Homeಕರ್ನಾಟಕಸಮೀಕ್ಷೆ ಆರಂಭಿಸಿದ ಕರ್ನಾಟಕ ವಕ್ಫ್ ಬೋರ್ಡ್ | 90 ಸಾವಿರ ಎಕರೆ ಒತ್ತುವರಿ ಆರೋಪ

ಸಮೀಕ್ಷೆ ಆರಂಭಿಸಿದ ಕರ್ನಾಟಕ ವಕ್ಫ್ ಬೋರ್ಡ್ | 90 ಸಾವಿರ ಎಕರೆ ಒತ್ತುವರಿ ಆರೋಪ

- Advertisement -
- Advertisement -

ಕೇಂದ್ರ ಸರ್ಕಾರವು ವಕ್ಫ್ ಮಸೂದೆಗೆ ಸುಧಾರಣೆಗಳನ್ನು ತರಲು ಪ್ರಯತ್ನಿಸುತ್ತಿರುವ ಮತ್ತು ಸಂಸದೀಯ ಸಮಿತಿಯು ತಿದ್ದುಪಡಿಗಳನ್ನು ಪರಿಶೀಲಿಸುತ್ತಿರುವ ಸಮಯದಲ್ಲೆ, ಕರ್ನಾಟಕ ರಾಜ್ಯ ಔಕಾಫ್ ಮಂಡಳಿಯು ಅದರ ಆಸ್ತಿಗಳ ಸಮೀಕ್ಷೆ ಮತ್ತು ಗೆಜೆಟ್ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ತನ್ನ ಸ್ವಾಧೀನದಲ್ಲಿರುವ 1,07,651 ಎಕರೆ ಭೂಮಿಯಲ್ಲಿ, 90,000 ಎಕರೆ ಭೂಮಿಯ ವ್ಯಾಜ್ಯ ವಿವಿಧ ನ್ಯಾಯಾಲಯಗಳಲ್ಲಿ ಇವೆ ಎಂದು ಮಂಡಳಿಯ ಅಂಕಿಅಂಶಗಳ ಹೇಳುತ್ತವೆ. ವಕ್ಫ್ ಬೋರ್ಡ್‌ನಿಂದ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕರ್ನಾಟಕ ಸ್ಟೇಟ್ ಬೋರ್ಡ್ ಆಫ್ ಔಕಾಫ್‌ನ ಅಧ್ಯಕ್ಷ ಕೆ. ಅನ್ವರ್ ಬಾಷಾ ಅವರು ಮಾತನಾಡಿ, “ಸದ್ಯ, ಮಂಡಳಿಯು ತನ್ನ ಸ್ವಾಧೀನದಲ್ಲಿ 1,07,651 ಎಕರೆ ಭೂಮಿಯನ್ನು ಹೊಂದಿದೆ. ಆದರೆ ಈ ಆಸ್ತಿಗಳ ಪಾಲಕರು ಅವುಗಳನ್ನು ಬಳಸುತ್ತಿರುವ 40,840 ಸಂಸ್ಥೆಗಳು. ಭೂಮಿ ಅವರಿಗೆ ಸೇರಿದ್ದು” ಎಂದು ಹೇಳಿದ್ದಾರೆ.

ಈ ಹಿಂದೆ ಮಂಡಳಿಯು 1.10 ಲಕ್ಷ ಎಕರೆಗೂ ಹೆಚ್ಚು ಭೂಮಿ ಹೊಂದಿತ್ತು. ಆದರೆ ಇನಾಮ್ ನಿರ್ಮೂಲನೆ ಕಾಯ್ದೆ, ಭೂಸುಧಾರಣಾ ಕಾಯ್ದೆ ಸೇರಿದಂತೆ ವಿವಿಧ ಭೂಸುಧಾರಣೆಗಳಿಂದಾಗಿ ಹಲವು ಎಕರೆಗಳು ನಷ್ಟವಾಗಿವೆ. “ಜನರು 1828 ರಿಂದಲೂ ವಕ್ಫ್ ಮಂಡಳಿಗೆ ಭೂಮಿಯನ್ನು ದಾನ ಮಾಡಲು ಪ್ರಾರಂಭಿಸಿದ್ದರು” ಎಂದು ಅವರು ಹೇಳಿದ್ದಾರೆ.ವಕ್ಫ್ ಬೋರ್ಡ್‌ನಿಂದ ಸಮೀಕ್ಷೆ

“ಆಲಮಟ್ಟಿ ಅಣೆಕಟ್ಟು ಮತ್ತು ಇತರ ಯೋಜನೆಗಳಂತಹ ವಿವಿಧ ಯೋಜನೆಗಳಿಗಾಗಿ ಮಂಡಳಿಯು 75,000 ಎಕರೆಗಳನ್ನು ಸರ್ಕಾರಕ್ಕೆ ನೀಡಿತ್ತು. ಅದರಲ್ಲಿ ನಮಗೆ ಸೂಕ್ತ ಪರಿಹಾರ ನೀಡಲಾಗಿದೆ. ಈಗ ನಾವು ವ್ಯಾಜ್ಯದಲ್ಲಿರುವ 90,000 ಎಕರೆಗೆ ಬದಲಾಗಿ ಪರಿಹಾರ ಅಥವಾ ಭೂಮಿಯನ್ನು ಕೇಳುತ್ತಿದ್ದೇವೆ” ಎಂದು ಹೆಸರು ಹೇಳಲು ಇಚ್ಛಿಸದ ಮಂಡಳಿಯ ಮತ್ತೊಬ್ಬ ಸದಸ್ಯರು ಹೇಳಿದ್ದಾರೆ. ಹಸ್ತಾಂತರಿಸಿದ ಭೂಮಿಯನ್ನು ದರ್ಗಾ, ಮಸೀದಿ, ಸ್ಮಶಾನ ಮತ್ತು ಇತರ ಸೌಲಭ್ಯಗಳನ್ನು ಸ್ಥಾಪಿಸಲು ಬಳಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಕಾನೂನು ರೀತಿಯ ಹೋರಾಟದ ಜತೆಗೆ ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ: ಸಿಎಂ ಸಿದ್ದರಾಮಯ್ಯ

ವಕ್ಫ್ ಭೂಮಿಗೆ ಜಿಯೋ ಟ್ಯಾಗ್: ಸರ್ಕಾರಿ ಅಧಿಕಾರಿ

ಎಲ್ಲಾ ವಕ್ಫ್ ಆಸ್ತಿಗಳ ಮೊದಲ ಸಮೀಕ್ಷೆಯನ್ನು 1972-73 ರಲ್ಲಿ ಮಾಡಲಾಯಿತು, ಎರಡನೇ ಸರ್ವೆ 2020 ರಲ್ಲಿ ಪೂರ್ಣಗೊಂಡಿತ್ತು. ವಕ್ಫ್ ಮಂಡಳಿ ಹೊಂದಿರುವ ಯಾವುದೇ ಭೂಮಿ ಸರ್ಕಾರ ಮಂಡಳಿಗೆ ನೀಡಿದ್ದಲ್ಲ. ಈ ಎಲ್ಲಾ ಭೂಮಿ ಜನರು ವಿವಿಧ ಉದ್ದೇಶಗಳಿಗಾಗಿ ದಾನ ಮಂಡಳಿಗೆ ಮಾಡಿದ್ದಾರೆ. ಈಗ ಹೆಚ್ಚಿನ ದೇಣಿಗೆಯೊಂದಿಗೆ, ಎಲ್ಲಾ ಆಸ್ತಿಗಳ ಮರು ಸಮೀಕ್ಷೆಯನ್ನು ಮಾಡಲಾಗುತ್ತದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯ ಮತ್ತು ಮಂಡಳಿಯ ಸಿಇಒ ಜಿಲಾನಿ ಮೊಕಾಶಿ ಹೇಳಿದ್ದಾರೆ.

ಆದರೆ, ಮಂಡಳಿಯು ಪಟ್ಟಿ ಮಾಡಿರುವ ಭೂಮಿಯ ವಿವರಗಳು ಕಂದಾಯ ಇಲಾಖೆಗಿಂತ ಭಿನ್ನವಾಗಿವೆ. ಕಂದಾಯ ಇಲಾಖೆಯ ಭೂಮಿ ಆ್ಯಪ್‌ನ ಮಾಹಿತಿಯಂತೆ ರಾಜ್ಯದಲ್ಲಿ 3,454.6 ಎಕರೆ ಭೂಮಿಯನ್ನು ವಕ್ಫ್ ಭೂಮಿ ಎಂದು ಗುರುತಿಸಲಾಗಿದೆ. ದಾಖಲೆಗಳನ್ನು ಪರಿಶೀಲಿಸಲು ಜಮೀನುಗಳ ವಿವರವಾದ ಸಮೀಕ್ಷೆ ಮತ್ತು ಜಿಯೋ ಟ್ಯಾಗ್ ಮಾಡಲಾಗುತ್ತಿದೆ ಎಂದು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ವಕ್ಫ್ ಆಸ್ತಿ ದೇವರ ಆಸ್ತಿ ಮತ್ತು ಅದನ್ನು ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ. ಸ್ಮಶಾನ ಬಿಟ್ಟರೆ ಸರ್ಕಾರ ಮಂಡಳಿಗೆ ಬೇರಾವುದೇ ಭೂಮಿ ನೀಡಿಲ್ಲ” ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಇತ್ತಿಚೆಗೆ ಹೇಳಿದ್ದರು. ಅನೇಕ ದಾನಿಗಳು ಕಾಲೇಜುಗಳು ಮತ್ತು ಆಸ್ಪತ್ರೆಗಳ ನಿರ್ಮಾಣಕ್ಕಾಗಿ ಭೂಮಿಯನ್ನು ದಾನ ಮಾಡಲು ಸಿದ್ಧರಿದ್ದಾರೆ ಎಂದು ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ಮೀಸಲಾತಿ ಅವರಪ್ಪನ ಮನೆಯ ಸ್ವತ್ತಲ್ಲ: ಮಾವಳ್ಳಿ ಶಂಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...