Homeಕರ್ನಾಟಕರಾಜ್ಯ ಬಜೆಟ್-2022: ಜನರ ನಿರೀಕ್ಷೆ ಏನು? ಏನಾಗಲಿದೆ ಈ ವರ್ಷದ ಆಯವ್ಯಯ?

ರಾಜ್ಯ ಬಜೆಟ್-2022: ಜನರ ನಿರೀಕ್ಷೆ ಏನು? ಏನಾಗಲಿದೆ ಈ ವರ್ಷದ ಆಯವ್ಯಯ?

- Advertisement -
- Advertisement -

ಕೇಂದ್ರ ಬಜೆಟ್ ಬೆನ್ನಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ (ಮಾರ್ಚ್ 04) ತಮ್ಮ ಮೊದಲ ಪೂರ್ಣ ಪ್ರಮಾಣದ ಬಜೆಟ್ ಅನ್ನು ಅಧಿವೇಶನದಲ್ಲಿ ಮಂಡಿಸಲಿದ್ದಾರೆ. ಮುಂದಿನ ವರ್ಷ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಚುನಾವಣೆ ದೃಷ್ಟಿಕೋನದಿಂದ ಮತ್ತು ಕೊರೊನಾದಿಂದ ಈಗಾಗಲೇ ಪಾತಾಳಕ್ಕೆ ಕುಸಿದಿರುವ ರಾಜ್ಯದ ಆರ್ಥಿಕತೆ ಸುಧಾರಿಸುವ ನಿಟ್ಟಿನಿಂದಲೂ ಈ ವರ್ಷದ ಬಜೆಟ್ ಮೇಲೆ ಜನಸಾಮಾನ್ಯರಿಗೆ ಸಾಕಷ್ಟು ನಿರೀಕ್ಷೆಗಳಿವೆ.

ರೈತರಿಗೆ ನೆರವಾಗಲಿದೆಯೇ ಬಜೆಟ್?

ಕಳೆದ ಹಲವು ವರ್ಷಗಳಿಂದ ರಾಜ್ಯದಲ್ಲಿ ಅಕಾಲಿಕ ಮಳೆ ತೀರಾ ಸಾಮಾನ್ಯವಾದ ಸಂಗತಿ ಎಂಬಂತಾಗಿದೆ. 2021 ರಿಂದ ಈವರೆಗೆ ಅಕಾಲಿಕ ಮಳೆಗೆ ರಾಣಿಬೆನ್ನೂರಿನಲ್ಲಿ 892.3 ಹೆಕ್ಟೇರ್ ಭೂಮಿಯಲ್ಲಿ ಬೆಳೆದಿದ್ದ ಹತ್ತಿ, ಭತ್ತ, ಶೇಂಗಾ, ಜೋಳ ಸೇರಿದಂತೆ ನಾನಾ ಬೆಳೆಗಳು ನಾಶವಾಗಿವೆ. ಧಾರವಾಡ ಜಿಲ್ಲೆಯಲ್ಲಿ 90 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಭಿತ್ತನೆ ಮಾಡಲಾಗಿದ್ದ ನಾನಾ ಬೆಳೆಗಳು ಕೈಗೆಟುಕದಂತಾಗಿದೆ.

ಗದಗ, ಲಕ್ಷ್ಮೇಶ್ವರ ಭಾಗದಲ್ಲಿ ನೂರಾರು ಹೆಕ್ಟೇರ್‌ನಲ್ಲಿ ಬೆಳೆಯಲಾಗಿದ್ದ ಶೇಂಗಾ, ಈರುಳ್ಳಿ ಮತ್ತು ಜೋಳವೂ ಮಣ್ಣು ಪಾಲಾಗಿದೆ. ಇನ್ನೂ ಮಲೆನಾಡಿನ ಭಾಗದಲ್ಲಿ ಅಡಿಕೆ ಬೆಳೆಗಾರರು ಕೋಂಟ್ಯಾಂತರ ರೂ. ನಷ್ಟ ಅನುಭವಿಸಿದ್ದಾರೆ. ರಾಜ್ಯದ ಇತರೆ ಭಾಗದಲ್ಲಿರುವ ರೈತರ ಸಮಸ್ಯೆಯೂ ಇದಕ್ಕಿಂತ ಭಿನ್ನವಾಗೇನು ಇಲ್ಲ.

ಈ ನಡುವೆ ರೈತರಿಗೆ ರಾಜ್ಯ ಸರ್ಕಾರ ಸರಿಯಾದ ಸಮಯಕ್ಕೆ ವಿದ್ಯುತ್ ನೀಡಲಾಗುತ್ತಿಲ್ಲ. ಗೊಬ್ಬರ ಬಿತ್ತನೆ ಬೀಜದ ಬೆಲೆ ಇಳಿಕೆ ಜೊತೆಗೆ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ ಸಾಲಮನ್ನಾ ಸೇರಿದಂತೆ ರಾಜ್ಯದ ಬಜೆಟ್ ಮೇಲೆ ರೈತರಿಗೆ ಸಾಕಷ್ಟು ನಿರೀಕ್ಷೆ ಮತ್ತು ಬೇಡಿಕೆಗಳಿವೆ. ಆದರೆ, ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ಹೇಗೆ ಸ್ಪಂದಿಸಲಿದೆ ಎಂಬುದು ಬಜೆಟ್ ನಂತರ ಸ್ಪಷ್ಟವಾಗಲಿದೆ.

ಕಾರ್ಮಿಕರ ಕೂಗೇನು?

ಕೊರೊನಾ ಕಾರಣದಿಂದಾಗಿ ಅಸಂಘಟಿತ ಕಾರ್ಮಿಕ ವಲಯ ಸಾಕಷ್ಟು ಸಮಸ್ಯೆಯನ್ನು ಸಾಕಷ್ಟು ಸಾವು-ನೋವುಗಳನ್ನು ಎದುರಿಸಿದೆ. ಈ ವಿಭಾಗದಲ್ಲಿನ ನಿರುದ್ಯೋಗ ಸಮಸ್ಯೆ ಈವರೆಗೆ ಬಗೆಹರಿದಂತೆ ಕಂಡುಬಂದಿಲ್ಲ. ಅಲ್ಲದೆ, ಕಾರ್ಮಿಕ ಇಲಾಖೆ ಕೊರೊನಾ ಸಂದರ್ಭದಲ್ಲಿ ಅಸಂಘಟಿತ ವಲಯಕ್ಕೆ ಉತ್ತಮ ನೆರವನ್ನೂ ನೀಡಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.

ಸೂಕ್ತ ಕೆಲಸ ಮತ್ತು ಕೂಲಿ ಇಲ್ಲದೆ ದಿನಗೂಲಿಗಳು ಮತ್ತು ಕಟ್ಟಡ ಕಾರ್ಮಿಕರು ಕಂಗಾಲಾಗಿದ್ದಾರೆ. ವಸತಿ ರಹಿತ ಕಾರ್ಮಿಕರಿಗೆ ಸೂರು ನೀಡುವುದಕ್ಕೆಂದೆ ಕೇಂದ್ರ-ರಾಜ್ಯ ಸರ್ಕಾರಗಳ ನಾನಾ ಯೋಜನೆಗಳು ಇವೆ. ಆದರೆ, ಸೂರು ಮಾತ್ರ ಖಚಿತವಾಗುತ್ತಿಲ್ಲ ಎನ್ನಲಾಗಿದೆ. ಹೀಗಾಗಿ ಈ ವರ್ಷದ ಬಜೆಟ್‌ನಲ್ಲಿ ಅಸಂಘಟಿತ ವಲಯಕ್ಕೆ ಸರ್ಕಾರದ ಕೊಡುಗೆ ಏನು? ಎಂಬುದರ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ.

ಸಣ್ಣ-ಮಧ್ಯಮ ಉದ್ಯಮಗಳ ನಿರೀಕ್ಷೆ ಏನು?

ರಾಜ್ಯದಲ್ಲಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುವ ಕ್ಷೇತ್ರಗಳ ಪೈಕಿ ಸಣ್ಣ-ಮದ್ಯಮ ಉದ್ಯಮಗಳ ಪಾತ್ರ ದೊಡ್ಡದು. ಆದರೆ, ಜಿಎಸ್‌ಟಿ ಜಾರಿಯಿಂದಾಗಿ ಅನೇಕ ಸಣ್ಣ ಉದ್ಯಮಗಳು ಅವನತಿಯೆಡೆಗೆ ದೂಡಿತ್ತು. ಇನ್ನೂ ಕೊರೊನಾದಿಂದ ಉಂಟಾಗಿದ್ದ ಆರ್ಥಿಕ ಸಂಕಷ್ಟದಿಂದ ಈವರೆಗೆ ಅನೇಕ ಉದ್ಯಮಗಳು ಚೇತರಿಸಿಕೊಂಡಿಲ್ಲ. ಹೀಗಾಗಿ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳ ಚೇತರಿಕೆಗೆ ರಾಜ್ಯ ಸರ್ಕಾರ ಯಾವ ಪ್ಯಾಕೇಜ್ ಘೋಷಿಸಲಿದೆ? ಎಂಬುದೂ ಸಹ ಕುತೂಹಲಕ್ಕೆ ಕಾರಣಾಗಿದೆ.

ಜನ ಸಾಮಾನ್ಯರ ಬೇಡಿಕೆ ಏನು?

ರಾಜ್ಯದಲ್ಲಿ ನಿರುದ್ಯೋಗದ ಸಮಸ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಶಿಕ್ಷಿತ ಯುವಕರು ಕೆಲಸವಿಲ್ಲದೆ ಕಂಗಾಲಾಗಿದ್ದಾರೆ. ಮತ್ತೊಂದೆಡೆ ದಿನೋಪಯೋಗಿ ವಸ್ತುಗಳ ಬೆಲೆ ದಿನೇ ದಿನೇ ಏರುತ್ತಿದ್ದು ಕೆಳ ಮತ್ತು ಮಧ್ಯಮ ವರ್ಗದ ಜನ ಬದುಕುವುದೇ ದುಸ್ಥರವಾಗಿದೆ. ಪೆಟ್ರೋಲ್ ಬೆಲೆಯಲ್ಲೂ ಸಹ ಪಂಚರಾಜ್ಯಗಳ ಚುನಾವಣೆ ಬಳಿಕ ಏರಿಕೆ ಕಾಣಲಿದೆ ಎನ್ನಲಾಗುತ್ತಿದೆ. ಇದು ನಿಜವಾದರೆ ಜನ ಸಾಮಾನ್ಯರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವುದು ಖಚಿತ.

ಹೀಗಾಗಿ ರಾಜ್ಯ ಸರ್ಕಾರ ಉದ್ಯೋಗ ಸೃಷ್ಟಿಗೆ ಯಾವ ಕ್ರಮ ತೆಗೆದುಕೊಳ್ಳಲಿದೆ? ಬೆಲೆ ನಿಯಂತ್ರಣಕ್ಕೆ ಮುಂದಾಗಲಿದೆಯೇ? ಪೆಟ್ರೋಲ್ ಮೇಲಿನ ರಾಜ್ಯ ತೆರಿಗೆಯನ್ನು ಇಳಿಸಲಿದೆಯೇ? ಇದರ ಜೊತೆಗೆ ಯಾವೆಲ್ಲಾ ಅಗತ್ಯ ವಸ್ತುಗಳ ಮೇಲಿನ ತೆರಿಗೆಯನ್ನು ಇಳಿಸಲಿದೆ? ಎಂದು ಜನ ಕುತೂಹಲದಿಂದ ಕಾದು ಕುಳಿತಿದ್ದಾರೆ.


ಇದನ್ನು ಓದಿರಿ:ಕೇಂದ್ರ ಸರ್ಕಾರ ಮತ್ತು ಗೋದಿ ಮಿಡಿಯಾಗಳಿಗೆ ಛೀಮಾರಿ ಹಾಕುತ್ತಿರುವ ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...