Homeಕರ್ನಾಟಕಸಮೀಕ್ಷೆ ಆರಂಭಿಸಿದ ಕರ್ನಾಟಕ ವಕ್ಫ್ ಬೋರ್ಡ್ | 90 ಸಾವಿರ ಎಕರೆ ಒತ್ತುವರಿ ಆರೋಪ

ಸಮೀಕ್ಷೆ ಆರಂಭಿಸಿದ ಕರ್ನಾಟಕ ವಕ್ಫ್ ಬೋರ್ಡ್ | 90 ಸಾವಿರ ಎಕರೆ ಒತ್ತುವರಿ ಆರೋಪ

- Advertisement -
- Advertisement -

ಕೇಂದ್ರ ಸರ್ಕಾರವು ವಕ್ಫ್ ಮಸೂದೆಗೆ ಸುಧಾರಣೆಗಳನ್ನು ತರಲು ಪ್ರಯತ್ನಿಸುತ್ತಿರುವ ಮತ್ತು ಸಂಸದೀಯ ಸಮಿತಿಯು ತಿದ್ದುಪಡಿಗಳನ್ನು ಪರಿಶೀಲಿಸುತ್ತಿರುವ ಸಮಯದಲ್ಲೆ, ಕರ್ನಾಟಕ ರಾಜ್ಯ ಔಕಾಫ್ ಮಂಡಳಿಯು ಅದರ ಆಸ್ತಿಗಳ ಸಮೀಕ್ಷೆ ಮತ್ತು ಗೆಜೆಟ್ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ತನ್ನ ಸ್ವಾಧೀನದಲ್ಲಿರುವ 1,07,651 ಎಕರೆ ಭೂಮಿಯಲ್ಲಿ, 90,000 ಎಕರೆ ಭೂಮಿಯ ವ್ಯಾಜ್ಯ ವಿವಿಧ ನ್ಯಾಯಾಲಯಗಳಲ್ಲಿ ಇವೆ ಎಂದು ಮಂಡಳಿಯ ಅಂಕಿಅಂಶಗಳ ಹೇಳುತ್ತವೆ. ವಕ್ಫ್ ಬೋರ್ಡ್‌ನಿಂದ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕರ್ನಾಟಕ ಸ್ಟೇಟ್ ಬೋರ್ಡ್ ಆಫ್ ಔಕಾಫ್‌ನ ಅಧ್ಯಕ್ಷ ಕೆ. ಅನ್ವರ್ ಬಾಷಾ ಅವರು ಮಾತನಾಡಿ, “ಸದ್ಯ, ಮಂಡಳಿಯು ತನ್ನ ಸ್ವಾಧೀನದಲ್ಲಿ 1,07,651 ಎಕರೆ ಭೂಮಿಯನ್ನು ಹೊಂದಿದೆ. ಆದರೆ ಈ ಆಸ್ತಿಗಳ ಪಾಲಕರು ಅವುಗಳನ್ನು ಬಳಸುತ್ತಿರುವ 40,840 ಸಂಸ್ಥೆಗಳು. ಭೂಮಿ ಅವರಿಗೆ ಸೇರಿದ್ದು” ಎಂದು ಹೇಳಿದ್ದಾರೆ.

ಈ ಹಿಂದೆ ಮಂಡಳಿಯು 1.10 ಲಕ್ಷ ಎಕರೆಗೂ ಹೆಚ್ಚು ಭೂಮಿ ಹೊಂದಿತ್ತು. ಆದರೆ ಇನಾಮ್ ನಿರ್ಮೂಲನೆ ಕಾಯ್ದೆ, ಭೂಸುಧಾರಣಾ ಕಾಯ್ದೆ ಸೇರಿದಂತೆ ವಿವಿಧ ಭೂಸುಧಾರಣೆಗಳಿಂದಾಗಿ ಹಲವು ಎಕರೆಗಳು ನಷ್ಟವಾಗಿವೆ. “ಜನರು 1828 ರಿಂದಲೂ ವಕ್ಫ್ ಮಂಡಳಿಗೆ ಭೂಮಿಯನ್ನು ದಾನ ಮಾಡಲು ಪ್ರಾರಂಭಿಸಿದ್ದರು” ಎಂದು ಅವರು ಹೇಳಿದ್ದಾರೆ.ವಕ್ಫ್ ಬೋರ್ಡ್‌ನಿಂದ ಸಮೀಕ್ಷೆ

“ಆಲಮಟ್ಟಿ ಅಣೆಕಟ್ಟು ಮತ್ತು ಇತರ ಯೋಜನೆಗಳಂತಹ ವಿವಿಧ ಯೋಜನೆಗಳಿಗಾಗಿ ಮಂಡಳಿಯು 75,000 ಎಕರೆಗಳನ್ನು ಸರ್ಕಾರಕ್ಕೆ ನೀಡಿತ್ತು. ಅದರಲ್ಲಿ ನಮಗೆ ಸೂಕ್ತ ಪರಿಹಾರ ನೀಡಲಾಗಿದೆ. ಈಗ ನಾವು ವ್ಯಾಜ್ಯದಲ್ಲಿರುವ 90,000 ಎಕರೆಗೆ ಬದಲಾಗಿ ಪರಿಹಾರ ಅಥವಾ ಭೂಮಿಯನ್ನು ಕೇಳುತ್ತಿದ್ದೇವೆ” ಎಂದು ಹೆಸರು ಹೇಳಲು ಇಚ್ಛಿಸದ ಮಂಡಳಿಯ ಮತ್ತೊಬ್ಬ ಸದಸ್ಯರು ಹೇಳಿದ್ದಾರೆ. ಹಸ್ತಾಂತರಿಸಿದ ಭೂಮಿಯನ್ನು ದರ್ಗಾ, ಮಸೀದಿ, ಸ್ಮಶಾನ ಮತ್ತು ಇತರ ಸೌಲಭ್ಯಗಳನ್ನು ಸ್ಥಾಪಿಸಲು ಬಳಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಕಾನೂನು ರೀತಿಯ ಹೋರಾಟದ ಜತೆಗೆ ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ: ಸಿಎಂ ಸಿದ್ದರಾಮಯ್ಯ

ವಕ್ಫ್ ಭೂಮಿಗೆ ಜಿಯೋ ಟ್ಯಾಗ್: ಸರ್ಕಾರಿ ಅಧಿಕಾರಿ

ಎಲ್ಲಾ ವಕ್ಫ್ ಆಸ್ತಿಗಳ ಮೊದಲ ಸಮೀಕ್ಷೆಯನ್ನು 1972-73 ರಲ್ಲಿ ಮಾಡಲಾಯಿತು, ಎರಡನೇ ಸರ್ವೆ 2020 ರಲ್ಲಿ ಪೂರ್ಣಗೊಂಡಿತ್ತು. ವಕ್ಫ್ ಮಂಡಳಿ ಹೊಂದಿರುವ ಯಾವುದೇ ಭೂಮಿ ಸರ್ಕಾರ ಮಂಡಳಿಗೆ ನೀಡಿದ್ದಲ್ಲ. ಈ ಎಲ್ಲಾ ಭೂಮಿ ಜನರು ವಿವಿಧ ಉದ್ದೇಶಗಳಿಗಾಗಿ ದಾನ ಮಂಡಳಿಗೆ ಮಾಡಿದ್ದಾರೆ. ಈಗ ಹೆಚ್ಚಿನ ದೇಣಿಗೆಯೊಂದಿಗೆ, ಎಲ್ಲಾ ಆಸ್ತಿಗಳ ಮರು ಸಮೀಕ್ಷೆಯನ್ನು ಮಾಡಲಾಗುತ್ತದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯ ಮತ್ತು ಮಂಡಳಿಯ ಸಿಇಒ ಜಿಲಾನಿ ಮೊಕಾಶಿ ಹೇಳಿದ್ದಾರೆ.

ಆದರೆ, ಮಂಡಳಿಯು ಪಟ್ಟಿ ಮಾಡಿರುವ ಭೂಮಿಯ ವಿವರಗಳು ಕಂದಾಯ ಇಲಾಖೆಗಿಂತ ಭಿನ್ನವಾಗಿವೆ. ಕಂದಾಯ ಇಲಾಖೆಯ ಭೂಮಿ ಆ್ಯಪ್‌ನ ಮಾಹಿತಿಯಂತೆ ರಾಜ್ಯದಲ್ಲಿ 3,454.6 ಎಕರೆ ಭೂಮಿಯನ್ನು ವಕ್ಫ್ ಭೂಮಿ ಎಂದು ಗುರುತಿಸಲಾಗಿದೆ. ದಾಖಲೆಗಳನ್ನು ಪರಿಶೀಲಿಸಲು ಜಮೀನುಗಳ ವಿವರವಾದ ಸಮೀಕ್ಷೆ ಮತ್ತು ಜಿಯೋ ಟ್ಯಾಗ್ ಮಾಡಲಾಗುತ್ತಿದೆ ಎಂದು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ವಕ್ಫ್ ಆಸ್ತಿ ದೇವರ ಆಸ್ತಿ ಮತ್ತು ಅದನ್ನು ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ. ಸ್ಮಶಾನ ಬಿಟ್ಟರೆ ಸರ್ಕಾರ ಮಂಡಳಿಗೆ ಬೇರಾವುದೇ ಭೂಮಿ ನೀಡಿಲ್ಲ” ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಇತ್ತಿಚೆಗೆ ಹೇಳಿದ್ದರು. ಅನೇಕ ದಾನಿಗಳು ಕಾಲೇಜುಗಳು ಮತ್ತು ಆಸ್ಪತ್ರೆಗಳ ನಿರ್ಮಾಣಕ್ಕಾಗಿ ಭೂಮಿಯನ್ನು ದಾನ ಮಾಡಲು ಸಿದ್ಧರಿದ್ದಾರೆ ಎಂದು ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ಮೀಸಲಾತಿ ಅವರಪ್ಪನ ಮನೆಯ ಸ್ವತ್ತಲ್ಲ: ಮಾವಳ್ಳಿ ಶಂಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...