Homeಕರ್ನಾಟಕಸಮೀಕ್ಷೆ ಆರಂಭಿಸಿದ ಕರ್ನಾಟಕ ವಕ್ಫ್ ಬೋರ್ಡ್ | 90 ಸಾವಿರ ಎಕರೆ ಒತ್ತುವರಿ ಆರೋಪ

ಸಮೀಕ್ಷೆ ಆರಂಭಿಸಿದ ಕರ್ನಾಟಕ ವಕ್ಫ್ ಬೋರ್ಡ್ | 90 ಸಾವಿರ ಎಕರೆ ಒತ್ತುವರಿ ಆರೋಪ

- Advertisement -
- Advertisement -

ಕೇಂದ್ರ ಸರ್ಕಾರವು ವಕ್ಫ್ ಮಸೂದೆಗೆ ಸುಧಾರಣೆಗಳನ್ನು ತರಲು ಪ್ರಯತ್ನಿಸುತ್ತಿರುವ ಮತ್ತು ಸಂಸದೀಯ ಸಮಿತಿಯು ತಿದ್ದುಪಡಿಗಳನ್ನು ಪರಿಶೀಲಿಸುತ್ತಿರುವ ಸಮಯದಲ್ಲೆ, ಕರ್ನಾಟಕ ರಾಜ್ಯ ಔಕಾಫ್ ಮಂಡಳಿಯು ಅದರ ಆಸ್ತಿಗಳ ಸಮೀಕ್ಷೆ ಮತ್ತು ಗೆಜೆಟ್ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ತನ್ನ ಸ್ವಾಧೀನದಲ್ಲಿರುವ 1,07,651 ಎಕರೆ ಭೂಮಿಯಲ್ಲಿ, 90,000 ಎಕರೆ ಭೂಮಿಯ ವ್ಯಾಜ್ಯ ವಿವಿಧ ನ್ಯಾಯಾಲಯಗಳಲ್ಲಿ ಇವೆ ಎಂದು ಮಂಡಳಿಯ ಅಂಕಿಅಂಶಗಳ ಹೇಳುತ್ತವೆ. ವಕ್ಫ್ ಬೋರ್ಡ್‌ನಿಂದ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕರ್ನಾಟಕ ಸ್ಟೇಟ್ ಬೋರ್ಡ್ ಆಫ್ ಔಕಾಫ್‌ನ ಅಧ್ಯಕ್ಷ ಕೆ. ಅನ್ವರ್ ಬಾಷಾ ಅವರು ಮಾತನಾಡಿ, “ಸದ್ಯ, ಮಂಡಳಿಯು ತನ್ನ ಸ್ವಾಧೀನದಲ್ಲಿ 1,07,651 ಎಕರೆ ಭೂಮಿಯನ್ನು ಹೊಂದಿದೆ. ಆದರೆ ಈ ಆಸ್ತಿಗಳ ಪಾಲಕರು ಅವುಗಳನ್ನು ಬಳಸುತ್ತಿರುವ 40,840 ಸಂಸ್ಥೆಗಳು. ಭೂಮಿ ಅವರಿಗೆ ಸೇರಿದ್ದು” ಎಂದು ಹೇಳಿದ್ದಾರೆ.

ಈ ಹಿಂದೆ ಮಂಡಳಿಯು 1.10 ಲಕ್ಷ ಎಕರೆಗೂ ಹೆಚ್ಚು ಭೂಮಿ ಹೊಂದಿತ್ತು. ಆದರೆ ಇನಾಮ್ ನಿರ್ಮೂಲನೆ ಕಾಯ್ದೆ, ಭೂಸುಧಾರಣಾ ಕಾಯ್ದೆ ಸೇರಿದಂತೆ ವಿವಿಧ ಭೂಸುಧಾರಣೆಗಳಿಂದಾಗಿ ಹಲವು ಎಕರೆಗಳು ನಷ್ಟವಾಗಿವೆ. “ಜನರು 1828 ರಿಂದಲೂ ವಕ್ಫ್ ಮಂಡಳಿಗೆ ಭೂಮಿಯನ್ನು ದಾನ ಮಾಡಲು ಪ್ರಾರಂಭಿಸಿದ್ದರು” ಎಂದು ಅವರು ಹೇಳಿದ್ದಾರೆ.ವಕ್ಫ್ ಬೋರ್ಡ್‌ನಿಂದ ಸಮೀಕ್ಷೆ

“ಆಲಮಟ್ಟಿ ಅಣೆಕಟ್ಟು ಮತ್ತು ಇತರ ಯೋಜನೆಗಳಂತಹ ವಿವಿಧ ಯೋಜನೆಗಳಿಗಾಗಿ ಮಂಡಳಿಯು 75,000 ಎಕರೆಗಳನ್ನು ಸರ್ಕಾರಕ್ಕೆ ನೀಡಿತ್ತು. ಅದರಲ್ಲಿ ನಮಗೆ ಸೂಕ್ತ ಪರಿಹಾರ ನೀಡಲಾಗಿದೆ. ಈಗ ನಾವು ವ್ಯಾಜ್ಯದಲ್ಲಿರುವ 90,000 ಎಕರೆಗೆ ಬದಲಾಗಿ ಪರಿಹಾರ ಅಥವಾ ಭೂಮಿಯನ್ನು ಕೇಳುತ್ತಿದ್ದೇವೆ” ಎಂದು ಹೆಸರು ಹೇಳಲು ಇಚ್ಛಿಸದ ಮಂಡಳಿಯ ಮತ್ತೊಬ್ಬ ಸದಸ್ಯರು ಹೇಳಿದ್ದಾರೆ. ಹಸ್ತಾಂತರಿಸಿದ ಭೂಮಿಯನ್ನು ದರ್ಗಾ, ಮಸೀದಿ, ಸ್ಮಶಾನ ಮತ್ತು ಇತರ ಸೌಲಭ್ಯಗಳನ್ನು ಸ್ಥಾಪಿಸಲು ಬಳಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಕಾನೂನು ರೀತಿಯ ಹೋರಾಟದ ಜತೆಗೆ ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ: ಸಿಎಂ ಸಿದ್ದರಾಮಯ್ಯ

ವಕ್ಫ್ ಭೂಮಿಗೆ ಜಿಯೋ ಟ್ಯಾಗ್: ಸರ್ಕಾರಿ ಅಧಿಕಾರಿ

ಎಲ್ಲಾ ವಕ್ಫ್ ಆಸ್ತಿಗಳ ಮೊದಲ ಸಮೀಕ್ಷೆಯನ್ನು 1972-73 ರಲ್ಲಿ ಮಾಡಲಾಯಿತು, ಎರಡನೇ ಸರ್ವೆ 2020 ರಲ್ಲಿ ಪೂರ್ಣಗೊಂಡಿತ್ತು. ವಕ್ಫ್ ಮಂಡಳಿ ಹೊಂದಿರುವ ಯಾವುದೇ ಭೂಮಿ ಸರ್ಕಾರ ಮಂಡಳಿಗೆ ನೀಡಿದ್ದಲ್ಲ. ಈ ಎಲ್ಲಾ ಭೂಮಿ ಜನರು ವಿವಿಧ ಉದ್ದೇಶಗಳಿಗಾಗಿ ದಾನ ಮಂಡಳಿಗೆ ಮಾಡಿದ್ದಾರೆ. ಈಗ ಹೆಚ್ಚಿನ ದೇಣಿಗೆಯೊಂದಿಗೆ, ಎಲ್ಲಾ ಆಸ್ತಿಗಳ ಮರು ಸಮೀಕ್ಷೆಯನ್ನು ಮಾಡಲಾಗುತ್ತದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯ ಮತ್ತು ಮಂಡಳಿಯ ಸಿಇಒ ಜಿಲಾನಿ ಮೊಕಾಶಿ ಹೇಳಿದ್ದಾರೆ.

ಆದರೆ, ಮಂಡಳಿಯು ಪಟ್ಟಿ ಮಾಡಿರುವ ಭೂಮಿಯ ವಿವರಗಳು ಕಂದಾಯ ಇಲಾಖೆಗಿಂತ ಭಿನ್ನವಾಗಿವೆ. ಕಂದಾಯ ಇಲಾಖೆಯ ಭೂಮಿ ಆ್ಯಪ್‌ನ ಮಾಹಿತಿಯಂತೆ ರಾಜ್ಯದಲ್ಲಿ 3,454.6 ಎಕರೆ ಭೂಮಿಯನ್ನು ವಕ್ಫ್ ಭೂಮಿ ಎಂದು ಗುರುತಿಸಲಾಗಿದೆ. ದಾಖಲೆಗಳನ್ನು ಪರಿಶೀಲಿಸಲು ಜಮೀನುಗಳ ವಿವರವಾದ ಸಮೀಕ್ಷೆ ಮತ್ತು ಜಿಯೋ ಟ್ಯಾಗ್ ಮಾಡಲಾಗುತ್ತಿದೆ ಎಂದು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ವಕ್ಫ್ ಆಸ್ತಿ ದೇವರ ಆಸ್ತಿ ಮತ್ತು ಅದನ್ನು ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ. ಸ್ಮಶಾನ ಬಿಟ್ಟರೆ ಸರ್ಕಾರ ಮಂಡಳಿಗೆ ಬೇರಾವುದೇ ಭೂಮಿ ನೀಡಿಲ್ಲ” ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಇತ್ತಿಚೆಗೆ ಹೇಳಿದ್ದರು. ಅನೇಕ ದಾನಿಗಳು ಕಾಲೇಜುಗಳು ಮತ್ತು ಆಸ್ಪತ್ರೆಗಳ ನಿರ್ಮಾಣಕ್ಕಾಗಿ ಭೂಮಿಯನ್ನು ದಾನ ಮಾಡಲು ಸಿದ್ಧರಿದ್ದಾರೆ ಎಂದು ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ಮೀಸಲಾತಿ ಅವರಪ್ಪನ ಮನೆಯ ಸ್ವತ್ತಲ್ಲ: ಮಾವಳ್ಳಿ ಶಂಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...