Homeಮುಖಪುಟನ.1ರಿಂದ ಪದವಿ ಕಾಲೇಜು ಆರಂಭ: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್

ನ.1ರಿಂದ ಪದವಿ ಕಾಲೇಜು ಆರಂಭ: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್

ಈ ವೇಳಾಪಟ್ಟಿಯ ಪ್ರಕಾರ ನವೆಂಬರ್ 1 ರಿಂದ ಪದವಿ ತರಗತಿಗಳು ಆರಂಭವಾಗಲಿದ್ದು, 2021ರ ಆಗಸ್ಟ್‌ 30ಕ್ಕೆ ಶೈಕ್ಷಣಿಕ ವರ್ಷ ಮುಕ್ತಾಯಗೊಳ್ಳಲಿದೆ. 

- Advertisement -
- Advertisement -

ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷದ ಪರಿಷ್ಕೃತ ವೇಳಾಪಟ್ಟಿಯನ್ನು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಬಿಡುಗಡೆ ಮಾಡಿದೆ. ನವೆಂಬರ್ 1ರಿಂದ ಪದವಿ ಕಾಲೇಜುಗಳು ಆರಂಭವಾಗಲಿವೆ. ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಡಾ.ರಮೇಶ್ ಪೋಖ್ರಿಯಲ್ ನಿಶಾಂಕ್ ಟ್ವೀಟ್ ಮಾಡಿದ್ದು, ವೇಳಾಪಟ್ಟಿಯನ್ನು ಹಂಚಿಕೊಂಡಿದ್ದಾರೆ.

ಈ ವೇಳಾಪಟ್ಟಿಯ ಪ್ರಕಾರ ನವೆಂಬರ್ 1 ರಿಂದ ಪದವಿ ತರಗತಿಗಳು ಆರಂಭವಾಗಲಿದ್ದು, 2021ರ ಆಗಸ್ಟ್‌ 30ಕ್ಕೆ ಶೈಕ್ಷಣಿಕ ವರ್ಷ ಮುಕ್ತಾಯಗೊಳ್ಳಲಿದೆ. ಮೊದಲ ಸೆಮಿಸ್ಟರ್ ಪರೀಕ್ಷೆಗಳು 2021ರ ಮಾರ್ಚ್ 8 ರಿಂದ 26ರ ನಡುವೆ ನಡೆಯಲಿದೆ. ಎರಡನೇ ಸೆಮಿಸ್ಟರ್ ಏಪ್ರಿಲ್ 5ರಿಂದ ಆರಂಭವಾಗಲಿದ್ದು, ಆಗಸ್ಟ್‌ನಲ್ಲಿ ಪರೀಕ್ಷೆಗಳು ನಡೆಯಲಿವೆ.

ಪರಿಷ್ಕೃತ ವೇಳಾಪಟ್ಟಿಯನ್ನು ಹಂಚಿಕೊಂಡಿರುವ ಶಿಕ್ಷಣ ಸಚಿವರು ಜೊತೆಗೆ ಇನ್ನೊಂದು ಟ್ವೀಟ್ ಮಾಡಿದ್ದಾರೆ. ’ಲಾಕ್ ಡೌನ್ ಮತ್ತು ಅದಕ್ಕೆ ಸಂಬಂಧಿತ ಅಂಶಗಳಿಂದಾಗಿ ಪೋಷಕರು ಎದುರಿಸುತ್ತಿರುವ ಹಣಕಾಸಿನ ಹೊರೆ ತಪ್ಪಿಸಲು, ನವೆಂಬರ್ 30 ರವರೆಗೆ ವಿದ್ಯಾರ್ಥಿಗಳ ಪ್ರವೇಶ ರದ್ದತಿ / ವಲಸೆ ಮುಂತಾದವುಗಳ ಸಂದರ್ಭದಲ್ಲಿ ವಿದ್ಯಾರ್ಥಿ ಕಟ್ಟಿದ ಶುಲ್ಕವನ್ನು ಪೂರ್ಣ ಮರುಪಾವತಿ ಮಾಡಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ: ಸೆ. 21ರಿಂದ ಶಾಲಾ-ಕಾಲೇಜು ತೆರೆಯುವುದಿಲ್ಲ!

ಯುಜಿಸಿ ಏಪ್ರಿಲ್ 29ರಂದು ಬಿಡುಗಡೆ ಮಾಡಿದ್ದ ವೇಳಾಪಟ್ಟಿಯ ಪ್ರಕಾರ ಸೆಪ್ಟೆಂಬರ್‌ 1ರಿಂದ ಪದವಿ ಕಾಲೇಜುಗಳು ಆರಂಭವಾಗಬೇಕಿತ್ತು. ಜುಲೈನಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಚ್‌ಆರ್‌ಡಿ) ಕಾಲೇಜುಗಳ ವೇಳಾಪಟ್ಟಿಯ ದಿನಾಂಕ ಪರಿಷ್ಕರಿಸಿ, ವಿಶ್ವವಿದ್ಯಾನಿಲಯಗಳಲ್ಲಿ ಸೆಮಿಸ್ಟರ್ / ಅಂತಿಮ ವರ್ಷದ ಪರೀಕ್ಷೆಗಳನ್ನು ಸೆಪ್ಟೆಂಬರ್ ಅಂತ್ಯದ ವೇಳೆಗೆ ನಡೆಸಲಾಗುವುದು ಎಂದು ತಿಳಿಸಿತ್ತು.

“ಕೊನೆಯ ಸೆಮಿಸ್ಟರ್ ಅನ್ನು 2020 ರ ಸೆಪ್ಟೆಂಬರ್ ಅಂತ್ಯದ ವೇಳೆಗೆ ಆಫ್‌ಲೈನ್ (ಪೆನ್ ಮತ್ತು ಪೇಪರ್) ಅಥವಾ ಆನ್‌ಲೈನ್ ಅಥವಾ ‌ಎರಡು (ಆನ್‌ಲೈನ್ + ಆಫ್‌ಲೈನ್) ವಿಧಾನದಲ್ಲಾದರೂ ನಡೆಸಲಾಗುವುದು” ಎಂದು ಯುಜಿಸಿ ಪತ್ರವೊಂದರಲ್ಲಿ ತಿಳಿಸಿದೆ. ಸದ್ಯ ಸೆಪ್ಟಂಬರ್‌ 1ಕ್ಕೆ ಆರಂಭವಾಗಬೇಕಿದ್ದ ಪದವಿ ತರಗತಿಗಳನ್ನು ನವೆಂಬರ್‌ 1ಕ್ಕೆ ಮುಂದೂಡಿದೆ.

ರಾಜ್ಯದಲ್ಲೂ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಸೆಪ್ಟೆಂಬರ್ 21ರಿಂದ ಹಿನ್ನೆಲೆ ಶಾಲೆ ಮತ್ತು ಪಿಯು ಕಾಲೇಜುಗಳನ್ನು ರೀಓಪನ್ ಮಾಡುವ ನಿರ್ಧಾರವನ್ನು ವಾಪಾಸ್ ತೆಗೆದುಕೊಳ್ಳಲಾಗಿದೆ.


ಇದನ್ನೂ ಓದಿ: ಶಾಲಾ ಶುಲ್ಕ ಮನ್ನಾ ಮಾಡುವ ಪಿಐಎಲ್ ತಿರಸ್ಕರಿಸಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...