Homeಕರ್ನಾಟಕಸ್ಟಾರ್ಟ್‌‌ಅಪ್‍: ಮೈಸೂರಿನಲ್ಲಿ ಬಯೋಪಾಲಿಮರ್‌ ಉದ್ಯಮ ಆರಂಭಿಸಿದ ಚೀನಾ ರಿಟರ್ನ್‌ ಗುರುಪ್ರಸಾದ್!

ಸ್ಟಾರ್ಟ್‌‌ಅಪ್‍: ಮೈಸೂರಿನಲ್ಲಿ ಬಯೋಪಾಲಿಮರ್‌ ಉದ್ಯಮ ಆರಂಭಿಸಿದ ಚೀನಾ ರಿಟರ್ನ್‌ ಗುರುಪ್ರಸಾದ್!

ಚೀನಾ ವಿವಿಯಲ್ಲಿ ಸಂಶೋಧನೆ ಮಾಡುತ್ತಿದ್ದ ಬಳ್ಳಾರಿ ಮೂಲದ ವಿದ್ಯಾರ್ಥಿ, ಲಾಕ್‌ಡೌನ್‌ ಸಮಯದಲ್ಲಿ ಮೈಸೂರಿನಲ್ಲಿ ಉಳಿದು ’ನ್ಯಾನೋ ಲೈಫ್’ ಎನ್ನುವ ಬಯೋ ಗಮ್ ತಯಾರಿಕಾ...

- Advertisement -
- Advertisement -

ಚೀನಾ ವಿಶ್ವವಿದ್ಯಾನಿಲಯದಲ್ಲಿ ಪಿಹೆಚ್‌ಡಿ ಮಾಡಲು ಕರ್ನಾಟಕದಿಂದ ಹೋಗಿದ್ದ ಗುರುಪ್ರಸಾದ್, ಕೊರೊನಾ ಕಾರಣದಿಂದ ಹಿಂದಿರುಗಿ, ಲಾಕ್‌ಡೌನ್‌ ಸಮಯದಲ್ಲಿ ’ನ್ಯಾನೋ ಲೈಫ್’ ಎನ್ನುವ ಬಯೋಪಾಲಿಮರ್‌ ಆಧಾರಿತ ಗಮ್ ತಯಾರಿಸುವ ಸ್ಟಾರ್ಟ್‌‌ಅಪ್‍ ಅನ್ನು ಆರಂಭಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗದಿಂದ ಇಡೀ ಜಗತ್ತೇ ತತ್ತರಿಸುತ್ತಿದ್ದು, ಬಹುತೇಕ ಕ್ಷೇತ್ರಗಳು ತೊಂದರೆಗೊಳಗಾಗಿವೆ. ಈ ವರ್ಷದ ಆರಂಭದಲ್ಲಿ ತಾವು ವರ್ಷಪೂರ್ತಿ ಮಾಡಬೇಕಾದ ಕೆಲಸಗಳ ಯೋಜನಾ ಪಟ್ಟಿಯನ್ನು ಹಲವರು ಸಿದ್ಧಮಾಡಿಕೊಂಡಿದ್ದರು. ಆದರೆ ಆಕಸ್ಮಿಕವಾಗಿ ಅಪ್ಪಳಿಸಿದ ಕೊರೊನಾದಿಂದ ಆ ಯೋಜನೆಗಳೆಲ್ಲ ತಲೆಕೆಳಗಾಗಿವೆ.

ಇದರಿಂದ ಆರ್ಥಿಕ ಮತ್ತು ಶಿಕ್ಷಣ ಕ್ಷೇತ್ರ ದೊಡ್ಡಮಟ್ಟದ ನಷ್ಟವನ್ನು ಎದುರಿಸುತ್ತಿದೆ. ಆದರೂ ಸಹ ಕೆಲವರು ತಮ್ಮ ವ್ಯಾಪ್ತಿಯಲ್ಲಿಯೇ ಏನನ್ನಾದರೂ ಮಾಡಬೇಕು ಎಂದು ತಮ್ಮ ಬತ್ತಳಿಕೆಯಲ್ಲಿದ್ದ ಹೊಸ ಹೊಸ ಯೋಚನೆಗಳಿಗೆ ರೂಪ ಕೊಡಲು ಆರಂಭಿಸಿದ್ದಾರೆ. ಇದರ ಪ್ರತಿಫಲವೇ ಇಂದು ನೂರಾರು ಯುವ ಮನಸ್ಸುಗಳು ಸ್ವಂತ ಚಿಂತನೆಯನ್ನು ಕಾರ್ಯರೂಪಕ್ಕಿಳಿಸಿ ರಚನಾತ್ಮಕ ಕ್ರಿಯೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ಆರ್ಥಿಕತೆಯಲ್ಲಿ ಭಾರತವನ್ನು ಹಿಂದಿಕ್ಕಲಿರುವ ಬಾಂಗ್ಲಾದೇಶ!

ಈ ನಿಟ್ಟಿನಲ್ಲಿ ಕೊರೊನಾ ವೈರಸ್‌ ತವರಾದ ಚೀನಾದಲ್ಲಿ ಸಂಶೋಧನೆ ಮಾಡಲು ಹೋಗಿದ್ದ ಬಳ್ಳಾರಿ ಮೂಲದ ಗುರುಪ್ರಸಾದ್.ಕೆ.ವೈ ಎಂಬುವವರು ಪ್ರಸ್ತುತ ಮೈಸೂರಿನಲ್ಲಿ “ನ್ಯಾನೋ ಲೈಫ್” ಎನ್ನುವ ಬಯೋಪಾಲಿಮರ್ ಆಧಾರಿತ ಉದ್ಯಮವೊಂದನ್ನು ಆರಂಭಿಸಿದ್ದಾರೆ.

ಜಗತ್ತಿನ ಪ್ರತಿಷ್ಟಿತ 100 ವಿಶ್ವವಿದ್ಯಾನಿಲಯಗಳ ಪೈಕಿ 52ನೇ ಸ್ಥಾನದಲ್ಲಿರುವ ಹ್ಯಾಂಗ್‌ಜ಼ೂ ವಿವಿಯಲ್ಲಿ ಸಂಶೋಧನಾ ಕೋರ್ಸನ್ನು ಮುಗಿಸಿ ರಜೆಗೆಂದು ಭಾರತಕ್ಕೆ ಮರಳಿದ್ದ ಇವರು ಕೊರೊನಾ ಕಾರಣಕ್ಕಾಗಿ ಹೇರಲಾದ ಲಾಕ್‌ಡೌನ್‌ನಿಂದ ಭಾರತದಲ್ಲೇ ಉಳಿಯಬೇಕಾಯಿತು. ಈ ಸಂದರ್ಭವನ್ನು ತಮ್ಮ ಚಿಂತನೆಗಳಿಗೆ ಮೂರ್ತರೂಪ ನೀಡುವ ಸಲುವಾಗಿ ಉಪಯೋಗಿಸಿಕೊಂಡು ಸ್ಟಾರ್ಟ್‌‌ಅಪ್‍ ಒಂದನ್ನು ಗೆಳಯರೊಡಗೂಡಿ ಆರಂಭಿಸಿದ್ದಾರೆ.

ಇದನ್ನೂ ಓದಿ: ಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

ಕನ್ನಡದ ಖ್ಯಾತ ಗಾಯಕ ನವೀನ್ ಸಜ್ಜು ಮತ್ತು ಗುರುಪ್ರಸಾದ್ ಜಂಟಿಯಾಗಿ ಇದಕ್ಕೆ ಬಂಡವಾಳ ಹೂಡಿದ್ದು, ಮೈಸೂರಿನ ಎಂ.ಎಂ.ಸುಗುಣ ಅವರ ಮುಂದಾಳತ್ವದಲ್ಲಿ ಆಕರ್ಷ್‌ ಕುಮಾರ್‌ ಸೇರಿದಂತೆ ಕೆಲವು ಗೆಳಯರು ಒಟ್ಟಾಗಿ ಈ ಉದ್ಯಮವನ್ನು ಆರಂಭಿಸಿದ್ದಾರೆ.

ಮೂಲತಃ ಜೀವರಾಸಾಯನಿಕ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿ, ಅದರಲ್ಲಿಯೇ ಸಂಶೊಧನೆ ಮಾಡುತ್ತಿದ್ದ ಗುರುಪ್ರಸಾದ್, ತಮ್ಮ ಈ ಹೊಸ ಉದ್ಯಮದ ಮೂಲಕ ಗೆಣಸುಗಳಿಂದ ’ಗಮ್’ (ಅಂಟು) ತಯಾರಿಸಲು ಮುಂದಾಗಿದ್ದಾರೆ. ಇಂತಹ ಉದ್ಯಮಗಳು ಕರ್ನಾಟಕದಾದ್ಯಂತ ಕೇವಲ ಬೆರಳೆಣಿಕೆಯಷ್ಟಿದ್ದು ಮಾರುಕಟ್ಟೆಯಲ್ಲಿರುವ ಈ ಗಮ್‌ ಬೇಡಿಕೆಯನ್ನು ಕೇವಲ 8-10 ಉದ್ಯಮಗಳಷ್ಟೆ ಪೂರೈಸುತ್ತಿವೆ. ಅದರಲ್ಲೂ ಮೈಸೂರಿನಲ್ಲಂತೂ ಒಂದು ಕಂಪನಿ ಮಾತ್ರ ಈ ಗಮ್ ತಯಾರಿಕೆಯಲ್ಲಿ ತೊಡಗಿಸಿಕೊಂಡಿದೆ.

ಇದರ ಕುರಿತು ನಾನುಗೌರಿ.ಕಂ ಜೊತೆ ಮಾತನಾಡಿದ ಗುರುಪ್ರಸಾದ್, “ವಿಜ್ಞಾನ ವಿದ್ಯಾರ್ಥಿಯಾಗಿ ವಿಜ್ಞಾನವನ್ನು ಜನರೆಡೆಗೆ ತಲುಪಿಸುವ ಕೆಲಸವನ್ನು ಮಾಡಬೇಕೆಂಬುದು ನನ್ನ ಉದ್ದೇಶ. ಇದರ ಭಾಗವಾಗಿಯೇ ಮೊದಲ ಸಣ್ಣ ಪ್ರಯತ್ನ ಇದು. ಈ ಉದ್ಯಮದಲ್ಲಿ ಕೆಲಸ ಆರಂಭವಾದ ಕೆಲವು ದಿನಗಳ ನಂತರ ನನ್ನ ಸಂಶೋಧನೆಯನ್ನು ಮುಕ್ತಾಯಗೊಳಿಸಲು ಮತ್ತೆ ಚೀನಾಕ್ಕೆ ಹೋಗುತ್ತೇನೆ” ಎಂದು ಹೇಳಿದರು.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

“ತಯಾರಾಗಿರುವ ಯಾವುದೇ ವಸ್ತುಗಳನ್ನು ಕೊನೆಯ ಹಂತದಲ್ಲಿ ರಟ್ಟಿನ ಬಾಕ್ಸ್‌ನಲ್ಲಿ ಪ್ಯಾಕ್ ಮಾಡಲಾಗುತ್ತದೆ. ತೆಳುವಾದ ಹಾಳೆಗಳನ್ನು ಅಂಟಿಸಿ ಅಗತ್ಯಕ್ಕೆ ತಕ್ಕ ಗಾತ್ರದಲ್ಲಿ ಈ ರಟ್ಟನ್ನು ತಯಾರಿಸಲಾಗುತ್ತದೆ. ಈ ಹಾಳೆಗಳನ್ನು ಅಂಟಿಸುವ ಗಮ್ ಅನ್ನು ಆಲೂಗೆಡ್ಡೆಯಂತಹ ಸಿಹಿಗೆಣಸು ಮತ್ತು ಕಾಳುಗಳಿಂದ ತಯಾರಿಸುವ ಈ ಪೌಡರ್‌ ಅನ್ನು ನಮ್ಮ ’ನ್ಯಾನೋ ಲೈಫ್‌’ನಲ್ಲಿ ತಯಾರಿಸಲಾಗುತ್ತದೆ. ಗೆಣಸು ಮತ್ತು ಕಾಳುಗಳನ್ನು ರಾಸಾಯನಿಕ ಕ್ರಿಯೆಗೆ ಒಳಪಡಿಸಿ, ಗಮ್ ಪೌಡರ್‌ ತಯಾರಿಸಿ ಮಾರುಕಟ್ಟಗೆ ವಿತರಿಸಲಾಗುತ್ತದೆ. ಇದು ನಮ್ಮ ಸ್ಟಾರ್ಟ್‌‌ಅಪ್‍ ನಿರ್ವಹಿಸುವ ಕೆಲಸ” ಎಂದು ಹೇಳಿದರು.

“ಭವಿಷ್ಯದಲ್ಲಿ ಭಾರತ ಸೇರಿದಂತೆ ಇಡೀ ಜಗತ್ತೇ ಆರ್ಥಿಕ ಕುಸಿತದ ಸುಳಿಯಲ್ಲಿ ಸಿಲುಕಿ, ಮಧ್ಯಮ ಮತ್ತು ಕೆಳಮಧ್ಯಮ ವರ್ಗ ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆಯಿದೆ. ಇಂತಹ ಸಂದರ್ಭದಲ್ಲಿ ಈ ಸ್ಟಾರ್ಟ್‌‌ಅಪ್‌ಗಳು ನನಗೆ ಭರವಸೆಯಾಗಿ ಕಂಡಿತು. ಇದು ನಿಜವಾದ ಆತ್ಮನಿರ್ಭರತೆ ಅಥವಾ ಗಾಂಧಿ ಕನಸಿನ ಸ್ವಾಯತ್ತ ಸಮಾಜದ ಆಶಯವಾಗಿದೆ. ಆದರೆ ಸರ್ಕಾರಗಳ ಆಶ್ವಾಸನೆಗಳು ಕೇವಲ ಆಶ್ವಾಸನೆಗಳಾಗಿ ಅಥವಾ ಪೇಪರ್‌ಗಳಲ್ಲಿ ಉಳಿದುಕೊಂಡಿವೆಯೇ ಹೊರತು ಯುವ ಸಮೂಹಕ್ಕೆ ಬೆಳಕಾಗಿಲ್ಲ. ಇಂದಿನ ಯುವ ಭಾರತ ಎದುರಿಸುತ್ತಿರುವ ನಿರುದ್ಯೋಗದ ಸಮಸ್ಯೆಯನ್ನು ಕೇವಲ ಆಶ್ವಾಸನೆಯ ಆತ್ಮನಿರ್ಭರತೆ ನಿವಾರಿಸಲು ಸಾಧ್ಯವಿಲ್ಲ. ಬದಲಿಗೆ ಇಂತಹ ಪ್ರಯತ್ನಗಳಿಗೆ ಸರ್ಕರದಿಂದ ಸಿಗುವ ಬೆಂಬಲ ಯುವಜನತೆಯ ಆತ್ಮವಿಶ್ವಾಸವನ್ನು ಹೆಚ್ಚಿಸುವುದರ ಮೂಲಕ ಬೃಹತ್ ಮಾನವ ಸಂಪನ್ಮೂಲದ ಹೊಸ ಆಲೋಚನೆಗಳನ್ನು ಜಾಗತಿಕವಾಗಿ ತೆರೆದಿಡುತ್ತದೆ. ಆಗ ಮಾತ್ರ ವೈಯಕ್ತಿಕವಾಗಿ ನಾವೂ ಮತ್ತು ದೇಶವೂ ಅಭಿವೃದ್ಧಿಯ ಪಥದತ್ತ ಸಾಗಲು ಸಾಧ್ಯ” ಎಂದು ಹೇಳಿದರು.

ಇದನ್ನೂ ಓದಿ: ಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ಪ್ರಸ್ತುತ ನಮ್ಮ ದೇಶದಲ್ಲಿ, ಸರ್ಕಾರದ ಅವೈಜ್ಞಾನಿಕ ನೀತಿಗಳಿಂದ ಭಾರತದ ಆರ್ಥಿಕತೆ ನೆಲಕಚ್ಚಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿಯು ಶೇ -23ಕ್ಕೆ ಕುಸಿದಿತ್ತು. ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ ಕಳೆದ ತಿಂಗಳು ಬಿಡುಗಡೆ ಮಾಡಿದ ವರದಿಯಲ್ಲಿ ಏಷ್ಯಾದ ರಾಷ್ಟ್ರಗಳ ಪೈಕಿ ಭಾರತದ ಆರ್ಥಿಕತೆಯು ಅತ್ಯಂತ ಕಳಪೆ ಮಟ್ಟದಲ್ಲಿದೆ ಎಂದು ಹೇಳಿತ್ತು. ಇನ್ನು ಆರ್‌ಬಿಐನ ಉಪ ಗವರ್ನರ್‌ ಇತ್ತೀಚೆಗೆ, ಭಾರತದ ಆರ್ಥಿಕತೆ ಚೇತರಿಸಿಕೊಳ್ಳಲು ಕೆಲವು ವರ್ಷಗಳೇ ಬೇಕಾಗಬಹುದು ಎಂದಿದ್ದರು.

ಇಂತಹ ಸಂರ್ಭದಲ್ಲಿ ಈ ಬೆಳವಣಿಗೆಗಳು ಸ್ವಲ್ಪಮಟ್ಟಿಗೆ ಆಶಾದಾಯಕವೆನಿಸುತ್ತದೆ. ಹಾಗಾಗಿ ಈ ತಲೆಮಾರಿನ ಹೊಸ ಆಲೋಚನೆಗಳಿಗೆ ರಚನಾತ್ಮಕ ರೂಪ ಕೊಡುವ ಜವಾಬ್ದಾರಿ ನಮ್ಮ ಸರ್ಕಾರ ಸೇರಿದಂತೆ ಇಡೀ ಸಮಾಜದ ಮೇಲಿದೆ.


ಇದನ್ನೂ ಓದಿ: ದೋಷಪೂರಿತ ಜಿಎಸ್‌ಟಿ ದೇಶದ ಆರ್ಥಿಕತೆಯನ್ನು ನಾಶಮಾಡಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...