Homeಮುಖಪುಟಎಸ್‌ಬಿಐ ಮುಖ್ಯಸ್ಥರ ರಾಜೀನಾಮೆಗೆ ನೌಕರರ ಒಕ್ಕೂಟ ಒತ್ತಾಯ

ಎಸ್‌ಬಿಐ ಮುಖ್ಯಸ್ಥರ ರಾಜೀನಾಮೆಗೆ ನೌಕರರ ಒಕ್ಕೂಟ ಒತ್ತಾಯ

- Advertisement -
- Advertisement -

ಚುನಾವಣಾ ಬಾಂಡ್‌ ಕುರಿತು ಚುನಾವಣಾ ಆಯೋಗಕ್ಕೆ ಮಾಹಿತಿಯನ್ನು ನೀಡಲು ಕಾಲಾವಕಾಶ ಕೋರಿ ಎಸ್‌ಬಿಐ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು. ಆ ಬಳಿಕ ಎಸ್‌ಬಿಐ ದೇಶದಲ್ಲಿ ಭಾರೀ ಟೀಕೆಯನ್ನು ಎದುರಿಸಿದೆ. ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್‌ಬಿಐ) ಅಧ್ಯಕ್ಷ ದಿನೇಶ್ ಖೇರಾ ಅವರ ರಾಜೀನಾಮೆಗೆ ಮಹಾರಾಷ್ಟ್ರ ಸ್ಟೇಟ್ ಬ್ಯಾಂಕ್ ನೌಕರರ ಒಕ್ಕೂಟ ಆಗ್ರಹಿಸಿದೆ.

ನಿವೃತ್ತಿಯ ಮುಂಚೆಯೇ ಅಧಿಕಾರದ ವಿಸ್ತರಣೆಯನ್ನು ಪಡೆದಿದ್ದ ದಿನೇಶ್ ಖೇರಾ, ಬ್ಯಾಂಕಿಗೆ ಕೆಟ್ಟ ಹೆಸರನ್ನು ತಂದಿದ್ದಾರೆ ಎಂದು ಸ್ಟೇಟ್ ಬ್ಯಾಂಕ್ ನೌಕರರ ಒಕ್ಕೂಟ ಹೇಳಿದೆ. ದಿನೇಶ್ ಖೇರಾ ನಡೆಯಿಂದ ಬ್ಯಾಂಕಿನ ಇಮೇಜ್‌ಗೆ ಹಾನಿಯಾಗಿದೆ ಮತ್ತು ಪಾರದರ್ಶಕತೆ ಮತ್ತು ಕಾರ್ಪೊರೇಟ್ ಆಡಳಿತದ ಮೇಲಿನ ಬ್ಯಾಂಕಿನ ವಿಶ್ವಾಸಾರ್ಹತೆಯ ಮೇಲೆ ಪ್ರಭಾವ ಬೀರಿದೆ. ಆದ್ದರಿಂದ ಎಸ್‌ಬಿಐ ಅಧ್ಯಕ್ಷ ಸ್ಥಾನದಿಂದ ದಿನೇಶ್ ಖೇರಾ ಕೆಳಗಿಳಿಯಬೇಕು ಎಂದು ಮಹಾರಾಷ್ಟ್ರ ಸ್ಟೇಟ್ ಬ್ಯಾಂಕ್ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ದೇವಿದಾಸ್ ತುಳಜಾಪುರಕರ್ ಹೇಳಿದ್ದಾರೆ.

ದಿನೇಶ್ ಖೇರಾ ಅವರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧ್ಯಕ್ಷರಾಗಿದ್ದಾರೆ. ಅವರು ಅಕ್ಟೋಬರ್ 7, 2020 ರಂದು ಸ್ಥಾನವನ್ನು ಪಡೆದರು ಮತ್ತು ಅವರ ಅವಧಿಯು ಆಗಸ್ಟ್ 2024ರಲ್ಲಿ ಕೊನೆಗೊಳ್ಳಲಿದೆ. ಖೇರಾ ಅವರು ಬ್ಯಾಂಕಿಂಗ್ ಉದ್ಯಮದಲ್ಲಿ ವ್ಯಾಪಕ ಅನುಭವ ಹೊಂದಿರುವ ಬ್ಯಾಂಕರ್ ಆಗಿದ್ದಾರೆ. ಅವರು 1984ರಲ್ಲಿ ಎಸ್‌ಬಿಐಗೆ ಪ್ರೊಬೇಷನರಿ ಅಧಿಕಾರಿಯಾಗಿ ಸೇರಿದರು ಮತ್ತು ಬ್ಯಾಂಕಿನೊಳಗೆ ವಿವಿಧ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ.

ಚುನಾವಣಾ ಬಾಂಡ್‌ಗಳ ಮಾಹಿತಿ ನೀಡಿದ ಎಸ್‌ಬಿಐ

ಸುಪ್ರೀಂಕೋರ್ಟ್ ಛೀಮಾರಿ ಹಾಕಿದ ಬಳಿಕ ಚುನಾವಣಾ ಬಾಂಡ್‌ಗಳ ಕುರಿತ ಮಾಹಿತಿಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. ನ್ಯಾಯಾಲಯದ ಆದೇಶದಂತೆ ಎಸ್ ಬಿಐ ನೀಡಿರುವ ಮಾಹಿತಿಯನ್ನು ಮಾರ್ಚ್ 15ರಂದು ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕಿದೆ.

ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲು ಜೂನ್ 30ರವರೆಗೆ ಸಮಯ ವಿಸ್ತರಿಸುವಂತೆ ಕೋರಿ ಎಸ್‌ಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಾ.11ರಂದು ತಿರಸ್ಕರಿಸಿತ್ತು. ಮಾ.12ರ ಬ್ಯಾಂಕ್ ವ್ಯವಹಾರ ಕೊನೆಗೊಳ್ಳುವ ಮುನ್ನ ಮಾಹಿತಿ ಒದಗಿಸಲು ಖಡಕ್ ಆದೇಶ ನೀಡಿತ್ತು.

ಫೆ.15ರಂದು ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ ಐತಿಹಾಸಿಕ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್ ಮಾರ್ಚ್ 6ರೊಳಗೆ ಚುನಾವಣಾ ಆಯೋಗಕ್ಕೆ ಬಾಂಡ್‌ಗಳ ಕುರಿತು ಮಾಹಿತಿಯನ್ನು ಒದಗಿಸುವಂತೆ ಎಸ್‌ಬಿಐಗೆ ಸೂಚಿಸಿತ್ತು. ಈ ಮಾಹಿತಿಯನ್ನು ಮಾರ್ಚ್ 12ರೊಳಗೆ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.

ಇದನ್ನು ಓದಿ: ಖಾಸಿಮ್ ಖುರೇಷಿ ಗುಂಪು ಹತ್ಯೆ ಪ್ರಕರಣ: 10 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...