Homeಮುಖಪುಟಎಸ್‌ಬಿಐ ಮುಖ್ಯಸ್ಥರ ರಾಜೀನಾಮೆಗೆ ನೌಕರರ ಒಕ್ಕೂಟ ಒತ್ತಾಯ

ಎಸ್‌ಬಿಐ ಮುಖ್ಯಸ್ಥರ ರಾಜೀನಾಮೆಗೆ ನೌಕರರ ಒಕ್ಕೂಟ ಒತ್ತಾಯ

- Advertisement -
- Advertisement -

ಚುನಾವಣಾ ಬಾಂಡ್‌ ಕುರಿತು ಚುನಾವಣಾ ಆಯೋಗಕ್ಕೆ ಮಾಹಿತಿಯನ್ನು ನೀಡಲು ಕಾಲಾವಕಾಶ ಕೋರಿ ಎಸ್‌ಬಿಐ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು. ಆ ಬಳಿಕ ಎಸ್‌ಬಿಐ ದೇಶದಲ್ಲಿ ಭಾರೀ ಟೀಕೆಯನ್ನು ಎದುರಿಸಿದೆ. ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್‌ಬಿಐ) ಅಧ್ಯಕ್ಷ ದಿನೇಶ್ ಖೇರಾ ಅವರ ರಾಜೀನಾಮೆಗೆ ಮಹಾರಾಷ್ಟ್ರ ಸ್ಟೇಟ್ ಬ್ಯಾಂಕ್ ನೌಕರರ ಒಕ್ಕೂಟ ಆಗ್ರಹಿಸಿದೆ.

ನಿವೃತ್ತಿಯ ಮುಂಚೆಯೇ ಅಧಿಕಾರದ ವಿಸ್ತರಣೆಯನ್ನು ಪಡೆದಿದ್ದ ದಿನೇಶ್ ಖೇರಾ, ಬ್ಯಾಂಕಿಗೆ ಕೆಟ್ಟ ಹೆಸರನ್ನು ತಂದಿದ್ದಾರೆ ಎಂದು ಸ್ಟೇಟ್ ಬ್ಯಾಂಕ್ ನೌಕರರ ಒಕ್ಕೂಟ ಹೇಳಿದೆ. ದಿನೇಶ್ ಖೇರಾ ನಡೆಯಿಂದ ಬ್ಯಾಂಕಿನ ಇಮೇಜ್‌ಗೆ ಹಾನಿಯಾಗಿದೆ ಮತ್ತು ಪಾರದರ್ಶಕತೆ ಮತ್ತು ಕಾರ್ಪೊರೇಟ್ ಆಡಳಿತದ ಮೇಲಿನ ಬ್ಯಾಂಕಿನ ವಿಶ್ವಾಸಾರ್ಹತೆಯ ಮೇಲೆ ಪ್ರಭಾವ ಬೀರಿದೆ. ಆದ್ದರಿಂದ ಎಸ್‌ಬಿಐ ಅಧ್ಯಕ್ಷ ಸ್ಥಾನದಿಂದ ದಿನೇಶ್ ಖೇರಾ ಕೆಳಗಿಳಿಯಬೇಕು ಎಂದು ಮಹಾರಾಷ್ಟ್ರ ಸ್ಟೇಟ್ ಬ್ಯಾಂಕ್ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ದೇವಿದಾಸ್ ತುಳಜಾಪುರಕರ್ ಹೇಳಿದ್ದಾರೆ.

ದಿನೇಶ್ ಖೇರಾ ಅವರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧ್ಯಕ್ಷರಾಗಿದ್ದಾರೆ. ಅವರು ಅಕ್ಟೋಬರ್ 7, 2020 ರಂದು ಸ್ಥಾನವನ್ನು ಪಡೆದರು ಮತ್ತು ಅವರ ಅವಧಿಯು ಆಗಸ್ಟ್ 2024ರಲ್ಲಿ ಕೊನೆಗೊಳ್ಳಲಿದೆ. ಖೇರಾ ಅವರು ಬ್ಯಾಂಕಿಂಗ್ ಉದ್ಯಮದಲ್ಲಿ ವ್ಯಾಪಕ ಅನುಭವ ಹೊಂದಿರುವ ಬ್ಯಾಂಕರ್ ಆಗಿದ್ದಾರೆ. ಅವರು 1984ರಲ್ಲಿ ಎಸ್‌ಬಿಐಗೆ ಪ್ರೊಬೇಷನರಿ ಅಧಿಕಾರಿಯಾಗಿ ಸೇರಿದರು ಮತ್ತು ಬ್ಯಾಂಕಿನೊಳಗೆ ವಿವಿಧ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ.

ಚುನಾವಣಾ ಬಾಂಡ್‌ಗಳ ಮಾಹಿತಿ ನೀಡಿದ ಎಸ್‌ಬಿಐ

ಸುಪ್ರೀಂಕೋರ್ಟ್ ಛೀಮಾರಿ ಹಾಕಿದ ಬಳಿಕ ಚುನಾವಣಾ ಬಾಂಡ್‌ಗಳ ಕುರಿತ ಮಾಹಿತಿಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. ನ್ಯಾಯಾಲಯದ ಆದೇಶದಂತೆ ಎಸ್ ಬಿಐ ನೀಡಿರುವ ಮಾಹಿತಿಯನ್ನು ಮಾರ್ಚ್ 15ರಂದು ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕಿದೆ.

ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲು ಜೂನ್ 30ರವರೆಗೆ ಸಮಯ ವಿಸ್ತರಿಸುವಂತೆ ಕೋರಿ ಎಸ್‌ಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಾ.11ರಂದು ತಿರಸ್ಕರಿಸಿತ್ತು. ಮಾ.12ರ ಬ್ಯಾಂಕ್ ವ್ಯವಹಾರ ಕೊನೆಗೊಳ್ಳುವ ಮುನ್ನ ಮಾಹಿತಿ ಒದಗಿಸಲು ಖಡಕ್ ಆದೇಶ ನೀಡಿತ್ತು.

ಫೆ.15ರಂದು ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ ಐತಿಹಾಸಿಕ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್ ಮಾರ್ಚ್ 6ರೊಳಗೆ ಚುನಾವಣಾ ಆಯೋಗಕ್ಕೆ ಬಾಂಡ್‌ಗಳ ಕುರಿತು ಮಾಹಿತಿಯನ್ನು ಒದಗಿಸುವಂತೆ ಎಸ್‌ಬಿಐಗೆ ಸೂಚಿಸಿತ್ತು. ಈ ಮಾಹಿತಿಯನ್ನು ಮಾರ್ಚ್ 12ರೊಳಗೆ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.

ಇದನ್ನು ಓದಿ: ಖಾಸಿಮ್ ಖುರೇಷಿ ಗುಂಪು ಹತ್ಯೆ ಪ್ರಕರಣ: 10 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...