Homeಕರ್ನಾಟಕಸ್ಟಾರ್ಟ್‌‌ಅಪ್‍: ಮೈಸೂರಿನಲ್ಲಿ ಬಯೋಪಾಲಿಮರ್‌ ಉದ್ಯಮ ಆರಂಭಿಸಿದ ಚೀನಾ ರಿಟರ್ನ್‌ ಗುರುಪ್ರಸಾದ್!

ಸ್ಟಾರ್ಟ್‌‌ಅಪ್‍: ಮೈಸೂರಿನಲ್ಲಿ ಬಯೋಪಾಲಿಮರ್‌ ಉದ್ಯಮ ಆರಂಭಿಸಿದ ಚೀನಾ ರಿಟರ್ನ್‌ ಗುರುಪ್ರಸಾದ್!

ಚೀನಾ ವಿವಿಯಲ್ಲಿ ಸಂಶೋಧನೆ ಮಾಡುತ್ತಿದ್ದ ಬಳ್ಳಾರಿ ಮೂಲದ ವಿದ್ಯಾರ್ಥಿ, ಲಾಕ್‌ಡೌನ್‌ ಸಮಯದಲ್ಲಿ ಮೈಸೂರಿನಲ್ಲಿ ಉಳಿದು ’ನ್ಯಾನೋ ಲೈಫ್’ ಎನ್ನುವ ಬಯೋ ಗಮ್ ತಯಾರಿಕಾ...

- Advertisement -
- Advertisement -

ಚೀನಾ ವಿಶ್ವವಿದ್ಯಾನಿಲಯದಲ್ಲಿ ಪಿಹೆಚ್‌ಡಿ ಮಾಡಲು ಕರ್ನಾಟಕದಿಂದ ಹೋಗಿದ್ದ ಗುರುಪ್ರಸಾದ್, ಕೊರೊನಾ ಕಾರಣದಿಂದ ಹಿಂದಿರುಗಿ, ಲಾಕ್‌ಡೌನ್‌ ಸಮಯದಲ್ಲಿ ’ನ್ಯಾನೋ ಲೈಫ್’ ಎನ್ನುವ ಬಯೋಪಾಲಿಮರ್‌ ಆಧಾರಿತ ಗಮ್ ತಯಾರಿಸುವ ಸ್ಟಾರ್ಟ್‌‌ಅಪ್‍ ಅನ್ನು ಆರಂಭಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗದಿಂದ ಇಡೀ ಜಗತ್ತೇ ತತ್ತರಿಸುತ್ತಿದ್ದು, ಬಹುತೇಕ ಕ್ಷೇತ್ರಗಳು ತೊಂದರೆಗೊಳಗಾಗಿವೆ. ಈ ವರ್ಷದ ಆರಂಭದಲ್ಲಿ ತಾವು ವರ್ಷಪೂರ್ತಿ ಮಾಡಬೇಕಾದ ಕೆಲಸಗಳ ಯೋಜನಾ ಪಟ್ಟಿಯನ್ನು ಹಲವರು ಸಿದ್ಧಮಾಡಿಕೊಂಡಿದ್ದರು. ಆದರೆ ಆಕಸ್ಮಿಕವಾಗಿ ಅಪ್ಪಳಿಸಿದ ಕೊರೊನಾದಿಂದ ಆ ಯೋಜನೆಗಳೆಲ್ಲ ತಲೆಕೆಳಗಾಗಿವೆ.

ಇದರಿಂದ ಆರ್ಥಿಕ ಮತ್ತು ಶಿಕ್ಷಣ ಕ್ಷೇತ್ರ ದೊಡ್ಡಮಟ್ಟದ ನಷ್ಟವನ್ನು ಎದುರಿಸುತ್ತಿದೆ. ಆದರೂ ಸಹ ಕೆಲವರು ತಮ್ಮ ವ್ಯಾಪ್ತಿಯಲ್ಲಿಯೇ ಏನನ್ನಾದರೂ ಮಾಡಬೇಕು ಎಂದು ತಮ್ಮ ಬತ್ತಳಿಕೆಯಲ್ಲಿದ್ದ ಹೊಸ ಹೊಸ ಯೋಚನೆಗಳಿಗೆ ರೂಪ ಕೊಡಲು ಆರಂಭಿಸಿದ್ದಾರೆ. ಇದರ ಪ್ರತಿಫಲವೇ ಇಂದು ನೂರಾರು ಯುವ ಮನಸ್ಸುಗಳು ಸ್ವಂತ ಚಿಂತನೆಯನ್ನು ಕಾರ್ಯರೂಪಕ್ಕಿಳಿಸಿ ರಚನಾತ್ಮಕ ಕ್ರಿಯೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ಆರ್ಥಿಕತೆಯಲ್ಲಿ ಭಾರತವನ್ನು ಹಿಂದಿಕ್ಕಲಿರುವ ಬಾಂಗ್ಲಾದೇಶ!

ಈ ನಿಟ್ಟಿನಲ್ಲಿ ಕೊರೊನಾ ವೈರಸ್‌ ತವರಾದ ಚೀನಾದಲ್ಲಿ ಸಂಶೋಧನೆ ಮಾಡಲು ಹೋಗಿದ್ದ ಬಳ್ಳಾರಿ ಮೂಲದ ಗುರುಪ್ರಸಾದ್.ಕೆ.ವೈ ಎಂಬುವವರು ಪ್ರಸ್ತುತ ಮೈಸೂರಿನಲ್ಲಿ “ನ್ಯಾನೋ ಲೈಫ್” ಎನ್ನುವ ಬಯೋಪಾಲಿಮರ್ ಆಧಾರಿತ ಉದ್ಯಮವೊಂದನ್ನು ಆರಂಭಿಸಿದ್ದಾರೆ.

ಜಗತ್ತಿನ ಪ್ರತಿಷ್ಟಿತ 100 ವಿಶ್ವವಿದ್ಯಾನಿಲಯಗಳ ಪೈಕಿ 52ನೇ ಸ್ಥಾನದಲ್ಲಿರುವ ಹ್ಯಾಂಗ್‌ಜ಼ೂ ವಿವಿಯಲ್ಲಿ ಸಂಶೋಧನಾ ಕೋರ್ಸನ್ನು ಮುಗಿಸಿ ರಜೆಗೆಂದು ಭಾರತಕ್ಕೆ ಮರಳಿದ್ದ ಇವರು ಕೊರೊನಾ ಕಾರಣಕ್ಕಾಗಿ ಹೇರಲಾದ ಲಾಕ್‌ಡೌನ್‌ನಿಂದ ಭಾರತದಲ್ಲೇ ಉಳಿಯಬೇಕಾಯಿತು. ಈ ಸಂದರ್ಭವನ್ನು ತಮ್ಮ ಚಿಂತನೆಗಳಿಗೆ ಮೂರ್ತರೂಪ ನೀಡುವ ಸಲುವಾಗಿ ಉಪಯೋಗಿಸಿಕೊಂಡು ಸ್ಟಾರ್ಟ್‌‌ಅಪ್‍ ಒಂದನ್ನು ಗೆಳಯರೊಡಗೂಡಿ ಆರಂಭಿಸಿದ್ದಾರೆ.

ಇದನ್ನೂ ಓದಿ: ಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

ಕನ್ನಡದ ಖ್ಯಾತ ಗಾಯಕ ನವೀನ್ ಸಜ್ಜು ಮತ್ತು ಗುರುಪ್ರಸಾದ್ ಜಂಟಿಯಾಗಿ ಇದಕ್ಕೆ ಬಂಡವಾಳ ಹೂಡಿದ್ದು, ಮೈಸೂರಿನ ಎಂ.ಎಂ.ಸುಗುಣ ಅವರ ಮುಂದಾಳತ್ವದಲ್ಲಿ ಆಕರ್ಷ್‌ ಕುಮಾರ್‌ ಸೇರಿದಂತೆ ಕೆಲವು ಗೆಳಯರು ಒಟ್ಟಾಗಿ ಈ ಉದ್ಯಮವನ್ನು ಆರಂಭಿಸಿದ್ದಾರೆ.

ಮೂಲತಃ ಜೀವರಾಸಾಯನಿಕ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿ, ಅದರಲ್ಲಿಯೇ ಸಂಶೊಧನೆ ಮಾಡುತ್ತಿದ್ದ ಗುರುಪ್ರಸಾದ್, ತಮ್ಮ ಈ ಹೊಸ ಉದ್ಯಮದ ಮೂಲಕ ಗೆಣಸುಗಳಿಂದ ’ಗಮ್’ (ಅಂಟು) ತಯಾರಿಸಲು ಮುಂದಾಗಿದ್ದಾರೆ. ಇಂತಹ ಉದ್ಯಮಗಳು ಕರ್ನಾಟಕದಾದ್ಯಂತ ಕೇವಲ ಬೆರಳೆಣಿಕೆಯಷ್ಟಿದ್ದು ಮಾರುಕಟ್ಟೆಯಲ್ಲಿರುವ ಈ ಗಮ್‌ ಬೇಡಿಕೆಯನ್ನು ಕೇವಲ 8-10 ಉದ್ಯಮಗಳಷ್ಟೆ ಪೂರೈಸುತ್ತಿವೆ. ಅದರಲ್ಲೂ ಮೈಸೂರಿನಲ್ಲಂತೂ ಒಂದು ಕಂಪನಿ ಮಾತ್ರ ಈ ಗಮ್ ತಯಾರಿಕೆಯಲ್ಲಿ ತೊಡಗಿಸಿಕೊಂಡಿದೆ.

ಇದರ ಕುರಿತು ನಾನುಗೌರಿ.ಕಂ ಜೊತೆ ಮಾತನಾಡಿದ ಗುರುಪ್ರಸಾದ್, “ವಿಜ್ಞಾನ ವಿದ್ಯಾರ್ಥಿಯಾಗಿ ವಿಜ್ಞಾನವನ್ನು ಜನರೆಡೆಗೆ ತಲುಪಿಸುವ ಕೆಲಸವನ್ನು ಮಾಡಬೇಕೆಂಬುದು ನನ್ನ ಉದ್ದೇಶ. ಇದರ ಭಾಗವಾಗಿಯೇ ಮೊದಲ ಸಣ್ಣ ಪ್ರಯತ್ನ ಇದು. ಈ ಉದ್ಯಮದಲ್ಲಿ ಕೆಲಸ ಆರಂಭವಾದ ಕೆಲವು ದಿನಗಳ ನಂತರ ನನ್ನ ಸಂಶೋಧನೆಯನ್ನು ಮುಕ್ತಾಯಗೊಳಿಸಲು ಮತ್ತೆ ಚೀನಾಕ್ಕೆ ಹೋಗುತ್ತೇನೆ” ಎಂದು ಹೇಳಿದರು.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

“ತಯಾರಾಗಿರುವ ಯಾವುದೇ ವಸ್ತುಗಳನ್ನು ಕೊನೆಯ ಹಂತದಲ್ಲಿ ರಟ್ಟಿನ ಬಾಕ್ಸ್‌ನಲ್ಲಿ ಪ್ಯಾಕ್ ಮಾಡಲಾಗುತ್ತದೆ. ತೆಳುವಾದ ಹಾಳೆಗಳನ್ನು ಅಂಟಿಸಿ ಅಗತ್ಯಕ್ಕೆ ತಕ್ಕ ಗಾತ್ರದಲ್ಲಿ ಈ ರಟ್ಟನ್ನು ತಯಾರಿಸಲಾಗುತ್ತದೆ. ಈ ಹಾಳೆಗಳನ್ನು ಅಂಟಿಸುವ ಗಮ್ ಅನ್ನು ಆಲೂಗೆಡ್ಡೆಯಂತಹ ಸಿಹಿಗೆಣಸು ಮತ್ತು ಕಾಳುಗಳಿಂದ ತಯಾರಿಸುವ ಈ ಪೌಡರ್‌ ಅನ್ನು ನಮ್ಮ ’ನ್ಯಾನೋ ಲೈಫ್‌’ನಲ್ಲಿ ತಯಾರಿಸಲಾಗುತ್ತದೆ. ಗೆಣಸು ಮತ್ತು ಕಾಳುಗಳನ್ನು ರಾಸಾಯನಿಕ ಕ್ರಿಯೆಗೆ ಒಳಪಡಿಸಿ, ಗಮ್ ಪೌಡರ್‌ ತಯಾರಿಸಿ ಮಾರುಕಟ್ಟಗೆ ವಿತರಿಸಲಾಗುತ್ತದೆ. ಇದು ನಮ್ಮ ಸ್ಟಾರ್ಟ್‌‌ಅಪ್‍ ನಿರ್ವಹಿಸುವ ಕೆಲಸ” ಎಂದು ಹೇಳಿದರು.

“ಭವಿಷ್ಯದಲ್ಲಿ ಭಾರತ ಸೇರಿದಂತೆ ಇಡೀ ಜಗತ್ತೇ ಆರ್ಥಿಕ ಕುಸಿತದ ಸುಳಿಯಲ್ಲಿ ಸಿಲುಕಿ, ಮಧ್ಯಮ ಮತ್ತು ಕೆಳಮಧ್ಯಮ ವರ್ಗ ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆಯಿದೆ. ಇಂತಹ ಸಂದರ್ಭದಲ್ಲಿ ಈ ಸ್ಟಾರ್ಟ್‌‌ಅಪ್‌ಗಳು ನನಗೆ ಭರವಸೆಯಾಗಿ ಕಂಡಿತು. ಇದು ನಿಜವಾದ ಆತ್ಮನಿರ್ಭರತೆ ಅಥವಾ ಗಾಂಧಿ ಕನಸಿನ ಸ್ವಾಯತ್ತ ಸಮಾಜದ ಆಶಯವಾಗಿದೆ. ಆದರೆ ಸರ್ಕಾರಗಳ ಆಶ್ವಾಸನೆಗಳು ಕೇವಲ ಆಶ್ವಾಸನೆಗಳಾಗಿ ಅಥವಾ ಪೇಪರ್‌ಗಳಲ್ಲಿ ಉಳಿದುಕೊಂಡಿವೆಯೇ ಹೊರತು ಯುವ ಸಮೂಹಕ್ಕೆ ಬೆಳಕಾಗಿಲ್ಲ. ಇಂದಿನ ಯುವ ಭಾರತ ಎದುರಿಸುತ್ತಿರುವ ನಿರುದ್ಯೋಗದ ಸಮಸ್ಯೆಯನ್ನು ಕೇವಲ ಆಶ್ವಾಸನೆಯ ಆತ್ಮನಿರ್ಭರತೆ ನಿವಾರಿಸಲು ಸಾಧ್ಯವಿಲ್ಲ. ಬದಲಿಗೆ ಇಂತಹ ಪ್ರಯತ್ನಗಳಿಗೆ ಸರ್ಕರದಿಂದ ಸಿಗುವ ಬೆಂಬಲ ಯುವಜನತೆಯ ಆತ್ಮವಿಶ್ವಾಸವನ್ನು ಹೆಚ್ಚಿಸುವುದರ ಮೂಲಕ ಬೃಹತ್ ಮಾನವ ಸಂಪನ್ಮೂಲದ ಹೊಸ ಆಲೋಚನೆಗಳನ್ನು ಜಾಗತಿಕವಾಗಿ ತೆರೆದಿಡುತ್ತದೆ. ಆಗ ಮಾತ್ರ ವೈಯಕ್ತಿಕವಾಗಿ ನಾವೂ ಮತ್ತು ದೇಶವೂ ಅಭಿವೃದ್ಧಿಯ ಪಥದತ್ತ ಸಾಗಲು ಸಾಧ್ಯ” ಎಂದು ಹೇಳಿದರು.

ಇದನ್ನೂ ಓದಿ: ಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ಪ್ರಸ್ತುತ ನಮ್ಮ ದೇಶದಲ್ಲಿ, ಸರ್ಕಾರದ ಅವೈಜ್ಞಾನಿಕ ನೀತಿಗಳಿಂದ ಭಾರತದ ಆರ್ಥಿಕತೆ ನೆಲಕಚ್ಚಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿಯು ಶೇ -23ಕ್ಕೆ ಕುಸಿದಿತ್ತು. ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ ಕಳೆದ ತಿಂಗಳು ಬಿಡುಗಡೆ ಮಾಡಿದ ವರದಿಯಲ್ಲಿ ಏಷ್ಯಾದ ರಾಷ್ಟ್ರಗಳ ಪೈಕಿ ಭಾರತದ ಆರ್ಥಿಕತೆಯು ಅತ್ಯಂತ ಕಳಪೆ ಮಟ್ಟದಲ್ಲಿದೆ ಎಂದು ಹೇಳಿತ್ತು. ಇನ್ನು ಆರ್‌ಬಿಐನ ಉಪ ಗವರ್ನರ್‌ ಇತ್ತೀಚೆಗೆ, ಭಾರತದ ಆರ್ಥಿಕತೆ ಚೇತರಿಸಿಕೊಳ್ಳಲು ಕೆಲವು ವರ್ಷಗಳೇ ಬೇಕಾಗಬಹುದು ಎಂದಿದ್ದರು.

ಇಂತಹ ಸಂರ್ಭದಲ್ಲಿ ಈ ಬೆಳವಣಿಗೆಗಳು ಸ್ವಲ್ಪಮಟ್ಟಿಗೆ ಆಶಾದಾಯಕವೆನಿಸುತ್ತದೆ. ಹಾಗಾಗಿ ಈ ತಲೆಮಾರಿನ ಹೊಸ ಆಲೋಚನೆಗಳಿಗೆ ರಚನಾತ್ಮಕ ರೂಪ ಕೊಡುವ ಜವಾಬ್ದಾರಿ ನಮ್ಮ ಸರ್ಕಾರ ಸೇರಿದಂತೆ ಇಡೀ ಸಮಾಜದ ಮೇಲಿದೆ.


ಇದನ್ನೂ ಓದಿ: ದೋಷಪೂರಿತ ಜಿಎಸ್‌ಟಿ ದೇಶದ ಆರ್ಥಿಕತೆಯನ್ನು ನಾಶಮಾಡಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...