Homeಕರ್ನಾಟಕಅಮಿತ್ ಷಾ ಎದುರು ಮಾನ ಉಳಿಸಿಕೊಳ್ಳಲು ರಾಜ್ಯ ಬಿಜೆಪಿ ದುಡ್ಡು ಹಂಚಿಕೆ: ಕಾಂಗ್ರೆಸ್ ಆರೋಪ

ಅಮಿತ್ ಷಾ ಎದುರು ಮಾನ ಉಳಿಸಿಕೊಳ್ಳಲು ರಾಜ್ಯ ಬಿಜೆಪಿ ದುಡ್ಡು ಹಂಚಿಕೆ: ಕಾಂಗ್ರೆಸ್ ಆರೋಪ

- Advertisement -
- Advertisement -

“ಹಿಂದಿನ ಜನಸಂಕಟಯಾತ್ರೆಯಲ್ಲಿ ಖಾಲಿ ಕುರ್ಚಿ ದರ್ಶನ ಪಡೆದ ಬಿಜೆಪಿ ಈಗ ಅಮಿತ್ ಶಾ ಎದುರು ಮಾನ ಉಳಿಸಿಕೊಳ್ಳಲು ಕುರ್ಚಿಗಳಿಗಷ್ಟೇ ಅಲ್ಲ ಕುರ್ಚಿ ಮೇಲೆ ಕೂರುವವರಿಗೂ ಹಣ ಕೊಟ್ಟು ಕರೆಸಿದೆ. ಈ ಹಣ ಯಾವುದು?” ಎಂದು ಬಿಜೆಪಿಯನ್ನು ಕಾಂಗ್ರೆಸ್ ಪ್ರಶ್ನಿಸಿದೆ.

ವಿಡಿಯೊವೊಂದನ್ನು ತನ್ನ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, “ಈ ಹಣ 40% ಕಮಿಷನ್ ಲೂಟಿಯದ್ದೇ? ಹುದ್ದೆಗಳ ಮಾರಾಟದ ಸಂಪಾದನೆಯೇ? ಮಂತ್ರಿಗಿರಿ ಮಾರಾಟದಿಂದ ಬಂದ ಹಣವೇ?” ಎಂದು ಕೇಳಿದೆ.

ಮತ್ತೊಂದು ಟ್ವೀಟ್‌ನಲ್ಲಿ, “ಚುನಾವಣೆಗಾಗಿ ಕರ್ನಾಟಕದ ಕಡೆ ‘ದಂಡ’ಯಾತ್ರೆ ಕೈಗೊಂಡಿದ್ದಾರೆ ಬಿಜೆಪಿಯ ದೆಹಲಿ ನಾಯಕರು! ಗಡಿ ವಿವಾದ ಬಗೆಹರಿಸಾಲಾಗದ ಅಮಿತ್ ಶಾ ಅವರ ಮಾತಿಗೆ ಮಹಾರಾಷ್ಟ್ರ ಕಿಮ್ಮತ್ತು ನೀಡುತ್ತಿಲ್ಲ. ಈ ಕಿಮ್ಮತ್ತಿಲ್ಲದ ವ್ಯಕ್ತಿಗೆ ಕರ್ನಾಟಕದ ಜನತೆ ಬೆಲೆ ಕೊಡುವುದು ಅಸಂಭವ! ಬಿಜೆಪಿ ಅದೆಷ್ಟೇ ಸರ್ಕಸ್ ನಡೆಸಿದರೂ ಜನರ ತಿರಸ್ಕಾರ ಎದುರಿಸುವುದು ನಿಶ್ಚಿತ” ಎಂದಿದೆ.

“ಚುನಾವಣೆಗಾಗಿ ಕರ್ನಾಟಕದತ್ತ ಮುಖ ಮಾಡುತ್ತಿರುವ ಮೋದಿ – ಶಾ ಜೋಡಿ ಕರ್ನಾಟಕ ಸಂಕಷ್ಟ ಎದುರಿಸುತ್ತಿದ್ದಾಗ ನಾಪತ್ತೆಯಾಗಿದ್ದರು. ‘ಕಷ್ಟಕ್ಕೆ ಬರಬೇಡ, ಚುನಾವಣೆಗೆ ಮಾತ್ರ ಬಿಡಬೇಡ’ ಎಂಬಂತಿದೆ ಅವರ ನಡೆ. ಮಂಡ್ಯದಲ್ಲಿ ರೈತರು ಹಲವು ದಿನಗಳಿಂದ ತಮ್ಮ ಬೇಡಿಕೆ ಮುಂದಿಟ್ಟು ಪ್ರತಿಭಟಿಸುತ್ತಿದ್ದಾರೆ, ಬಿಜೆಪಿಗೆ ನೈಜ ಕಾಳಜಿ ಇದ್ದರೆ ಅವರ ಬಳಿ ಹೋಗಲಿ” ಎಂದು ಆಗ್ರಹಿಸಿದೆ.

ಯಶವಂತಪುರ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆಯ ಬೋರ್ಡ್ ಅನ್ನು ಬಿಜೆಪಿ ಪ್ರಚಾರಕ್ಕೆ ಬಳಸಿರುವುದನ್ನು ಪ್ರಶ್ನಿಸಿರುವ ಕಾಂಗ್ರೆಸ್, “ಜನರ ಹಣ, ಸರ್ಕಾರಿ ಆಸ್ಪತ್ರೆ, ಆದರೆ ಪ್ರಚಾರ ಮಾತ್ರ ಬಿಜೆಪಿಯದ್ದು. ಬಸವರಾಜ ಬೊಮ್ಮಾಯಿಯವರೇ ಯಶವಂತಪುರದ ಕೋವಿಡ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಿಜೆಪಿ ಪ್ರಚಾರದ ಬೋರ್ಡ್ ಹಾಕಿದ್ದೇಕೆ? ಸರ್ಕಾರಿ ಆಸ್ತಿಗಳೆಲ್ಲವನ್ನು ಬಿಜೆಪಿ ಕಬಳಿಸಿತೇ ಹೇಗೆ? ಇದು ಅಧಿಕಾರ ದುರ್ಬಳಕೆ ಅಲ್ಲದೆ ಇನ್ನೇನು? ನೈತಿಕತೆ ಇದ್ದರೆ ಕೂಡಲೇ ಇದನ್ನು ತೆರವುಗೊಳಿಸಿ” ಎಂದು ಒತ್ತಾಯಿಸಿದೆ.

ಮೂಲ ಬಿಜೆಪಿ v/s ವಲಸೆ ಬಿಜೆಪಿ

ಮೂಲ ಬಿಜೆಪಿ v/s ವಲಸೆ ಬಿಜೆಪಿ ನಡುವೆ ಕಿತ್ತಾಟವಾಗುತ್ತಿದೆ ಎಂದು ವಿಡಿಯೊವೊಂದನ್ನು ಕಾಂಗ್ರೆಸ್ ಹಂಚಿಕೊಂಡಿದೆ. “ಮೂಲ ಬಿಜೆಪಿ vs ವಲಸೆ ಬಿಜೆಪಿ ಎಂಬ ವೈಮಸ್ಸು ಜೋರಾಗಿದೆ! ಆಪರೇಷನ್ ಕಮಲ ನಡೆಸಿದ ಬಿಜೆಪಿಗೆ ಅದೇ ಆಪರೇಷನ್ ಸಂಕಟ ತಂದಿಡುವುದು ನಿಶ್ಚಿತ. ಬಿಜೆಪಿ ಹಾಳು ಮಾಡಿ ಹೋಗಲು ಬಂದಿದ್ದಾರೆ ಎಂದು ನಿಮ್ಮದೇ ಕಾರ್ಯಕರ್ತರು ಆರೋಪಿಸಿದ್ದು ಯಾರಿಗೆ? ತಾವು ಬಳಸಿ ಬಿಸಾಡುವವರು ಎಂದು ಬಿಜೆಪಿ ಕಾರ್ಯಕರ್ತರಿಗೆ ತಿಳಿಯುತ್ತಿದೆ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...