Homeಮುಖಪುಟ4 ವರ್ಷದ ಮಗನನ್ನು ಕೊಂದು ಮೃತದೇಹವನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಸ್ಟಾರ್ಟ್‌ ಅಪ್‌ ಸಿಇಒ ಬಂಧನ

4 ವರ್ಷದ ಮಗನನ್ನು ಕೊಂದು ಮೃತದೇಹವನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಸ್ಟಾರ್ಟ್‌ ಅಪ್‌ ಸಿಇಒ ಬಂಧನ

- Advertisement -
- Advertisement -

ಗೋವಾದ ಖಾಸಗಿ ಹೋಟೆಲ್‌ನಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಕೊಂದು, ಮೃತದೇಹವನ್ನು ಕಾರಿನಲ್ಲಿ ಬೆಂಗಳೂರಿಗೆ ಸಾಗಿಸುತ್ತಿದ್ದ ಆರೋಪದ ಮೇಲೆ ಸ್ಟಾರ್ಟ್‌ ಅಪ್‌ ಸಿಇಒ ಅನ್ನು ಪೊಲೀಸರು ಬಂಧಿಸಿದ್ದಾರೆ.

ಸುಚನಾ ಸೇಠ್ (39) ಬಂಧಿತ ಮಹಿಳೆ. ಈಕೆ ತನ್ನ ಮಗನ ಮೃತದೇಹದೊಂದಿಗೆ ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದಾಗ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿ ಸುಚನಾ ಸೇಠ್ ತನ್ನ ಮಗನೊಂದಿಗೆ ಜನವರಿ 6ರಂದು ಉತ್ತರ ಗೋವಾದ ಸಿಂಕ್ವೆರಿಮ್‌ನಲ್ಲಿರುವ ಹೋಟೆಲ್‌ಗೆ ತೆರಳಿದ್ದರು (ಚೆಕ್‌ ಇನ್ ಮಾಡಿದ್ದರು). ಆದರೆ, ಆಕೆ ವಾಪಸ್‌ ಬರುವಾಗ (ಚೆಕ್‌ ಔಟ್ ಮಾಡುವಾಗ) ಒಬ್ಬರೇ ಬಂದಿದ್ದರು. ಇದರಿಂದ ಹೋಟೆಲ್‌ ಸಿಬ್ಬಂದಿಗೆ ಅನುಮಾನ ಕಾಡಿತ್ತು.

ಸುಚನಾ ಹೋಟೆಲ್ ತೊರೆದ ಬಳಿಕ, ಅಲ್ಲಿನ ನೌಕರರು ಕೊಠಡಿ ಸ್ವಚ್ಚಗೊಳಿಸಲು ತೆರಳಿದ್ದರು. ಈ ವೇಳೆ ಕೊಠಡಿಯಲ್ಲಿ ರಕ್ತದ ಕಲೆಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು.

ಬಳಿಕ ಪೊಲೀಸರು ಸುಚನಾರನ್ನು ಕರೆದುಕೊಂಡು ಬಂದಿದ್ದ ಕಾರು ಚಾಲಕನನ್ನು ಸಂಪರ್ಕಿಸಿ ಮಗನ ಕುರಿತು ವಿಚಾರಿಸುವಂತೆ ಸೂಚಿಸಿದ್ದರು. ಚಾಲಕ ವಿಚಾರಿಸಿದಾಗ, ಮಗ ಗೆಳತಿಯೊಂದಿಗೆ ತೆರಳಿದ್ದಾಗಿ ಆಕೆ ಸುಳ್ಳು ಹೇಳಿದ್ದರು.

ಪೊಲೀಸರು ಮತ್ತೆ ಕಾರು ಚಾಲಕನಿಗೆ ಕರೆ ಮಾಡಿ ಸುಚನಾ ಅವರಿಗೆ ಕೊಂಕಣಿ ತಿಳಿದಿಲ್ಲದೇ ಇರುವುದರಿಂದ ಕೊಂಕಣಿಯಲ್ಲಿ ಮಾತನಾಡಿ ಕಾರನ್ನು ಅನ್ನು ಹತ್ತಿರದ ಚಿತ್ರದುರ್ಗದ ಐಮಂಗಲ ಠಾಣೆಗೆ ತೆಗೆದುಕೊಂಡು ಹೋಗುವಂತೆ ಸೂಚಿಸಿದ್ದರು. ಕಾರು ಚಾಲಕ ಹಾಗೆಯೇ ಮಾಡಿದ್ದ. ನಂತರ ಪೊಲೀಸರು ಆಕೆಯನ್ನು ಬಂಧಿಸಿದಾಗ ಆಕೆಯ ಜೊತೆಗಿನ ಬ್ಯಾಗಿನಲ್ಲಿ ಮಗನ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಪೊಲೀಸರು ಆಕೆಯ ಪತಿ ಬೆಂಗಳೂರಿನಲ್ಲಿ ಎಐ ಡೆವಲಪರ್‌ ಆಗಿರವ ವೆಂಕಟ್‌ ರಾಮನ್‌ ಅವರಿಗೆ ಮಾಹಿತಿ ನೀಡಿದ್ದು, ಅವರು ತಕ್ಷಣ ಧಾವಿಸಿ ಬಂದಿದ್ದಾರೆ. ಪ್ರಸ್ತುತ ಚಿತ್ರದುರ್ಗ ಪೊಲೀಸರು ಆರೋಪಿಯನ್ನು ಗೋವಾ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸರ ಪ್ರಕಾರ, ಆರೋಪಿ ಸುಚನಾ ಸೇಠ್ ತನ್ನ ಮಗನನ್ನು ಹರಿತವಾದ ಆಯುಧದಿಂದ ಹತ್ಯೆ ಮಾಡಿದ್ದರು. ಕೃತ್ಯದ ಬಳಿಕ ತಾನು ಬೆಂಗಳೂರಿಗೆ ತೆರಳಲು ಟ್ಯಾಕ್ಸಿ ವ್ಯವಸ್ಥೆ ಮಾಡುವಂತೆ ಹೋಟೆಲ್ ಸಿಬ್ಬಂದಿಗೆ ಸೂಚಿಸಿದ್ದರು. ಹೋಟೆಲ್ ಸಿಬ್ಬಂದಿ ವಿಮಾನದ ಮೂಲಕ ತೆರಳುವಂತೆ ಸಲಹೆ ನೀಡಿದರೂ, ಇಲ್ಲ ತಾನು ರಸ್ತೆ ಮಾರ್ಗವಾಗಿಯೇ ಹೋಗಬೇಕು ಟ್ಯಾಕ್ಸಿ ಬುಕ್ ಮಾಡುವಂತೆ ಆಕೆ ಹೇಳಿದ್ದರು. ಹಾಗಾಗಿ, ಹೋಟೆಲ್ ಸಿಬ್ಬಂದಿ ಟ್ಯಾಕ್ಸಿ ವ್ಯವಸ್ಥೆ ಮಾಡಿಕೊಟ್ಟಿದ್ದರು. ಸುಚನಾ ಹೋಟೆಲ್ ತೊರೆದ ಬಳಿಕ ಅನುಮಾನ ಬಂದು ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸುಚನಾ ತನ್ನ ಮಗನನ್ನು ಯಾವ ಕಾರಣಕ್ಕೆ ಕೊಲೆ ಮಾಡಿದ್ದಾರೆ ಎಂದು ಖಚಿತವಾಗಿ ತಿಳಿದು ಬಂದಿಲ್ಲ. ಕೆಲ ಮಾಧ್ಯಮಗಳ ವರದಿಗಳ ಪ್ರಕಾರ, ಸುಚನಾ ಪತಿ ವೆಂಕಟ ರಾಮನ್ ಅವರಿಂದ ವಿಚ್ಚೇದನ ಪಡೆದಿದ್ದರು. ಆದರೂ, ಕೋರ್ಟ್‌ನಿಂದ ಅನುಮತಿ ಪಡೆದು ವೆಂಕಟ ರಾಮನ್‌ ತನ್ನ ಮಗನನ್ನು ನೋಡಲು ಪ್ರತೀ ವಾರ ತೆರಳುತ್ತಿದ್ದರು. ಇದರಿಂದ ಕೋಪಗೊಂಡ ಆಕೆ, ಪತಿ ಮಗನನ್ನು ನೋಡಬಾರದು ಎಂದು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ ಪ್ರಕರಣಗಳಲ್ಲಿ ಒಂದೇ ಒಂದು ಶಿಕ್ಷೆ ಯಾಕೆ ಆಗುತ್ತಿಲ್ಲ? ಸರಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...