್ರದಲ್ಲಿ ದೂರಲಾಗಿದೆ.

ಕೊರೊನಾ ಸೋಂಕು ಹೆಚ್ಚಾಗಿ ಹರಡಬಲ್ಲ ಎಲ್ಲ ವಹಿವಾಟು-ಕಾರ್ಯಕ್ರಮಗಳಿಗೆ ಅವಕಾಶ ನೀಡಿ, ಕೇವಲ ಶಾಲೆಗಳನ್ನಷ್ಟೇ ಮುಚ್ಚಿ, ಅತ್ಯಂತ ಕೆಳಸ್ತರದ ಅವಕಾಶವಂಚಿತ ಸಮುದಾಯದ ಮಕ್ಕಳಿಗಿದ್ದ  ಕಾರ್ಯಕ್ರಮಗಳನ್ನಷ್ಟೇ ನಿಲ್ಲಿಸಿ, ಸರ್ಕಾರಿ ಶಾಲೆಗಳನ್ನು ಮುಚ್ಚಿ, ಬಹುಸಂಖ್ಯಾತ ಬಡ ಮಕ್ಕಳಿಗೆ ಬಳಸಲಿಕ್ಕಾಗದ, ಆನ್ ಲೈನ್ ಶಿಕ್ಷಣಕ್ಕೆ ಒತ್ತು ನೀಡಿರುವುದು ದೊಡ್ಡ ಹುನ್ನಾರ ಮತ್ತು ಲಾಬಿಯಿದೆಯೆಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಆನ್‌ಲೈನ್
PC: 7News

ಶಾಲೆಗಳನ್ನು ಧೀರ್ಘಕಾಲ ಮುಚ್ಚಿರುವುದರಿಂದ 3 ರಿಂದ 20 ವರ್ಷದ ಎಲ್ಲರ ಮೇಲೂ ಶಾಶ್ವತವಾದ ಹಾನಿಯುಂಟು ಮಾಡಲಿದೆ ಎಂಬುದನ್ನು ವಿಶ್ವದ ಎಲ್ಲಾ ಉನ್ನತ ಸಂಸ್ಥೆಗಳೂ, ಮಾನವ ಹಕ್ಕುಗಳ ಸಂಘಟನೆಗಳೂ, ತಜ್ಞರೂ ಏಕಾಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಶಾಲೆಗಳನ್ನು ಶೀಫ್ರವೇ ಪುನರಾರಂಭಿಸಬೇಕು ಎಂದು ಸಚಿವರಿಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ದೀಪಾವಳಿ ನಂತರ ಶಾಲೆ ಹಾಗೂ ದೇವಾಲಯ ರೀ ಓಪನ್!

ದಿನಕ್ಕೆ 2 ಗಂಟೆಗೂ ಹೆಚ್ಚು ಕಾಲ ಫೋನ್, ಟಿವಿ ಪರದೆ ನೋಡುತ್ತಿದ್ದರೆ 3-5 ವರ್ಷದ ಮಕ್ಕಳ ಭಾಷೆ, ಬರವಣಿಗೆ, ಗ್ರಹಿಕೆಗಳು ಕುಗ್ಗುತ್ತವೆ. 5 ರಿಂದ 7 ಗಂಟೆ ಅವುಗಳನ್ನು ಬಳಸಿದರೆ ಮಿದುಳಿನ ಬೆಳವಣಿಗೆಯೇ ಕುಂಠಿತಗೊಂದು ಮಿದುಳು ತೆಳ್ಳಗಾಗಿ ಶಾಶ್ವತ ಹಾನಿಯಾಗುತ್ತದೆಂದೂ ಅಧ್ಯಯನಗಳು ತೋರಿಸಿವೆ ಎಂಬ ವಿಚಾರವನ್ನು ಬಹಿರಂಗ ಪತ್ರದಲ್ಲಿ ಬರೆಯಲಾಗಿದೆ.

ಕೊರೊನಾ ಸೋಂಕಿನ ಲಸಿಕೆಗಳು ಬರುವವರೆಗೆ ಶಾಲೆಗಳನ್ನು ತೆರೆಯಬಾರದು ಎಂಬ ವಾದವನ್ನು ಮಾಧ್ಯಮಗಳು ಈಗಾಗಲೇ ಹರಡಿವೆ. ಇದು ತೀರಾ ಅಸಂಬದ್ಧವಾಗಿದೆ. ಕೊರೊನಾ ಲಸಿಕೆಗಳು ಬರುವುದಕ್ಕೆ ಇನ್ನೂ ತಿಂಗಳುಗಳು ಬೇಕು. ಬಂದರೂ ದೇಶಗಳಲ್ಲಾಗಲೀ, ವಿದೇಶದಲ್ಲಾಗಲಿ ಮಕ್ಕಳಿಗೆ ಲಸಿಕೆ ನೀಡುವ ಪ್ರಸ್ತಾವವೇ ಇಲ್ಲ. ಮಕ್ಕಳಿಗೆ ಕೊರೊನಾ ಬಾಧಿಸುವುದಿಲ್ಲ ಎಂದ ಮೇಲೆ ಅವರಿಗೆ ಅವುಗಳ ಅಗತ್ಯವೂ ಇಲ್ಲ. ಆದ್ದರಿಂದ ಶಾಲೆಗಳನ್ನು ಆರಂಭಿಸುವುದಕ್ಕೆ ಲಸಿಕೆಗಳನ್ನು ಕಾಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸಮಿತಿ ಹೇಳಿದೆ.

ಕೇವಲ ಶೇಕಡ 15 ರಷ್ಟು ಗ್ರಾಮೀಣ ಕುಟುಂಬಗಳಲ್ಲಿ ಮಾತ್ರ ಇಂಟರ್ನೆಟ್ ವ್ಯವಸ್ಥೆಯಿದೆ. ಆನ್‌ ಲೈನ್‌ ಮೂಲಕ ಶಿಕ್ಷಣ ಪಡೆಯಲು ಸಾಧ್ಯವಾಗದಿರುವುದರಿಂದ ಅನೇಕ ವಿದ್ಯಾರ್ಥಿಗಳು ಅಸಹಾಯಕತೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಅನೇಕ ಪ್ರಕರಣಗಳು ಕೂಡಾ ವರದಿಯಾಗಿವೆ. ಸರ್ಕಾರಿ ಶಾಲೆಯಲ್ಲಿ ಕಲಿಸುತ್ತಿರುವ ಶೇಕಡ 75 ರಷ್ಟು ಪಾಲಕರು ತಮ್ಮ ಮಕ್ಕಳಿಗೆ ತಂತ್ರಜ್ಞಾನದ ಮೂಲಕ ಶಿಕ್ಷಣ ಒದಗಿಸಲು ಸಾಧ್ಯವಾಗದೆ ಪರಿತಪಿಸುತ್ತಿದ್ದಾರೆ ಎಂದು ಪಾಲಕರ ಕಷ್ಟವನ್ನು ಬಹಿರಂಗ ಪತ್ರದಲ್ಲಿ ತಿಳಿಸಲಾಗಿದೆ.

ಅಂಗನವಾಡಿಯಿಂದ 12ನೇ ತರಗತಿಯವರೆಗೆ ಎಲ್ಲಾ ಶಾಲೆಗಳನ್ನು ಡಿಸೆಂಬರ್ 15ರೊಳಗಾಗಿ ಪೂರ್ಣ ಪ್ರಮಾಣದಲ್ಲಿ ಆರಂಭಿಸಬೇಕು. ಡಿಸೆಂಬರ್ 15ಕ್ಕೆ ಆರಂಭಿಸಿದರೆ ಜೂನ್ ಮಧ್ಯದವರೆಗೆ ಈ 2020-2021 ಶೈಕ್ಷಣಿಕ ವರ್ಷವೆಂದು ಶಾಲೆಗಳನ್ನು ನಡೆಸಿ 180 ದಿನಗಳ ಕಾಲಾವಕಾಶದಲ್ಲಿ ಎಲ್ಲಾ ಪಾಠಗಳನ್ನು ಬೋಧಿಸಬೇಕು.  ಶೈಕ್ಷಣಿಕ ವರ್ಷವನ್ನು ಡಿಸೆಂಬರ್ 15, 2020ರಿಂದ ಜೂನ್ 15, 2021 ಎಂದು ಪರಿಗಣಿಸಬೇಕೆಂದೂ, ಆ ಬಳಿಕ ಪರೀಕ್ಷೆಗಳನ್ನು ನಡೆಸಿ, ಜುಲೈ 2021ರಿಂದ ಮುಂದಿನ ಶೈಕ್ಷಣಿಕ ವರ್ಷವನ್ನು ಆರಂಭಿಸಬೇಕೆಂದೂ ಪತ್ರದಲ್ಲಿ ಆಗ್ರಹಿಸಲಾಗಿದೆ.

ಕೊರೊನಾ ಸೋಂಕಿನಿಂದ ತೊಂದರೆಗೀಡಾಗುವ ಅಪಾಯವು ಹೆಚ್ಚಿರುವ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಾದ ಎಲ್ಲಾ ನೆರವನ್ನು ಒದಗಿಸುವುದಕ್ಕೆ ಸರ್ಕಾರವು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ.

ಅಲ್ಲದೇ ನೂರಾರು ವಿದ್ಯಾರ್ಥಿಗಳು ನಮ್ಮ ಶಾಲೆಗಳನ್ನು ಆರಂಭಿಸಿ ಎಂದು ಪ್ಲೆಕಾರ್ಡ್ ಹಿಡಿದು ಆಗ್ರಹಿಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಬೇಗನೇ ಶಾಲೆ ಆರಂಭಿಸಿ ಎಂದು ಮಕ್ಕಳು ಅಭಿಯಾನ ಕೈಗೊಂಡಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು.

ಮೊಹಿದ್ದೀನ್ ಕುಟ್ಟಿ, ವಿ ಎಂ ನಾರಾಯಣ ಸ್ವಾಮಿ, ಜ್ಯೋತಿ ಕೆ, ವಾಸುದೇವ ರೆಡ್ಡಿ ಕೆ, ಸರೋವರ್ ಬೆಂಕೀಕೆರೆ, ಡಾ.ಶ್ರೀನಿವಾಸ್, ತೋಳಿ ಭರಮಣ್ಣ, ತಿಪ್ಪೇಸ್ವಾಮಿ ಕೆಟಿ, ಡಾ. ನಿರಂಜನಾರಾಧ್ಯ ವಿಪಿ, ಡಾ॥ ಶ್ರೀನಿವಾಸ ಕಕ್ಕಿಲ್ಲಾಯ, ಡಾ. ಸಿದ್ದನಗೌಡ ಪಾಟೀಲ, ಡಾ. ವಡ್ಡಗೆರೆ ನಾಗರಾಜಯ್ಯ, ಶ್ರೀಪಾದ ಭಟ್, ಡಾ. ಬಿಆರ್ ಮಂಜುನಾಥ್, ಬಿ.ಆರ್ ಭಾಸ್ಕರ್ ಪ್ರಸಾದ್, ಡಾ.ಕೆಎಸ್ ಜನಾರ್ಧನ, ಡಾ॥ ಹೆಚ್ ಜಿ ಜಯಲಕ್ಷ್ಮಿ, ಡಾ॥ ಪಿವಿ ಭಂಡಾರಿ, ಡಾ॥ ವಾಣಿ ಕೋರಿ, ಡಾ॥ ಬಾಲಸರಸ್ವತಿ, ಡಾ॥ ಭಾನು ಪ್ರಕಾಶ್ ಎಎಸ್, ರಾಜಾರಾಂ ತಲ್ಲೂರು, ಜಿ ರವಿ, ಪಾರ್ಥಸಾರಥಿ ಕೆಎಸ್, ಭಾರತಿ ಪ್ರಶಾಂತ್ ಮುಂತಾದವರು ಬಹಿರಂಗ ಪತ್ರಕ್ಕೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ಡಿಸೆಂಬರ್ ಅಂತ್ಯದವರೆಗೂ ಶಾಲೆಗಳ ಆರಂಭ ಇಲ್ಲ: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...