Homeಮುಖಪುಟರಾಜ್ಯ ವಿಧಾನಸಭಾ ಚುನಾವಣೆ: ಜೆಡಿಎಸ್‌ಗೆ ಬಿಆರ್‌ಎಸ್‌ ಬೆಂಬಲ

ರಾಜ್ಯ ವಿಧಾನಸಭಾ ಚುನಾವಣೆ: ಜೆಡಿಎಸ್‌ಗೆ ಬಿಆರ್‌ಎಸ್‌ ಬೆಂಬಲ

- Advertisement -
- Advertisement -

ತೆಲಂಗಾಣದ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಕ್ಷವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಬೆಂಬಲ ನೀಡಲು ನಿರ್ಧರಿಸಿದೆ. ಮೇ 10ರಂದು ನಡೆಯುವ ಚುನಾವಣೆಯಲ್ಲಿ ತನ್ನ ಮಿತ್ರ ಪಕ್ಷವು ಕಣದಲ್ಲಿರುವುದರಿಂದ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ಬಿಆರ್‌ಎಸ್ ತೀರ್ಮಾನಿಸಿದೆ.

ಬಿಆರ್‌ಎಸ್ ಪಕ್ಷವು ಈ ಹಿಂದೆ ಟಿಆರ್‌ಎಸ್ (ತೆಲಂಗಾಣ ರಾಷ್ಟ್ರ ಸಮಿತಿ) ಹೆಸರಿನಲ್ಲಿತ್ತು. ರಾಷ್ಟ್ರೀಯ ರಾಜಕೀಯಕ್ಕೆ ಕಾಲಿಡುವುದಕ್ಕಾತಿ ತನ್ನ ಹೆಸರನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಮರುನಾಮಕರಣ ಮಾಡಿತು. ಬಿಆರ್‌ಎಸ್‌ ಪಕ್ಷವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದೆಂದು ನಿರೀಕ್ಷಿಸಲಾಗಿತ್ತು.

ಆದರೆ ಜೆಡಿಎಸ್, ಬಿಆರ್‌ಎಸ್‌ನ ಮಿತ್ರ ಪಕ್ಷವಾಗಿದೆ. ಜೊತೆಗೆ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಾಕಷ್ಟು ಸಮಯದ ಕೊರತೆ ಬಿಆರ್‌ಎಸ್‌ಗೆ ಎದುರಾಯಿತು. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ಅದು ನಿರ್ಧರಿಸಿತ್ತು ಎಂದು ಬಿಆರ್‌ಎಸ್ ಮೂಲಗಳು ಶುಕ್ರವಾರ ತಿಳಿಸಿವೆ.

ಸಾಕಷ್ಟು ಸಿದ್ಧತೆ ಮತ್ತು ಯೋಜನೆ ಇಲ್ಲದೆ ಚುನಾವಣೆ ಎದುರಿಸಲು ಪಕ್ಷವು ಒಲವು ಹೊಂದಿಲ್ಲ ಎಂದು ಮೂಲಗಳು ಹೇಳಿದ್ದು, ನೆರೆಯ ಮಹಾರಾಷ್ಟ್ರದಲ್ಲಿ ನೆಲೆಯೂರಲು ಬಿಆರ್‌ಎಸ್ ಮಾಡುತ್ತಿರುವ ಪ್ರಯತ್ನಗಳನ್ನು ಉಲ್ಲೇಖಿಸಲಾಗಿದೆ.

ಬಿಆರ್‌ಎಸ್ ಮುಖ್ಯಸ್ಥ ಮತ್ತು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಇದುವರೆಗೆ ಮಹಾರಾಷ್ಟ್ರದ ನಾಂದೇಡ್ ಪ್ರದೇಶದಲ್ಲಿ ಎರಡು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಏಪ್ರಿಲ್ 24 ರಂದು ಛತ್ರಪತಿ ಸಂಭಾಜಿ ನಗರದಲ್ಲಿ (ಔರಂಗಾಬಾದ್) ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಭಾಷಣ ಮಾಡಿದ್ದರು.

ಜೆಡಿಎಸ್‌ ಅಭ್ಯರ್ಥಿಗಳು ಕೋರಿದರೆ, ಆದರೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳದಿದ್ದರೆ ಅವರನ್ನು ಬೆಂಬಲಿಸಿ ಪ್ರಚಾರ ಮಾಡುವ ಬಗ್ಗೆ ಚಂದ್ರಶೇಖರ್‌ ರಾವ್‌ ಯೋಚಿಸಬಹುದು.

ತಾನು ಪ್ರಚಾರ ಮಾಡುವುದರಿಂದ ಬಿಜೆಪಿ ವಿರೋಧಿ ಮತಗಳ ವಿಭಜನೆಯಾದರೆ ಕರ್ನಾಟಕದಲ್ಲಿ ಬಿಜೆಪಿಗೆ ವರದಾನವಾಗಲಿದೆ ಎಂಬ ಅಭಿಪ್ರಾಯದ ಬಗ್ಗೆಯೂ ಬಿಆರ್‌ಎಸ್ ಕಳವಳ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಟಿಆರ್‌ಎಸ್ ಹೆಸರನ್ನು ಬಿಆರ್‌ಎಸ್‌ ಎಂದು ಬದಲಾಯಿಸಲು ಹೈದ್ರಾಬಾದ್‌ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲೂ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿಯವರು ಪಾಲ್ಗೊಂಡಿದ್ದರು ಎಂಬುದು ಗಮನಾರ್ಹ.

‘ಭಾರತ್‌ ರಾಷ್ಟ್ರ ಸಮಿತಿ’ ಪಕ್ಷವನ್ನು ಪ್ರಾರಂಭಿಸಿದ ತೆಲಂಗಾಣ ಭವನದಲ್ಲಿ ನಡೆದ ಸಮಾರಂಭದಲ್ಲಿ ಜೆಡಿಎಸ್‌ನ 20 ಶಾಸಕರು ಸಹ ಭಾಗವಹಿಸಿದ್ದರು. ಇಷ್ಟೆ ಅಲ್ಲದೆ ತಮಿಳುನಾಡಿನ ದಲಿತ ನಾಯಕ ತಿರುಮಾವಲವನ್‌ ಅವರ ಪಕ್ಷದ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ)ಯ ಇಬ್ಬರು ಸಂಸದರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕರ್ನಾಟಕದಲ್ಲಿ ಮೇ 10ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಗುರುವಾರ ಅಂತ್ಯಗೊಂಡಿದೆ.

ಇದನ್ನೂ ಓದಿರಿ: ರಾಷ್ಟ್ರ ರಾಜಕಾರಣದ ಗುರಿ: ಟಿಆರ್‌ಎಸ್ ಅನ್ನು ‘ಭಾರತ ರಾಷ್ಟ್ರ ಸಮಿತಿ’ಯನ್ನಾಗಿ ಪರಿವರ್ತಿಸಿದ ತೆಲಂಗಾಣ ಸಿಎಂ ಕೆಸಿಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...