Homeಮುಖಪುಟ4 ವರ್ಷದ ಮಗನನ್ನು ಕೊಂದು ಮೃತದೇಹವನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಸ್ಟಾರ್ಟ್‌ ಅಪ್‌ ಸಿಇಒ ಬಂಧನ

4 ವರ್ಷದ ಮಗನನ್ನು ಕೊಂದು ಮೃತದೇಹವನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಸ್ಟಾರ್ಟ್‌ ಅಪ್‌ ಸಿಇಒ ಬಂಧನ

- Advertisement -
- Advertisement -

ಗೋವಾದ ಖಾಸಗಿ ಹೋಟೆಲ್‌ನಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಕೊಂದು, ಮೃತದೇಹವನ್ನು ಕಾರಿನಲ್ಲಿ ಬೆಂಗಳೂರಿಗೆ ಸಾಗಿಸುತ್ತಿದ್ದ ಆರೋಪದ ಮೇಲೆ ಸ್ಟಾರ್ಟ್‌ ಅಪ್‌ ಸಿಇಒ ಅನ್ನು ಪೊಲೀಸರು ಬಂಧಿಸಿದ್ದಾರೆ.

ಸುಚನಾ ಸೇಠ್ (39) ಬಂಧಿತ ಮಹಿಳೆ. ಈಕೆ ತನ್ನ ಮಗನ ಮೃತದೇಹದೊಂದಿಗೆ ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದಾಗ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿ ಸುಚನಾ ಸೇಠ್ ತನ್ನ ಮಗನೊಂದಿಗೆ ಜನವರಿ 6ರಂದು ಉತ್ತರ ಗೋವಾದ ಸಿಂಕ್ವೆರಿಮ್‌ನಲ್ಲಿರುವ ಹೋಟೆಲ್‌ಗೆ ತೆರಳಿದ್ದರು (ಚೆಕ್‌ ಇನ್ ಮಾಡಿದ್ದರು). ಆದರೆ, ಆಕೆ ವಾಪಸ್‌ ಬರುವಾಗ (ಚೆಕ್‌ ಔಟ್ ಮಾಡುವಾಗ) ಒಬ್ಬರೇ ಬಂದಿದ್ದರು. ಇದರಿಂದ ಹೋಟೆಲ್‌ ಸಿಬ್ಬಂದಿಗೆ ಅನುಮಾನ ಕಾಡಿತ್ತು.

ಸುಚನಾ ಹೋಟೆಲ್ ತೊರೆದ ಬಳಿಕ, ಅಲ್ಲಿನ ನೌಕರರು ಕೊಠಡಿ ಸ್ವಚ್ಚಗೊಳಿಸಲು ತೆರಳಿದ್ದರು. ಈ ವೇಳೆ ಕೊಠಡಿಯಲ್ಲಿ ರಕ್ತದ ಕಲೆಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು.

ಬಳಿಕ ಪೊಲೀಸರು ಸುಚನಾರನ್ನು ಕರೆದುಕೊಂಡು ಬಂದಿದ್ದ ಕಾರು ಚಾಲಕನನ್ನು ಸಂಪರ್ಕಿಸಿ ಮಗನ ಕುರಿತು ವಿಚಾರಿಸುವಂತೆ ಸೂಚಿಸಿದ್ದರು. ಚಾಲಕ ವಿಚಾರಿಸಿದಾಗ, ಮಗ ಗೆಳತಿಯೊಂದಿಗೆ ತೆರಳಿದ್ದಾಗಿ ಆಕೆ ಸುಳ್ಳು ಹೇಳಿದ್ದರು.

ಪೊಲೀಸರು ಮತ್ತೆ ಕಾರು ಚಾಲಕನಿಗೆ ಕರೆ ಮಾಡಿ ಸುಚನಾ ಅವರಿಗೆ ಕೊಂಕಣಿ ತಿಳಿದಿಲ್ಲದೇ ಇರುವುದರಿಂದ ಕೊಂಕಣಿಯಲ್ಲಿ ಮಾತನಾಡಿ ಕಾರನ್ನು ಅನ್ನು ಹತ್ತಿರದ ಚಿತ್ರದುರ್ಗದ ಐಮಂಗಲ ಠಾಣೆಗೆ ತೆಗೆದುಕೊಂಡು ಹೋಗುವಂತೆ ಸೂಚಿಸಿದ್ದರು. ಕಾರು ಚಾಲಕ ಹಾಗೆಯೇ ಮಾಡಿದ್ದ. ನಂತರ ಪೊಲೀಸರು ಆಕೆಯನ್ನು ಬಂಧಿಸಿದಾಗ ಆಕೆಯ ಜೊತೆಗಿನ ಬ್ಯಾಗಿನಲ್ಲಿ ಮಗನ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಪೊಲೀಸರು ಆಕೆಯ ಪತಿ ಬೆಂಗಳೂರಿನಲ್ಲಿ ಎಐ ಡೆವಲಪರ್‌ ಆಗಿರವ ವೆಂಕಟ್‌ ರಾಮನ್‌ ಅವರಿಗೆ ಮಾಹಿತಿ ನೀಡಿದ್ದು, ಅವರು ತಕ್ಷಣ ಧಾವಿಸಿ ಬಂದಿದ್ದಾರೆ. ಪ್ರಸ್ತುತ ಚಿತ್ರದುರ್ಗ ಪೊಲೀಸರು ಆರೋಪಿಯನ್ನು ಗೋವಾ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸರ ಪ್ರಕಾರ, ಆರೋಪಿ ಸುಚನಾ ಸೇಠ್ ತನ್ನ ಮಗನನ್ನು ಹರಿತವಾದ ಆಯುಧದಿಂದ ಹತ್ಯೆ ಮಾಡಿದ್ದರು. ಕೃತ್ಯದ ಬಳಿಕ ತಾನು ಬೆಂಗಳೂರಿಗೆ ತೆರಳಲು ಟ್ಯಾಕ್ಸಿ ವ್ಯವಸ್ಥೆ ಮಾಡುವಂತೆ ಹೋಟೆಲ್ ಸಿಬ್ಬಂದಿಗೆ ಸೂಚಿಸಿದ್ದರು. ಹೋಟೆಲ್ ಸಿಬ್ಬಂದಿ ವಿಮಾನದ ಮೂಲಕ ತೆರಳುವಂತೆ ಸಲಹೆ ನೀಡಿದರೂ, ಇಲ್ಲ ತಾನು ರಸ್ತೆ ಮಾರ್ಗವಾಗಿಯೇ ಹೋಗಬೇಕು ಟ್ಯಾಕ್ಸಿ ಬುಕ್ ಮಾಡುವಂತೆ ಆಕೆ ಹೇಳಿದ್ದರು. ಹಾಗಾಗಿ, ಹೋಟೆಲ್ ಸಿಬ್ಬಂದಿ ಟ್ಯಾಕ್ಸಿ ವ್ಯವಸ್ಥೆ ಮಾಡಿಕೊಟ್ಟಿದ್ದರು. ಸುಚನಾ ಹೋಟೆಲ್ ತೊರೆದ ಬಳಿಕ ಅನುಮಾನ ಬಂದು ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸುಚನಾ ತನ್ನ ಮಗನನ್ನು ಯಾವ ಕಾರಣಕ್ಕೆ ಕೊಲೆ ಮಾಡಿದ್ದಾರೆ ಎಂದು ಖಚಿತವಾಗಿ ತಿಳಿದು ಬಂದಿಲ್ಲ. ಕೆಲ ಮಾಧ್ಯಮಗಳ ವರದಿಗಳ ಪ್ರಕಾರ, ಸುಚನಾ ಪತಿ ವೆಂಕಟ ರಾಮನ್ ಅವರಿಂದ ವಿಚ್ಚೇದನ ಪಡೆದಿದ್ದರು. ಆದರೂ, ಕೋರ್ಟ್‌ನಿಂದ ಅನುಮತಿ ಪಡೆದು ವೆಂಕಟ ರಾಮನ್‌ ತನ್ನ ಮಗನನ್ನು ನೋಡಲು ಪ್ರತೀ ವಾರ ತೆರಳುತ್ತಿದ್ದರು. ಇದರಿಂದ ಕೋಪಗೊಂಡ ಆಕೆ, ಪತಿ ಮಗನನ್ನು ನೋಡಬಾರದು ಎಂದು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ ಪ್ರಕರಣಗಳಲ್ಲಿ ಒಂದೇ ಒಂದು ಶಿಕ್ಷೆ ಯಾಕೆ ಆಗುತ್ತಿಲ್ಲ? ಸರಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...