Homeಮುಖಪುಟ4 ವರ್ಷದ ಮಗನನ್ನು ಕೊಂದು ಮೃತದೇಹವನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಸ್ಟಾರ್ಟ್‌ ಅಪ್‌ ಸಿಇಒ ಬಂಧನ

4 ವರ್ಷದ ಮಗನನ್ನು ಕೊಂದು ಮೃತದೇಹವನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಸ್ಟಾರ್ಟ್‌ ಅಪ್‌ ಸಿಇಒ ಬಂಧನ

- Advertisement -
- Advertisement -

ಗೋವಾದ ಖಾಸಗಿ ಹೋಟೆಲ್‌ನಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಕೊಂದು, ಮೃತದೇಹವನ್ನು ಕಾರಿನಲ್ಲಿ ಬೆಂಗಳೂರಿಗೆ ಸಾಗಿಸುತ್ತಿದ್ದ ಆರೋಪದ ಮೇಲೆ ಸ್ಟಾರ್ಟ್‌ ಅಪ್‌ ಸಿಇಒ ಅನ್ನು ಪೊಲೀಸರು ಬಂಧಿಸಿದ್ದಾರೆ.

ಸುಚನಾ ಸೇಠ್ (39) ಬಂಧಿತ ಮಹಿಳೆ. ಈಕೆ ತನ್ನ ಮಗನ ಮೃತದೇಹದೊಂದಿಗೆ ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದಾಗ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿ ಸುಚನಾ ಸೇಠ್ ತನ್ನ ಮಗನೊಂದಿಗೆ ಜನವರಿ 6ರಂದು ಉತ್ತರ ಗೋವಾದ ಸಿಂಕ್ವೆರಿಮ್‌ನಲ್ಲಿರುವ ಹೋಟೆಲ್‌ಗೆ ತೆರಳಿದ್ದರು (ಚೆಕ್‌ ಇನ್ ಮಾಡಿದ್ದರು). ಆದರೆ, ಆಕೆ ವಾಪಸ್‌ ಬರುವಾಗ (ಚೆಕ್‌ ಔಟ್ ಮಾಡುವಾಗ) ಒಬ್ಬರೇ ಬಂದಿದ್ದರು. ಇದರಿಂದ ಹೋಟೆಲ್‌ ಸಿಬ್ಬಂದಿಗೆ ಅನುಮಾನ ಕಾಡಿತ್ತು.

ಸುಚನಾ ಹೋಟೆಲ್ ತೊರೆದ ಬಳಿಕ, ಅಲ್ಲಿನ ನೌಕರರು ಕೊಠಡಿ ಸ್ವಚ್ಚಗೊಳಿಸಲು ತೆರಳಿದ್ದರು. ಈ ವೇಳೆ ಕೊಠಡಿಯಲ್ಲಿ ರಕ್ತದ ಕಲೆಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು.

ಬಳಿಕ ಪೊಲೀಸರು ಸುಚನಾರನ್ನು ಕರೆದುಕೊಂಡು ಬಂದಿದ್ದ ಕಾರು ಚಾಲಕನನ್ನು ಸಂಪರ್ಕಿಸಿ ಮಗನ ಕುರಿತು ವಿಚಾರಿಸುವಂತೆ ಸೂಚಿಸಿದ್ದರು. ಚಾಲಕ ವಿಚಾರಿಸಿದಾಗ, ಮಗ ಗೆಳತಿಯೊಂದಿಗೆ ತೆರಳಿದ್ದಾಗಿ ಆಕೆ ಸುಳ್ಳು ಹೇಳಿದ್ದರು.

ಪೊಲೀಸರು ಮತ್ತೆ ಕಾರು ಚಾಲಕನಿಗೆ ಕರೆ ಮಾಡಿ ಸುಚನಾ ಅವರಿಗೆ ಕೊಂಕಣಿ ತಿಳಿದಿಲ್ಲದೇ ಇರುವುದರಿಂದ ಕೊಂಕಣಿಯಲ್ಲಿ ಮಾತನಾಡಿ ಕಾರನ್ನು ಅನ್ನು ಹತ್ತಿರದ ಚಿತ್ರದುರ್ಗದ ಐಮಂಗಲ ಠಾಣೆಗೆ ತೆಗೆದುಕೊಂಡು ಹೋಗುವಂತೆ ಸೂಚಿಸಿದ್ದರು. ಕಾರು ಚಾಲಕ ಹಾಗೆಯೇ ಮಾಡಿದ್ದ. ನಂತರ ಪೊಲೀಸರು ಆಕೆಯನ್ನು ಬಂಧಿಸಿದಾಗ ಆಕೆಯ ಜೊತೆಗಿನ ಬ್ಯಾಗಿನಲ್ಲಿ ಮಗನ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಪೊಲೀಸರು ಆಕೆಯ ಪತಿ ಬೆಂಗಳೂರಿನಲ್ಲಿ ಎಐ ಡೆವಲಪರ್‌ ಆಗಿರವ ವೆಂಕಟ್‌ ರಾಮನ್‌ ಅವರಿಗೆ ಮಾಹಿತಿ ನೀಡಿದ್ದು, ಅವರು ತಕ್ಷಣ ಧಾವಿಸಿ ಬಂದಿದ್ದಾರೆ. ಪ್ರಸ್ತುತ ಚಿತ್ರದುರ್ಗ ಪೊಲೀಸರು ಆರೋಪಿಯನ್ನು ಗೋವಾ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸರ ಪ್ರಕಾರ, ಆರೋಪಿ ಸುಚನಾ ಸೇಠ್ ತನ್ನ ಮಗನನ್ನು ಹರಿತವಾದ ಆಯುಧದಿಂದ ಹತ್ಯೆ ಮಾಡಿದ್ದರು. ಕೃತ್ಯದ ಬಳಿಕ ತಾನು ಬೆಂಗಳೂರಿಗೆ ತೆರಳಲು ಟ್ಯಾಕ್ಸಿ ವ್ಯವಸ್ಥೆ ಮಾಡುವಂತೆ ಹೋಟೆಲ್ ಸಿಬ್ಬಂದಿಗೆ ಸೂಚಿಸಿದ್ದರು. ಹೋಟೆಲ್ ಸಿಬ್ಬಂದಿ ವಿಮಾನದ ಮೂಲಕ ತೆರಳುವಂತೆ ಸಲಹೆ ನೀಡಿದರೂ, ಇಲ್ಲ ತಾನು ರಸ್ತೆ ಮಾರ್ಗವಾಗಿಯೇ ಹೋಗಬೇಕು ಟ್ಯಾಕ್ಸಿ ಬುಕ್ ಮಾಡುವಂತೆ ಆಕೆ ಹೇಳಿದ್ದರು. ಹಾಗಾಗಿ, ಹೋಟೆಲ್ ಸಿಬ್ಬಂದಿ ಟ್ಯಾಕ್ಸಿ ವ್ಯವಸ್ಥೆ ಮಾಡಿಕೊಟ್ಟಿದ್ದರು. ಸುಚನಾ ಹೋಟೆಲ್ ತೊರೆದ ಬಳಿಕ ಅನುಮಾನ ಬಂದು ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸುಚನಾ ತನ್ನ ಮಗನನ್ನು ಯಾವ ಕಾರಣಕ್ಕೆ ಕೊಲೆ ಮಾಡಿದ್ದಾರೆ ಎಂದು ಖಚಿತವಾಗಿ ತಿಳಿದು ಬಂದಿಲ್ಲ. ಕೆಲ ಮಾಧ್ಯಮಗಳ ವರದಿಗಳ ಪ್ರಕಾರ, ಸುಚನಾ ಪತಿ ವೆಂಕಟ ರಾಮನ್ ಅವರಿಂದ ವಿಚ್ಚೇದನ ಪಡೆದಿದ್ದರು. ಆದರೂ, ಕೋರ್ಟ್‌ನಿಂದ ಅನುಮತಿ ಪಡೆದು ವೆಂಕಟ ರಾಮನ್‌ ತನ್ನ ಮಗನನ್ನು ನೋಡಲು ಪ್ರತೀ ವಾರ ತೆರಳುತ್ತಿದ್ದರು. ಇದರಿಂದ ಕೋಪಗೊಂಡ ಆಕೆ, ಪತಿ ಮಗನನ್ನು ನೋಡಬಾರದು ಎಂದು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ ಪ್ರಕರಣಗಳಲ್ಲಿ ಒಂದೇ ಒಂದು ಶಿಕ್ಷೆ ಯಾಕೆ ಆಗುತ್ತಿಲ್ಲ? ಸರಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...