Homeಕರ್ನಾಟಕಸಮೀಕ್ಷೆ ಆರಂಭಿಸಿದ ಕರ್ನಾಟಕ ವಕ್ಫ್ ಬೋರ್ಡ್ | 90 ಸಾವಿರ ಎಕರೆ ಒತ್ತುವರಿ ಆರೋಪ

ಸಮೀಕ್ಷೆ ಆರಂಭಿಸಿದ ಕರ್ನಾಟಕ ವಕ್ಫ್ ಬೋರ್ಡ್ | 90 ಸಾವಿರ ಎಕರೆ ಒತ್ತುವರಿ ಆರೋಪ

- Advertisement -
- Advertisement -

ಕೇಂದ್ರ ಸರ್ಕಾರವು ವಕ್ಫ್ ಮಸೂದೆಗೆ ಸುಧಾರಣೆಗಳನ್ನು ತರಲು ಪ್ರಯತ್ನಿಸುತ್ತಿರುವ ಮತ್ತು ಸಂಸದೀಯ ಸಮಿತಿಯು ತಿದ್ದುಪಡಿಗಳನ್ನು ಪರಿಶೀಲಿಸುತ್ತಿರುವ ಸಮಯದಲ್ಲೆ, ಕರ್ನಾಟಕ ರಾಜ್ಯ ಔಕಾಫ್ ಮಂಡಳಿಯು ಅದರ ಆಸ್ತಿಗಳ ಸಮೀಕ್ಷೆ ಮತ್ತು ಗೆಜೆಟ್ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ತನ್ನ ಸ್ವಾಧೀನದಲ್ಲಿರುವ 1,07,651 ಎಕರೆ ಭೂಮಿಯಲ್ಲಿ, 90,000 ಎಕರೆ ಭೂಮಿಯ ವ್ಯಾಜ್ಯ ವಿವಿಧ ನ್ಯಾಯಾಲಯಗಳಲ್ಲಿ ಇವೆ ಎಂದು ಮಂಡಳಿಯ ಅಂಕಿಅಂಶಗಳ ಹೇಳುತ್ತವೆ. ವಕ್ಫ್ ಬೋರ್ಡ್‌ನಿಂದ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕರ್ನಾಟಕ ಸ್ಟೇಟ್ ಬೋರ್ಡ್ ಆಫ್ ಔಕಾಫ್‌ನ ಅಧ್ಯಕ್ಷ ಕೆ. ಅನ್ವರ್ ಬಾಷಾ ಅವರು ಮಾತನಾಡಿ, “ಸದ್ಯ, ಮಂಡಳಿಯು ತನ್ನ ಸ್ವಾಧೀನದಲ್ಲಿ 1,07,651 ಎಕರೆ ಭೂಮಿಯನ್ನು ಹೊಂದಿದೆ. ಆದರೆ ಈ ಆಸ್ತಿಗಳ ಪಾಲಕರು ಅವುಗಳನ್ನು ಬಳಸುತ್ತಿರುವ 40,840 ಸಂಸ್ಥೆಗಳು. ಭೂಮಿ ಅವರಿಗೆ ಸೇರಿದ್ದು” ಎಂದು ಹೇಳಿದ್ದಾರೆ.

ಈ ಹಿಂದೆ ಮಂಡಳಿಯು 1.10 ಲಕ್ಷ ಎಕರೆಗೂ ಹೆಚ್ಚು ಭೂಮಿ ಹೊಂದಿತ್ತು. ಆದರೆ ಇನಾಮ್ ನಿರ್ಮೂಲನೆ ಕಾಯ್ದೆ, ಭೂಸುಧಾರಣಾ ಕಾಯ್ದೆ ಸೇರಿದಂತೆ ವಿವಿಧ ಭೂಸುಧಾರಣೆಗಳಿಂದಾಗಿ ಹಲವು ಎಕರೆಗಳು ನಷ್ಟವಾಗಿವೆ. “ಜನರು 1828 ರಿಂದಲೂ ವಕ್ಫ್ ಮಂಡಳಿಗೆ ಭೂಮಿಯನ್ನು ದಾನ ಮಾಡಲು ಪ್ರಾರಂಭಿಸಿದ್ದರು” ಎಂದು ಅವರು ಹೇಳಿದ್ದಾರೆ.ವಕ್ಫ್ ಬೋರ್ಡ್‌ನಿಂದ ಸಮೀಕ್ಷೆ

“ಆಲಮಟ್ಟಿ ಅಣೆಕಟ್ಟು ಮತ್ತು ಇತರ ಯೋಜನೆಗಳಂತಹ ವಿವಿಧ ಯೋಜನೆಗಳಿಗಾಗಿ ಮಂಡಳಿಯು 75,000 ಎಕರೆಗಳನ್ನು ಸರ್ಕಾರಕ್ಕೆ ನೀಡಿತ್ತು. ಅದರಲ್ಲಿ ನಮಗೆ ಸೂಕ್ತ ಪರಿಹಾರ ನೀಡಲಾಗಿದೆ. ಈಗ ನಾವು ವ್ಯಾಜ್ಯದಲ್ಲಿರುವ 90,000 ಎಕರೆಗೆ ಬದಲಾಗಿ ಪರಿಹಾರ ಅಥವಾ ಭೂಮಿಯನ್ನು ಕೇಳುತ್ತಿದ್ದೇವೆ” ಎಂದು ಹೆಸರು ಹೇಳಲು ಇಚ್ಛಿಸದ ಮಂಡಳಿಯ ಮತ್ತೊಬ್ಬ ಸದಸ್ಯರು ಹೇಳಿದ್ದಾರೆ. ಹಸ್ತಾಂತರಿಸಿದ ಭೂಮಿಯನ್ನು ದರ್ಗಾ, ಮಸೀದಿ, ಸ್ಮಶಾನ ಮತ್ತು ಇತರ ಸೌಲಭ್ಯಗಳನ್ನು ಸ್ಥಾಪಿಸಲು ಬಳಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಕಾನೂನು ರೀತಿಯ ಹೋರಾಟದ ಜತೆಗೆ ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ: ಸಿಎಂ ಸಿದ್ದರಾಮಯ್ಯ

ವಕ್ಫ್ ಭೂಮಿಗೆ ಜಿಯೋ ಟ್ಯಾಗ್: ಸರ್ಕಾರಿ ಅಧಿಕಾರಿ

ಎಲ್ಲಾ ವಕ್ಫ್ ಆಸ್ತಿಗಳ ಮೊದಲ ಸಮೀಕ್ಷೆಯನ್ನು 1972-73 ರಲ್ಲಿ ಮಾಡಲಾಯಿತು, ಎರಡನೇ ಸರ್ವೆ 2020 ರಲ್ಲಿ ಪೂರ್ಣಗೊಂಡಿತ್ತು. ವಕ್ಫ್ ಮಂಡಳಿ ಹೊಂದಿರುವ ಯಾವುದೇ ಭೂಮಿ ಸರ್ಕಾರ ಮಂಡಳಿಗೆ ನೀಡಿದ್ದಲ್ಲ. ಈ ಎಲ್ಲಾ ಭೂಮಿ ಜನರು ವಿವಿಧ ಉದ್ದೇಶಗಳಿಗಾಗಿ ದಾನ ಮಂಡಳಿಗೆ ಮಾಡಿದ್ದಾರೆ. ಈಗ ಹೆಚ್ಚಿನ ದೇಣಿಗೆಯೊಂದಿಗೆ, ಎಲ್ಲಾ ಆಸ್ತಿಗಳ ಮರು ಸಮೀಕ್ಷೆಯನ್ನು ಮಾಡಲಾಗುತ್ತದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯ ಮತ್ತು ಮಂಡಳಿಯ ಸಿಇಒ ಜಿಲಾನಿ ಮೊಕಾಶಿ ಹೇಳಿದ್ದಾರೆ.

ಆದರೆ, ಮಂಡಳಿಯು ಪಟ್ಟಿ ಮಾಡಿರುವ ಭೂಮಿಯ ವಿವರಗಳು ಕಂದಾಯ ಇಲಾಖೆಗಿಂತ ಭಿನ್ನವಾಗಿವೆ. ಕಂದಾಯ ಇಲಾಖೆಯ ಭೂಮಿ ಆ್ಯಪ್‌ನ ಮಾಹಿತಿಯಂತೆ ರಾಜ್ಯದಲ್ಲಿ 3,454.6 ಎಕರೆ ಭೂಮಿಯನ್ನು ವಕ್ಫ್ ಭೂಮಿ ಎಂದು ಗುರುತಿಸಲಾಗಿದೆ. ದಾಖಲೆಗಳನ್ನು ಪರಿಶೀಲಿಸಲು ಜಮೀನುಗಳ ವಿವರವಾದ ಸಮೀಕ್ಷೆ ಮತ್ತು ಜಿಯೋ ಟ್ಯಾಗ್ ಮಾಡಲಾಗುತ್ತಿದೆ ಎಂದು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ವಕ್ಫ್ ಆಸ್ತಿ ದೇವರ ಆಸ್ತಿ ಮತ್ತು ಅದನ್ನು ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ. ಸ್ಮಶಾನ ಬಿಟ್ಟರೆ ಸರ್ಕಾರ ಮಂಡಳಿಗೆ ಬೇರಾವುದೇ ಭೂಮಿ ನೀಡಿಲ್ಲ” ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಇತ್ತಿಚೆಗೆ ಹೇಳಿದ್ದರು. ಅನೇಕ ದಾನಿಗಳು ಕಾಲೇಜುಗಳು ಮತ್ತು ಆಸ್ಪತ್ರೆಗಳ ನಿರ್ಮಾಣಕ್ಕಾಗಿ ಭೂಮಿಯನ್ನು ದಾನ ಮಾಡಲು ಸಿದ್ಧರಿದ್ದಾರೆ ಎಂದು ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ಮೀಸಲಾತಿ ಅವರಪ್ಪನ ಮನೆಯ ಸ್ವತ್ತಲ್ಲ: ಮಾವಳ್ಳಿ ಶಂಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...