Homeಮುಖಪುಟ4 ವರ್ಷದ ಮಗನನ್ನು ಕೊಂದು ಮೃತದೇಹವನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಸ್ಟಾರ್ಟ್‌ ಅಪ್‌ ಸಿಇಒ ಬಂಧನ

4 ವರ್ಷದ ಮಗನನ್ನು ಕೊಂದು ಮೃತದೇಹವನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಸ್ಟಾರ್ಟ್‌ ಅಪ್‌ ಸಿಇಒ ಬಂಧನ

- Advertisement -
- Advertisement -

ಗೋವಾದ ಖಾಸಗಿ ಹೋಟೆಲ್‌ನಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಕೊಂದು, ಮೃತದೇಹವನ್ನು ಕಾರಿನಲ್ಲಿ ಬೆಂಗಳೂರಿಗೆ ಸಾಗಿಸುತ್ತಿದ್ದ ಆರೋಪದ ಮೇಲೆ ಸ್ಟಾರ್ಟ್‌ ಅಪ್‌ ಸಿಇಒ ಅನ್ನು ಪೊಲೀಸರು ಬಂಧಿಸಿದ್ದಾರೆ.

ಸುಚನಾ ಸೇಠ್ (39) ಬಂಧಿತ ಮಹಿಳೆ. ಈಕೆ ತನ್ನ ಮಗನ ಮೃತದೇಹದೊಂದಿಗೆ ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದಾಗ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿ ಸುಚನಾ ಸೇಠ್ ತನ್ನ ಮಗನೊಂದಿಗೆ ಜನವರಿ 6ರಂದು ಉತ್ತರ ಗೋವಾದ ಸಿಂಕ್ವೆರಿಮ್‌ನಲ್ಲಿರುವ ಹೋಟೆಲ್‌ಗೆ ತೆರಳಿದ್ದರು (ಚೆಕ್‌ ಇನ್ ಮಾಡಿದ್ದರು). ಆದರೆ, ಆಕೆ ವಾಪಸ್‌ ಬರುವಾಗ (ಚೆಕ್‌ ಔಟ್ ಮಾಡುವಾಗ) ಒಬ್ಬರೇ ಬಂದಿದ್ದರು. ಇದರಿಂದ ಹೋಟೆಲ್‌ ಸಿಬ್ಬಂದಿಗೆ ಅನುಮಾನ ಕಾಡಿತ್ತು.

ಸುಚನಾ ಹೋಟೆಲ್ ತೊರೆದ ಬಳಿಕ, ಅಲ್ಲಿನ ನೌಕರರು ಕೊಠಡಿ ಸ್ವಚ್ಚಗೊಳಿಸಲು ತೆರಳಿದ್ದರು. ಈ ವೇಳೆ ಕೊಠಡಿಯಲ್ಲಿ ರಕ್ತದ ಕಲೆಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು.

ಬಳಿಕ ಪೊಲೀಸರು ಸುಚನಾರನ್ನು ಕರೆದುಕೊಂಡು ಬಂದಿದ್ದ ಕಾರು ಚಾಲಕನನ್ನು ಸಂಪರ್ಕಿಸಿ ಮಗನ ಕುರಿತು ವಿಚಾರಿಸುವಂತೆ ಸೂಚಿಸಿದ್ದರು. ಚಾಲಕ ವಿಚಾರಿಸಿದಾಗ, ಮಗ ಗೆಳತಿಯೊಂದಿಗೆ ತೆರಳಿದ್ದಾಗಿ ಆಕೆ ಸುಳ್ಳು ಹೇಳಿದ್ದರು.

ಪೊಲೀಸರು ಮತ್ತೆ ಕಾರು ಚಾಲಕನಿಗೆ ಕರೆ ಮಾಡಿ ಸುಚನಾ ಅವರಿಗೆ ಕೊಂಕಣಿ ತಿಳಿದಿಲ್ಲದೇ ಇರುವುದರಿಂದ ಕೊಂಕಣಿಯಲ್ಲಿ ಮಾತನಾಡಿ ಕಾರನ್ನು ಅನ್ನು ಹತ್ತಿರದ ಚಿತ್ರದುರ್ಗದ ಐಮಂಗಲ ಠಾಣೆಗೆ ತೆಗೆದುಕೊಂಡು ಹೋಗುವಂತೆ ಸೂಚಿಸಿದ್ದರು. ಕಾರು ಚಾಲಕ ಹಾಗೆಯೇ ಮಾಡಿದ್ದ. ನಂತರ ಪೊಲೀಸರು ಆಕೆಯನ್ನು ಬಂಧಿಸಿದಾಗ ಆಕೆಯ ಜೊತೆಗಿನ ಬ್ಯಾಗಿನಲ್ಲಿ ಮಗನ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಪೊಲೀಸರು ಆಕೆಯ ಪತಿ ಬೆಂಗಳೂರಿನಲ್ಲಿ ಎಐ ಡೆವಲಪರ್‌ ಆಗಿರವ ವೆಂಕಟ್‌ ರಾಮನ್‌ ಅವರಿಗೆ ಮಾಹಿತಿ ನೀಡಿದ್ದು, ಅವರು ತಕ್ಷಣ ಧಾವಿಸಿ ಬಂದಿದ್ದಾರೆ. ಪ್ರಸ್ತುತ ಚಿತ್ರದುರ್ಗ ಪೊಲೀಸರು ಆರೋಪಿಯನ್ನು ಗೋವಾ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸರ ಪ್ರಕಾರ, ಆರೋಪಿ ಸುಚನಾ ಸೇಠ್ ತನ್ನ ಮಗನನ್ನು ಹರಿತವಾದ ಆಯುಧದಿಂದ ಹತ್ಯೆ ಮಾಡಿದ್ದರು. ಕೃತ್ಯದ ಬಳಿಕ ತಾನು ಬೆಂಗಳೂರಿಗೆ ತೆರಳಲು ಟ್ಯಾಕ್ಸಿ ವ್ಯವಸ್ಥೆ ಮಾಡುವಂತೆ ಹೋಟೆಲ್ ಸಿಬ್ಬಂದಿಗೆ ಸೂಚಿಸಿದ್ದರು. ಹೋಟೆಲ್ ಸಿಬ್ಬಂದಿ ವಿಮಾನದ ಮೂಲಕ ತೆರಳುವಂತೆ ಸಲಹೆ ನೀಡಿದರೂ, ಇಲ್ಲ ತಾನು ರಸ್ತೆ ಮಾರ್ಗವಾಗಿಯೇ ಹೋಗಬೇಕು ಟ್ಯಾಕ್ಸಿ ಬುಕ್ ಮಾಡುವಂತೆ ಆಕೆ ಹೇಳಿದ್ದರು. ಹಾಗಾಗಿ, ಹೋಟೆಲ್ ಸಿಬ್ಬಂದಿ ಟ್ಯಾಕ್ಸಿ ವ್ಯವಸ್ಥೆ ಮಾಡಿಕೊಟ್ಟಿದ್ದರು. ಸುಚನಾ ಹೋಟೆಲ್ ತೊರೆದ ಬಳಿಕ ಅನುಮಾನ ಬಂದು ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸುಚನಾ ತನ್ನ ಮಗನನ್ನು ಯಾವ ಕಾರಣಕ್ಕೆ ಕೊಲೆ ಮಾಡಿದ್ದಾರೆ ಎಂದು ಖಚಿತವಾಗಿ ತಿಳಿದು ಬಂದಿಲ್ಲ. ಕೆಲ ಮಾಧ್ಯಮಗಳ ವರದಿಗಳ ಪ್ರಕಾರ, ಸುಚನಾ ಪತಿ ವೆಂಕಟ ರಾಮನ್ ಅವರಿಂದ ವಿಚ್ಚೇದನ ಪಡೆದಿದ್ದರು. ಆದರೂ, ಕೋರ್ಟ್‌ನಿಂದ ಅನುಮತಿ ಪಡೆದು ವೆಂಕಟ ರಾಮನ್‌ ತನ್ನ ಮಗನನ್ನು ನೋಡಲು ಪ್ರತೀ ವಾರ ತೆರಳುತ್ತಿದ್ದರು. ಇದರಿಂದ ಕೋಪಗೊಂಡ ಆಕೆ, ಪತಿ ಮಗನನ್ನು ನೋಡಬಾರದು ಎಂದು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ ಪ್ರಕರಣಗಳಲ್ಲಿ ಒಂದೇ ಒಂದು ಶಿಕ್ಷೆ ಯಾಕೆ ಆಗುತ್ತಿಲ್ಲ? ಸರಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...