Homeಕರ್ನಾಟಕಅಮಿತ್ ಷಾ ಎದುರು ಮಾನ ಉಳಿಸಿಕೊಳ್ಳಲು ರಾಜ್ಯ ಬಿಜೆಪಿ ದುಡ್ಡು ಹಂಚಿಕೆ: ಕಾಂಗ್ರೆಸ್ ಆರೋಪ

ಅಮಿತ್ ಷಾ ಎದುರು ಮಾನ ಉಳಿಸಿಕೊಳ್ಳಲು ರಾಜ್ಯ ಬಿಜೆಪಿ ದುಡ್ಡು ಹಂಚಿಕೆ: ಕಾಂಗ್ರೆಸ್ ಆರೋಪ

- Advertisement -
- Advertisement -

“ಹಿಂದಿನ ಜನಸಂಕಟಯಾತ್ರೆಯಲ್ಲಿ ಖಾಲಿ ಕುರ್ಚಿ ದರ್ಶನ ಪಡೆದ ಬಿಜೆಪಿ ಈಗ ಅಮಿತ್ ಶಾ ಎದುರು ಮಾನ ಉಳಿಸಿಕೊಳ್ಳಲು ಕುರ್ಚಿಗಳಿಗಷ್ಟೇ ಅಲ್ಲ ಕುರ್ಚಿ ಮೇಲೆ ಕೂರುವವರಿಗೂ ಹಣ ಕೊಟ್ಟು ಕರೆಸಿದೆ. ಈ ಹಣ ಯಾವುದು?” ಎಂದು ಬಿಜೆಪಿಯನ್ನು ಕಾಂಗ್ರೆಸ್ ಪ್ರಶ್ನಿಸಿದೆ.

ವಿಡಿಯೊವೊಂದನ್ನು ತನ್ನ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, “ಈ ಹಣ 40% ಕಮಿಷನ್ ಲೂಟಿಯದ್ದೇ? ಹುದ್ದೆಗಳ ಮಾರಾಟದ ಸಂಪಾದನೆಯೇ? ಮಂತ್ರಿಗಿರಿ ಮಾರಾಟದಿಂದ ಬಂದ ಹಣವೇ?” ಎಂದು ಕೇಳಿದೆ.

ಮತ್ತೊಂದು ಟ್ವೀಟ್‌ನಲ್ಲಿ, “ಚುನಾವಣೆಗಾಗಿ ಕರ್ನಾಟಕದ ಕಡೆ ‘ದಂಡ’ಯಾತ್ರೆ ಕೈಗೊಂಡಿದ್ದಾರೆ ಬಿಜೆಪಿಯ ದೆಹಲಿ ನಾಯಕರು! ಗಡಿ ವಿವಾದ ಬಗೆಹರಿಸಾಲಾಗದ ಅಮಿತ್ ಶಾ ಅವರ ಮಾತಿಗೆ ಮಹಾರಾಷ್ಟ್ರ ಕಿಮ್ಮತ್ತು ನೀಡುತ್ತಿಲ್ಲ. ಈ ಕಿಮ್ಮತ್ತಿಲ್ಲದ ವ್ಯಕ್ತಿಗೆ ಕರ್ನಾಟಕದ ಜನತೆ ಬೆಲೆ ಕೊಡುವುದು ಅಸಂಭವ! ಬಿಜೆಪಿ ಅದೆಷ್ಟೇ ಸರ್ಕಸ್ ನಡೆಸಿದರೂ ಜನರ ತಿರಸ್ಕಾರ ಎದುರಿಸುವುದು ನಿಶ್ಚಿತ” ಎಂದಿದೆ.

“ಚುನಾವಣೆಗಾಗಿ ಕರ್ನಾಟಕದತ್ತ ಮುಖ ಮಾಡುತ್ತಿರುವ ಮೋದಿ – ಶಾ ಜೋಡಿ ಕರ್ನಾಟಕ ಸಂಕಷ್ಟ ಎದುರಿಸುತ್ತಿದ್ದಾಗ ನಾಪತ್ತೆಯಾಗಿದ್ದರು. ‘ಕಷ್ಟಕ್ಕೆ ಬರಬೇಡ, ಚುನಾವಣೆಗೆ ಮಾತ್ರ ಬಿಡಬೇಡ’ ಎಂಬಂತಿದೆ ಅವರ ನಡೆ. ಮಂಡ್ಯದಲ್ಲಿ ರೈತರು ಹಲವು ದಿನಗಳಿಂದ ತಮ್ಮ ಬೇಡಿಕೆ ಮುಂದಿಟ್ಟು ಪ್ರತಿಭಟಿಸುತ್ತಿದ್ದಾರೆ, ಬಿಜೆಪಿಗೆ ನೈಜ ಕಾಳಜಿ ಇದ್ದರೆ ಅವರ ಬಳಿ ಹೋಗಲಿ” ಎಂದು ಆಗ್ರಹಿಸಿದೆ.

ಯಶವಂತಪುರ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆಯ ಬೋರ್ಡ್ ಅನ್ನು ಬಿಜೆಪಿ ಪ್ರಚಾರಕ್ಕೆ ಬಳಸಿರುವುದನ್ನು ಪ್ರಶ್ನಿಸಿರುವ ಕಾಂಗ್ರೆಸ್, “ಜನರ ಹಣ, ಸರ್ಕಾರಿ ಆಸ್ಪತ್ರೆ, ಆದರೆ ಪ್ರಚಾರ ಮಾತ್ರ ಬಿಜೆಪಿಯದ್ದು. ಬಸವರಾಜ ಬೊಮ್ಮಾಯಿಯವರೇ ಯಶವಂತಪುರದ ಕೋವಿಡ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಿಜೆಪಿ ಪ್ರಚಾರದ ಬೋರ್ಡ್ ಹಾಕಿದ್ದೇಕೆ? ಸರ್ಕಾರಿ ಆಸ್ತಿಗಳೆಲ್ಲವನ್ನು ಬಿಜೆಪಿ ಕಬಳಿಸಿತೇ ಹೇಗೆ? ಇದು ಅಧಿಕಾರ ದುರ್ಬಳಕೆ ಅಲ್ಲದೆ ಇನ್ನೇನು? ನೈತಿಕತೆ ಇದ್ದರೆ ಕೂಡಲೇ ಇದನ್ನು ತೆರವುಗೊಳಿಸಿ” ಎಂದು ಒತ್ತಾಯಿಸಿದೆ.

ಮೂಲ ಬಿಜೆಪಿ v/s ವಲಸೆ ಬಿಜೆಪಿ

ಮೂಲ ಬಿಜೆಪಿ v/s ವಲಸೆ ಬಿಜೆಪಿ ನಡುವೆ ಕಿತ್ತಾಟವಾಗುತ್ತಿದೆ ಎಂದು ವಿಡಿಯೊವೊಂದನ್ನು ಕಾಂಗ್ರೆಸ್ ಹಂಚಿಕೊಂಡಿದೆ. “ಮೂಲ ಬಿಜೆಪಿ vs ವಲಸೆ ಬಿಜೆಪಿ ಎಂಬ ವೈಮಸ್ಸು ಜೋರಾಗಿದೆ! ಆಪರೇಷನ್ ಕಮಲ ನಡೆಸಿದ ಬಿಜೆಪಿಗೆ ಅದೇ ಆಪರೇಷನ್ ಸಂಕಟ ತಂದಿಡುವುದು ನಿಶ್ಚಿತ. ಬಿಜೆಪಿ ಹಾಳು ಮಾಡಿ ಹೋಗಲು ಬಂದಿದ್ದಾರೆ ಎಂದು ನಿಮ್ಮದೇ ಕಾರ್ಯಕರ್ತರು ಆರೋಪಿಸಿದ್ದು ಯಾರಿಗೆ? ತಾವು ಬಳಸಿ ಬಿಸಾಡುವವರು ಎಂದು ಬಿಜೆಪಿ ಕಾರ್ಯಕರ್ತರಿಗೆ ತಿಳಿಯುತ್ತಿದೆ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...