Homeಕರ್ನಾಟಕಸಮೀಕ್ಷೆ ಆರಂಭಿಸಿದ ಕರ್ನಾಟಕ ವಕ್ಫ್ ಬೋರ್ಡ್ | 90 ಸಾವಿರ ಎಕರೆ ಒತ್ತುವರಿ ಆರೋಪ

ಸಮೀಕ್ಷೆ ಆರಂಭಿಸಿದ ಕರ್ನಾಟಕ ವಕ್ಫ್ ಬೋರ್ಡ್ | 90 ಸಾವಿರ ಎಕರೆ ಒತ್ತುವರಿ ಆರೋಪ

- Advertisement -
- Advertisement -

ಕೇಂದ್ರ ಸರ್ಕಾರವು ವಕ್ಫ್ ಮಸೂದೆಗೆ ಸುಧಾರಣೆಗಳನ್ನು ತರಲು ಪ್ರಯತ್ನಿಸುತ್ತಿರುವ ಮತ್ತು ಸಂಸದೀಯ ಸಮಿತಿಯು ತಿದ್ದುಪಡಿಗಳನ್ನು ಪರಿಶೀಲಿಸುತ್ತಿರುವ ಸಮಯದಲ್ಲೆ, ಕರ್ನಾಟಕ ರಾಜ್ಯ ಔಕಾಫ್ ಮಂಡಳಿಯು ಅದರ ಆಸ್ತಿಗಳ ಸಮೀಕ್ಷೆ ಮತ್ತು ಗೆಜೆಟ್ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ತನ್ನ ಸ್ವಾಧೀನದಲ್ಲಿರುವ 1,07,651 ಎಕರೆ ಭೂಮಿಯಲ್ಲಿ, 90,000 ಎಕರೆ ಭೂಮಿಯ ವ್ಯಾಜ್ಯ ವಿವಿಧ ನ್ಯಾಯಾಲಯಗಳಲ್ಲಿ ಇವೆ ಎಂದು ಮಂಡಳಿಯ ಅಂಕಿಅಂಶಗಳ ಹೇಳುತ್ತವೆ. ವಕ್ಫ್ ಬೋರ್ಡ್‌ನಿಂದ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕರ್ನಾಟಕ ಸ್ಟೇಟ್ ಬೋರ್ಡ್ ಆಫ್ ಔಕಾಫ್‌ನ ಅಧ್ಯಕ್ಷ ಕೆ. ಅನ್ವರ್ ಬಾಷಾ ಅವರು ಮಾತನಾಡಿ, “ಸದ್ಯ, ಮಂಡಳಿಯು ತನ್ನ ಸ್ವಾಧೀನದಲ್ಲಿ 1,07,651 ಎಕರೆ ಭೂಮಿಯನ್ನು ಹೊಂದಿದೆ. ಆದರೆ ಈ ಆಸ್ತಿಗಳ ಪಾಲಕರು ಅವುಗಳನ್ನು ಬಳಸುತ್ತಿರುವ 40,840 ಸಂಸ್ಥೆಗಳು. ಭೂಮಿ ಅವರಿಗೆ ಸೇರಿದ್ದು” ಎಂದು ಹೇಳಿದ್ದಾರೆ.

ಈ ಹಿಂದೆ ಮಂಡಳಿಯು 1.10 ಲಕ್ಷ ಎಕರೆಗೂ ಹೆಚ್ಚು ಭೂಮಿ ಹೊಂದಿತ್ತು. ಆದರೆ ಇನಾಮ್ ನಿರ್ಮೂಲನೆ ಕಾಯ್ದೆ, ಭೂಸುಧಾರಣಾ ಕಾಯ್ದೆ ಸೇರಿದಂತೆ ವಿವಿಧ ಭೂಸುಧಾರಣೆಗಳಿಂದಾಗಿ ಹಲವು ಎಕರೆಗಳು ನಷ್ಟವಾಗಿವೆ. “ಜನರು 1828 ರಿಂದಲೂ ವಕ್ಫ್ ಮಂಡಳಿಗೆ ಭೂಮಿಯನ್ನು ದಾನ ಮಾಡಲು ಪ್ರಾರಂಭಿಸಿದ್ದರು” ಎಂದು ಅವರು ಹೇಳಿದ್ದಾರೆ.ವಕ್ಫ್ ಬೋರ್ಡ್‌ನಿಂದ ಸಮೀಕ್ಷೆ

“ಆಲಮಟ್ಟಿ ಅಣೆಕಟ್ಟು ಮತ್ತು ಇತರ ಯೋಜನೆಗಳಂತಹ ವಿವಿಧ ಯೋಜನೆಗಳಿಗಾಗಿ ಮಂಡಳಿಯು 75,000 ಎಕರೆಗಳನ್ನು ಸರ್ಕಾರಕ್ಕೆ ನೀಡಿತ್ತು. ಅದರಲ್ಲಿ ನಮಗೆ ಸೂಕ್ತ ಪರಿಹಾರ ನೀಡಲಾಗಿದೆ. ಈಗ ನಾವು ವ್ಯಾಜ್ಯದಲ್ಲಿರುವ 90,000 ಎಕರೆಗೆ ಬದಲಾಗಿ ಪರಿಹಾರ ಅಥವಾ ಭೂಮಿಯನ್ನು ಕೇಳುತ್ತಿದ್ದೇವೆ” ಎಂದು ಹೆಸರು ಹೇಳಲು ಇಚ್ಛಿಸದ ಮಂಡಳಿಯ ಮತ್ತೊಬ್ಬ ಸದಸ್ಯರು ಹೇಳಿದ್ದಾರೆ. ಹಸ್ತಾಂತರಿಸಿದ ಭೂಮಿಯನ್ನು ದರ್ಗಾ, ಮಸೀದಿ, ಸ್ಮಶಾನ ಮತ್ತು ಇತರ ಸೌಲಭ್ಯಗಳನ್ನು ಸ್ಥಾಪಿಸಲು ಬಳಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಕಾನೂನು ರೀತಿಯ ಹೋರಾಟದ ಜತೆಗೆ ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ: ಸಿಎಂ ಸಿದ್ದರಾಮಯ್ಯ

ವಕ್ಫ್ ಭೂಮಿಗೆ ಜಿಯೋ ಟ್ಯಾಗ್: ಸರ್ಕಾರಿ ಅಧಿಕಾರಿ

ಎಲ್ಲಾ ವಕ್ಫ್ ಆಸ್ತಿಗಳ ಮೊದಲ ಸಮೀಕ್ಷೆಯನ್ನು 1972-73 ರಲ್ಲಿ ಮಾಡಲಾಯಿತು, ಎರಡನೇ ಸರ್ವೆ 2020 ರಲ್ಲಿ ಪೂರ್ಣಗೊಂಡಿತ್ತು. ವಕ್ಫ್ ಮಂಡಳಿ ಹೊಂದಿರುವ ಯಾವುದೇ ಭೂಮಿ ಸರ್ಕಾರ ಮಂಡಳಿಗೆ ನೀಡಿದ್ದಲ್ಲ. ಈ ಎಲ್ಲಾ ಭೂಮಿ ಜನರು ವಿವಿಧ ಉದ್ದೇಶಗಳಿಗಾಗಿ ದಾನ ಮಂಡಳಿಗೆ ಮಾಡಿದ್ದಾರೆ. ಈಗ ಹೆಚ್ಚಿನ ದೇಣಿಗೆಯೊಂದಿಗೆ, ಎಲ್ಲಾ ಆಸ್ತಿಗಳ ಮರು ಸಮೀಕ್ಷೆಯನ್ನು ಮಾಡಲಾಗುತ್ತದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯ ಮತ್ತು ಮಂಡಳಿಯ ಸಿಇಒ ಜಿಲಾನಿ ಮೊಕಾಶಿ ಹೇಳಿದ್ದಾರೆ.

ಆದರೆ, ಮಂಡಳಿಯು ಪಟ್ಟಿ ಮಾಡಿರುವ ಭೂಮಿಯ ವಿವರಗಳು ಕಂದಾಯ ಇಲಾಖೆಗಿಂತ ಭಿನ್ನವಾಗಿವೆ. ಕಂದಾಯ ಇಲಾಖೆಯ ಭೂಮಿ ಆ್ಯಪ್‌ನ ಮಾಹಿತಿಯಂತೆ ರಾಜ್ಯದಲ್ಲಿ 3,454.6 ಎಕರೆ ಭೂಮಿಯನ್ನು ವಕ್ಫ್ ಭೂಮಿ ಎಂದು ಗುರುತಿಸಲಾಗಿದೆ. ದಾಖಲೆಗಳನ್ನು ಪರಿಶೀಲಿಸಲು ಜಮೀನುಗಳ ವಿವರವಾದ ಸಮೀಕ್ಷೆ ಮತ್ತು ಜಿಯೋ ಟ್ಯಾಗ್ ಮಾಡಲಾಗುತ್ತಿದೆ ಎಂದು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ವಕ್ಫ್ ಆಸ್ತಿ ದೇವರ ಆಸ್ತಿ ಮತ್ತು ಅದನ್ನು ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ. ಸ್ಮಶಾನ ಬಿಟ್ಟರೆ ಸರ್ಕಾರ ಮಂಡಳಿಗೆ ಬೇರಾವುದೇ ಭೂಮಿ ನೀಡಿಲ್ಲ” ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಇತ್ತಿಚೆಗೆ ಹೇಳಿದ್ದರು. ಅನೇಕ ದಾನಿಗಳು ಕಾಲೇಜುಗಳು ಮತ್ತು ಆಸ್ಪತ್ರೆಗಳ ನಿರ್ಮಾಣಕ್ಕಾಗಿ ಭೂಮಿಯನ್ನು ದಾನ ಮಾಡಲು ಸಿದ್ಧರಿದ್ದಾರೆ ಎಂದು ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ಮೀಸಲಾತಿ ಅವರಪ್ಪನ ಮನೆಯ ಸ್ವತ್ತಲ್ಲ: ಮಾವಳ್ಳಿ ಶಂಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...