Homeಮುಖಪುಟರಾಜ್ಯ ಅಲಿಯಾಸ್ ಪ್ರಭುತ್ವ ಅಂದರ ಏನಂತ ಗೊತ್ತೇನು? : ಸುದ್ದಿಯೇನೇ, ಮನೋಲ್ಲಾಸಿನಿ ಬೈ ಐ.ವಿ.ಗೌಲ್

ರಾಜ್ಯ ಅಲಿಯಾಸ್ ಪ್ರಭುತ್ವ ಅಂದರ ಏನಂತ ಗೊತ್ತೇನು? : ಸುದ್ದಿಯೇನೇ, ಮನೋಲ್ಲಾಸಿನಿ ಬೈ ಐ.ವಿ.ಗೌಲ್

- Advertisement -
- Advertisement -

ನಿಮ್ಮ ಫೋನಿನ ಹೃದಯದೊಳಗ ಇರೋ ವಾಟ್ಸಪ್ಪು ಯುನಿವರ್ಸಿಟಿಯೊಳಗ ನಿಮಗೊಂದು ಜೋಕು ಬಂದಿರಲಿಕ್ಕೇ ಬೇಕು. “ಈ ದೇಶದಾಗ ಒಂಬತ್ತು ಜನ ಅಪರಾಧಿಗಳು ತಪ್ಪಿಸಿಕೊಂಡರೂ ಸರಿ, ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು’ ಅಂತ ಒಂದು ಕಾನೂನು ಇದೆ. ಇಂತಹ ಬ್ರಿಟಿಷರು ಮಾಡಿದ ಕಾನೂನುಗಳನ್ನು ನಮಗೆ ಬೇಡ. ಇಂತಹ ಅನೇಕ ಕಾನೂನುಗಳನ್ನು ತಿದ್ದಲೆಂದೇ ನಾವು ಬಂದಿದ್ದೇವೆ” ಅಂತ.

ಇದನ್ನ ನೋಡಿದಾಗ ನಿಮಗೂ ಅನ್ನಿಸಿರಬಹುದು. ‘ಹೌದಲ್ಲಾ ಅ ಬ್ರಿಟಿಷ್ ನನ ಮಕ್ಕಳು ಏನೇನು ಮಾಡಿ ಹೋಗ್ಯಾರ. ಇದನ್ನೆಲ್ಲಾ ಬದಲಾಯಿಸಬೇಕು. ಅದಕ್ಕೊಬ್ಬ ಸೂಪರ್ ಹೀರೋ ಬೇಕು’ ಅಂತ. ಆದರ ಅದರ ಹಿಂದಿನ ತಥ್ಯವನ್ನು ನೋಡೋಣ.

ಭಾರತದ ಸಂವಿಧಾನದಾಗ 12 ನೇ ಕಲಂ ಅಂತ ಒಂದು ಮೂರು ಸಾಲಿನ ಒಂದು ಪ್ಯಾರಾ ಐತಿ.
ಅದೇನಪಾ ಅಂದರ ರಾಜ್ಯ ಅಂದರ ಏನು ಅನ್ನೋದರ ವ್ಯಾಖ್ಯಾನ.

ಸಂವಿಧಾನದ ಭಾಷಾದಾಗ ರಾಜ್ಯ ಅಂದ್ರ ಕರ್ನಾಟಕ, ತಮಿಳುನಾಡು, ಕಾಶ್ಮೀರ ಅಂತ ಅವ ಅಲ್ಲಾ, ಹಿಂತಾ ರಾಜ್ಯ ಅಲ್ಲ. ಅದರ ಪ್ರಕಾರ ರಾಜ್ಯ ಅಂದ್ರ ಅಕೆಡೆಮಿಕ್ ಭಾಷಾದಾಗ ಪ್ರಭುತ್ವ. ’ಹಂಗಂದರ ಏನು ಮತ್ತ ಎಲ್ಲಿ ಸಿಗತದ’ ಅಂತ ನೀವು ಜವಾರಿ ಭಾಷಾದಾಗ ಕೇಳಿದರ ಅದಕ್ಕ ನಿಮಗ 12ನೇ ಕಲಂ ನೋಡು ಅಂತ ಉತ್ತರ ಸಿಗಬಹುದು.

ಅದರ ಪ್ರಕಾರ ಸಂಸತ್ತು ಹಾಗೂ ರಾಜ್ಯ ಶಾಸನಸಭೆಗಳು ಪ್ರಭುತ್ವದಾಗ ಬರತಾವ. ಕೇಂದ್ರ ಮತ್ತು ರಾಜ್ಯ ಸರಕಾರ ಪ್ರಭುತ್ವದಾಗ ಬರತಾವ. ಈವಲ್ಲದನ, ನಗರ ಸಭೆ, ಪಂಚಾಯಿತಿ ಮುಂತಾದ ಸ್ಥಳೀಯ ಸಂಸ್ಥೆಗಳನ್ನು ಸಹ ಇದರಾಗ ಕೂಡಿಸ್ಯಾರ. ಮಜಾ ಏನಂದರ ಸರಕಾರದ ಸಂಸ್ಥೆಗಳು ಅಥವಾ ಸರಕಾರದಿಂದ ನಿಯಂತ್ರಿತವಾದ ಸಂಸ್ಥೆಗಳು ಇವೆಲ್ಲವೂ ಪ್ರಭುತ್ವ ಎನ್ನಿಸಿಕೊಳ್ಳುತ್ತವೆ ಎನ್ನುವುದು ಇದರ ಸಾರಾಂಶ.

ಈ ಪ್ರಭುತ್ವದ ಮುಖ್ಯ ಕೆಲಸ ಏನಪಾ ಅಂದ್ರ ರಾಷ್ಟ್ರ ರಕ್ಷಣೆ, ಶಾಂತಿ ಕಾಪಾಡುವಿಕೆ, ನ್ಯಾಯ ನಿರ್ಣಯ, ಜನ ಕಲ್ಯಾಣ ಹಾಗೂ ದಿನನಿತ್ಯದ ಆಡಳಿತ. ಬರಬರತಾ ಸರಕಾರಗಳ ಕೆಲಸ ಜಾಸ್ತಿ ಆಗಿ ಕಲ್ಯಾಣ ಕಾರ್ಯಕ್ರಮಗಳು ಹಾಗೂ ವ್ಯಾಪಾರ ವ್ಯವಹಾರ -(ಅದು ಸರಕಾರಿ ಸಂಸ್ಥೆ ಇರಬಹುದು ಅಥವಾ ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆ ಪಾಲುದಾರಿಕೆ ಇರಬಹುದು) ದೊಳಗನ ಹೆಚ್ಚಿನ ಟೈಂ ಹೋಗಲಿಕ್ಕೆ ಹತ್ತೇದ. ಈಗಿನ ಕೇಂದ್ರ ಸರಕಾರ ಮಾತ್ರ ತಮ್ಮ ಕೆಲಸ ಬ್ಯಾರೆ ಏನೂ ಅಲ್ಲ, ಬರೇ ರಕ್ಷಣೆ ಒಂದ ಅಂತ ನಮಗ ಹೇಳಲಿಕ್ಕೆ ಹತ್ತೇದ. ಒಬ್ಬ ವಿದ್ಯಾರ್ಥಿ ಪರೀಕ್ಷೆಯೊಳಗ ಹತ್ತರೊಳಗ ಬರೇ ಒಂದ ಪ್ರಶ್ನೆ ಉತ್ತರ ಬರದು ನನಗ ಮೊದಲನೆ ದರ್ಜೆ ಕೊಡರಿ ಅಂತ ಹೇಳಿದಂಗ!. ಇರಲಿ ಅದು ಬೇರೆ.

ಹಿಂದಿನ ಕಾಲದ ಚಕ್ರವರ್ತಿಗಳಿಗೆ ಶಾಸನ ಮಾಡೋದು, ಜಾರಿ ಮಾಡೋದು, ಕಾನೂನು ಪಾಲಿಸದವರಿಗೆ ಶಿಕ್ಷಾ ಕೊಡೋದು ಇವೆಲ್ಲಾ ಅಧಿಕಾರ ಇತ್ತು. ಇತ್ತೋ ಅಥವಾ ಅವರಾಗೇ ತೊಗೊಂಡಿದ್ದರೋ ಅದು ಬ್ಯಾರೆ. ಆದರ ಆಧುನಿಕ ದಿನಮಾನದಾಗ ಇಂತಹ ಪ್ರಭುತ್ವಕ್ಕ ಮೂರು ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗದ ಎಲ್ಲಾ ಶಕ್ತಿ ಕೊಡಬಾರದು ಅಂತ ಒಂದು ಥಿಯರಿ ಅದ. ಅದರ ಪ್ರಕಾರ ನಮ್ಮ ಜನಸತ್ತಾದೊಳಗ ಈ ಮೂರು ಜವಾಬ್ದಾರಿಗಳನ್ನು ಬೇರೆ ಬೇರೆ ಅಂಗಗಳಿಗೆ ಹಂಚ್ಯಾರ.

ಆದರೂ ಸರಕಾರಗಳು ಮೂರೂ ರೀತಿಯ ಅಧಿಕಾರಗಳನ್ನ ಬಳಸತಾವು. ಉದಾಹರಣೆಗೆ ಪೊಲೀಸರನ್ನು ನೇಮಕ ಮಾಡೋದು ಪ್ರಭುತ್ವ, ಅವರಿಗೆ ಕೆಲಸ ಹೇಳೋದು ಸರಕಾರ. ನ್ಯಾಯಾಲಯಗಳನ್ನು ಆರಂಭಿಸಿ, ನ್ಯಾಯಾಧೀಶರನ್ನು ನೇಮಿಸಿ ಅವರ ಮುಂದೆ ಕೇಸು ತೊಗೊಂಡು ಹೋಗೋದು ಪ್ರಭುತ್ವ. ಹಿಂಗಿದ್ದಾಗ ನ್ಯಾಯಾಲಯಗಳಲ್ಲಿ ಬರೇ ಸರಕಾರದ ದನಿ ಕೇಳಿ ಗರೀಬ ಆರೋಪಿತರ ದನಿ ಅಡುಗಿಹೋಗಬಾರದು ಅಂತ ಕೆಲವು ನಿಯಮ ಅವ. ಅವಕ್ಕ ಪ್ರಕ್ರಿಯಾ ಕಾನೂನು ಅಂತ ಹೆಸರು. ಉದ್ದೇಶದ ಜೊತೆ ಪ್ರಕ್ರಿಯಾನೂ ಸರಿ ಇರಬೇಕು ಅಂತ ಅದರ ನೇಮ.

ಅವು ಯಾಕ ಬೇಕಂದ್ರ ಸರಕಾರ ಅನ್ನೋದು ಸರ್ವಾಧಿಕಾರ ಆಗಬಾರದು ಅಂತ.

ಅದು ಯಾವಾಗ ಆಗಬಹುದಪಾ ಅನ್ನಲಿಕ್ಕೆ ಕೆಲವು ಉದಾಹರಣೆ ನೋಡೋಮು.

ಹರಿಯಾಣಾದ ಮಾಜಿ ಮುಖ್ಯಮಂತ್ರಿ ಓಂಪ್ರಕಾಶ ಚೌಟಾಲಾ ಅವರ ಮೊಮ್ಮಗ ಅಜಯ ಚೌಟಾಲಾ ಅವರಿಗೆ ಎರಡು ವಾರದ ಸಜಾ ಕಾಲದ ರಜೆ ಸಿಕ್ಕದ. ಅದರ ಹಿಂದಿನ ದಿವಸ ಅಜಯ ಅವರ ಮಗ ದುಷ್ಯಂತ ಚೌಟಾಲಾ ಅವರು ಬಿಜೆಪಿಗೆ ಬೆಂಬಲ ಸೂಚಿಸಿ ಹಂಗಾಗಿದ್ದ ಹರಿಯಾಣಾ ವಿಧಾನಸಭೆಯನ್ನು ಹಂಗ ಮಾಡಿದ್ದರು. ಅದಕ್ಕೂ ಇದಕ್ಕೂ ಸಂಬಂಧ ಇರಬಹುದು ಅನ್ನುಕೊಳ್ಳುವುದು ಅಂದುಕೊಂಡವರ ಚಿತ್ತ. ಸಜಾ ಕಾಲದ ರಜೆ (ಫರಲೋ) ಹಾಗೂ ಸಜಾ ಕಾಲದ ಬಿಡುಗಡೆ ( ಪರೋಲ್) ಗೂ ಫರ್ಕು ಏನಪಾ ಅಂದರ ಫರಲೋ ಅನ್ನುವುದು ಒಬ್ಬ ಕೈದಿಯ ಹಕ್ಕು. ಪರೋಲ್ ಅನ್ನುವುದು ಹಕ್ಕಲ್ಲ. ಅದು ಸರಕಾರದ ಹಾಗೂ ನ್ಯಾಯಾಲಯದ ಚಿತ್ತ. ಜಂಬೂ ದ್ವೀಪದ ಮಹಾನ್ ನಾಯಕ ಸಂಜೂ ಬಾಬಾ ಅವರು ಸುಮಾರು 39 ಸರೆ ಫರಲೋ ಹಾಗೂ ಪರೋಲ್ ಸೌಭಾಗ್ಯ ಪಡೆದಿದ್ದರು. ಅವರು ಪಡೆದು ಬಂದವರು.

ಜನರ ಸಲುವಾಗಿ ಹೋರಾಟ ಮಾಡೋ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ಬಂಧನ ಆಗೇದ. ಅವರನ್ನ 25 ವರ್ಷ ಹಳೆಯ ಕೇಸೊಂದರಲ್ಲಿ ಭಾಗಿಯಾಗಿದ್ದ ವಿನೋದ ಎನ್ನುವ ವ್ಯಕ್ತಿಯೆಂದರೆ ಇವನೇ ಅಂತ ಹೇಳಿ ರಾಯಚೂರು ಪೊಲೀಸರು ಹಿಡಕೊಂಡು ಹೋಗ್ಯಾರ. ಹಂಗಂತ ಅವರೇನು ಬೆಂಗಳೂರ ತನಾ ಬಂದು ಅವರನ್ನ ಹಿಡಕೊಂಡು ಹೋಗಿಲ್ಲ. ರಾಯಚೂರು ಕಾರ್ಯಕ್ರಮಕ್ಕ ಹೋದಾಗ ಪೊಲೀಸ್ ಟೇಸನಕ್ಕ ಬರ್ರಿ ಅಂತ ಹೇಳಿ ಕರಿಸಿಕೊಂಡು ಅರೆಸ್ಟು ಮಾಡ್ಯಾರ

ಬೆಂಗಳೂರಾಗ ಎಲ್ಲಾರ ಎದುರಿಗೆ ಖುಲ್ಲಂಖುಲ್ಲಾ ಓಡಾಡಿಕೊಂಡು ಇದ್ದ ಈ ಮನುಷ್ಯ 25 ವರ್ಷ ತಲೆ ಮರೆಸಿಕೊಂಡಿದ್ದ ಅಂತ ಪೊಲೀಸರು ಕತಿ ಹೇಳ್ಯಾರ. ಅದಕ್ಕ ಅವರಿಗೆ ಸರಿಯಾದ ಸಾಕ್ಷಿ ಇಲ್ಲ. ಅವರಿಗೆ ಇರೋ ಸಾಕ್ಷಿ ಅಂದರ ಒಬ್ಬ ಮಾಜಿ ಪೊಲೀಸ್ ಸಿಬ್ಬಂದಿಯ ನೆನಪಿನ ಶಕ್ತಿ. ಇದು ಭಾರತೀಯ ದಂಡಸಂಹಿತೆ ಹಾಗೂ ಸಂವಿಧಾನದ ಪ್ರಕಾರ ಲಾಗೂ ಆಗೋದಿಲ್ಲ. ಆದರೆ ಅದು ನ್ಯಾಯಾಧೀಶರ ಎದುರಿಗೆ ವಾದಕ್ಕ ಬಂದಾಗಿನ ಮಾತು. ಅಲ್ಲಿ ತನಕಾ ಸರಕಾರದ ಮಾತೇ ಸರಿ.

ಗುಜರಾತು ಪೊಲೀಸರು ಐಪಿಎಸ್ ಅಧಿಕಾರಿ ಸಂಜೀವ ಭಟ್ ಅವರನ್ನು 13 ತಿಂಗಳ ಹಿಂದೆ ಬಂಧಿಸಿದ್ದಾರೆ. ಅವರಿಗೆ ಇನ್ನೂ ಬೇಲು ಸಿಕ್ಕಿಲ್ಲ. ಅವರು 22 ವರ್ಷದ ಹಿಂದ ಪೊಲೀಸ ಅಧೀಕ್ಷಕರಾಗಿದ್ದಾಗ ತಮ್ಮ ವ್ಯಾಪ್ತಿಯಲ್ಲಿ ನಡೆದ ಪೊಲೀಸ್ ಅಧಿಕಾರಿಗಳ ಅಧಿಕಾರ ದುರ್ಬಳಕೆ ಪ್ರಸಂಗವೊಂದರಲ್ಲಿ ಅವರನ್ನು ಆರೋಪಿ ಅಂತ ಮಾಡ್ಯಾರ. ಮೂವತ್ತು ವರ್ಷ ಸಂವಿಧಾನ, ನ್ಯಾಯ ಪ್ರಕ್ರಿಯೆ, ಸರಕಾರಿ ಕಾನೂನುಗಳಿಗೆ ತಕ್ಕಂತ ನೌಕರಿ ಮಾಡಿದ ಮನಿಷಾಗ ಕಾನೂನಿನ ಬಗ್ಗೆ ನಂಬಿಕಿ ಇಲ್ಲಾ ಅಂತ ಹೇಳಿ ಸರಕಾರ ಅವರಿಗೆ ಬೇಲು ಕೊಡಿಸಿಲ್ಲ.

ಕಾರ್ಮಿಕ ಮುಖಂಡರಾದ ಸುಧಾ ಭಾರದ್ವಾಜ ಮತ್ತು 10 ಜನ ಜನನಾಯಕರನ್ನು ಒಳಗ ಹಾಕಿ 14 ತಿಂಗಳ ಆತು. ಅದರೊಳಗ ಒಬ್ಬರ ಮನಿಯೊಳಗ ’ವಾರ್ ಆಂಡ್ ಪೀಸ್’ ಅನ್ನೋ ಕಾದಂಬರಿ ಇತ್ತು ಅದು ಅಲ್ಯಾಕ ಇತ್ತು ಅನ್ನೋದು ಭಾರಿ ಸುದ್ದಿ ಆಗಿತ್ತು. ಇದರಾಗೂನು ಅವರ ವಿಚಾರಣೆ ಅನ್ನೋದು ಸುರೂನ ಆಗಿಲ್ಲ. ಅಧಿಕೃತವಾಗಿ ಸರಕಾರದ ತನಿಖೆ ಮುಗದೇ ಇಲ್ಲ.

ಪ್ರಭುತ್ವ ಅನ್ನುವುದು ಸರ್ವಾಧಿಕಾರ ಆಗಬಾರದು. ಯಾಕಂದ್ರ ಭಾರತದೊಳಗ ಆಳುವ ಪಕ್ಷ, ವಿರೋಧ ಪಕ್ಷ ಅಂತ ಯಾವೂ ಇಲ್ಲ. ಇಲ್ಲಿ ಇರೋದು ಇವತ್ತಿನ ಆಳುವ ಪಕ್ಷ, ನಿನ್ನೆಯ ಆಳುವ ಪಕ್ಷ ಹಾಗೂ ನಾಳೆಯ ಆಳುವ ಪಕ್ಷ ಅಂತ ಅಷ್ಟ. ಅವರು ಮಾಡ್ಯಾರ ಅಂತ ಇವರು ತಿನ್ನೋದು ಇವರಿಬ್ಬರೂ ಮಾಡ್ಯಾರ ಅಂತ ಮೂರನೆಯವರು ಮಾಡೋದು ಸರಿ ಅಲ್ಲ. ಇವತ್ತು ಆಳುವವರು ನ್ಯಾಯ ನಿಷ್ಟುರತೆ, ಪಾರದರ್ಶಕ ನೀತಿ ಹಾಗೂ ನಿಷ್ಪಕ್ಷಪಾತ ನಡೆ ಯನ್ನು ಪಾಲಿಸದಿದ್ದರೆ ನಾಳೆ ಬಂದವರೂ ಪಾಲಿಸಲಿಕ್ಕಿಲ್ಲ. ಆವಾಗ ಇವರು ಝಗಳಾ ತಗೀಲಿಕ್ಕೆ ಬರೋದಿಲ್ಲ. ನೀವು ಹಿಂಗ ಮಾಡಿದಿರಿ ಅಂದರ ನೀವು ಮಾಡಿಲ್ಲೇನು ಅಂತ ಅವರು ಅನ್ನಬಹುದು.
ಅದರ ಜನರಿಗೆ ಇವು ಯಾವುವೂ ಬ್ಯಾಡ. ಸಮಾನತೆ ಹಾಗೂ ಶಾಂತಿ ಬೇಕು. ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...