Homeಕರ್ನಾಟಕರಾಜ್ಯ ಬಜೆಟ್-2022: ಜನರ ನಿರೀಕ್ಷೆ ಏನು? ಏನಾಗಲಿದೆ ಈ ವರ್ಷದ ಆಯವ್ಯಯ?

ರಾಜ್ಯ ಬಜೆಟ್-2022: ಜನರ ನಿರೀಕ್ಷೆ ಏನು? ಏನಾಗಲಿದೆ ಈ ವರ್ಷದ ಆಯವ್ಯಯ?

- Advertisement -
- Advertisement -

ಕೇಂದ್ರ ಬಜೆಟ್ ಬೆನ್ನಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ (ಮಾರ್ಚ್ 04) ತಮ್ಮ ಮೊದಲ ಪೂರ್ಣ ಪ್ರಮಾಣದ ಬಜೆಟ್ ಅನ್ನು ಅಧಿವೇಶನದಲ್ಲಿ ಮಂಡಿಸಲಿದ್ದಾರೆ. ಮುಂದಿನ ವರ್ಷ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಚುನಾವಣೆ ದೃಷ್ಟಿಕೋನದಿಂದ ಮತ್ತು ಕೊರೊನಾದಿಂದ ಈಗಾಗಲೇ ಪಾತಾಳಕ್ಕೆ ಕುಸಿದಿರುವ ರಾಜ್ಯದ ಆರ್ಥಿಕತೆ ಸುಧಾರಿಸುವ ನಿಟ್ಟಿನಿಂದಲೂ ಈ ವರ್ಷದ ಬಜೆಟ್ ಮೇಲೆ ಜನಸಾಮಾನ್ಯರಿಗೆ ಸಾಕಷ್ಟು ನಿರೀಕ್ಷೆಗಳಿವೆ.

ರೈತರಿಗೆ ನೆರವಾಗಲಿದೆಯೇ ಬಜೆಟ್?

ಕಳೆದ ಹಲವು ವರ್ಷಗಳಿಂದ ರಾಜ್ಯದಲ್ಲಿ ಅಕಾಲಿಕ ಮಳೆ ತೀರಾ ಸಾಮಾನ್ಯವಾದ ಸಂಗತಿ ಎಂಬಂತಾಗಿದೆ. 2021 ರಿಂದ ಈವರೆಗೆ ಅಕಾಲಿಕ ಮಳೆಗೆ ರಾಣಿಬೆನ್ನೂರಿನಲ್ಲಿ 892.3 ಹೆಕ್ಟೇರ್ ಭೂಮಿಯಲ್ಲಿ ಬೆಳೆದಿದ್ದ ಹತ್ತಿ, ಭತ್ತ, ಶೇಂಗಾ, ಜೋಳ ಸೇರಿದಂತೆ ನಾನಾ ಬೆಳೆಗಳು ನಾಶವಾಗಿವೆ. ಧಾರವಾಡ ಜಿಲ್ಲೆಯಲ್ಲಿ 90 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಭಿತ್ತನೆ ಮಾಡಲಾಗಿದ್ದ ನಾನಾ ಬೆಳೆಗಳು ಕೈಗೆಟುಕದಂತಾಗಿದೆ.

ಗದಗ, ಲಕ್ಷ್ಮೇಶ್ವರ ಭಾಗದಲ್ಲಿ ನೂರಾರು ಹೆಕ್ಟೇರ್‌ನಲ್ಲಿ ಬೆಳೆಯಲಾಗಿದ್ದ ಶೇಂಗಾ, ಈರುಳ್ಳಿ ಮತ್ತು ಜೋಳವೂ ಮಣ್ಣು ಪಾಲಾಗಿದೆ. ಇನ್ನೂ ಮಲೆನಾಡಿನ ಭಾಗದಲ್ಲಿ ಅಡಿಕೆ ಬೆಳೆಗಾರರು ಕೋಂಟ್ಯಾಂತರ ರೂ. ನಷ್ಟ ಅನುಭವಿಸಿದ್ದಾರೆ. ರಾಜ್ಯದ ಇತರೆ ಭಾಗದಲ್ಲಿರುವ ರೈತರ ಸಮಸ್ಯೆಯೂ ಇದಕ್ಕಿಂತ ಭಿನ್ನವಾಗೇನು ಇಲ್ಲ.

ಈ ನಡುವೆ ರೈತರಿಗೆ ರಾಜ್ಯ ಸರ್ಕಾರ ಸರಿಯಾದ ಸಮಯಕ್ಕೆ ವಿದ್ಯುತ್ ನೀಡಲಾಗುತ್ತಿಲ್ಲ. ಗೊಬ್ಬರ ಬಿತ್ತನೆ ಬೀಜದ ಬೆಲೆ ಇಳಿಕೆ ಜೊತೆಗೆ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ ಸಾಲಮನ್ನಾ ಸೇರಿದಂತೆ ರಾಜ್ಯದ ಬಜೆಟ್ ಮೇಲೆ ರೈತರಿಗೆ ಸಾಕಷ್ಟು ನಿರೀಕ್ಷೆ ಮತ್ತು ಬೇಡಿಕೆಗಳಿವೆ. ಆದರೆ, ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ಹೇಗೆ ಸ್ಪಂದಿಸಲಿದೆ ಎಂಬುದು ಬಜೆಟ್ ನಂತರ ಸ್ಪಷ್ಟವಾಗಲಿದೆ.

ಕಾರ್ಮಿಕರ ಕೂಗೇನು?

ಕೊರೊನಾ ಕಾರಣದಿಂದಾಗಿ ಅಸಂಘಟಿತ ಕಾರ್ಮಿಕ ವಲಯ ಸಾಕಷ್ಟು ಸಮಸ್ಯೆಯನ್ನು ಸಾಕಷ್ಟು ಸಾವು-ನೋವುಗಳನ್ನು ಎದುರಿಸಿದೆ. ಈ ವಿಭಾಗದಲ್ಲಿನ ನಿರುದ್ಯೋಗ ಸಮಸ್ಯೆ ಈವರೆಗೆ ಬಗೆಹರಿದಂತೆ ಕಂಡುಬಂದಿಲ್ಲ. ಅಲ್ಲದೆ, ಕಾರ್ಮಿಕ ಇಲಾಖೆ ಕೊರೊನಾ ಸಂದರ್ಭದಲ್ಲಿ ಅಸಂಘಟಿತ ವಲಯಕ್ಕೆ ಉತ್ತಮ ನೆರವನ್ನೂ ನೀಡಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.

ಸೂಕ್ತ ಕೆಲಸ ಮತ್ತು ಕೂಲಿ ಇಲ್ಲದೆ ದಿನಗೂಲಿಗಳು ಮತ್ತು ಕಟ್ಟಡ ಕಾರ್ಮಿಕರು ಕಂಗಾಲಾಗಿದ್ದಾರೆ. ವಸತಿ ರಹಿತ ಕಾರ್ಮಿಕರಿಗೆ ಸೂರು ನೀಡುವುದಕ್ಕೆಂದೆ ಕೇಂದ್ರ-ರಾಜ್ಯ ಸರ್ಕಾರಗಳ ನಾನಾ ಯೋಜನೆಗಳು ಇವೆ. ಆದರೆ, ಸೂರು ಮಾತ್ರ ಖಚಿತವಾಗುತ್ತಿಲ್ಲ ಎನ್ನಲಾಗಿದೆ. ಹೀಗಾಗಿ ಈ ವರ್ಷದ ಬಜೆಟ್‌ನಲ್ಲಿ ಅಸಂಘಟಿತ ವಲಯಕ್ಕೆ ಸರ್ಕಾರದ ಕೊಡುಗೆ ಏನು? ಎಂಬುದರ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ.

ಸಣ್ಣ-ಮಧ್ಯಮ ಉದ್ಯಮಗಳ ನಿರೀಕ್ಷೆ ಏನು?

ರಾಜ್ಯದಲ್ಲಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುವ ಕ್ಷೇತ್ರಗಳ ಪೈಕಿ ಸಣ್ಣ-ಮದ್ಯಮ ಉದ್ಯಮಗಳ ಪಾತ್ರ ದೊಡ್ಡದು. ಆದರೆ, ಜಿಎಸ್‌ಟಿ ಜಾರಿಯಿಂದಾಗಿ ಅನೇಕ ಸಣ್ಣ ಉದ್ಯಮಗಳು ಅವನತಿಯೆಡೆಗೆ ದೂಡಿತ್ತು. ಇನ್ನೂ ಕೊರೊನಾದಿಂದ ಉಂಟಾಗಿದ್ದ ಆರ್ಥಿಕ ಸಂಕಷ್ಟದಿಂದ ಈವರೆಗೆ ಅನೇಕ ಉದ್ಯಮಗಳು ಚೇತರಿಸಿಕೊಂಡಿಲ್ಲ. ಹೀಗಾಗಿ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳ ಚೇತರಿಕೆಗೆ ರಾಜ್ಯ ಸರ್ಕಾರ ಯಾವ ಪ್ಯಾಕೇಜ್ ಘೋಷಿಸಲಿದೆ? ಎಂಬುದೂ ಸಹ ಕುತೂಹಲಕ್ಕೆ ಕಾರಣಾಗಿದೆ.

ಜನ ಸಾಮಾನ್ಯರ ಬೇಡಿಕೆ ಏನು?

ರಾಜ್ಯದಲ್ಲಿ ನಿರುದ್ಯೋಗದ ಸಮಸ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಶಿಕ್ಷಿತ ಯುವಕರು ಕೆಲಸವಿಲ್ಲದೆ ಕಂಗಾಲಾಗಿದ್ದಾರೆ. ಮತ್ತೊಂದೆಡೆ ದಿನೋಪಯೋಗಿ ವಸ್ತುಗಳ ಬೆಲೆ ದಿನೇ ದಿನೇ ಏರುತ್ತಿದ್ದು ಕೆಳ ಮತ್ತು ಮಧ್ಯಮ ವರ್ಗದ ಜನ ಬದುಕುವುದೇ ದುಸ್ಥರವಾಗಿದೆ. ಪೆಟ್ರೋಲ್ ಬೆಲೆಯಲ್ಲೂ ಸಹ ಪಂಚರಾಜ್ಯಗಳ ಚುನಾವಣೆ ಬಳಿಕ ಏರಿಕೆ ಕಾಣಲಿದೆ ಎನ್ನಲಾಗುತ್ತಿದೆ. ಇದು ನಿಜವಾದರೆ ಜನ ಸಾಮಾನ್ಯರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವುದು ಖಚಿತ.

ಹೀಗಾಗಿ ರಾಜ್ಯ ಸರ್ಕಾರ ಉದ್ಯೋಗ ಸೃಷ್ಟಿಗೆ ಯಾವ ಕ್ರಮ ತೆಗೆದುಕೊಳ್ಳಲಿದೆ? ಬೆಲೆ ನಿಯಂತ್ರಣಕ್ಕೆ ಮುಂದಾಗಲಿದೆಯೇ? ಪೆಟ್ರೋಲ್ ಮೇಲಿನ ರಾಜ್ಯ ತೆರಿಗೆಯನ್ನು ಇಳಿಸಲಿದೆಯೇ? ಇದರ ಜೊತೆಗೆ ಯಾವೆಲ್ಲಾ ಅಗತ್ಯ ವಸ್ತುಗಳ ಮೇಲಿನ ತೆರಿಗೆಯನ್ನು ಇಳಿಸಲಿದೆ? ಎಂದು ಜನ ಕುತೂಹಲದಿಂದ ಕಾದು ಕುಳಿತಿದ್ದಾರೆ.


ಇದನ್ನು ಓದಿರಿ:ಕೇಂದ್ರ ಸರ್ಕಾರ ಮತ್ತು ಗೋದಿ ಮಿಡಿಯಾಗಳಿಗೆ ಛೀಮಾರಿ ಹಾಕುತ್ತಿರುವ ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...