Homeಅಂತರಾಷ್ಟ್ರೀಯಗಾಝಾದಲ್ಲಿ ಮಾನವೀಯ ಬಿಕ್ಕಟ್ಟು: ಹಸಿವು ತಾಳಲಾರದೆ ಟ್ರಕ್‌ಗಳನ್ನು ತಡೆದು ಆಹಾರ ಕಸಿದುಕೊಳ್ಳುತ್ತಿರುವ ಜನ

ಗಾಝಾದಲ್ಲಿ ಮಾನವೀಯ ಬಿಕ್ಕಟ್ಟು: ಹಸಿವು ತಾಳಲಾರದೆ ಟ್ರಕ್‌ಗಳನ್ನು ತಡೆದು ಆಹಾರ ಕಸಿದುಕೊಳ್ಳುತ್ತಿರುವ ಜನ

- Advertisement -
- Advertisement -

ಕಳೆದ 2 ತಿಂಗಳಿನಿಂದ ಇಸ್ರೇಲ್‌, ಪ್ಯಾಲೆಸ್ತೀನ್‌ ಮೇಲೆ ನಿರಂತರ ಬಾಂಬ್‌ ದಾಳಿ ನಡೆಸುತ್ತಿದೆ. ಈ ಭೀಕರ ಯುದ್ಧ ಗಾಝಾದಲ್ಲಿ ಹತ್ಯಾಕಾಂಡದ ಜೊತೆ ಮಾನವೀಯ ಬಿಕ್ಕಟ್ಟನ್ನು ಸೃಷ್ಟಿಸಿದೆ. ಗಾಝಾದ ರಫಾ ಕ್ರಾಸಿಂಗ್‌ನಲ್ಲಿ ಆಹಾರ, ನೀರಿಗಾಗಿ ಜನರು ಟ್ರಕ್‌ಗಳನ್ನು ತಡೆಯುತ್ತಿದ್ದು, ಹಸಿವಿನಿಂದ ತತ್ತರಿಸಿದ ಜನರು ಪರಿಹಾರ ಸಾಮಾಗ್ರಿ ವಾಹನಗಳನ್ನು ತಡೆದು ಆಹಾರ ಕಸಿದು ತಿನ್ನುತ್ತಿರುವ ಮನಕಲಕುವ ದೃಶ್ಯಗಳು ಕಂಡು ಬಂದಿದೆ.

ಗಾಝಾದ ದಕ್ಷಿಣಕ್ಕೆ ಇಸ್ರೇಲ್‌ ಯುದ್ಧ ಘೋಷಣೆ ಬಳಿಕ ಲಕ್ಷಾಂತರ ಮಂದಿ ವಲಸೆ ಹೋಗಿದ್ದಾರೆ. ಇದರಿಂದ ಗಾಝಾದ ದಕ್ಷಿಣದಲ್ಲಿ ನಿರಾಶ್ರಿತರ ಕೇಂದ್ರಗಳಲ್ಲಿ ಲಕ್ಷಾಂತರ ಮಂದಿ ನೆಲೆಸಿದ್ದಾರೆ. ಈ ಭಾಗದಲ್ಲಿ ಹಸಿದ ಮತ್ತು ಹತಾಶೆಯ ಜನರು ಈಜಿಪ್ಟ್‌ನ ಗಡಿಯ ಸಮೀಪವಿರುವ ರಫಾ ಪ್ರದೇಶದಲ್ಲಿ ಆಹಾರ ಮತ್ತು ಇತರ ಸರಬರಾಜುಗಳನ್ನು ಸಾಗಿಸುವ ಟ್ರಕ್‌ಗಳನ್ನು ತಡೆಯುವುದು. ಆಹಾರ ಪೊಟ್ಟಣಗಳನ್ನು ಕಸಿದುಕೊಳ್ಳುತ್ತಿರುವುದು ಕಂಡು ಬಂದಿದೆ.

ರಫಾ ಕ್ರಾಸಿಂಗ್‌ನಲ್ಲಿ ಜನರು ನೆರವು ಸಾಗಾಟ ಮಾಡುವ ಟ್ರಕ್‌ಗಳನ್ನು ಸುತ್ತುವರಿಯುತ್ತಾರೆ, ಕೆಲವರು ಟ್ರಕ್‌ಗಳ ಮೇಲೆ ಹಾರುತ್ತಾರೆ. ನೀರಿನ ಬಾಟಲಿಗಳನ್ನು, ಆಹಾರದ ಪೊಟ್ಟಣಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಕೆಲವು ಟ್ರಕ್‌ಗಳನ್ನು ಮುಸುಕುಧಾರಿಗಳು ಕಾವಲು ಕಾಯುತ್ತಿರುವುದು ಕೂಡ ಕಂಡು ಬಂದಿದೆ.

ಇದು ಕೇವಲ ರಫಾ ನಗರದ ಸ್ಥಿತಿ ಮಾತ್ರವಲ್ಲ. ಗಾಝಾದಲ್ಲಿನ ಮಾನವೀಯ ಪರಿಸ್ಥಿತಿಯು ತುಂಬಾ ಕೆಟ್ಟದಾಗಿದೆ. ಒಂದು ಮಿಲಿಯನ್ ನಿರಾಶ್ರಿತ ಪ್ಯಾಲೆಸ್ತೀನ್‌ ನಾಗರಿಕರು ಹಸಿವು ಮತ್ತು ಬಾಯಾರಿಕೆಯಿಂದ ಬಳಲುತ್ತಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಪ್ಯಾಲೆಸ್ತೀನ್‌ಗೆ ಹರಿದು ಬರುತ್ತಿರುವ ನೆರವು ಸಾಕಾಗುತ್ತಿಲ್ಲ. ಜನರು ಮನೆಯಿಲ್ಲದೆ, ಆಹಾರವಿಲ್ಲದೆ, ನೀರಿಲ್ಲದೆ ಮತ್ತು ವೈದ್ಯಕೀಯ ಸಾಮಗ್ರಿಗಳಿಲ್ಲದೆ ಪರದಾಡುತ್ತಿದ್ದಾರೆ. ವಿಶ್ವಸಂಸ್ಥೆಯು ಇತ್ತೀಚೆಗೆ ಗಾಝಾದಲ್ಲಿರುವ ಜನರು ಆಹಾರಕ್ಕಾಗಿ ಹತಾಶರಾಗಿದ್ದಾರೆ, ಅವರು ನೆರವು ಟ್ರಕ್‌ಗಳನ್ನು ತಡೆದು ಸಿಕ್ಕಿದ್ದನ್ನು ಕಸಿದುಕೊಂಡು ತಿನ್ನುವ ಸ್ಥಿತಿಯಲ್ಲಿದ್ದಾರೆ ಎಂದು ಹೇಳಿತ್ತು.

ಇತ್ತೀಚೆಗೆ ಗಾಝಾ ಪಟ್ಟಿಗೆ ಭೇಟಿ ನೀಡಿದ ಯುಎನ್‌ಆರ್‌ಡಬ್ಲ್ಯೂಎ ಮುಖ್ಯಸ್ಥ ಫಿಲಿಪ್ ಲಜ್ಜರಿನಿ ಮಾತನಾಡುತ್ತಾ, ಗಾಝಾ ನಿವಾಸಿಗಳು ಸುದೀರ್ಘ ವರ್ಷಗಳಿಂದ ಇಸ್ರೇಲ್‌ನ ದಾಳಿಗೆ ಒಳಗಾಗಿದ್ದರೂ ಈ ರೀತಿಯ ಹಸಿವನ್ನು ಎಂದು ಅನುಭವಿಸಿರಲಿಕ್ಕಿಲ್ಲ. ರಾಫಾದಲ್ಲಿನ ಜನರು ಸಂಪೂರ್ಣ ಹತಾಶೆಯಿಂದ ಟ್ರಕ್‌ನಲ್ಲಿ ಸಾಗಿಸುತ್ತಿದ್ದ ನೆರವು ಸಾಮಾಗ್ರಿ ಕಸಿದು ಸ್ಥಳದಲ್ಲೇ ತಿನ್ನುತ್ತಿದ್ದು, ಅವರ ಹಸಿವಿನ ದಾಹವನ್ನು ಸೂಚಿಸುತ್ತದೆ. ಈ ಭಯಾನಕ ಸ್ಥಿತಿ ನನ್ನ ಕಣ್ಣುಗಳಿಂದ ನೋಡಿದೆ ಎಂದು ಫಿಲಿಪ್ ಲಜ್ಜರಿನಿ ಹೇಳಿದ್ದಾರೆ.

WFP ಉಪ ಮುಖ್ಯಸ್ಥ ಕಾರ್ಲ್ ಸ್ಕೌ ಮಾತನಾಡುತ್ತಾ, ಗಾಝಾದಲ್ಲಿ ಸುಮಾರು ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿದ್ದಾರೆ, ಅವರು ಮುಂದಿನ ಊಟ ನಮಗೆ ಸಿಗುತ್ತಾ ಎಂದು ತಿಳಿದಿಲ್ಲ ಎಂದು ಹೇಳಿದ್ದಾರೆ.

ರಫಾದಲ್ಲಿ ಪ್ರತಿ ಚದರ ಕಿಲೋಮೀಟರ್‌ಗೆ 12,000ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಇಸ್ರೇಲ್‌ ರಫಾವನ್ನು ಕೂಡ ಕೇಂದ್ರೀಕರಿಸಿ ದಾಳಿಯನ್ನು ನಡೆಸುತ್ತಿದೆ. ಇಸ್ರೇಲ್‌ನ ಬಾಂಬ್ ದಾಳಿಯಿಂದ ಈಗಾಗಲೇ 19,000ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಮತ್ತು 50,897 ಜನರು ಗಾಯಗೊಂಡಿದ್ದಾರೆ. ಸಾವಿರಾರು ಜನರು ಅವಶೇಷಗಳಡಿಯಲ್ಲಿ ಹೂತುಹೋಗಿದ್ದಾರೆ. ಆದರೆ ಇಸ್ರೇಲ್ ಗಾಝಾ ಮೇಲೆ ಆಕ್ರಮಣವನ್ನು ಮುಂದುವರಿಸಿದೆ.

ಇದನ್ನು ಓದಿ: ಕೇಸರೀಕರಣಗೊಂಡ ವಂದೇ ಭಾರತ್‌ ರೈಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...