Homeಕರ್ನಾಟಕಅಮಿತ್ ಷಾ ಎದುರು ಮಾನ ಉಳಿಸಿಕೊಳ್ಳಲು ರಾಜ್ಯ ಬಿಜೆಪಿ ದುಡ್ಡು ಹಂಚಿಕೆ: ಕಾಂಗ್ರೆಸ್ ಆರೋಪ

ಅಮಿತ್ ಷಾ ಎದುರು ಮಾನ ಉಳಿಸಿಕೊಳ್ಳಲು ರಾಜ್ಯ ಬಿಜೆಪಿ ದುಡ್ಡು ಹಂಚಿಕೆ: ಕಾಂಗ್ರೆಸ್ ಆರೋಪ

- Advertisement -
- Advertisement -

“ಹಿಂದಿನ ಜನಸಂಕಟಯಾತ್ರೆಯಲ್ಲಿ ಖಾಲಿ ಕುರ್ಚಿ ದರ್ಶನ ಪಡೆದ ಬಿಜೆಪಿ ಈಗ ಅಮಿತ್ ಶಾ ಎದುರು ಮಾನ ಉಳಿಸಿಕೊಳ್ಳಲು ಕುರ್ಚಿಗಳಿಗಷ್ಟೇ ಅಲ್ಲ ಕುರ್ಚಿ ಮೇಲೆ ಕೂರುವವರಿಗೂ ಹಣ ಕೊಟ್ಟು ಕರೆಸಿದೆ. ಈ ಹಣ ಯಾವುದು?” ಎಂದು ಬಿಜೆಪಿಯನ್ನು ಕಾಂಗ್ರೆಸ್ ಪ್ರಶ್ನಿಸಿದೆ.

ವಿಡಿಯೊವೊಂದನ್ನು ತನ್ನ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, “ಈ ಹಣ 40% ಕಮಿಷನ್ ಲೂಟಿಯದ್ದೇ? ಹುದ್ದೆಗಳ ಮಾರಾಟದ ಸಂಪಾದನೆಯೇ? ಮಂತ್ರಿಗಿರಿ ಮಾರಾಟದಿಂದ ಬಂದ ಹಣವೇ?” ಎಂದು ಕೇಳಿದೆ.

ಮತ್ತೊಂದು ಟ್ವೀಟ್‌ನಲ್ಲಿ, “ಚುನಾವಣೆಗಾಗಿ ಕರ್ನಾಟಕದ ಕಡೆ ‘ದಂಡ’ಯಾತ್ರೆ ಕೈಗೊಂಡಿದ್ದಾರೆ ಬಿಜೆಪಿಯ ದೆಹಲಿ ನಾಯಕರು! ಗಡಿ ವಿವಾದ ಬಗೆಹರಿಸಾಲಾಗದ ಅಮಿತ್ ಶಾ ಅವರ ಮಾತಿಗೆ ಮಹಾರಾಷ್ಟ್ರ ಕಿಮ್ಮತ್ತು ನೀಡುತ್ತಿಲ್ಲ. ಈ ಕಿಮ್ಮತ್ತಿಲ್ಲದ ವ್ಯಕ್ತಿಗೆ ಕರ್ನಾಟಕದ ಜನತೆ ಬೆಲೆ ಕೊಡುವುದು ಅಸಂಭವ! ಬಿಜೆಪಿ ಅದೆಷ್ಟೇ ಸರ್ಕಸ್ ನಡೆಸಿದರೂ ಜನರ ತಿರಸ್ಕಾರ ಎದುರಿಸುವುದು ನಿಶ್ಚಿತ” ಎಂದಿದೆ.

“ಚುನಾವಣೆಗಾಗಿ ಕರ್ನಾಟಕದತ್ತ ಮುಖ ಮಾಡುತ್ತಿರುವ ಮೋದಿ – ಶಾ ಜೋಡಿ ಕರ್ನಾಟಕ ಸಂಕಷ್ಟ ಎದುರಿಸುತ್ತಿದ್ದಾಗ ನಾಪತ್ತೆಯಾಗಿದ್ದರು. ‘ಕಷ್ಟಕ್ಕೆ ಬರಬೇಡ, ಚುನಾವಣೆಗೆ ಮಾತ್ರ ಬಿಡಬೇಡ’ ಎಂಬಂತಿದೆ ಅವರ ನಡೆ. ಮಂಡ್ಯದಲ್ಲಿ ರೈತರು ಹಲವು ದಿನಗಳಿಂದ ತಮ್ಮ ಬೇಡಿಕೆ ಮುಂದಿಟ್ಟು ಪ್ರತಿಭಟಿಸುತ್ತಿದ್ದಾರೆ, ಬಿಜೆಪಿಗೆ ನೈಜ ಕಾಳಜಿ ಇದ್ದರೆ ಅವರ ಬಳಿ ಹೋಗಲಿ” ಎಂದು ಆಗ್ರಹಿಸಿದೆ.

ಯಶವಂತಪುರ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆಯ ಬೋರ್ಡ್ ಅನ್ನು ಬಿಜೆಪಿ ಪ್ರಚಾರಕ್ಕೆ ಬಳಸಿರುವುದನ್ನು ಪ್ರಶ್ನಿಸಿರುವ ಕಾಂಗ್ರೆಸ್, “ಜನರ ಹಣ, ಸರ್ಕಾರಿ ಆಸ್ಪತ್ರೆ, ಆದರೆ ಪ್ರಚಾರ ಮಾತ್ರ ಬಿಜೆಪಿಯದ್ದು. ಬಸವರಾಜ ಬೊಮ್ಮಾಯಿಯವರೇ ಯಶವಂತಪುರದ ಕೋವಿಡ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಿಜೆಪಿ ಪ್ರಚಾರದ ಬೋರ್ಡ್ ಹಾಕಿದ್ದೇಕೆ? ಸರ್ಕಾರಿ ಆಸ್ತಿಗಳೆಲ್ಲವನ್ನು ಬಿಜೆಪಿ ಕಬಳಿಸಿತೇ ಹೇಗೆ? ಇದು ಅಧಿಕಾರ ದುರ್ಬಳಕೆ ಅಲ್ಲದೆ ಇನ್ನೇನು? ನೈತಿಕತೆ ಇದ್ದರೆ ಕೂಡಲೇ ಇದನ್ನು ತೆರವುಗೊಳಿಸಿ” ಎಂದು ಒತ್ತಾಯಿಸಿದೆ.

ಮೂಲ ಬಿಜೆಪಿ v/s ವಲಸೆ ಬಿಜೆಪಿ

ಮೂಲ ಬಿಜೆಪಿ v/s ವಲಸೆ ಬಿಜೆಪಿ ನಡುವೆ ಕಿತ್ತಾಟವಾಗುತ್ತಿದೆ ಎಂದು ವಿಡಿಯೊವೊಂದನ್ನು ಕಾಂಗ್ರೆಸ್ ಹಂಚಿಕೊಂಡಿದೆ. “ಮೂಲ ಬಿಜೆಪಿ vs ವಲಸೆ ಬಿಜೆಪಿ ಎಂಬ ವೈಮಸ್ಸು ಜೋರಾಗಿದೆ! ಆಪರೇಷನ್ ಕಮಲ ನಡೆಸಿದ ಬಿಜೆಪಿಗೆ ಅದೇ ಆಪರೇಷನ್ ಸಂಕಟ ತಂದಿಡುವುದು ನಿಶ್ಚಿತ. ಬಿಜೆಪಿ ಹಾಳು ಮಾಡಿ ಹೋಗಲು ಬಂದಿದ್ದಾರೆ ಎಂದು ನಿಮ್ಮದೇ ಕಾರ್ಯಕರ್ತರು ಆರೋಪಿಸಿದ್ದು ಯಾರಿಗೆ? ತಾವು ಬಳಸಿ ಬಿಸಾಡುವವರು ಎಂದು ಬಿಜೆಪಿ ಕಾರ್ಯಕರ್ತರಿಗೆ ತಿಳಿಯುತ್ತಿದೆ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...