Homeಮುಖಪುಟ4 ವರ್ಷದ ಮಗನನ್ನು ಕೊಂದು ಮೃತದೇಹವನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಸ್ಟಾರ್ಟ್‌ ಅಪ್‌ ಸಿಇಒ ಬಂಧನ

4 ವರ್ಷದ ಮಗನನ್ನು ಕೊಂದು ಮೃತದೇಹವನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಸ್ಟಾರ್ಟ್‌ ಅಪ್‌ ಸಿಇಒ ಬಂಧನ

- Advertisement -
- Advertisement -

ಗೋವಾದ ಖಾಸಗಿ ಹೋಟೆಲ್‌ನಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಕೊಂದು, ಮೃತದೇಹವನ್ನು ಕಾರಿನಲ್ಲಿ ಬೆಂಗಳೂರಿಗೆ ಸಾಗಿಸುತ್ತಿದ್ದ ಆರೋಪದ ಮೇಲೆ ಸ್ಟಾರ್ಟ್‌ ಅಪ್‌ ಸಿಇಒ ಅನ್ನು ಪೊಲೀಸರು ಬಂಧಿಸಿದ್ದಾರೆ.

ಸುಚನಾ ಸೇಠ್ (39) ಬಂಧಿತ ಮಹಿಳೆ. ಈಕೆ ತನ್ನ ಮಗನ ಮೃತದೇಹದೊಂದಿಗೆ ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದಾಗ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿ ಸುಚನಾ ಸೇಠ್ ತನ್ನ ಮಗನೊಂದಿಗೆ ಜನವರಿ 6ರಂದು ಉತ್ತರ ಗೋವಾದ ಸಿಂಕ್ವೆರಿಮ್‌ನಲ್ಲಿರುವ ಹೋಟೆಲ್‌ಗೆ ತೆರಳಿದ್ದರು (ಚೆಕ್‌ ಇನ್ ಮಾಡಿದ್ದರು). ಆದರೆ, ಆಕೆ ವಾಪಸ್‌ ಬರುವಾಗ (ಚೆಕ್‌ ಔಟ್ ಮಾಡುವಾಗ) ಒಬ್ಬರೇ ಬಂದಿದ್ದರು. ಇದರಿಂದ ಹೋಟೆಲ್‌ ಸಿಬ್ಬಂದಿಗೆ ಅನುಮಾನ ಕಾಡಿತ್ತು.

ಸುಚನಾ ಹೋಟೆಲ್ ತೊರೆದ ಬಳಿಕ, ಅಲ್ಲಿನ ನೌಕರರು ಕೊಠಡಿ ಸ್ವಚ್ಚಗೊಳಿಸಲು ತೆರಳಿದ್ದರು. ಈ ವೇಳೆ ಕೊಠಡಿಯಲ್ಲಿ ರಕ್ತದ ಕಲೆಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು.

ಬಳಿಕ ಪೊಲೀಸರು ಸುಚನಾರನ್ನು ಕರೆದುಕೊಂಡು ಬಂದಿದ್ದ ಕಾರು ಚಾಲಕನನ್ನು ಸಂಪರ್ಕಿಸಿ ಮಗನ ಕುರಿತು ವಿಚಾರಿಸುವಂತೆ ಸೂಚಿಸಿದ್ದರು. ಚಾಲಕ ವಿಚಾರಿಸಿದಾಗ, ಮಗ ಗೆಳತಿಯೊಂದಿಗೆ ತೆರಳಿದ್ದಾಗಿ ಆಕೆ ಸುಳ್ಳು ಹೇಳಿದ್ದರು.

ಪೊಲೀಸರು ಮತ್ತೆ ಕಾರು ಚಾಲಕನಿಗೆ ಕರೆ ಮಾಡಿ ಸುಚನಾ ಅವರಿಗೆ ಕೊಂಕಣಿ ತಿಳಿದಿಲ್ಲದೇ ಇರುವುದರಿಂದ ಕೊಂಕಣಿಯಲ್ಲಿ ಮಾತನಾಡಿ ಕಾರನ್ನು ಅನ್ನು ಹತ್ತಿರದ ಚಿತ್ರದುರ್ಗದ ಐಮಂಗಲ ಠಾಣೆಗೆ ತೆಗೆದುಕೊಂಡು ಹೋಗುವಂತೆ ಸೂಚಿಸಿದ್ದರು. ಕಾರು ಚಾಲಕ ಹಾಗೆಯೇ ಮಾಡಿದ್ದ. ನಂತರ ಪೊಲೀಸರು ಆಕೆಯನ್ನು ಬಂಧಿಸಿದಾಗ ಆಕೆಯ ಜೊತೆಗಿನ ಬ್ಯಾಗಿನಲ್ಲಿ ಮಗನ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಪೊಲೀಸರು ಆಕೆಯ ಪತಿ ಬೆಂಗಳೂರಿನಲ್ಲಿ ಎಐ ಡೆವಲಪರ್‌ ಆಗಿರವ ವೆಂಕಟ್‌ ರಾಮನ್‌ ಅವರಿಗೆ ಮಾಹಿತಿ ನೀಡಿದ್ದು, ಅವರು ತಕ್ಷಣ ಧಾವಿಸಿ ಬಂದಿದ್ದಾರೆ. ಪ್ರಸ್ತುತ ಚಿತ್ರದುರ್ಗ ಪೊಲೀಸರು ಆರೋಪಿಯನ್ನು ಗೋವಾ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸರ ಪ್ರಕಾರ, ಆರೋಪಿ ಸುಚನಾ ಸೇಠ್ ತನ್ನ ಮಗನನ್ನು ಹರಿತವಾದ ಆಯುಧದಿಂದ ಹತ್ಯೆ ಮಾಡಿದ್ದರು. ಕೃತ್ಯದ ಬಳಿಕ ತಾನು ಬೆಂಗಳೂರಿಗೆ ತೆರಳಲು ಟ್ಯಾಕ್ಸಿ ವ್ಯವಸ್ಥೆ ಮಾಡುವಂತೆ ಹೋಟೆಲ್ ಸಿಬ್ಬಂದಿಗೆ ಸೂಚಿಸಿದ್ದರು. ಹೋಟೆಲ್ ಸಿಬ್ಬಂದಿ ವಿಮಾನದ ಮೂಲಕ ತೆರಳುವಂತೆ ಸಲಹೆ ನೀಡಿದರೂ, ಇಲ್ಲ ತಾನು ರಸ್ತೆ ಮಾರ್ಗವಾಗಿಯೇ ಹೋಗಬೇಕು ಟ್ಯಾಕ್ಸಿ ಬುಕ್ ಮಾಡುವಂತೆ ಆಕೆ ಹೇಳಿದ್ದರು. ಹಾಗಾಗಿ, ಹೋಟೆಲ್ ಸಿಬ್ಬಂದಿ ಟ್ಯಾಕ್ಸಿ ವ್ಯವಸ್ಥೆ ಮಾಡಿಕೊಟ್ಟಿದ್ದರು. ಸುಚನಾ ಹೋಟೆಲ್ ತೊರೆದ ಬಳಿಕ ಅನುಮಾನ ಬಂದು ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸುಚನಾ ತನ್ನ ಮಗನನ್ನು ಯಾವ ಕಾರಣಕ್ಕೆ ಕೊಲೆ ಮಾಡಿದ್ದಾರೆ ಎಂದು ಖಚಿತವಾಗಿ ತಿಳಿದು ಬಂದಿಲ್ಲ. ಕೆಲ ಮಾಧ್ಯಮಗಳ ವರದಿಗಳ ಪ್ರಕಾರ, ಸುಚನಾ ಪತಿ ವೆಂಕಟ ರಾಮನ್ ಅವರಿಂದ ವಿಚ್ಚೇದನ ಪಡೆದಿದ್ದರು. ಆದರೂ, ಕೋರ್ಟ್‌ನಿಂದ ಅನುಮತಿ ಪಡೆದು ವೆಂಕಟ ರಾಮನ್‌ ತನ್ನ ಮಗನನ್ನು ನೋಡಲು ಪ್ರತೀ ವಾರ ತೆರಳುತ್ತಿದ್ದರು. ಇದರಿಂದ ಕೋಪಗೊಂಡ ಆಕೆ, ಪತಿ ಮಗನನ್ನು ನೋಡಬಾರದು ಎಂದು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ ಪ್ರಕರಣಗಳಲ್ಲಿ ಒಂದೇ ಒಂದು ಶಿಕ್ಷೆ ಯಾಕೆ ಆಗುತ್ತಿಲ್ಲ? ಸರಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....