Homeಮುಖಪುಟನ.1ರಿಂದ ಪದವಿ ಕಾಲೇಜು ಆರಂಭ: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್

ನ.1ರಿಂದ ಪದವಿ ಕಾಲೇಜು ಆರಂಭ: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್

ಈ ವೇಳಾಪಟ್ಟಿಯ ಪ್ರಕಾರ ನವೆಂಬರ್ 1 ರಿಂದ ಪದವಿ ತರಗತಿಗಳು ಆರಂಭವಾಗಲಿದ್ದು, 2021ರ ಆಗಸ್ಟ್‌ 30ಕ್ಕೆ ಶೈಕ್ಷಣಿಕ ವರ್ಷ ಮುಕ್ತಾಯಗೊಳ್ಳಲಿದೆ. 

- Advertisement -
- Advertisement -

ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷದ ಪರಿಷ್ಕೃತ ವೇಳಾಪಟ್ಟಿಯನ್ನು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಬಿಡುಗಡೆ ಮಾಡಿದೆ. ನವೆಂಬರ್ 1ರಿಂದ ಪದವಿ ಕಾಲೇಜುಗಳು ಆರಂಭವಾಗಲಿವೆ. ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಡಾ.ರಮೇಶ್ ಪೋಖ್ರಿಯಲ್ ನಿಶಾಂಕ್ ಟ್ವೀಟ್ ಮಾಡಿದ್ದು, ವೇಳಾಪಟ್ಟಿಯನ್ನು ಹಂಚಿಕೊಂಡಿದ್ದಾರೆ.

ಈ ವೇಳಾಪಟ್ಟಿಯ ಪ್ರಕಾರ ನವೆಂಬರ್ 1 ರಿಂದ ಪದವಿ ತರಗತಿಗಳು ಆರಂಭವಾಗಲಿದ್ದು, 2021ರ ಆಗಸ್ಟ್‌ 30ಕ್ಕೆ ಶೈಕ್ಷಣಿಕ ವರ್ಷ ಮುಕ್ತಾಯಗೊಳ್ಳಲಿದೆ. ಮೊದಲ ಸೆಮಿಸ್ಟರ್ ಪರೀಕ್ಷೆಗಳು 2021ರ ಮಾರ್ಚ್ 8 ರಿಂದ 26ರ ನಡುವೆ ನಡೆಯಲಿದೆ. ಎರಡನೇ ಸೆಮಿಸ್ಟರ್ ಏಪ್ರಿಲ್ 5ರಿಂದ ಆರಂಭವಾಗಲಿದ್ದು, ಆಗಸ್ಟ್‌ನಲ್ಲಿ ಪರೀಕ್ಷೆಗಳು ನಡೆಯಲಿವೆ.

ಪರಿಷ್ಕೃತ ವೇಳಾಪಟ್ಟಿಯನ್ನು ಹಂಚಿಕೊಂಡಿರುವ ಶಿಕ್ಷಣ ಸಚಿವರು ಜೊತೆಗೆ ಇನ್ನೊಂದು ಟ್ವೀಟ್ ಮಾಡಿದ್ದಾರೆ. ’ಲಾಕ್ ಡೌನ್ ಮತ್ತು ಅದಕ್ಕೆ ಸಂಬಂಧಿತ ಅಂಶಗಳಿಂದಾಗಿ ಪೋಷಕರು ಎದುರಿಸುತ್ತಿರುವ ಹಣಕಾಸಿನ ಹೊರೆ ತಪ್ಪಿಸಲು, ನವೆಂಬರ್ 30 ರವರೆಗೆ ವಿದ್ಯಾರ್ಥಿಗಳ ಪ್ರವೇಶ ರದ್ದತಿ / ವಲಸೆ ಮುಂತಾದವುಗಳ ಸಂದರ್ಭದಲ್ಲಿ ವಿದ್ಯಾರ್ಥಿ ಕಟ್ಟಿದ ಶುಲ್ಕವನ್ನು ಪೂರ್ಣ ಮರುಪಾವತಿ ಮಾಡಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ: ಸೆ. 21ರಿಂದ ಶಾಲಾ-ಕಾಲೇಜು ತೆರೆಯುವುದಿಲ್ಲ!

ಯುಜಿಸಿ ಏಪ್ರಿಲ್ 29ರಂದು ಬಿಡುಗಡೆ ಮಾಡಿದ್ದ ವೇಳಾಪಟ್ಟಿಯ ಪ್ರಕಾರ ಸೆಪ್ಟೆಂಬರ್‌ 1ರಿಂದ ಪದವಿ ಕಾಲೇಜುಗಳು ಆರಂಭವಾಗಬೇಕಿತ್ತು. ಜುಲೈನಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಚ್‌ಆರ್‌ಡಿ) ಕಾಲೇಜುಗಳ ವೇಳಾಪಟ್ಟಿಯ ದಿನಾಂಕ ಪರಿಷ್ಕರಿಸಿ, ವಿಶ್ವವಿದ್ಯಾನಿಲಯಗಳಲ್ಲಿ ಸೆಮಿಸ್ಟರ್ / ಅಂತಿಮ ವರ್ಷದ ಪರೀಕ್ಷೆಗಳನ್ನು ಸೆಪ್ಟೆಂಬರ್ ಅಂತ್ಯದ ವೇಳೆಗೆ ನಡೆಸಲಾಗುವುದು ಎಂದು ತಿಳಿಸಿತ್ತು.

“ಕೊನೆಯ ಸೆಮಿಸ್ಟರ್ ಅನ್ನು 2020 ರ ಸೆಪ್ಟೆಂಬರ್ ಅಂತ್ಯದ ವೇಳೆಗೆ ಆಫ್‌ಲೈನ್ (ಪೆನ್ ಮತ್ತು ಪೇಪರ್) ಅಥವಾ ಆನ್‌ಲೈನ್ ಅಥವಾ ‌ಎರಡು (ಆನ್‌ಲೈನ್ + ಆಫ್‌ಲೈನ್) ವಿಧಾನದಲ್ಲಾದರೂ ನಡೆಸಲಾಗುವುದು” ಎಂದು ಯುಜಿಸಿ ಪತ್ರವೊಂದರಲ್ಲಿ ತಿಳಿಸಿದೆ. ಸದ್ಯ ಸೆಪ್ಟಂಬರ್‌ 1ಕ್ಕೆ ಆರಂಭವಾಗಬೇಕಿದ್ದ ಪದವಿ ತರಗತಿಗಳನ್ನು ನವೆಂಬರ್‌ 1ಕ್ಕೆ ಮುಂದೂಡಿದೆ.

ರಾಜ್ಯದಲ್ಲೂ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಸೆಪ್ಟೆಂಬರ್ 21ರಿಂದ ಹಿನ್ನೆಲೆ ಶಾಲೆ ಮತ್ತು ಪಿಯು ಕಾಲೇಜುಗಳನ್ನು ರೀಓಪನ್ ಮಾಡುವ ನಿರ್ಧಾರವನ್ನು ವಾಪಾಸ್ ತೆಗೆದುಕೊಳ್ಳಲಾಗಿದೆ.


ಇದನ್ನೂ ಓದಿ: ಶಾಲಾ ಶುಲ್ಕ ಮನ್ನಾ ಮಾಡುವ ಪಿಐಎಲ್ ತಿರಸ್ಕರಿಸಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...