Homeಅಂತರಾಷ್ಟ್ರೀಯಗಾಝಾದಲ್ಲಿ ಮಾನವೀಯ ಬಿಕ್ಕಟ್ಟು: ಹಸಿವು ತಾಳಲಾರದೆ ಟ್ರಕ್‌ಗಳನ್ನು ತಡೆದು ಆಹಾರ ಕಸಿದುಕೊಳ್ಳುತ್ತಿರುವ ಜನ

ಗಾಝಾದಲ್ಲಿ ಮಾನವೀಯ ಬಿಕ್ಕಟ್ಟು: ಹಸಿವು ತಾಳಲಾರದೆ ಟ್ರಕ್‌ಗಳನ್ನು ತಡೆದು ಆಹಾರ ಕಸಿದುಕೊಳ್ಳುತ್ತಿರುವ ಜನ

- Advertisement -
- Advertisement -

ಕಳೆದ 2 ತಿಂಗಳಿನಿಂದ ಇಸ್ರೇಲ್‌, ಪ್ಯಾಲೆಸ್ತೀನ್‌ ಮೇಲೆ ನಿರಂತರ ಬಾಂಬ್‌ ದಾಳಿ ನಡೆಸುತ್ತಿದೆ. ಈ ಭೀಕರ ಯುದ್ಧ ಗಾಝಾದಲ್ಲಿ ಹತ್ಯಾಕಾಂಡದ ಜೊತೆ ಮಾನವೀಯ ಬಿಕ್ಕಟ್ಟನ್ನು ಸೃಷ್ಟಿಸಿದೆ. ಗಾಝಾದ ರಫಾ ಕ್ರಾಸಿಂಗ್‌ನಲ್ಲಿ ಆಹಾರ, ನೀರಿಗಾಗಿ ಜನರು ಟ್ರಕ್‌ಗಳನ್ನು ತಡೆಯುತ್ತಿದ್ದು, ಹಸಿವಿನಿಂದ ತತ್ತರಿಸಿದ ಜನರು ಪರಿಹಾರ ಸಾಮಾಗ್ರಿ ವಾಹನಗಳನ್ನು ತಡೆದು ಆಹಾರ ಕಸಿದು ತಿನ್ನುತ್ತಿರುವ ಮನಕಲಕುವ ದೃಶ್ಯಗಳು ಕಂಡು ಬಂದಿದೆ.

ಗಾಝಾದ ದಕ್ಷಿಣಕ್ಕೆ ಇಸ್ರೇಲ್‌ ಯುದ್ಧ ಘೋಷಣೆ ಬಳಿಕ ಲಕ್ಷಾಂತರ ಮಂದಿ ವಲಸೆ ಹೋಗಿದ್ದಾರೆ. ಇದರಿಂದ ಗಾಝಾದ ದಕ್ಷಿಣದಲ್ಲಿ ನಿರಾಶ್ರಿತರ ಕೇಂದ್ರಗಳಲ್ಲಿ ಲಕ್ಷಾಂತರ ಮಂದಿ ನೆಲೆಸಿದ್ದಾರೆ. ಈ ಭಾಗದಲ್ಲಿ ಹಸಿದ ಮತ್ತು ಹತಾಶೆಯ ಜನರು ಈಜಿಪ್ಟ್‌ನ ಗಡಿಯ ಸಮೀಪವಿರುವ ರಫಾ ಪ್ರದೇಶದಲ್ಲಿ ಆಹಾರ ಮತ್ತು ಇತರ ಸರಬರಾಜುಗಳನ್ನು ಸಾಗಿಸುವ ಟ್ರಕ್‌ಗಳನ್ನು ತಡೆಯುವುದು. ಆಹಾರ ಪೊಟ್ಟಣಗಳನ್ನು ಕಸಿದುಕೊಳ್ಳುತ್ತಿರುವುದು ಕಂಡು ಬಂದಿದೆ.

ರಫಾ ಕ್ರಾಸಿಂಗ್‌ನಲ್ಲಿ ಜನರು ನೆರವು ಸಾಗಾಟ ಮಾಡುವ ಟ್ರಕ್‌ಗಳನ್ನು ಸುತ್ತುವರಿಯುತ್ತಾರೆ, ಕೆಲವರು ಟ್ರಕ್‌ಗಳ ಮೇಲೆ ಹಾರುತ್ತಾರೆ. ನೀರಿನ ಬಾಟಲಿಗಳನ್ನು, ಆಹಾರದ ಪೊಟ್ಟಣಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಕೆಲವು ಟ್ರಕ್‌ಗಳನ್ನು ಮುಸುಕುಧಾರಿಗಳು ಕಾವಲು ಕಾಯುತ್ತಿರುವುದು ಕೂಡ ಕಂಡು ಬಂದಿದೆ.

ಇದು ಕೇವಲ ರಫಾ ನಗರದ ಸ್ಥಿತಿ ಮಾತ್ರವಲ್ಲ. ಗಾಝಾದಲ್ಲಿನ ಮಾನವೀಯ ಪರಿಸ್ಥಿತಿಯು ತುಂಬಾ ಕೆಟ್ಟದಾಗಿದೆ. ಒಂದು ಮಿಲಿಯನ್ ನಿರಾಶ್ರಿತ ಪ್ಯಾಲೆಸ್ತೀನ್‌ ನಾಗರಿಕರು ಹಸಿವು ಮತ್ತು ಬಾಯಾರಿಕೆಯಿಂದ ಬಳಲುತ್ತಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಪ್ಯಾಲೆಸ್ತೀನ್‌ಗೆ ಹರಿದು ಬರುತ್ತಿರುವ ನೆರವು ಸಾಕಾಗುತ್ತಿಲ್ಲ. ಜನರು ಮನೆಯಿಲ್ಲದೆ, ಆಹಾರವಿಲ್ಲದೆ, ನೀರಿಲ್ಲದೆ ಮತ್ತು ವೈದ್ಯಕೀಯ ಸಾಮಗ್ರಿಗಳಿಲ್ಲದೆ ಪರದಾಡುತ್ತಿದ್ದಾರೆ. ವಿಶ್ವಸಂಸ್ಥೆಯು ಇತ್ತೀಚೆಗೆ ಗಾಝಾದಲ್ಲಿರುವ ಜನರು ಆಹಾರಕ್ಕಾಗಿ ಹತಾಶರಾಗಿದ್ದಾರೆ, ಅವರು ನೆರವು ಟ್ರಕ್‌ಗಳನ್ನು ತಡೆದು ಸಿಕ್ಕಿದ್ದನ್ನು ಕಸಿದುಕೊಂಡು ತಿನ್ನುವ ಸ್ಥಿತಿಯಲ್ಲಿದ್ದಾರೆ ಎಂದು ಹೇಳಿತ್ತು.

ಇತ್ತೀಚೆಗೆ ಗಾಝಾ ಪಟ್ಟಿಗೆ ಭೇಟಿ ನೀಡಿದ ಯುಎನ್‌ಆರ್‌ಡಬ್ಲ್ಯೂಎ ಮುಖ್ಯಸ್ಥ ಫಿಲಿಪ್ ಲಜ್ಜರಿನಿ ಮಾತನಾಡುತ್ತಾ, ಗಾಝಾ ನಿವಾಸಿಗಳು ಸುದೀರ್ಘ ವರ್ಷಗಳಿಂದ ಇಸ್ರೇಲ್‌ನ ದಾಳಿಗೆ ಒಳಗಾಗಿದ್ದರೂ ಈ ರೀತಿಯ ಹಸಿವನ್ನು ಎಂದು ಅನುಭವಿಸಿರಲಿಕ್ಕಿಲ್ಲ. ರಾಫಾದಲ್ಲಿನ ಜನರು ಸಂಪೂರ್ಣ ಹತಾಶೆಯಿಂದ ಟ್ರಕ್‌ನಲ್ಲಿ ಸಾಗಿಸುತ್ತಿದ್ದ ನೆರವು ಸಾಮಾಗ್ರಿ ಕಸಿದು ಸ್ಥಳದಲ್ಲೇ ತಿನ್ನುತ್ತಿದ್ದು, ಅವರ ಹಸಿವಿನ ದಾಹವನ್ನು ಸೂಚಿಸುತ್ತದೆ. ಈ ಭಯಾನಕ ಸ್ಥಿತಿ ನನ್ನ ಕಣ್ಣುಗಳಿಂದ ನೋಡಿದೆ ಎಂದು ಫಿಲಿಪ್ ಲಜ್ಜರಿನಿ ಹೇಳಿದ್ದಾರೆ.

WFP ಉಪ ಮುಖ್ಯಸ್ಥ ಕಾರ್ಲ್ ಸ್ಕೌ ಮಾತನಾಡುತ್ತಾ, ಗಾಝಾದಲ್ಲಿ ಸುಮಾರು ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿದ್ದಾರೆ, ಅವರು ಮುಂದಿನ ಊಟ ನಮಗೆ ಸಿಗುತ್ತಾ ಎಂದು ತಿಳಿದಿಲ್ಲ ಎಂದು ಹೇಳಿದ್ದಾರೆ.

ರಫಾದಲ್ಲಿ ಪ್ರತಿ ಚದರ ಕಿಲೋಮೀಟರ್‌ಗೆ 12,000ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಇಸ್ರೇಲ್‌ ರಫಾವನ್ನು ಕೂಡ ಕೇಂದ್ರೀಕರಿಸಿ ದಾಳಿಯನ್ನು ನಡೆಸುತ್ತಿದೆ. ಇಸ್ರೇಲ್‌ನ ಬಾಂಬ್ ದಾಳಿಯಿಂದ ಈಗಾಗಲೇ 19,000ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಮತ್ತು 50,897 ಜನರು ಗಾಯಗೊಂಡಿದ್ದಾರೆ. ಸಾವಿರಾರು ಜನರು ಅವಶೇಷಗಳಡಿಯಲ್ಲಿ ಹೂತುಹೋಗಿದ್ದಾರೆ. ಆದರೆ ಇಸ್ರೇಲ್ ಗಾಝಾ ಮೇಲೆ ಆಕ್ರಮಣವನ್ನು ಮುಂದುವರಿಸಿದೆ.

ಇದನ್ನು ಓದಿ: ಕೇಸರೀಕರಣಗೊಂಡ ವಂದೇ ಭಾರತ್‌ ರೈಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...