Homeಕರ್ನಾಟಕಅಮಿತ್ ಷಾ ಎದುರು ಮಾನ ಉಳಿಸಿಕೊಳ್ಳಲು ರಾಜ್ಯ ಬಿಜೆಪಿ ದುಡ್ಡು ಹಂಚಿಕೆ: ಕಾಂಗ್ರೆಸ್ ಆರೋಪ

ಅಮಿತ್ ಷಾ ಎದುರು ಮಾನ ಉಳಿಸಿಕೊಳ್ಳಲು ರಾಜ್ಯ ಬಿಜೆಪಿ ದುಡ್ಡು ಹಂಚಿಕೆ: ಕಾಂಗ್ರೆಸ್ ಆರೋಪ

- Advertisement -
- Advertisement -

“ಹಿಂದಿನ ಜನಸಂಕಟಯಾತ್ರೆಯಲ್ಲಿ ಖಾಲಿ ಕುರ್ಚಿ ದರ್ಶನ ಪಡೆದ ಬಿಜೆಪಿ ಈಗ ಅಮಿತ್ ಶಾ ಎದುರು ಮಾನ ಉಳಿಸಿಕೊಳ್ಳಲು ಕುರ್ಚಿಗಳಿಗಷ್ಟೇ ಅಲ್ಲ ಕುರ್ಚಿ ಮೇಲೆ ಕೂರುವವರಿಗೂ ಹಣ ಕೊಟ್ಟು ಕರೆಸಿದೆ. ಈ ಹಣ ಯಾವುದು?” ಎಂದು ಬಿಜೆಪಿಯನ್ನು ಕಾಂಗ್ರೆಸ್ ಪ್ರಶ್ನಿಸಿದೆ.

ವಿಡಿಯೊವೊಂದನ್ನು ತನ್ನ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, “ಈ ಹಣ 40% ಕಮಿಷನ್ ಲೂಟಿಯದ್ದೇ? ಹುದ್ದೆಗಳ ಮಾರಾಟದ ಸಂಪಾದನೆಯೇ? ಮಂತ್ರಿಗಿರಿ ಮಾರಾಟದಿಂದ ಬಂದ ಹಣವೇ?” ಎಂದು ಕೇಳಿದೆ.

ಮತ್ತೊಂದು ಟ್ವೀಟ್‌ನಲ್ಲಿ, “ಚುನಾವಣೆಗಾಗಿ ಕರ್ನಾಟಕದ ಕಡೆ ‘ದಂಡ’ಯಾತ್ರೆ ಕೈಗೊಂಡಿದ್ದಾರೆ ಬಿಜೆಪಿಯ ದೆಹಲಿ ನಾಯಕರು! ಗಡಿ ವಿವಾದ ಬಗೆಹರಿಸಾಲಾಗದ ಅಮಿತ್ ಶಾ ಅವರ ಮಾತಿಗೆ ಮಹಾರಾಷ್ಟ್ರ ಕಿಮ್ಮತ್ತು ನೀಡುತ್ತಿಲ್ಲ. ಈ ಕಿಮ್ಮತ್ತಿಲ್ಲದ ವ್ಯಕ್ತಿಗೆ ಕರ್ನಾಟಕದ ಜನತೆ ಬೆಲೆ ಕೊಡುವುದು ಅಸಂಭವ! ಬಿಜೆಪಿ ಅದೆಷ್ಟೇ ಸರ್ಕಸ್ ನಡೆಸಿದರೂ ಜನರ ತಿರಸ್ಕಾರ ಎದುರಿಸುವುದು ನಿಶ್ಚಿತ” ಎಂದಿದೆ.

“ಚುನಾವಣೆಗಾಗಿ ಕರ್ನಾಟಕದತ್ತ ಮುಖ ಮಾಡುತ್ತಿರುವ ಮೋದಿ – ಶಾ ಜೋಡಿ ಕರ್ನಾಟಕ ಸಂಕಷ್ಟ ಎದುರಿಸುತ್ತಿದ್ದಾಗ ನಾಪತ್ತೆಯಾಗಿದ್ದರು. ‘ಕಷ್ಟಕ್ಕೆ ಬರಬೇಡ, ಚುನಾವಣೆಗೆ ಮಾತ್ರ ಬಿಡಬೇಡ’ ಎಂಬಂತಿದೆ ಅವರ ನಡೆ. ಮಂಡ್ಯದಲ್ಲಿ ರೈತರು ಹಲವು ದಿನಗಳಿಂದ ತಮ್ಮ ಬೇಡಿಕೆ ಮುಂದಿಟ್ಟು ಪ್ರತಿಭಟಿಸುತ್ತಿದ್ದಾರೆ, ಬಿಜೆಪಿಗೆ ನೈಜ ಕಾಳಜಿ ಇದ್ದರೆ ಅವರ ಬಳಿ ಹೋಗಲಿ” ಎಂದು ಆಗ್ರಹಿಸಿದೆ.

ಯಶವಂತಪುರ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆಯ ಬೋರ್ಡ್ ಅನ್ನು ಬಿಜೆಪಿ ಪ್ರಚಾರಕ್ಕೆ ಬಳಸಿರುವುದನ್ನು ಪ್ರಶ್ನಿಸಿರುವ ಕಾಂಗ್ರೆಸ್, “ಜನರ ಹಣ, ಸರ್ಕಾರಿ ಆಸ್ಪತ್ರೆ, ಆದರೆ ಪ್ರಚಾರ ಮಾತ್ರ ಬಿಜೆಪಿಯದ್ದು. ಬಸವರಾಜ ಬೊಮ್ಮಾಯಿಯವರೇ ಯಶವಂತಪುರದ ಕೋವಿಡ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಿಜೆಪಿ ಪ್ರಚಾರದ ಬೋರ್ಡ್ ಹಾಕಿದ್ದೇಕೆ? ಸರ್ಕಾರಿ ಆಸ್ತಿಗಳೆಲ್ಲವನ್ನು ಬಿಜೆಪಿ ಕಬಳಿಸಿತೇ ಹೇಗೆ? ಇದು ಅಧಿಕಾರ ದುರ್ಬಳಕೆ ಅಲ್ಲದೆ ಇನ್ನೇನು? ನೈತಿಕತೆ ಇದ್ದರೆ ಕೂಡಲೇ ಇದನ್ನು ತೆರವುಗೊಳಿಸಿ” ಎಂದು ಒತ್ತಾಯಿಸಿದೆ.

ಮೂಲ ಬಿಜೆಪಿ v/s ವಲಸೆ ಬಿಜೆಪಿ

ಮೂಲ ಬಿಜೆಪಿ v/s ವಲಸೆ ಬಿಜೆಪಿ ನಡುವೆ ಕಿತ್ತಾಟವಾಗುತ್ತಿದೆ ಎಂದು ವಿಡಿಯೊವೊಂದನ್ನು ಕಾಂಗ್ರೆಸ್ ಹಂಚಿಕೊಂಡಿದೆ. “ಮೂಲ ಬಿಜೆಪಿ vs ವಲಸೆ ಬಿಜೆಪಿ ಎಂಬ ವೈಮಸ್ಸು ಜೋರಾಗಿದೆ! ಆಪರೇಷನ್ ಕಮಲ ನಡೆಸಿದ ಬಿಜೆಪಿಗೆ ಅದೇ ಆಪರೇಷನ್ ಸಂಕಟ ತಂದಿಡುವುದು ನಿಶ್ಚಿತ. ಬಿಜೆಪಿ ಹಾಳು ಮಾಡಿ ಹೋಗಲು ಬಂದಿದ್ದಾರೆ ಎಂದು ನಿಮ್ಮದೇ ಕಾರ್ಯಕರ್ತರು ಆರೋಪಿಸಿದ್ದು ಯಾರಿಗೆ? ತಾವು ಬಳಸಿ ಬಿಸಾಡುವವರು ಎಂದು ಬಿಜೆಪಿ ಕಾರ್ಯಕರ್ತರಿಗೆ ತಿಳಿಯುತ್ತಿದೆ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....