Homeಅಂತರಾಷ್ಟ್ರೀಯಗಾಝಾದಲ್ಲಿ ಮಾನವೀಯ ಬಿಕ್ಕಟ್ಟು: ಹಸಿವು ತಾಳಲಾರದೆ ಟ್ರಕ್‌ಗಳನ್ನು ತಡೆದು ಆಹಾರ ಕಸಿದುಕೊಳ್ಳುತ್ತಿರುವ ಜನ

ಗಾಝಾದಲ್ಲಿ ಮಾನವೀಯ ಬಿಕ್ಕಟ್ಟು: ಹಸಿವು ತಾಳಲಾರದೆ ಟ್ರಕ್‌ಗಳನ್ನು ತಡೆದು ಆಹಾರ ಕಸಿದುಕೊಳ್ಳುತ್ತಿರುವ ಜನ

- Advertisement -
- Advertisement -

ಕಳೆದ 2 ತಿಂಗಳಿನಿಂದ ಇಸ್ರೇಲ್‌, ಪ್ಯಾಲೆಸ್ತೀನ್‌ ಮೇಲೆ ನಿರಂತರ ಬಾಂಬ್‌ ದಾಳಿ ನಡೆಸುತ್ತಿದೆ. ಈ ಭೀಕರ ಯುದ್ಧ ಗಾಝಾದಲ್ಲಿ ಹತ್ಯಾಕಾಂಡದ ಜೊತೆ ಮಾನವೀಯ ಬಿಕ್ಕಟ್ಟನ್ನು ಸೃಷ್ಟಿಸಿದೆ. ಗಾಝಾದ ರಫಾ ಕ್ರಾಸಿಂಗ್‌ನಲ್ಲಿ ಆಹಾರ, ನೀರಿಗಾಗಿ ಜನರು ಟ್ರಕ್‌ಗಳನ್ನು ತಡೆಯುತ್ತಿದ್ದು, ಹಸಿವಿನಿಂದ ತತ್ತರಿಸಿದ ಜನರು ಪರಿಹಾರ ಸಾಮಾಗ್ರಿ ವಾಹನಗಳನ್ನು ತಡೆದು ಆಹಾರ ಕಸಿದು ತಿನ್ನುತ್ತಿರುವ ಮನಕಲಕುವ ದೃಶ್ಯಗಳು ಕಂಡು ಬಂದಿದೆ.

ಗಾಝಾದ ದಕ್ಷಿಣಕ್ಕೆ ಇಸ್ರೇಲ್‌ ಯುದ್ಧ ಘೋಷಣೆ ಬಳಿಕ ಲಕ್ಷಾಂತರ ಮಂದಿ ವಲಸೆ ಹೋಗಿದ್ದಾರೆ. ಇದರಿಂದ ಗಾಝಾದ ದಕ್ಷಿಣದಲ್ಲಿ ನಿರಾಶ್ರಿತರ ಕೇಂದ್ರಗಳಲ್ಲಿ ಲಕ್ಷಾಂತರ ಮಂದಿ ನೆಲೆಸಿದ್ದಾರೆ. ಈ ಭಾಗದಲ್ಲಿ ಹಸಿದ ಮತ್ತು ಹತಾಶೆಯ ಜನರು ಈಜಿಪ್ಟ್‌ನ ಗಡಿಯ ಸಮೀಪವಿರುವ ರಫಾ ಪ್ರದೇಶದಲ್ಲಿ ಆಹಾರ ಮತ್ತು ಇತರ ಸರಬರಾಜುಗಳನ್ನು ಸಾಗಿಸುವ ಟ್ರಕ್‌ಗಳನ್ನು ತಡೆಯುವುದು. ಆಹಾರ ಪೊಟ್ಟಣಗಳನ್ನು ಕಸಿದುಕೊಳ್ಳುತ್ತಿರುವುದು ಕಂಡು ಬಂದಿದೆ.

ರಫಾ ಕ್ರಾಸಿಂಗ್‌ನಲ್ಲಿ ಜನರು ನೆರವು ಸಾಗಾಟ ಮಾಡುವ ಟ್ರಕ್‌ಗಳನ್ನು ಸುತ್ತುವರಿಯುತ್ತಾರೆ, ಕೆಲವರು ಟ್ರಕ್‌ಗಳ ಮೇಲೆ ಹಾರುತ್ತಾರೆ. ನೀರಿನ ಬಾಟಲಿಗಳನ್ನು, ಆಹಾರದ ಪೊಟ್ಟಣಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಕೆಲವು ಟ್ರಕ್‌ಗಳನ್ನು ಮುಸುಕುಧಾರಿಗಳು ಕಾವಲು ಕಾಯುತ್ತಿರುವುದು ಕೂಡ ಕಂಡು ಬಂದಿದೆ.

ಇದು ಕೇವಲ ರಫಾ ನಗರದ ಸ್ಥಿತಿ ಮಾತ್ರವಲ್ಲ. ಗಾಝಾದಲ್ಲಿನ ಮಾನವೀಯ ಪರಿಸ್ಥಿತಿಯು ತುಂಬಾ ಕೆಟ್ಟದಾಗಿದೆ. ಒಂದು ಮಿಲಿಯನ್ ನಿರಾಶ್ರಿತ ಪ್ಯಾಲೆಸ್ತೀನ್‌ ನಾಗರಿಕರು ಹಸಿವು ಮತ್ತು ಬಾಯಾರಿಕೆಯಿಂದ ಬಳಲುತ್ತಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಪ್ಯಾಲೆಸ್ತೀನ್‌ಗೆ ಹರಿದು ಬರುತ್ತಿರುವ ನೆರವು ಸಾಕಾಗುತ್ತಿಲ್ಲ. ಜನರು ಮನೆಯಿಲ್ಲದೆ, ಆಹಾರವಿಲ್ಲದೆ, ನೀರಿಲ್ಲದೆ ಮತ್ತು ವೈದ್ಯಕೀಯ ಸಾಮಗ್ರಿಗಳಿಲ್ಲದೆ ಪರದಾಡುತ್ತಿದ್ದಾರೆ. ವಿಶ್ವಸಂಸ್ಥೆಯು ಇತ್ತೀಚೆಗೆ ಗಾಝಾದಲ್ಲಿರುವ ಜನರು ಆಹಾರಕ್ಕಾಗಿ ಹತಾಶರಾಗಿದ್ದಾರೆ, ಅವರು ನೆರವು ಟ್ರಕ್‌ಗಳನ್ನು ತಡೆದು ಸಿಕ್ಕಿದ್ದನ್ನು ಕಸಿದುಕೊಂಡು ತಿನ್ನುವ ಸ್ಥಿತಿಯಲ್ಲಿದ್ದಾರೆ ಎಂದು ಹೇಳಿತ್ತು.

ಇತ್ತೀಚೆಗೆ ಗಾಝಾ ಪಟ್ಟಿಗೆ ಭೇಟಿ ನೀಡಿದ ಯುಎನ್‌ಆರ್‌ಡಬ್ಲ್ಯೂಎ ಮುಖ್ಯಸ್ಥ ಫಿಲಿಪ್ ಲಜ್ಜರಿನಿ ಮಾತನಾಡುತ್ತಾ, ಗಾಝಾ ನಿವಾಸಿಗಳು ಸುದೀರ್ಘ ವರ್ಷಗಳಿಂದ ಇಸ್ರೇಲ್‌ನ ದಾಳಿಗೆ ಒಳಗಾಗಿದ್ದರೂ ಈ ರೀತಿಯ ಹಸಿವನ್ನು ಎಂದು ಅನುಭವಿಸಿರಲಿಕ್ಕಿಲ್ಲ. ರಾಫಾದಲ್ಲಿನ ಜನರು ಸಂಪೂರ್ಣ ಹತಾಶೆಯಿಂದ ಟ್ರಕ್‌ನಲ್ಲಿ ಸಾಗಿಸುತ್ತಿದ್ದ ನೆರವು ಸಾಮಾಗ್ರಿ ಕಸಿದು ಸ್ಥಳದಲ್ಲೇ ತಿನ್ನುತ್ತಿದ್ದು, ಅವರ ಹಸಿವಿನ ದಾಹವನ್ನು ಸೂಚಿಸುತ್ತದೆ. ಈ ಭಯಾನಕ ಸ್ಥಿತಿ ನನ್ನ ಕಣ್ಣುಗಳಿಂದ ನೋಡಿದೆ ಎಂದು ಫಿಲಿಪ್ ಲಜ್ಜರಿನಿ ಹೇಳಿದ್ದಾರೆ.

WFP ಉಪ ಮುಖ್ಯಸ್ಥ ಕಾರ್ಲ್ ಸ್ಕೌ ಮಾತನಾಡುತ್ತಾ, ಗಾಝಾದಲ್ಲಿ ಸುಮಾರು ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿದ್ದಾರೆ, ಅವರು ಮುಂದಿನ ಊಟ ನಮಗೆ ಸಿಗುತ್ತಾ ಎಂದು ತಿಳಿದಿಲ್ಲ ಎಂದು ಹೇಳಿದ್ದಾರೆ.

ರಫಾದಲ್ಲಿ ಪ್ರತಿ ಚದರ ಕಿಲೋಮೀಟರ್‌ಗೆ 12,000ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಇಸ್ರೇಲ್‌ ರಫಾವನ್ನು ಕೂಡ ಕೇಂದ್ರೀಕರಿಸಿ ದಾಳಿಯನ್ನು ನಡೆಸುತ್ತಿದೆ. ಇಸ್ರೇಲ್‌ನ ಬಾಂಬ್ ದಾಳಿಯಿಂದ ಈಗಾಗಲೇ 19,000ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಮತ್ತು 50,897 ಜನರು ಗಾಯಗೊಂಡಿದ್ದಾರೆ. ಸಾವಿರಾರು ಜನರು ಅವಶೇಷಗಳಡಿಯಲ್ಲಿ ಹೂತುಹೋಗಿದ್ದಾರೆ. ಆದರೆ ಇಸ್ರೇಲ್ ಗಾಝಾ ಮೇಲೆ ಆಕ್ರಮಣವನ್ನು ಮುಂದುವರಿಸಿದೆ.

ಇದನ್ನು ಓದಿ: ಕೇಸರೀಕರಣಗೊಂಡ ವಂದೇ ಭಾರತ್‌ ರೈಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...