Homeಮುಖಪುಟರಾಜ್ಯ ಅಲಿಯಾಸ್ ಪ್ರಭುತ್ವ ಅಂದರ ಏನಂತ ಗೊತ್ತೇನು? : ಸುದ್ದಿಯೇನೇ, ಮನೋಲ್ಲಾಸಿನಿ ಬೈ ಐ.ವಿ.ಗೌಲ್

ರಾಜ್ಯ ಅಲಿಯಾಸ್ ಪ್ರಭುತ್ವ ಅಂದರ ಏನಂತ ಗೊತ್ತೇನು? : ಸುದ್ದಿಯೇನೇ, ಮನೋಲ್ಲಾಸಿನಿ ಬೈ ಐ.ವಿ.ಗೌಲ್

- Advertisement -
- Advertisement -

ನಿಮ್ಮ ಫೋನಿನ ಹೃದಯದೊಳಗ ಇರೋ ವಾಟ್ಸಪ್ಪು ಯುನಿವರ್ಸಿಟಿಯೊಳಗ ನಿಮಗೊಂದು ಜೋಕು ಬಂದಿರಲಿಕ್ಕೇ ಬೇಕು. “ಈ ದೇಶದಾಗ ಒಂಬತ್ತು ಜನ ಅಪರಾಧಿಗಳು ತಪ್ಪಿಸಿಕೊಂಡರೂ ಸರಿ, ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು’ ಅಂತ ಒಂದು ಕಾನೂನು ಇದೆ. ಇಂತಹ ಬ್ರಿಟಿಷರು ಮಾಡಿದ ಕಾನೂನುಗಳನ್ನು ನಮಗೆ ಬೇಡ. ಇಂತಹ ಅನೇಕ ಕಾನೂನುಗಳನ್ನು ತಿದ್ದಲೆಂದೇ ನಾವು ಬಂದಿದ್ದೇವೆ” ಅಂತ.

ಇದನ್ನ ನೋಡಿದಾಗ ನಿಮಗೂ ಅನ್ನಿಸಿರಬಹುದು. ‘ಹೌದಲ್ಲಾ ಅ ಬ್ರಿಟಿಷ್ ನನ ಮಕ್ಕಳು ಏನೇನು ಮಾಡಿ ಹೋಗ್ಯಾರ. ಇದನ್ನೆಲ್ಲಾ ಬದಲಾಯಿಸಬೇಕು. ಅದಕ್ಕೊಬ್ಬ ಸೂಪರ್ ಹೀರೋ ಬೇಕು’ ಅಂತ. ಆದರ ಅದರ ಹಿಂದಿನ ತಥ್ಯವನ್ನು ನೋಡೋಣ.

ಭಾರತದ ಸಂವಿಧಾನದಾಗ 12 ನೇ ಕಲಂ ಅಂತ ಒಂದು ಮೂರು ಸಾಲಿನ ಒಂದು ಪ್ಯಾರಾ ಐತಿ.
ಅದೇನಪಾ ಅಂದರ ರಾಜ್ಯ ಅಂದರ ಏನು ಅನ್ನೋದರ ವ್ಯಾಖ್ಯಾನ.

ಸಂವಿಧಾನದ ಭಾಷಾದಾಗ ರಾಜ್ಯ ಅಂದ್ರ ಕರ್ನಾಟಕ, ತಮಿಳುನಾಡು, ಕಾಶ್ಮೀರ ಅಂತ ಅವ ಅಲ್ಲಾ, ಹಿಂತಾ ರಾಜ್ಯ ಅಲ್ಲ. ಅದರ ಪ್ರಕಾರ ರಾಜ್ಯ ಅಂದ್ರ ಅಕೆಡೆಮಿಕ್ ಭಾಷಾದಾಗ ಪ್ರಭುತ್ವ. ’ಹಂಗಂದರ ಏನು ಮತ್ತ ಎಲ್ಲಿ ಸಿಗತದ’ ಅಂತ ನೀವು ಜವಾರಿ ಭಾಷಾದಾಗ ಕೇಳಿದರ ಅದಕ್ಕ ನಿಮಗ 12ನೇ ಕಲಂ ನೋಡು ಅಂತ ಉತ್ತರ ಸಿಗಬಹುದು.

ಅದರ ಪ್ರಕಾರ ಸಂಸತ್ತು ಹಾಗೂ ರಾಜ್ಯ ಶಾಸನಸಭೆಗಳು ಪ್ರಭುತ್ವದಾಗ ಬರತಾವ. ಕೇಂದ್ರ ಮತ್ತು ರಾಜ್ಯ ಸರಕಾರ ಪ್ರಭುತ್ವದಾಗ ಬರತಾವ. ಈವಲ್ಲದನ, ನಗರ ಸಭೆ, ಪಂಚಾಯಿತಿ ಮುಂತಾದ ಸ್ಥಳೀಯ ಸಂಸ್ಥೆಗಳನ್ನು ಸಹ ಇದರಾಗ ಕೂಡಿಸ್ಯಾರ. ಮಜಾ ಏನಂದರ ಸರಕಾರದ ಸಂಸ್ಥೆಗಳು ಅಥವಾ ಸರಕಾರದಿಂದ ನಿಯಂತ್ರಿತವಾದ ಸಂಸ್ಥೆಗಳು ಇವೆಲ್ಲವೂ ಪ್ರಭುತ್ವ ಎನ್ನಿಸಿಕೊಳ್ಳುತ್ತವೆ ಎನ್ನುವುದು ಇದರ ಸಾರಾಂಶ.

ಈ ಪ್ರಭುತ್ವದ ಮುಖ್ಯ ಕೆಲಸ ಏನಪಾ ಅಂದ್ರ ರಾಷ್ಟ್ರ ರಕ್ಷಣೆ, ಶಾಂತಿ ಕಾಪಾಡುವಿಕೆ, ನ್ಯಾಯ ನಿರ್ಣಯ, ಜನ ಕಲ್ಯಾಣ ಹಾಗೂ ದಿನನಿತ್ಯದ ಆಡಳಿತ. ಬರಬರತಾ ಸರಕಾರಗಳ ಕೆಲಸ ಜಾಸ್ತಿ ಆಗಿ ಕಲ್ಯಾಣ ಕಾರ್ಯಕ್ರಮಗಳು ಹಾಗೂ ವ್ಯಾಪಾರ ವ್ಯವಹಾರ -(ಅದು ಸರಕಾರಿ ಸಂಸ್ಥೆ ಇರಬಹುದು ಅಥವಾ ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆ ಪಾಲುದಾರಿಕೆ ಇರಬಹುದು) ದೊಳಗನ ಹೆಚ್ಚಿನ ಟೈಂ ಹೋಗಲಿಕ್ಕೆ ಹತ್ತೇದ. ಈಗಿನ ಕೇಂದ್ರ ಸರಕಾರ ಮಾತ್ರ ತಮ್ಮ ಕೆಲಸ ಬ್ಯಾರೆ ಏನೂ ಅಲ್ಲ, ಬರೇ ರಕ್ಷಣೆ ಒಂದ ಅಂತ ನಮಗ ಹೇಳಲಿಕ್ಕೆ ಹತ್ತೇದ. ಒಬ್ಬ ವಿದ್ಯಾರ್ಥಿ ಪರೀಕ್ಷೆಯೊಳಗ ಹತ್ತರೊಳಗ ಬರೇ ಒಂದ ಪ್ರಶ್ನೆ ಉತ್ತರ ಬರದು ನನಗ ಮೊದಲನೆ ದರ್ಜೆ ಕೊಡರಿ ಅಂತ ಹೇಳಿದಂಗ!. ಇರಲಿ ಅದು ಬೇರೆ.

ಹಿಂದಿನ ಕಾಲದ ಚಕ್ರವರ್ತಿಗಳಿಗೆ ಶಾಸನ ಮಾಡೋದು, ಜಾರಿ ಮಾಡೋದು, ಕಾನೂನು ಪಾಲಿಸದವರಿಗೆ ಶಿಕ್ಷಾ ಕೊಡೋದು ಇವೆಲ್ಲಾ ಅಧಿಕಾರ ಇತ್ತು. ಇತ್ತೋ ಅಥವಾ ಅವರಾಗೇ ತೊಗೊಂಡಿದ್ದರೋ ಅದು ಬ್ಯಾರೆ. ಆದರ ಆಧುನಿಕ ದಿನಮಾನದಾಗ ಇಂತಹ ಪ್ರಭುತ್ವಕ್ಕ ಮೂರು ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗದ ಎಲ್ಲಾ ಶಕ್ತಿ ಕೊಡಬಾರದು ಅಂತ ಒಂದು ಥಿಯರಿ ಅದ. ಅದರ ಪ್ರಕಾರ ನಮ್ಮ ಜನಸತ್ತಾದೊಳಗ ಈ ಮೂರು ಜವಾಬ್ದಾರಿಗಳನ್ನು ಬೇರೆ ಬೇರೆ ಅಂಗಗಳಿಗೆ ಹಂಚ್ಯಾರ.

ಆದರೂ ಸರಕಾರಗಳು ಮೂರೂ ರೀತಿಯ ಅಧಿಕಾರಗಳನ್ನ ಬಳಸತಾವು. ಉದಾಹರಣೆಗೆ ಪೊಲೀಸರನ್ನು ನೇಮಕ ಮಾಡೋದು ಪ್ರಭುತ್ವ, ಅವರಿಗೆ ಕೆಲಸ ಹೇಳೋದು ಸರಕಾರ. ನ್ಯಾಯಾಲಯಗಳನ್ನು ಆರಂಭಿಸಿ, ನ್ಯಾಯಾಧೀಶರನ್ನು ನೇಮಿಸಿ ಅವರ ಮುಂದೆ ಕೇಸು ತೊಗೊಂಡು ಹೋಗೋದು ಪ್ರಭುತ್ವ. ಹಿಂಗಿದ್ದಾಗ ನ್ಯಾಯಾಲಯಗಳಲ್ಲಿ ಬರೇ ಸರಕಾರದ ದನಿ ಕೇಳಿ ಗರೀಬ ಆರೋಪಿತರ ದನಿ ಅಡುಗಿಹೋಗಬಾರದು ಅಂತ ಕೆಲವು ನಿಯಮ ಅವ. ಅವಕ್ಕ ಪ್ರಕ್ರಿಯಾ ಕಾನೂನು ಅಂತ ಹೆಸರು. ಉದ್ದೇಶದ ಜೊತೆ ಪ್ರಕ್ರಿಯಾನೂ ಸರಿ ಇರಬೇಕು ಅಂತ ಅದರ ನೇಮ.

ಅವು ಯಾಕ ಬೇಕಂದ್ರ ಸರಕಾರ ಅನ್ನೋದು ಸರ್ವಾಧಿಕಾರ ಆಗಬಾರದು ಅಂತ.

ಅದು ಯಾವಾಗ ಆಗಬಹುದಪಾ ಅನ್ನಲಿಕ್ಕೆ ಕೆಲವು ಉದಾಹರಣೆ ನೋಡೋಮು.

ಹರಿಯಾಣಾದ ಮಾಜಿ ಮುಖ್ಯಮಂತ್ರಿ ಓಂಪ್ರಕಾಶ ಚೌಟಾಲಾ ಅವರ ಮೊಮ್ಮಗ ಅಜಯ ಚೌಟಾಲಾ ಅವರಿಗೆ ಎರಡು ವಾರದ ಸಜಾ ಕಾಲದ ರಜೆ ಸಿಕ್ಕದ. ಅದರ ಹಿಂದಿನ ದಿವಸ ಅಜಯ ಅವರ ಮಗ ದುಷ್ಯಂತ ಚೌಟಾಲಾ ಅವರು ಬಿಜೆಪಿಗೆ ಬೆಂಬಲ ಸೂಚಿಸಿ ಹಂಗಾಗಿದ್ದ ಹರಿಯಾಣಾ ವಿಧಾನಸಭೆಯನ್ನು ಹಂಗ ಮಾಡಿದ್ದರು. ಅದಕ್ಕೂ ಇದಕ್ಕೂ ಸಂಬಂಧ ಇರಬಹುದು ಅನ್ನುಕೊಳ್ಳುವುದು ಅಂದುಕೊಂಡವರ ಚಿತ್ತ. ಸಜಾ ಕಾಲದ ರಜೆ (ಫರಲೋ) ಹಾಗೂ ಸಜಾ ಕಾಲದ ಬಿಡುಗಡೆ ( ಪರೋಲ್) ಗೂ ಫರ್ಕು ಏನಪಾ ಅಂದರ ಫರಲೋ ಅನ್ನುವುದು ಒಬ್ಬ ಕೈದಿಯ ಹಕ್ಕು. ಪರೋಲ್ ಅನ್ನುವುದು ಹಕ್ಕಲ್ಲ. ಅದು ಸರಕಾರದ ಹಾಗೂ ನ್ಯಾಯಾಲಯದ ಚಿತ್ತ. ಜಂಬೂ ದ್ವೀಪದ ಮಹಾನ್ ನಾಯಕ ಸಂಜೂ ಬಾಬಾ ಅವರು ಸುಮಾರು 39 ಸರೆ ಫರಲೋ ಹಾಗೂ ಪರೋಲ್ ಸೌಭಾಗ್ಯ ಪಡೆದಿದ್ದರು. ಅವರು ಪಡೆದು ಬಂದವರು.

ಜನರ ಸಲುವಾಗಿ ಹೋರಾಟ ಮಾಡೋ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ಬಂಧನ ಆಗೇದ. ಅವರನ್ನ 25 ವರ್ಷ ಹಳೆಯ ಕೇಸೊಂದರಲ್ಲಿ ಭಾಗಿಯಾಗಿದ್ದ ವಿನೋದ ಎನ್ನುವ ವ್ಯಕ್ತಿಯೆಂದರೆ ಇವನೇ ಅಂತ ಹೇಳಿ ರಾಯಚೂರು ಪೊಲೀಸರು ಹಿಡಕೊಂಡು ಹೋಗ್ಯಾರ. ಹಂಗಂತ ಅವರೇನು ಬೆಂಗಳೂರ ತನಾ ಬಂದು ಅವರನ್ನ ಹಿಡಕೊಂಡು ಹೋಗಿಲ್ಲ. ರಾಯಚೂರು ಕಾರ್ಯಕ್ರಮಕ್ಕ ಹೋದಾಗ ಪೊಲೀಸ್ ಟೇಸನಕ್ಕ ಬರ್ರಿ ಅಂತ ಹೇಳಿ ಕರಿಸಿಕೊಂಡು ಅರೆಸ್ಟು ಮಾಡ್ಯಾರ

ಬೆಂಗಳೂರಾಗ ಎಲ್ಲಾರ ಎದುರಿಗೆ ಖುಲ್ಲಂಖುಲ್ಲಾ ಓಡಾಡಿಕೊಂಡು ಇದ್ದ ಈ ಮನುಷ್ಯ 25 ವರ್ಷ ತಲೆ ಮರೆಸಿಕೊಂಡಿದ್ದ ಅಂತ ಪೊಲೀಸರು ಕತಿ ಹೇಳ್ಯಾರ. ಅದಕ್ಕ ಅವರಿಗೆ ಸರಿಯಾದ ಸಾಕ್ಷಿ ಇಲ್ಲ. ಅವರಿಗೆ ಇರೋ ಸಾಕ್ಷಿ ಅಂದರ ಒಬ್ಬ ಮಾಜಿ ಪೊಲೀಸ್ ಸಿಬ್ಬಂದಿಯ ನೆನಪಿನ ಶಕ್ತಿ. ಇದು ಭಾರತೀಯ ದಂಡಸಂಹಿತೆ ಹಾಗೂ ಸಂವಿಧಾನದ ಪ್ರಕಾರ ಲಾಗೂ ಆಗೋದಿಲ್ಲ. ಆದರೆ ಅದು ನ್ಯಾಯಾಧೀಶರ ಎದುರಿಗೆ ವಾದಕ್ಕ ಬಂದಾಗಿನ ಮಾತು. ಅಲ್ಲಿ ತನಕಾ ಸರಕಾರದ ಮಾತೇ ಸರಿ.

ಗುಜರಾತು ಪೊಲೀಸರು ಐಪಿಎಸ್ ಅಧಿಕಾರಿ ಸಂಜೀವ ಭಟ್ ಅವರನ್ನು 13 ತಿಂಗಳ ಹಿಂದೆ ಬಂಧಿಸಿದ್ದಾರೆ. ಅವರಿಗೆ ಇನ್ನೂ ಬೇಲು ಸಿಕ್ಕಿಲ್ಲ. ಅವರು 22 ವರ್ಷದ ಹಿಂದ ಪೊಲೀಸ ಅಧೀಕ್ಷಕರಾಗಿದ್ದಾಗ ತಮ್ಮ ವ್ಯಾಪ್ತಿಯಲ್ಲಿ ನಡೆದ ಪೊಲೀಸ್ ಅಧಿಕಾರಿಗಳ ಅಧಿಕಾರ ದುರ್ಬಳಕೆ ಪ್ರಸಂಗವೊಂದರಲ್ಲಿ ಅವರನ್ನು ಆರೋಪಿ ಅಂತ ಮಾಡ್ಯಾರ. ಮೂವತ್ತು ವರ್ಷ ಸಂವಿಧಾನ, ನ್ಯಾಯ ಪ್ರಕ್ರಿಯೆ, ಸರಕಾರಿ ಕಾನೂನುಗಳಿಗೆ ತಕ್ಕಂತ ನೌಕರಿ ಮಾಡಿದ ಮನಿಷಾಗ ಕಾನೂನಿನ ಬಗ್ಗೆ ನಂಬಿಕಿ ಇಲ್ಲಾ ಅಂತ ಹೇಳಿ ಸರಕಾರ ಅವರಿಗೆ ಬೇಲು ಕೊಡಿಸಿಲ್ಲ.

ಕಾರ್ಮಿಕ ಮುಖಂಡರಾದ ಸುಧಾ ಭಾರದ್ವಾಜ ಮತ್ತು 10 ಜನ ಜನನಾಯಕರನ್ನು ಒಳಗ ಹಾಕಿ 14 ತಿಂಗಳ ಆತು. ಅದರೊಳಗ ಒಬ್ಬರ ಮನಿಯೊಳಗ ’ವಾರ್ ಆಂಡ್ ಪೀಸ್’ ಅನ್ನೋ ಕಾದಂಬರಿ ಇತ್ತು ಅದು ಅಲ್ಯಾಕ ಇತ್ತು ಅನ್ನೋದು ಭಾರಿ ಸುದ್ದಿ ಆಗಿತ್ತು. ಇದರಾಗೂನು ಅವರ ವಿಚಾರಣೆ ಅನ್ನೋದು ಸುರೂನ ಆಗಿಲ್ಲ. ಅಧಿಕೃತವಾಗಿ ಸರಕಾರದ ತನಿಖೆ ಮುಗದೇ ಇಲ್ಲ.

ಪ್ರಭುತ್ವ ಅನ್ನುವುದು ಸರ್ವಾಧಿಕಾರ ಆಗಬಾರದು. ಯಾಕಂದ್ರ ಭಾರತದೊಳಗ ಆಳುವ ಪಕ್ಷ, ವಿರೋಧ ಪಕ್ಷ ಅಂತ ಯಾವೂ ಇಲ್ಲ. ಇಲ್ಲಿ ಇರೋದು ಇವತ್ತಿನ ಆಳುವ ಪಕ್ಷ, ನಿನ್ನೆಯ ಆಳುವ ಪಕ್ಷ ಹಾಗೂ ನಾಳೆಯ ಆಳುವ ಪಕ್ಷ ಅಂತ ಅಷ್ಟ. ಅವರು ಮಾಡ್ಯಾರ ಅಂತ ಇವರು ತಿನ್ನೋದು ಇವರಿಬ್ಬರೂ ಮಾಡ್ಯಾರ ಅಂತ ಮೂರನೆಯವರು ಮಾಡೋದು ಸರಿ ಅಲ್ಲ. ಇವತ್ತು ಆಳುವವರು ನ್ಯಾಯ ನಿಷ್ಟುರತೆ, ಪಾರದರ್ಶಕ ನೀತಿ ಹಾಗೂ ನಿಷ್ಪಕ್ಷಪಾತ ನಡೆ ಯನ್ನು ಪಾಲಿಸದಿದ್ದರೆ ನಾಳೆ ಬಂದವರೂ ಪಾಲಿಸಲಿಕ್ಕಿಲ್ಲ. ಆವಾಗ ಇವರು ಝಗಳಾ ತಗೀಲಿಕ್ಕೆ ಬರೋದಿಲ್ಲ. ನೀವು ಹಿಂಗ ಮಾಡಿದಿರಿ ಅಂದರ ನೀವು ಮಾಡಿಲ್ಲೇನು ಅಂತ ಅವರು ಅನ್ನಬಹುದು.
ಅದರ ಜನರಿಗೆ ಇವು ಯಾವುವೂ ಬ್ಯಾಡ. ಸಮಾನತೆ ಹಾಗೂ ಶಾಂತಿ ಬೇಕು. ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....